Petrol : ನಮಸ್ಕಾರ ಸ್ನೇಹಿತರೇ, ಇಂದು ನಮ್ಮ ದೇಶದಲ್ಲಿ ಪೆಟ್ರೋಲ್ ವಾಹನಗಳ ಬಳಕೆಯೇ ಹೆಚ್ಚು. ಎಲೆಕ್ಟ್ರಿಕ್ ವಾಹನಗಳ ಆವಿಷ್ಕಾರಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದೇ ಆದರೂ ಪೆಟ್ರೋಲ್ ಗಾಡಿಗಳ ಚಾಲನೆಯೇ ಅಧಿಕ ಸಂಖ್ಯೆಯಲ್ಲಿದೆ. ಇಂತಹ ವಾಹನಗಳ ಸಂಚಾರ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಅದರಲ್ಲೂ ಇಂಧನ ಬೆಲೆ ಗಗನಕ್ಕೇರಿದ್ದು, ವಾಹನ ಸವಾರರ ಅಳಲು ಕೂಡ ಮುಗಿಲು ಮುಟ್ಟಿದೆ. ಸದ್ಯ ಬೆಲೆ ಇಳಿಕೆ ದೂರದ ಮಾತಾಗಿದೆ. ಹೀಗಿರುವಾಗ ಪೆಟ್ರೋಲ್ (Petrol) ಬೈಕ್ ಮತ್ತು ಕಾರುಗಳನ್ನು ಚಲಾಯಿಸುವ ಬಹುತೇಕರು, ತಮ್ಮ ವಾಹನದ ಟ್ಯಾಂಕ್ ಖಾಲಿ ಆಗುವವರೆಗೂ ಪೆಟ್ರೋಲ್ ಹಾಕಿಸುವ ಆಲೋಚನೆ ಮಾಡುವುದಿಲ್ಲ. ಇದೇ ರೀತಿ ಒಂದಷ್ಟು ತಪ್ಪುಗಳನ್ನು ಮಾಡುವ ಸವಾರರು ಈ ಮಾಹಿತಿಯನ್ನು ತಪ್ಪದೇ ತಿಳಿಯುವುದು ಒಳಿತು.
ಎಷ್ಟು ಪ್ರಮಾಣದಲ್ಲಿ ಪೆಟ್ಟು ಬೀಳಬಹುದು.?
ಪೆಟ್ರೋಲ್ ಇಲ್ಲ ಎಂದರೆ ನಮ್ಮ ವಾಹನಗಳು ಒಂದು ಹೆಜ್ಜೆಯೂ ಮುಂದೆ ಹೋಗಲ್ಲ. ಇದು ಗಾಡಿ ಓಡಿಸುವ ಪ್ರತಿಯೊಬ್ಬರಿಗೂ ಗೊತ್ತಿರುವ ಸಾಮಾನ್ಯ ಸಂಗತಿಯೇ. ಪೆಟ್ರೋಲ್ ಹಾಕಿಸಿಕೊಳ್ಳುವಾಗ ನಾವು ಎಷ್ಟು ಜವಾಬ್ದಾರಿ ವಹಿಸಬೇಕು? ಏನು ತಪ್ಪು ಮಾಡಿದರೆ, ವಾಹನದ ಇಂಜಿನ್ಗೆ ಎಷ್ಟು ಪ್ರಮಾಣದಲ್ಲಿ ಪೆಟ್ಟು ಬೀಳಬಹುದು? ಇದರಿಂದ ವಾಹನದ ಬಾಳಿಕೆಗೆ ಯಾವ ರೀತಿಯ ಹೊಡೆತ ಎದುರಾಗಬಹುದು ಎಂಬ ಸೂಕ್ಷ್ಮತೆ ವಾಹನ ಬಳಕೆದಾರರಿಗೆ ತಿಳಿದರಲೇ ಬೇಕಾದ ವಿಷಯ. ಆದರೆ, ಇಂತಹ ವಿಚಾರಗಳನ್ನೇ ಮರೆಯುವ ವಾಹನ ಮಾಲೀಕರು, ಪದೇ ಪದೇ ಈ ತಪ್ಪುಗಳನ್ನು ಮಾಡಿ, ತಮ್ಮ ದುಬಾರಿ ವಾಹನಗಳ ಆಯಾಸ್ಸನ್ನು ತಾವೇ ತಮ್ಮ ಕೈಯಾರೆ ಕಡಿತಗೊಳಿಸುತ್ತಾರೆ.
