EMERGENCY 50 : ಸಂವಿಧಾನ ಹತ್ಯಾ ದಿವಸ್‌ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!

Spread the love

EMERGENCY 50 : ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುವಂತೆ ಪ್ರಧಾನಿ ಮೋದಿ ನಡೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದರು.

ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದೀಗ ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಸರ್ಕಾರದ ಪರವಾಗಿ ಪ್ರಧಾನಿಯವರು ಎಲ್ಲಾ ರಾಜ್ಯಗಳು ತುರ್ತು ಪರಿಸ್ಥಿತಿಯ 50 ವರ್ಷಗಳನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸಲು ನಿರ್ದೇಶನ ನೀಡುವ ಸುತ್ತೋಲೆಯನ್ನು ಹೊರಡಿಸಿದ್ದಾರೆ ಸಂವಿಧಾನ ಹತ್ಯಾ ದಿವಸ್‌ ಆಚರಿಸುವುದು ಸರಿಯಲ್ಲ, ಇದೆಲ್ಲ ಹಳೆ ಕಥೆ ಎಂದು ಹೇಳಿದರು.

ಸಂವಿಧಾನವನ್ನು ಉಳಿಸುವ ಬಗ್ಗೆ ಮಾತನಾಡುವವರು ಈ ಹಿಂದೆ ಕೊನೆಗೊಂಡಿದ್ದ ವಿಷಯವನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಖರ್ಗೆ ಗಂಭೀರ ಆರೋಪ ಮಾಡಿದರು.

ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಮತ್ತು ಸಂವಿಧಾನ ರಚನೆಯಲ್ಲಿ ಪಾತ್ರ ವಹಿಸದವರು ಈಗ ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ದೇಶಕ್ಕಾಗಿ ಹೋರಾಡಿದ ಗಾಂಧಿ ಜಿ, ಅಂಬೇಡ್ಕರ್ ಜಿ ಮತ್ತು ಇತರರ ಚಿತ್ರಗಳನ್ನು ಸಹ ಸುಟ್ಟುಹಾಕಿದ್ದರು ಎಂದು ಖರ್ಗೆ ಕಿಡಿಕಾರಿದರು.

WhatsApp Group Join Now

Spread the love

Leave a Reply