MGR ಚಿನ್ನದ ಖಡ್ಗ, ಜಯಲಲಿತಾ ಚಂಡಿಕಾಯಾಗ.. ಈಗ ಮುಕಾಂಬಿಕೆ ಸನ್ನಿದಿಯಲ್ಲಿ ‘ದಳಪತಿ’! ಇದರ ಹಿಂದಿನ ರಹಸ್ಯವೇನು?

ಕಳೆದ ಮೇ 10ರಂದು ಪ್ರಮಾಣವಚನ ಸ್ವೀಕರಿಸಿ, ಆಡಳಿತಾತ್ಮಕ ಕೆಲಸಗಳಲ್ಲಿ ತೀವ್ರ ಬ್ಯುಸಿಯಾಗಿದ್ದರೂ ವಿಜಯ್ ಅವರು ಕೇವಲ ಒಂದು ತಿಂಗಳ ಅಂತರದಲ್ಲಿ ಕೊಲ್ಲೂರಿಗೆ ಧಾವಿಸುತ್ತಿರುವುದು ತಮಿಳುನಾಡು ರಾಜಕಾರಣದ ದಶಕಗಳ ಹಳೆಯ ಪದ್ದತಿಯನ್ನು ನೆನಪಿಸುತ್ತಿದೆ. WhatsApp Group Join Now ಅಷ್ಟಕ್ಕೂ ತಮಿಳು ನಾಡು ಮುಖ್ಯಮಂತ್ರಿಗಳಿಗೆ ಹಾಗೂ ಮೂಕಾಂಬಿಕಾ ದೇಗುಲಕ್ಕೆ ಇರುವ ಸಂಬಂಧವೇನು..? ಬನ್ನಿ ನೋಡೋಣ.. ಹೌದು.. ವಿಜಯ್ ಅವರು ಇಂದು ಮಧ್ಯಾಹ್ನ 3:00 ಗಂಟೆಗೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಕರ್ನಾಟಕದಲ್ಲೂ ಅವರಿಗೆ … Read more

ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ನಂಬಿಕೆ ದುರುಪಯೋಗಪಡಿಸಿಕೊಂಡ ಅಂಚೆ ವಿತರಕ ಸುರೇಶ್ ಬಂಧನ,

ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. WhatsApp Group Join Now ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು … Read more

ಯುವತಿಯ ಅಶ್ಲೀಲ ಎಐ ವಿಡಿಯೋ ಮಾಡಿ ಹಣಕ್ಕೆ ಡಿಮ್ಯಾಂಡ್, ಇಬ್ಬರು ಕಿಡಿಗೇಡಿಗಳು ಅರೆಸ್ಟ್

ಚಿಕ್ಕಮಗಳೂರು : ಜಿಲ್ಲೆಯ (Chikkamaglore) ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾವಿಕೆರೆ ಗ್ರಾಮದ ಯುವತಿಯೊಬ್ಬಳ ಫೇಸ್‌ಬುಕ್ ಫೋಟೋವನ್ನು (Photo) ಕದ್ದು, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಅಶ್ಲೀಲ ವಿಡಿಯೋ ಆಗಿ ಮಾರ್ಪಡಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಅಕ್ಷಯ್ ಮತ್ತು ಸಾಹುಲ್ ಎಂಬ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. WhatsApp Group Join Now ಆರೋಪಿಗಳು ಯುವತಿಯ ಪೋಷಕರಿಗೆ ಕರೆ ಮಾಡಿ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಕೆ ಹಾಕಿದ್ದರು. ತೀವ್ರ ಹೆದರಿಕೆಗೆ ಒಳಗಾಗಿದ್ದ ಕುಟುಂಬಸ್ಥರು … Read more

40 ವರ್ಷದ ಬಳಿಕ ಮೊತ್ತೊಬ್ಬ ವೈಭವ್ ಸೂರ್ಯವಂಶಿ ಬರ್ತಾನೆ: ರಾಹುಲ್ ದ್ರಾವಿಡ್ ಹಿಂಗ್ ಹೇಳಿದ್ಯಾಕೆ.?

