ಇಂಜಿನಿಯರಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು! ಪಿಜಿಯಲ್ಲಿ ಜೊತೆಯಲ್ಲಿದ್ದವರೇ ಜೀವ ತೆಗೆದ್ರಾ?

ಬಳ್ಳಾರಿ: ಇಂಜಿನಿಯರಿಂಗ್ ವಿದ್ಯಾರ್ಥಿ (Engineering Student) ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ (Ballari) ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿಯಲ್ಲಿ (PG) ನಡೆದಿದೆ. ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಮೃತ ವಿದ್ಯಾರ್ಥಿಯನ್ನು ವಿಶ್ವಾಸ್ (24) ಎಂದು ಗುರುತಿಸಲಾಗಿದೆ. WhatsApp Group Join Now ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಮೃತ ವಿದ್ಯಾರ್ಥಿ ವಿಶ್ವಾಸ್ ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪಿಜಿ ಸಹಪಾಠಿಗಳೊಂದಿಗೆ ಜಗಳ … Read more

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣ ಬಹಿರಂಗ ಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್ಡಿಎ ಟಿಕೆಟ್ ಕೈತಪ್ಪಲು ಅಸಲಿ ಕಾರಣವೇನು ಎಂಬುದನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ. WhatsApp Group Join Now ದೇವೇಗೌಡರಿಗೆ ಎನ್ ಡಿಎ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಎಲ್ಲಾ ಚರ್ಚೆಗಳ ನಡುವೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಲು ಕಾರಣವೇನು ಎಂಬುದನ್ನು ಹೇಳಿದ್ದಾರೆ. … Read more

RRB Recruitment 2026 : ಭಾರತೀಯ ರೈಲ್ವೇ ಇಲಾಖೆಯಲ್ಲಿ 6,565 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಇರುವ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ಟೆಕ್ನಿಷಿಯನ್ (ತಂತ್ರಜ್ಞ) ಹುದ್ದೆಗಳ ಭರ್ತಿಗಾಗಿ ಸಂಕ್ಷಿಪ್ತ ನೇಮಕಾತಿ ಅಧಿಸೂಚನೆಯನ್ನು (CEN No. 02/2026) ಬಿಡುಗಡೆ ಮಾಡಿದೆ. WhatsApp Group Join Now ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್ಸೈಟ್ಗಳ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ … Read more

YouTube ನೋಡಿ ಹೆತ್ತ ತಂದೆಯನ್ನೇ ಕತ್ತರಿಸಿ ಬಕೆಟ್‌ನಲ್ಲಿಟ್ಟಿದ್ದ ಮಕ್ಕಳಿಗೆ ಗಲ್ಲು ಶಿಕ್ಷೆ: ಕೋರ್ಟ್‌ನಿಂದ ಐತಿಹಾಸಿಕ ತೀರ್ಪು.!

ಹೈದರಾಬಾದ್: ಆಸ್ತಿ ಮತ್ತು ಹಣದ ಆಸೆಗಾಗಿ ಹೆತ್ತ ತಂದೆಯನ್ನೇ ಅತ್ಯಂತ ಭೀಕರವಾಗಿ ಕೊಲೆ(YouTube) ಮಾಡಿ, ಶವವನ್ನು ಮುಕ್ಕಾಲು ತುಂಡುಗಳಾಗಿ ಕತ್ತರಿಸಿ ಬಕೆಟ್‌ನಲ್ಲಿ ತುಂಬಿ ಪೂಜೆ ಕೋಣೆಯಲ್ಲಿ ಬಚ್ಚಿಟ್ಟಿದ್ದ ಮಗ ಮತ್ತು ಮಗಳಿಗೆ ಕೋರ್ಟ್ ಮರಣದಂಡನೆ (ಉರಿಶಿಕ್ಷೆ) ವಿಧಿಸಿದೆ. WhatsApp Group Join Now ಕೊಲೆಗೆ ಸಾಥ್ ನೀಡಿದ್ದ ತಾಯಿಗೆ ವಯಸ್ಸಿನ ಕಾರಣದಿಂದಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ತೆಲಂಗಾಣದ ಮೇಡ್ಚಲ್ ಮಲ್ಕಾಜಿಗಿರಿ ಜಿಲ್ಲಾ ನ್ಯಾಯಾಲಯ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಕೊಲೆಗೆ ಕಾರಣವೇನು? ಮಹಾರಾಷ್ಟ್ರ ಮೂಲದ ಕಿಶನ್ ಮಾರುತಿ … Read more

ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ: ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್ ಭಗವಾನ್

ಸದಾಕಾಲ ವಿವಾದಗಳಿಂದಲೇ ಹೆಸರುವಾಸಿಯಾಗಿರುವ ಪ್ರೊ.ಕೆ.ಎಸ್.ಭಗವಾನ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಮರ್ಯಾದಾ ಪುರುಷೋತ್ತಮ, ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರರ ಬಗ್ಗೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. WhatsApp Group Join Now ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಗವಾನ್, ಶ್ರೀರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ … Read more

ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರ್ ಎಸ್ ಎಸ್ (RSS) ಕುರಿತು ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ತಮಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ತಮ್ಮ ‘ರಾಜಕೀಯ ಪಕ್ಷ’ಕ್ಕೆ ನೋಂದಣಿ ಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ತಿಳಿಸಿ ಎಂದು ಅವರು ಬಿಜೆಪಿಗೆ ವ್ಯಂಗ್ಯವಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ತಮಗೆ ಕೊಲೆ ಬೆದರಿಕೆ ಒಡ್ಡಿದ್ದ ಸುಧೀರ್ ಬಂಗೇರ ಎಂಬಾತನನ್ನು ಕಾರ್ಕಳ ಪೊಲೀಸರು ಬಂಧಿಸಿದ ಬೆನ್ನಲ್ಲೇ ಗೃಹ ಸಚಿವರು ಈ … Read more

‘ಪ್ರಿಯಾಂಕ್ ಖರ್ಗೆ ರಾಹುಲ್ ಗಾಂಧಿಯ ಬಕೆಟ್’ ಬಿಜೆಪಿ ಶಾಸಕ ಭರತ್ ಶೆಟ್ಟಿ ಭಾರಿ ವಾಗ್ದಾಳಿ: ಕೈ-ಕಮಲ ನಾಯಕರ ನಡುವೆ ಸೋಷಿಯಲ್ ಮೀಡಿಯಾ ವಾರ್

ರಾಜ್ಯ ರಾಜಕಾರಣದಲ್ಲಿ ಸಚಿವರು ಹಾಗೂ ವಿರೋಧ ಪಕ್ಷದ ನಾಯಕರ ನಡುವಿನ ಕೆಸರೆರಚಾಟ ದಿನದಿಂದ ದಿನಕ್ಕೆ ಇಂಟರೆಸ್ಟಿಂಗ್ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ಅವರು ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅತ್ಯಂತ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಪ್ರಿಯಾಂಕ್ ಖರ್ಗೆ ಅವರನ್ನು ನೇರವಾಗಿ ರಾಹುಲ್ ಗಾಂಧಿಯ ಬಕೆಟ್ ಎಂದು ಕರೆಯುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ವಿಡಿಯೋ ತುಣುಕಿನಲ್ಲಿ … Read more

