Bigg Boss Kannada 11 : ನಮಸ್ಕಾರ ಸ್ನೇಹಿತರೇ, ಬಿಗ್ಬಾಸ್ ಕನ್ನಡ ಸೀಸನ್ 11ರಲ್ಲಿ ಗ್ರ್ಯಾಂಡ್ ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಈ ವಾರದ ಟಾಸ್ಕ್ಗಳು ನಡೆದಿವೆ. ಬಿಗ್ ಬಾಸ್ ಕೂಡ ಟಾಸ್ಕ್ನಲ್ಲಿ ಜಯ ಗಳಿಸುವ ಸ್ಪರ್ಧಿ ನೇರವಾಗಿ ಫಿನಾಲೆ ಓಟದಲ್ಲಿ ಟಿಕೆಟ್ ಪಡೆಯುತ್ತಾರೆ, ಸೋತವರು ಫಿನಾಲೆ ಟಿಕೆಟ್ ಪಡೆಯಲು ವಿಫಲರಾಗುತ್ತಾರೆ ಎಂದು ಹೇಳಿದ್ದಾರೆ.
ಹೀಗಾಗಿ ಟಾಸ್ಕ್ಗಳು ನಡೆದಿದ್ದು ಫಲಿತಾಂಶ ಕೂಡ ಹೊರಬಂದಿದೆ. ಇದರಲ್ಲಿ ಇಬ್ಬರು ಸ್ಪರ್ಧಿಗಳು ಫಿನಾಲೆಗೆ ಟಿಕೆಟ್ ಪಡೆದಿದ್ದಾರೆ. ಹಾಗಾದರೆ ಆ ಸ್ಪರ್ಧಿಗಳು ಯಾರು?
ತ್ರಿವಿಕ್ರಮ್ಗೆ ಫಿನಾಲೆ ಟಿಕೆಟ್ ಟಾಸ್ಕ್
ಚೈತ್ರಾ ಕುಂದಾಪುರ ಅವರು ಟಿಕೆಟ್ ಟು ಫಿನಾಲೆ ಓಟದಿಂದ ಹೊರಗಡೆ ಉಳಿದುಕೊಂಡಿದ್ದಾರೆ. ಇವರು ಫಿನಾಲೆಗೆ ನೇರವಾಗಿ ಎಂಟ್ರಿ ಪಡೆಯಲು ಆಗುವುದಿಲ್ಲ. ಎಲಿಮಿನೇಷನ್ ದಾಟಿ ಫಿನಾಲೆಗೆ ಎಂಟ್ರಿ ಕೊಡಬೇಕಾಗುತ್ತದೆ. ಇನ್ನು ತ್ರಿವಿಕ್ರಮ್ ಅವರಿಗೆ ಟಿಕೆಟ್ ಟು ಫಿನಾಲೆ ಓಟದಲ್ಲಿ ಮುಂದುವರೆಯುವ ಅವಕಾಶ ಸಿಕ್ಕಿದೆ. ಹೀಗಾಗಿ ತ್ರಿವಿಕ್ರಮ್ ಟಿಕೆಟ್ ಟು ಫಿನಾಲೆ ಓಟದಲ್ಲಿ ಜಯ ಸಾಧಿಸಿದ್ದರೆ, ಚೈತ್ರಾ ಕುಂದಾಪುರ ಅವರು ಇದರಿಂದ ಹೊರ ಉಳಿದಿದ್ದಾರೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಹೀಗಾಗಿ ಧನ್ರಾಜ್ ತಂಡದಿಂದ ಚೈತ್ರಾ ಆಟದಿಂದ ಹೊರಗಡೆ ಉಳಿದಿರುವುದರಿಂದ ಧನ್ರಾಜ್, ಗೌತಮಿ ಹಾಗೂ ಮಂಜು ಅವರು ಮಾತ್ರ ಮುಂದಿನ ಟಾಸ್ಕ್ ಆಡುತ್ತಾರೆ. ಇತ್ತ ತ್ರಿವಿಕ್ರಮ್ ಫಿನಾಲೆ ಟಿಕೆಟ್ ಪಡೆದುಕೊಳ್ಳುವ ಓಟದಲ್ಲಿ ಸೆಲೆಕ್ಟ್ ಆಗಿರುವುದರಿಂದ ಇವರ ತಂಡದಲ್ಲಿ ಉಳಿದ ಮೋಕ್ಷಿತಾ, ಹನುಮಂತು ಹಾಗೂ ಭವ್ಯಾ ಅವರು ಮುಂದಿನ ಆಟವನ್ನು ಆಡಿದರು.