ಐಪಿಎಲ್‌ 2026ರಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ದಿಗ್ಗಜರ ಗಮನ ಸೆಳೆದ ವೈಭವ್ ಸೂರ್ಯವಂಶಿ ಅವರು ಇತ್ತೀಚೆಗಷ್ಟೇ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಆಗಿದ್ದರು. ಇದರ ಬೆನ್ನಲ್ಲೇ ಈ ಬಾಲಕನನ್ನ ಕ್ರಿಕೆಟ್‌ ದೇವರು ಅಂತಲೇ ಹೆಸರಾಗಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಹೋಲಿಕೆ ಮಾಡಲಾಗಿತ್ತು. WhatsApp Group Join Now ಇದೀಗ ಈ ಕುರಿತು ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರು ಅಚ್ಚರಿ ಹೇಳಿಕೆ ನಿಡಿ ಗಮನ ಸೆಳೆದಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕೋಚ್ ಕನ್ನಡಿಗ ರಾಹುಲ್ … Read more

RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಉತ್ತರ ಪ್ರದೇಶದ ಫಿರೋಜಾಬಾದ್ ಸಮೀಪ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ, ಪೊಲೀಸರು ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಲಾಗಿದ್ದು, ಪರಾರಿಯಾಗಿರುವ ಮೂರನೇ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಮುಂದುವರಿದಿದೆ. WhatsApp Group Join Now ಗುರುವಾರ ಸಂಜೆ ಕಾನ್ಪುರದಿಂದ ನವದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಬೋಗಿಯ ಕಿಟಕಿಯ ಗಾಜು ಕಲ್ಲು ತೂರಾಟದಿಂದ ಪುಡಿಯಾಯಿತು. ಆ ವೇಳೆ ರೈಲಿನಲ್ಲಿ … Read more

ಬಿಡದಿ ರೈತರು ಅಸಲಿ ರೈತರೋ ಅಲ್ಲವೋ? ನೊಂದ ಹಳ್ಳಿಗಳಿಗೆ ಬನ್ನಿ, ನಾನು ಬರುತ್ತೇನೆ : ಸಿಎಂ ಡಿ.ಕೆ.ಶಿವಕುಮಾರ್ ಗೆ ಕುಮಾರಸ್ವಾಮಿ ಸವಾಲು

ಬಿಡದಿ ಭಾಗದಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸಲು ಟೌನ್ ಶಿಪ್ ನೆಪದಲ್ಲಿ ನೋಟಿಫೈ ಮಾಡಿರುವ ಭೂಮಿಯ ಮಾಲೀಕರು ಅಸಲಿ ರೈತರೋ ಅಲ್ಲವೋ ಎಂಬುದನ್ನು ತೀರ್ಮಾನಿಸಲು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ನನ್ನೊಂದಿಗೆ ಆ ನೊಂದ ಹಳ್ಳಿಗಳಿಗೆ ಬರಲಿ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. WhatsApp Group Join Now ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಯೋಜನೆ ಭೂ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರಕಾರವು … Read more

ಗಂಡನ ವಿರುದ್ಧ ಸುಳ್ಳು ವರದಕ್ಷಿಣೆ ಕೇಸ್, ದ್ವೇಷ ಮರೆತು ಮಾವನ ಪ್ರಾಣ ಉಳಿಸಿದ ಅಳಿಯ, ಕೋರ್ಟ್ ಅವರಣದಲ್ಲಿ ಒಂದಾದ ಗಂಡ-ಹೆಂಡತಿ

ನವದೆಹಲಿ: ಸಂಸಾರದ ಜಗಳ, ಕೋರ್ಟ್-ಕಚೇರಿ ಅಲೆದಾಟಗಳ ಮಧ್ಯೆ ಮಾನವೀಯತೆ ಇನ್ನು ಸತ್ತಿಲ್ಲ ಎಂಬುದನ್ನು ಸಾಬೀತುಪಡಿಸುವ ಹೃದಯಸ್ಪರ್ಶಿ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ತನ್ನ ಮತ್ತು ತನ್ನ ಕುಟುಂಬದ ವಿರುದ್ಧವೇ ಸುಳ್ಳು ವರದಕ್ಷಿಣೆ ಪ್ರಕರಣ ದಾಖಲಿಸಿದ್ದ ಪತ್ನಿಯ ಹಠಮಾರಿತನವನ್ನು ಮರೆತು, ಸಾವಿನ ದಡದಲ್ಲಿದ್ದ ಮಾವನ ಪ್ರಾಣ ಉಳಿಸುವ ಮೂಲಕ ಅಳಿಯನೊಬ್ಬ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. WhatsApp Group Join Now ಶಿಖಾ ಸಿಂಗ್‌ ಮತ್ತು ಸೌರಭ್ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡಿ ವಿವಾದ ಉಂಟಾಗಿತ್ತು. ಈ … Read more

ಇವೆಲ್ಲವೂ ಷಡ್ಯಂತ್ರ ನಂಬಬೇಡಿ; ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ರಿಯಾಕ್ಷನ್!

ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಎದುರಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ತನ್ನ ಮೇಲೆ ಕೆಲವು ಮಂದಿ ಪ್ರಭಾವಿಗಳು ಒತ್ತಡ ಹೇರಿದ್ದು, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾನೆ. WhatsApp Group Join Now ಅಲ್ಲದೆ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಚಿನ್ನಯ್ಯ, ನಟ ಪ್ರಕಾಶ್ ರಾಜ್ ಅವರ ಹೆಸರನ್ನೂ ಉಲ್ಲೇಖಿಸಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, ತಮ್ಮ ವಿರುದ್ಧ … Read more

ಸ್ಟಿಂಗ್ ಪೇಯ ಸೇವಿಸಿ ಯುವಕ ಮೃತ್ಯು ಆರೋಪ; ಬಾಟಲಿಗಳನ್ನು ಸುಟ್ಟು ಗ್ರಾಮಸ್ಥರಿಂದ ಆಕ್ರೋಶ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಸ್ಟಿಂಗ್ ಪೇಯ ಸೇವಿಸಿದ ಬಳಿಕ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. WhatsApp Group Join Now ಗ್ರಾಮದ ಬಾಲು ಹಣಮಂತ ದೇಸಾಯಿ (19) ಎಂಬ ಯುವಕ ಮೃತಪಟ್ಟಿದ್ದು, ಆತ ಸ್ಟಿಂಗ್ ಪೇಯ ಸೇವಿಸಿದ್ದರಿಂದಲೇ ಈ ದುರ್ಘಟನೆ ಸಂಭವಿಸಿದೆ ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ನಿವಾಸಿಗಳು ಸಭೆ ನಡೆಸಿ, ಇನ್ನು ಮುಂದೆ ಸ್ಟಿಂಗ್ ಸೇರಿದಂತೆ ಇತರೆ ಎನರ್ಜಿ ಪೇಯಗಳನ್ನು ಸೇವಿಸದಿರಲು … Read more

ಮುಂದೆಯೂ ಡಿಕೆಶಿ ಸಿಎಂ ಆದರೆ ನನಗೆ ಗಾಬರಿ: ಲೇವಡಿ ಮಾಡಿದರಾ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ.!

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಅಧಿಕೃತ ಸರ್ಕಾರಿ ನಿವಾಸಕ್ಕಾಗಿ ಮೈಸೂರು ಮಹಾರಾಜರ ಕಾಲದ ಐತಿಹಾಸಿಕ ಕುಮಾರಕೃಪಾ ಅತಿಥಿ ಗೃಹದ ಪಾರಂಪರಿಕ ಕಟ್ಟಡವನ್ನು ಒಡೆಯುತ್ತಿರುವುದಕ್ಕೆ ಹಾಗೂ ರೈತರ ತೀವ್ರ ವಿರೋಧದ ನಡುವೆಯೂ ಬಿಡದಿ ಟೌನ್‌ಶಿಪ್ ಯೋಜನೆಗೆ ಅಂತಿಮ ಅಧಿಸೂಚನೆ ಹೊರಡಿಸಿರುವುದಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ(HD Kumaraswamy) ಕಿಡಿಕಾರಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ದಬ್ಬಾಳಿಕೆ ಮತ್ತು ರೈತ ವಿರೋಧಿ ಧೋರಣೆಯನ್ನು ಖಂಡಿಸಿದರು. ಪಾರಂಪರಿಕ ಕಟ್ಟಡ ಒಡೆಯಲು ಇವರೇನು … Read more