ಈ ತಪ್ಪುಗಳು ಖಂಡಿತವಾಗಿಯೂ ನಿಮ್ಮ ಕಾರು ಮತ್ತು ಬೈಕ್ ಇಂಜಿನ್ ಮೇಲೆ ಪರಿಣಾಮ ಬೀರುತ್ತವೆ. ಎಷ್ಟೋ ಜನ ಪೆಟ್ರೋಲ್ ವಿಚಾರದಲ್ಲಿ ತಮಗೆ ಅರಿವಿಲ್ಲದೇ ಬಹಳ ನಿರ್ಲಕ್ಷ್ಯ ವಹಿಸುತ್ತಾರೆ. ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆಯೇ? ನೀವು ಪೆಟ್ರೋಲ್ ಬಂಕ್ಗೆ ಹೋಗಿದ್ದೀರಾ? ಪೆಟ್ರೋಲ್ ಹಾಕಿಸುವ ಸೂಕ್ತ ಕ್ರಮ ಹೇಗೆ? ನಾವು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು? ಎಂಬುದರ ಬಗ್ಗೆ ಅದರ ಕೆಳಭಾಗಕ್ಕೆ ಹೋಗೋಣ.
ಪೆಟ್ರೋಲ್-ಡೀಸೆಲ್ ಟ್ಯಾಂಕ್ ಕೊಳಕು
ಇಂಜಿನ್ ವಾಹನದ ಹೃದಯವಿದ್ದಂತೆ. ಆದ್ದರಿಂದ ಇದನ್ನು ಸರಿಯಾಗಿ ನೋಡಿಕೊಳ್ಳಬೇಕು. ನಮ್ಮಲ್ಲಿ ಹೆಚ್ಚಿನವರು ಪೆಟ್ರೋಲ್ ಟ್ಯಾಂಕ್ ಸಂಪೂರ್ಣವಾಗಿ ಖಾಲಿಯಾಗುವವರೆಗೆ ಪೆಟ್ರೋಲ್ ಹಾಕಿಸುವ ಮನಸ್ಸು ಮಾಡುವುದೇ ಇಲ್ಲ. ಆದರೆ ಪೆಟ್ರೋಲ್ ಟ್ಯಾಂಕ್ ಖಾಲಿ ಇಡುವುದು ತುಂಬಾ ಅಪಾಯಕಾರಿ. ಕಾರಣ, ಪೆಟ್ರೋಲ್-ಡೀಸೆಲ್ ಟ್ಯಾಂಕ್ ಕೊಳಕು. ಪೆಟ್ರೋಲ್ ಖಾಲಿಯಾದ ನಂತರ, ಎಲ್ಲಾ ತ್ಯಾಜ್ಯ ವಸ್ತುಗಳು ವಾಹನಕ್ಕೆ ಪೆಟ್ರೋಲ್ ಪೂರೈಸುವ ಪಂಪ್ ಮೂಲಕ ಇಂಜಿನ್ ಪಾಲಾಗುತ್ತವೆ. ಆ ತ್ಯಾಜ್ಯವು ಫಿಲ್ಟರ್ ಅನ್ನು ಮುಚ್ಚುತ್ತದೆ. ಇದರಿಂದ ವಾಹನದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಈ ಕಾರಣದಿಂದಾಗಿ ವಾಹನವನ್ನು ಸರಿಯಾಗಿ ನಿಯಂತ್ರಿಸಲು ಆಗುವುದಿಲ್ಲ.
ಕಳಪೆ ಗುಣಮಟ್ಟದ ಇಂಧನ
ಒಮ್ಮೊಮ್ಮೆ ಇದರಿಂದ ಅಪಘಾತ ಸಂಭವವು ಅಧಿಕ. ಹಾಗಾಗಿ ಖಂಡಿತ ಈ ಬಗ್ಗೆ ವಾಹನ ಸವಾರರು ಜಾಗರೂಕರಾಗಿರಿ. ಯಾವತ್ತೂ ಈ ರೀತಿ ಪೆಟ್ರೋಲ್ ಖಾಲಿಯಾಗುವವರೆಗೂ ಕಾದು, ತುಂಬಿಸಬೇಡಿ. ಇದು ಅತ್ಯಂತ ಮುಖ್ಯವಾದ ಸಂಗತಿ. ಅದೇ ಇಂಧನ ಗುಣಮಟ್ಟ. ಕೆಲವರು ಪೆಟ್ರೋಲ್ ಗುಣಮಟ್ಟದಿಂದ ದೂರ ಉಳಿದಿರುವ ಬಂಕ್ಗಳಿಂದ ಪೆಟ್ರೋಲ್ ಹಾಕಿಸಿಕೊಳ್ಳುತ್ತಾರೆ. ಆದರೆ ಅಂತಹ ಕಳಪೆ ಗುಣಮಟ್ಟದ ಪೆಟ್ರೋಲ್ ವಾಹನಕ್ಕೆ ಒಳ್ಳೆಯದಲ್ಲ. ಪೆಟ್ರೋಲ್ ಉತ್ತಮ ಗುಣಮಟ್ಟದಲ್ಲಿಲ್ಲದಿದ್ದರೆ ಅದು ಇಂಜಿನ್ನಲ್ಲಿ ಸಂಗ್ರಹವಾಗುತ್ತದೆ. ಆಗ ವಾಹನದ ಕಾರ್ಯಕ್ಷಮತೆ ಉತ್ತಮವಾಗಿರುವುದಿಲ್ಲ. ಹಾಗಾಗಿ ಯಾವುದೇ ಸಮಯದಲ್ಲಿ ವಾಹನಕ್ಕೆ ಗುಣಮಟ್ಟದ ಪೆಟ್ರೋಲ್ ಬಳಸುವುದು ಒಳಿತು.