ರಜತ್ಗೆ ಫಿನಾಲೆ ಟಿಕೆಟ್
ಇನ್ನೂ ರಜತ್ ಈ ವಾರದ ಕ್ಯಾಪ್ಟನ್ ಆಗಿರುವುದರಿಂದ ಉಸ್ತುವಾರಿಯನ್ನೇ ಮಾಡಬೇಕಾಗುತ್ತದೆ. ಯಾವುದೇ ಟಾಸ್ಕ್ನಲ್ಲಿ ಭಾಗವಹಿಸಲು ಅವರಿಗೆ ಅವಕಾಶವನ್ನು ಬಿಗ್ಭಾಸ್ ನೀಡಿಲ್ಲ. ಹೀಗಾಗಿ ಇವರನ್ನು ನೇರವಾಗಿ ಟಿಕೆಟ್ ಟು ಫಿನಾಲೆಗೆ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ. ಹೀಗೆ ಎಲ್ಲಾ ಟಾಸ್ಕ್ ಮುಗಿದ ಬಳಿಕ ಒಬ್ಬರು ಸೆಲೆಕ್ಟ್ ಆಗುತ್ತಾರೆ ಇನ್ನೊಬ್ಬರು ರಿಜೆಕ್ಟ್ ಆಗುತ್ತಾರೆ.
ಹೀಗೆ ಎಲ್ಲಾ ಟಾಸ್ಕ್ನಲ್ಲಿ ವಿನ್ ಆದವರು ಫಿನಾಲೆ ಟಾಸ್ಕ್ ಅನ್ನು ಆಡುತ್ತಾರೆ. ಆಗ ರಜತ್ ಟಾಸ್ಕ್ನಲ್ಲಿ ಭಾಗವಹಿಸುತ್ತಾರೆ. ಅಲ್ಲಿಯವರೆಗೂ ಅವರು ಉಸ್ತುವಾರಿಯಾಗಿಯೇ ಇರಲಿದ್ದಾರೆ. ಹೀಗಾಗಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಾಗಿರುವುದರಿಂದ ತ್ರಿವಿಕ್ರಮ್ ಹಾಗೂ ರಜತ್ ಅವರು ಕೈಗೆ ನೀಲಿ ಪಟ್ಟಿಯನ್ನು ಕಟ್ಟಿಕೊಂಡಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಧನ್ರಾಜ್ ಅವರನ್ನು ಬಕ್ರಾ ಮಾಡಿದ ಮಂಜು ಗೌತಮಿ
ಇನ್ನೂ ಮುಂದಿನ ಆಟದಲ್ಲಿ ಫಿನಾಲೆ ಟಿಕೆಟ್ ಪಡೆಯಲು ಅರ್ಹರಲ್ಲದ ಸ್ಪರ್ಧಿಯ ಹೆಸರನ್ನು ಸೂಚಿಸುವಂತೆ ಬಿಗ್ಬಾಸ್ ಸೂಚಿಸುತ್ತಾರೆ. ಈ ವೇಳೆ ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಇಬ್ಬರು ಸೇರಿಕೊಂಡು ತಮ್ಮ ತಂಡದ ಧನ್ರಾಜ್ ಅವರನ್ನು ಫಿನಾಲೆ ಟಿಕೆಟ್ ಟಾಸ್ಕ್ಯಿಂದ ಹೊರಗುಳುಯುವಂತೆ ಮನವೊಲಿಸುತ್ತಾರೆ. ಇದಕ್ಕೆ ಧನ್ರಾಜ್ ಕೂಡ ಒಪ್ಪಿ ಬಕ್ರಾ ಆಗುತ್ತಾರೆ.