ಸರ್ಕಾರದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನಪ್ಪಿದ ಪ್ರಕರಣ ಮಂಡ್ಯದಲ್ಲಿ ನಡೆದಿದ್ದು, ಅನುಮಾನಾಸ್ಪದ ರೀತಿಯಲ್ಲಿ ತಂದೆ ತಾಯಿ ಹಾಗೂ ಮಗ ಸಾವನಪ್ಪಿದ್ದಾರೆ. ನಿನ್ನೆ ರಾತ್ರಿ ತಾಯಿ ಜ್ಯೋತಿ ಮತ್ತು ಮಗ ಸಂತೋಷ್ ಸಾವನ್ನಪ್ಪಿದ್ದು, ಇಂದು ತಂದೆ ಪ್ರಭಾಕರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. WhatsApp Group Join Now ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದಾಗ ಡೆತ್ ನೋಟ್ ಒಂದು ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಆಶ್ಚರ್ಯಕರವಾದ ಮಾಹಿತಿ ಪತ್ತೆಯಾಗಿದ್ದು, ರಾಜ್ಯ … Read more

ಅತ್ತೆಯನ್ನು ಮದ್ವೆಯಾಗಲು ಹೆಂಡ್ತಿಗೇ ಡಿವೋರ್ಸ್ ನೀಡಿದ ಭೂಪ, ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್

ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ. ಆದರೆ, ಇತ್ತೀಚೆಗೆ ಆರಂಭವಾಗುವ ಹಾಗೂ ಕ್ಷಣ ಮಾತ್ರದಲ್ಲಿಯೇ ಮುಗಿದು ಹೋಗುವ ಪ್ರೀತಿಗೆ ಮನಸ್ಸೇ ಇಲ್ಲವೆನಿಸುತ್ತದೆ. ಉತ್ತರದ ಪ್ರದೇಶದ ಕಾನ್ಪುರದಲ್ಲಿ ಹೆಂಡತಿಯ ಅಮ್ಮನನ್ನೇ ಮದ್ವೆಯಾಗಲು, ಪತ್ನಿಗೆ ಡಿವೋರ್ಸ್ ಕೊಟ್ಟಿದ್ದಾನೆ. WhatsApp Group Join Now ಇತ್ತೀಚೆಗೆ ಇಂಥದ್ದೊಂದು ಘಟನೆ ವರದಿಯಾಗಿತ್ತಾದರೂ, ಈಗ ವರದಿಯಾದ ಹೊಸ ಘಟನೆ ಮತ್ತೊಂದಿಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ಪತ್ನಿಗೆ ವಿಚ್ಛೇದನ ನೀಡಿ, ವ್ಯಕ್ತಿಯೊಬ್ಬ ಆಕೆಯ ಅಮ್ಮನನ್ನೇ ಮದ್ವೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಿಂದ ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಬದಲಾಗುತ್ತಿರುವ ಸಂಬಂಧ, … Read more

ಗುರುವಿನ ಋಣ ಸ್ಮರಿಸಿದ ವಿದ್ಯಾರ್ಥಿ- ಕಷ್ಟಕಾಲದಲ್ಲಿ ನೆರವಾದ ನಿವೃತ್ತ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್!

ಹಾವೇರಿ (Haveri) ಜಿಲ್ಲೆಯ ಹಾನಗಲ್‌ನ (Hangal) ಕುಮರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ (Teacher) ಸಿ.ಎಸ್. ವಸ್ತ್ರದ ಅವರಿಗೆ ಅವರ ಹಳೆಯ ವಿದ್ಯಾರ್ಥಿಗಳು (Alumni) ಅಭೂತಪೂರ್ವ ವಿದಾಯ ಸಮಾರಂಭವನ್ನು ಏರ್ಪಡಿಸುವ ಮೂಲಕ ಗುರುವಂದನೆ ಸಲ್ಲಿಸಿದ್ದಾರೆ. WhatsApp Group Join Now ಈ ಸಮಾರಂಭದಲ್ಲಿ ಶಿಕ್ಷಕರ ಮೇಲಿನ ಗೌರವದ ಸಂಕೇತವಾಗಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಉಡುಗೊರೆಯಾಗಿ ನೀಡಲಾಗಿದ್ದು, ಇದು ಇಡೀ ಜಿಲ್ಲೆಯಲ್ಲೇ ಈಗ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮರೇಶ್ವರ ಮಠದ ಶ್ರೀ ಗುರುಸಿದ್ಧ … Read more