ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. WhatsApp Group Join Now ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ … Read more

ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪೊಂದು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. WhatsApp Group Join Now ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಪುಂಡರ ಗುಂಪು ಮನೆಗೆ ನುಗ್ಗಿ ದಾಂಧಲೆ ನಡೆಸಿ, ಕಲ್ಲು ತೂರಾಟ ಮಾಡಿ, ವಿದ್ಯಾರ್ಥಿನಿ ಮೇಘನಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ಗಾಯಗೊಂಡ ವಿದ್ಯಾರ್ಥಿನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, … Read more

ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆ ಗೆ ಹೊಸ ಷರತ್ತು ವಿಚಾರ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ (ಸೆಕ್ಯೂಲರ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಜೆಡಿಎಸ್, ಎಲ್ಲರಿಗೂ ಫ್ರೀ, ಯಾವುದೇ ಷರತ್ತುಗಳಿಲ್ಲ ಎಂದು ಭಾಷಣ ಬಿಗಿದು ಜನರ ಕಿವಿಗೆ ಹೂವಿಟ್ಟು ಅಧಿಕಾರ ಹಿಡಿದ ಕಾಂಗ್ರೆಸ್, ಈಗ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದೆ. WhatsApp Group Join Now ಆರ್ಥಿಕ ದಿವಾಳಿತನವನ್ನು ಮುಚ್ಚಿಕೊಳ್ಳಲು ಜನಸಾಮಾನ್ಯರನ್ನು ‘ಗೃಹಜ್ಯೋತಿ’ ಯೋಜನೆಯಿಂದ ಹೊರಹಾಕಲು ಕುತಂತ್ರ ಹೆಣೆದಿದೆ ಎಂದು … Read more

ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!

ತಡರಾತ್ರಿ ಮಲಗುವ ಅಭ್ಯಾಸವಿದ್ರೆ ಇಂದೇ ಬಿಟ್ಟುಬಿಡಿ. ನಿದ್ರಾಹೀನತೆ ಮಿನಿ-ಸ್ಟ್ರೋಕ್‌ಗೆ ಕಾರಣವಾಗಬಹುದು ಅಂತಾ ತಜ್ಞರು ಎಚ್ಚರಿಕೆ ನೀಡಿದ್ದಾರೆ. ನಿದ್ರಾಹೀನತೆಯಿಂದ ರಕ್ತದೊತ್ತಡ, ಉರಿಯೂತ, ಹೃದಯ ಸಂಬಂಧಿ ಕಾಯಿಲೆ, ಮೆದುಳಿನ ಸಮಸ್ಯೆ ಹಠಾತ್ ಮಾತು ನಿಲ್ಲುವುದು, ದೃಷ್ಠಿ, ಕೈ ಕಾಲಿನ ಸಮಸ್ಯೆಗೆ ಕಾರಣ.. WhatsApp Group Join Now ಹಿಂದಿನಕಾಲ ಅಂದ್ರೆ ನೂರಾರು ವರ್ಷ ಏನೂ ಅಲ್ಲ, ಒಂದಿಪ್ಪತ್ತು ವರ್ಷಗಳ ಹಿಂದೆ ಜನರ ಬದುಕು, ಜೀವನಶೈಲಿ ಈಗ ಇದ್ದಂತೆ ಇರಲಿಲ್ಲ. ಬೆಳಗಿನ ಜಾವ ಎದ್ದೇಳೋದು, ಸರಿಯಾದ ಸಮಯಕ್ಕೆ ಉಣ್ಣೋದು, ಹಗಲಿನ ವೇಳೆ … Read more

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣ ಮಾಡುವಾಗ ಕಿಟಕಿಯಿಂದ ದೇಹದ ಭಾಗಗಳನ್ನು ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನಡೆದ ಒಂದು ಭೀಕರ ಅಪಘಾತವೇ ಸಾಕ್ಷಿಯಾಗಿದೆ. ಚಲಿಸುವ ಬಸ್‌ನ ಕಿಟಕಿಯಿಂದ ಹೊರಗೆ ತಲೆ ಹಾಕಿದ್ದ ವಿದ್ಯಾರ್ಥಿಯೊಬ್ಬ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ತಲೆಯ ರುಂಡವೇ ಕಟ್ ಆಗಿ ಬಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ಘಟನೆ ಕುಂದಗೋಳ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ. WhatsApp Group Join Now ಘಟನೆಯ ವಿವರ: ಮೃತಪಟ್ಟ ವಿದ್ಯಾರ್ಥಿಯನ್ನು ಕುಂದಗೋಳ ತಾಲೂಕಿನ ಶಿರೂರು ಗ್ರಾಮದ ನಿವಾಸಿ ಪಕ್ಕಿರೇಶ್ … Read more

ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ಅವರು ಅಯೋಧ್ಯೆಯ ಶ್ರೀರಾಮ ಮಂದಿರದ (Ram mandir) ಹೆಸರಿನಲ್ಲಿ ಸಂಗ್ರಹವಾದ ಭಾರಿ ಮೊತ್ತದ ದೇಣಿಗೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ದೇವಸ್ಥಾನದ ನಿಧಿಯಲ್ಲಿ ಸುಮಾರು 200 ಕೋಟಿ ರೂಪಾಯಿಗಳಷ್ಟು ಹಣ ಲೂಟಿಯಾಗಿದೆ ಎಂದು ದೂರಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ … Read more

ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯಲ್ಲಿ 183.50 ರೂ. ಕಡಿತಗೊಳಿಸಿವೆ. ವಾಣಿಜ್ಯ LPG ಸಿಲಿಂಡರ್‌ v ಹೊಸ ಬೆಲೆಗಳು ಇಂದು, ಜುಲೈ 1, 2026 ರಿಂದ ಜಾರಿಗೆ ಬಂದಿವೆ. WhatsApp Group Join Now ಇದರ ಬೆನ್ನಲ್ಲೇ ಜಾಗತಿಕ ತೈಲ ದರ ಕುಸಿತದ ಹಿನ್ನೆಲೆಯಲ್ಲಿ ನಯಾರಾ ಎನರ್ಜಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 5 ರೂ., ಡೀಸೆಲ್ ಬೆಲೆಯನ್ನು 3 ರೂ. ಇಳಿಸಿದೆ. ಅಂತರರಾಷ್ಟ್ರೀಯ ತೈಲ ಬೆಲೆಗಳು ಕಡಿಮೆಯಾಗುತ್ತಿರುವಂತೆ ಖಾಸಗಿ ಇಂಧನ ಚಿಲ್ಲರೆ … Read more

ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!

ಆಧುನಿಕ ಕಾಲದಲ್ಲಿ ನಾವು ಎದುರಿಸುತ್ತಿರುವ ಅತಿದೊಡ್ಡ ಆರೋಗ್ಯ ಸಮಸ್ಯೆ ಯಾವುದು ಎಂದು ನಿಮಗೆ ತಿಳಿದಿದೆಯೇ?. ಅದು ನಮ್ಮ ದೇಹವನ್ನು ಒಳಗಿನಿಂದಲನಾಶಪಡಿಸುತ್ತದೆ, ಗೋಚರಿಸುವುದಿಲ್ಲ. ಹಾಗಾದರೆ ಬನ್ನಿ ಆ ಅಪಾಯಕಾರಿ ಕಾಯಿಲೆ ಯಾವುದು ಎಂದು ನೋಡೋಣ.. WhatsApp Group Join Now ಈಗ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಮೂವರಲ್ಲಿ ಒಬ್ಬರು ಈ ಭಯಾನಕ ಸೈಲೆಂಟ್‌ ಕಿಲ್ಲರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಆರಂಭದಲ್ಲಿ ಯಾವುದೇ ನೋವು ಅಥವಾ ಲಕ್ಷಣಗಳಿಲ್ಲದೆ ಕಾಲಾನಂತರದಲ್ಲಿ ಮಾರಕ ಕ್ಯಾನ್ಸರ್ ಆಗಿ ಬದಲಾಗುವ ಸಾಮರ್ಥ್ಯವನ್ನು ಹೊಂದಿದೆ. ವೈದ್ಯಕೀಯ … Read more

ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ

ಸ್ಟ್ರೋಕ್ (ಬ್ರೈನ್ ಅಟ್ಯಾಕ್) ಒಂದು ಗಂಭೀರ ಸ್ಥಿತಿ. ಅನೇಕ ಅಧ್ಯಯನಗಳ ಪ್ರಕಾರ, ಸ್ಟ್ರೋಕ್ ಪ್ರಕರಣಗಳು ಬೆಳಿಗ್ಗೆ ಹೆಚ್ಚು ಸಂಭವಿಸುತ್ತವೆ. ಬೆಳಿಗ್ಗೆ ಎದ್ದಾಗ ಅಥವಾ ಬೆಳಗಿನ ಸಮಯದಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಪಡೆಯಿರಿ. ಇದು ‘ವೇಕ್-ಅಪ್ ಸ್ಟ್ರೋಕ್’ ಆಗಿರಬಹುದು, ಅಂದರೆ ರಾತ್ರಿ ಸಂಭವಿಸಿ ಬೆಳಿಗ್ಗೆ ಲಕ್ಷಣಗಳು ಕಾಣಿಸಿಕೊಳ್ಳುವುದು ಪ್ರಮುಖ ಲಕ್ಷಣಗಳು. WhatsApp Group Join Now ಮುಖದ ಒಂದು ಭಾಗ ತೂಗುಹಾಕುವುದು ಅಥವಾ ಜುಮ್ಮೆನ್ನುವುದು :- ನಗುವಾಗ ಮುಖ ಒಂದು ಕಡೆ ವಾಕವಾಗಿ … Read more

ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್‌

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ. WhatsApp Group Join Now ಕಣ್ಣೀರು ಹಾಕಿದ ಶಾಸಕ ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ … Read more