ಇದರಿಂದ ಮನೆಯ ಎಲ್ಲಾ ಸ್ಪರ್ಧಿಗಳು ‘ಮಾರಿ ಹಬ್ಬದಲ್ಲಿ ಬಲಿ ಕೊಟ್ಟಂಗೆ ಆಯ್ತು ಇವನ್ ಕತೆ’ ಎಂದು ಧನ್ರಾಜ್ ಅವರನ್ನು ರೇಗಿಸುತ್ತಾರೆ. ಇದರಿಂದ ಕೋಪಗೊಂಡ ರಜತ್ ಸಾರ್ಥಕ ಆಯ್ತು ಬಿಡ್ರೋ ನಿಮ್ ಜೀವನ ಅಂತ ಸಿಳ್ಳೆ ಹೊಡೆದಿದ್ದಾರೆ. ಗೌತಮಿಗಿಂತ ಕಡಿಮೆನಾ ಧನ್ರಾಜ್ ಎಂದು ರಜತ್ ಮಂಜಣ್ಣನಿಗೆ ಉಗಿಯುತ್ತಾರೆ.
ಇಷ್ಟಾದರೂ ಬುದ್ಧಿ ಕಲಿಯದ ಮಂಜಣ್ಣ ಮೋಕ್ಷಿತಾ ಬಳಿ ಹೇಳಿಕೊಳ್ತಾರೆ. ‘ಇಲ್ಲಿ ಯಾರನ್ನೂ ನಂಬುಕೊಂಡು ಆಡ್ತಾಯಿಲ್ಲ’ ಎಂದು ಹೇಳ್ತಾರೆ. ಹಾಗಾದರೆ ನೀವಿಬ್ಬರು ಯಾಕೆ ಒಬ್ಬರಿಗೊಬ್ಬರು ಸೇಫ್ ಮಾಡು ಅನ್ನೋ ಥರ ಜೊತೆಯಾಗಿದ್ರಿ ಅನ್ನೋದು ಇಲ್ಲಿ ಪ್ರಶ್ನೆ?
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಧನ್ರಾಜ್ಗೆ ಉಗಿದ ಹನುಮಂತ
ಧನ್ರಾಜ್ ಬಕ್ರಾ ಆಗಿದ್ದಕ್ಕೆ ಹನುಮಂತ ಉಗಿದಿದ್ದಾರೆ. ಮಂಜಣ್ಣನ್ನು ನಂಬಿ ನೀನು ಮೋಸ ಹೋದೆ ದೋಸ್ತಾ ಅಂತ ಹನುಮಂತ ಬೇಸರ ವ್ಯಕ್ತಪಡಿಸಿದ್ದಾರೆ. ಮೋಸ ಹೋದ ಮೇಲೆ ಬುದ್ಧಿ ಬಂತು ಅಂತ ಧನ್ರಾಜ್ ಈಗ ಪಶ್ಚಾತ್ತಾಪ ಪಡುವಂತಾಗಿದೆ. ಆದರೆ ಇನ್ನೂ ಕಾಲ ಮಿಂಚಿಲ್ಲ. ಎಲಿಮಿನೇಷನ್ನಿಂದ ಬಚಾವ್ ಆದರೆ ನೇರವಾಗಿ ಫಿನಾಲೆ ರೇಸ್ನಲ್ಲಿ ಧನ್ರಾಜ್ ಭಾಗವಹಿಸುವ ಅವಕಾಶ ಪಡೆಯಲಿದ್ದಾರೆ.
ಒಟ್ಟಿನಲ್ಲಿ ಬಿಗ್ಬಾಸ್ ಮನೆಯಲ್ಲಿ ಮೋಸದಿಂದಲೇ ಆಟ ಆಡಿ ಗೆಲ್ಲುವುದು ಹೆಚ್ಚಾಗಿದೆ. ರಜತ್- ಹನುಮಂತ ಅವರನ್ನು ಮೋಸದಿಂದ ಸೋಲಿಸಿದರು, ಧನ್ರಾಜ್ ಅವರನ್ನು ಮಂಜು ಮತ್ತು ಗೌತಮಿ ಬಕ್ರಾ ಮಾಡುವ ಮೂಲಕ ಸೋಲಿಸಿದರು. ಚೈತ್ರಾ ಕುಂದಪೂರ ಅವರನ್ನು ನೇರವಾಗಿ ಆಟದಿಂದು ಮನೆ ಎಲ್ಲಾ ಸ್ಪರ್ಧಿಗಳು ಹೊರಗಿಟ್ಟರು. ಇದೆಲ್ಲದಕ್ಕು ಕಿಚ್ಚನ ಪಂಚಾಯಿತಿಯಲ್ಲಿ ಸರಿಯಾಗೇ ತರಾಟೆ ತೆಗೆದುಕೊಳ್ಳಲಾಗುತ್ತೆ ಅದು ಮಾತ್ರ ಪಕ್ಕಾ. ಆದರೆ ಇದೆಲ್ಲದರ ನಡುವೆ ಗ್ರ್ಯಾಂಡ್ ಫಿನಾಲೆಗೆ ಯಾವ ಟಾಪ್ 5 ಸ್ಪರ್ಧಿ ಇರಲಿದ್ದಾರೆ ಅನ್ನೋ ಕುತೂಹಲ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
- ಪುಟ್ಟ ಮಕ್ಕಳಿಗೆ `ಚುಂಬಿಸುವ’ ಮುನ್ನ ಎಚ್ಚರ : ಅಪಾಯಕಾರಿ ಸೋಂಕಿನಿಂದ ದೃಷ್ಟಿ ಕಳೆದುಕೊಂಡ 2 ವರ್ಷದ ಮಗು.!
- ಮಂಗಳಮುಖಿ ಜೊತೆ ಆಟೋ ಡ್ರೈವರ್ ಲವ್ : ಬಳ್ಳಾರಿಯಲ್ಲಿ ಪ್ರೇಮಿಗಳ ನಿಗೂಢ ಸಾವು.!
- ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ HDFC ಬ್ಯಾಂಕ್ ಉದ್ಯೋಗಿ ಸಾವು
- ಮೊಣಕಾಲು ನೋವಿಗೆ ಇದು ಸಂಜೀವಿನಿಯಂತೆ : 60 ವರ್ಷ ಮೇಲ್ಪಟ್ಟವರು ಪ್ರತಿದಿನ ತಪ್ಪದೇ ಈ ಹಾಲು ಕುಡಿಯಿರಿ.!
- ಬಂಗಾರದಂಗಡಿ ದರೋಡೆ ನಾಟಕ ಮಾಡಿ ಖಾಕಿ ಕೈಲಿ ಲಾಕ್ ಆದ ಮಾಲೀಕ
- ಹಲ್ಲು ನೋವೆಂದು ಆಸ್ಪತ್ರೆಗೆ ಹೋದಾಗ ವೈದ್ಯರ ಎಡವಟ್ಟು: ಚಿಕಿತ್ಸೆ ವೇಳೆ ಇಂಜಕ್ಷನ್ ಕೊಡುತ್ತಿದ್ದಂತೆ ಕೋಮಾಗೆ ಜಾರಿದ ಮಹಿಳೆ
- ರೈತರ ಮಗನ ಮದುವೆಯಾಗುವ ಹುಡುಗಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಘೋಷಿಸಿ : ರೈತರಿಂದ ಸಿಎಂ ಸಿದ್ದರಾಮಯ್ಯಗೆ ಕೋರಿಕೆ
- Horoscope Today : 18 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್ ವಾಗ್ದಾಳಿ
- 12 ವರ್ಷಗಳ ