Free Laptop Scheme : ನಮಸ್ಕಾರ ಸ್ನೇಹಿತರೇ, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ತಯಾರಿ ನಡೆಸಿದೆ. ಈ ಸಂಬಂಧ ಈಗಾಗಲೇ ಲ್ಯಾಪ್ ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಇಲಾಖೆ ಮುಂದಾಗಿದ್ದು, ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು ಖರೀದಿಗಾಗಿ ನಿಗದಿಪಡಿಸಲಾಗಿದೆ. ಈ ಕುರಿತು ಈಗಾಗಲೇ ಅಧಿಸೂಚನೆಯನ್ನ ಹೊರಡಿಸಲಾಗಿದ್ದು, ಟೆಂಡರ್ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆಯ ದಿನವಾಗಿದೆ.
ಉಚಿತ ಲ್ಯಾಪ್ ಟಾಪ್ ಯೋಜನೆ (Free Laptop Scheme)
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ ರಾಜ್ಯ ಸರ್ಕಾರವು ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2010ರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮೊದಲು ಈ ಯೋಜನೆಯಡಿ ಡೆಸ್ಕ್ಟಾಪ್ ಕಂಪ್ಯೂಟರ್ ಗಳನ್ನು ನೀಡಲಾಗುತ್ತಿತ್ತು. ಇದೀಗ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗುತ್ತಿದೆ.
ಇದನ್ನೂ ಕೂಡ ಓದಿ : Gold Rate Today : ದಿಢೀರ್ ಕುಸಿತ ಕಂಡಿತಾ ಚಿನ್ನ.! ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
ಆರಂಭದಲ್ಲಿ ಜಿಲ್ಲಾ ಹಂತದಲ್ಲಿ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಲಾಗುತ್ತಿತ್ತು. ಬಳಿಕ ವಿದ್ಯಾರ್ಥಿಗಳ ಒತ್ತಾಯದಿಂದ 2012ರಿಂದ ಇದನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಈ ಉಚಿತ ಲ್ಯಾಪ್ ಟಾಪ್ ನೀಡುವ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇದೀಗ 2024ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಲು ತಯಾರಿ ನಡೆದಿದೆ.
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ 1, 2 ಹಾಗೂ 3ನೇ ಸ್ಥಾನ ಪಡೆದವರಿಗೆ ಉಚಿತ ಲ್ಯಾಪ್ಟಾಪ್(Free Laptop) ವಿತರಣೆ ಮಾಡಲಾಗುತ್ತದೆ. ಇವರನ್ನು ಹೊರತುಪಡಿಸಿ ಬ್ಲಾಕ್ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೂ ಉಚಿತ ಲ್ಯಾಪ್ಟಾಪ್ ಸಿಗಲಿದೆ.
ಪ್ರತೀ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಎರಡೂರು ತಿಂಗಳಲ್ಲಿ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ (Free Laptop) ವಿತರಿಸಲಾಗುತ್ತದೆ. ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಟಾಪರ್ಗಳು ಹಾಗೂ ಬ್ಲಾಕ್ ಮಟ್ಟದ ಟಾಪರ್ ಗಳು ಸೇರಿ ಸಾವಿರಾರು ವಿದ್ಯಾರ್ಥಿಗಳು ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ.
ಇದನ್ನೂ ಕೂಡ ಓದಿ : Gram Panchayat Jobs : ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ.! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳೇನು.?
ಸದ್ಯಕ್ಕೆ ಉಚಿತ ಲ್ಯಾಪ್ಟಾಪ್ (Free Laptop) ವಿತರಣೆಗೆ ಸಂಬಂಧಿಸಿದಂತೆ 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಟರ್ ಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಎಸ್ಎಸ್ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ (Free Laptop) ಸಿಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿಯೇ ಲ್ಯಾಪ್ಟಾಪ್ ವಿತರಣೆ ಕುರಿತ ಅಧೀಕೃತ ಮಾಹಿತಿ ಬಿಡುಗಡೆ ಮಾಡಲಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 30 ನಿಮಿಷಕ್ಕಿಂತ ಹೆಚ್ಚು ಹೊತ್ತು ಎದ್ದೇಳದೆ ಕುಳಿತುಕೊಳ್ಳುತ್ತೀರಾ ? ಕ್ಯಾನ್ಸರ್ ಅಪಾಯ ಹೆಚ್ಚಾಗಬಹುದು ಎಚ್ಚರ.!


