ಇಂಜಿನ್ ಕಾರ್ಯಕ್ಷಮತೆ ಕುಸಿಯುತ್ತದೆ
ಪೆಟ್ರೋಲ್ ಖಾಲಿಯಾದ ನಂತರ, ಇಂಧನ ಟ್ಯಾಂಕ್ನ ಕ್ಯಾಪ್ ಅನ್ನು ಸರಿಯಾಗಿ ಮುಚ್ಚಲಾಗಿದೆಯೇ? ಎಂಬುದನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು. ಇಲ್ಲದಿದ್ದರೆ ಗಾಳಿ ಮತ್ತು ತೇವಾಂಶವು ಟ್ಯಾಂಕಿನೊಳಗೆ ಹೋಗುತ್ತದೆ. ಈ ಕಾರಣದಿಂದಾಗಿ, ನೀರಿನ ಆವಿಯು ಪೆಟ್ರೋಲ್ನೊಂದಿಗೆ ಮಿಕ್ಸ್ ಆಗಿ ಪೆಟ್ರೋಲ್ ಗುಣಮಟ್ಟವನ್ನು ಕುಸಿಯುವಂತೆ ಮಾಡುತ್ತದೆ. ಇದು ವಾಹನದ ಎಂಜಿನ್ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುತ್ತದೆ. ಕೆಲವರು ಪೆಟ್ರೋಲ್ ಟ್ಯಾಂಕ್ ಸದಾ ತುಂಬಿರಲಿ ಎಂದು ಪಂಪ್ನಲ್ಲಿ ಪೆಟ್ರೋಲ್ ತುಂಬಿಸುತ್ತಲೇ ಇರುತ್ತಾರೆ. ಇದು ಅತಿಯಾದ ಭರ್ತಿಗೆ ಕಾರಣವಾಗುತ್ತದೆ. ಹೀಗೆ ಮಾಡುವುದರಿಂದ ಇಂಧನ ಪೈಪ್ನಲ್ಲಿ ಸೋರಿಕೆಯಾಗುವ ಅಪಾಯವಿರಲಿದೆ. ಇದರಿಂದ ಇಂಜಿನ್ ಹಾಳಾಗುತ್ತದೆ ಎನ್ನುತ್ತಾರೆ ಟೆಕ್ ತಜ್ಞರು.
ಮೈಲೇಜ್ ಮತ್ತು ಇಂಜಿನ್
ಇನ್ನು ಕೆಲವರು ಪೆಟ್ರೋಲ್ ತುಂಬಿಸುವಾಗ ವಾಹನದ ಇಂಜಿನ್ ಅನ್ನು ಆನ್ನಲ್ಲಿ ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದು ತುಂಬಾ ಅಪಾಯಕಾರಿ. ಇದು ಮೈಲೇಜ್ ಮತ್ತು ಇಂಜಿನ್ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಕೆಲವೊಮ್ಮೆ ಬೆಂಕಿ ಅವಘಡ ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಎಂದಿಗೂ ಇಂಜಿನ್ ಅನ್ನು ಆನ್ನಲ್ಲಿಟ್ಟು, ಪೆಟ್ರೋಲ್ ಹಾಕಿಸಬೇಡಿ. ನಿಮ್ಮ ವಾಹನಕ್ಕೆ ಪೆಟ್ರೋಲ್ ಅಥವಾ ಡೀಸೆಲ್ ತುಂಬಿಸುವಾಗ ಈ ವಿಷಯಗಳನ್ನು ತಪ್ಪದೆ ನೆನಪಿನಲ್ಲಿಡಿ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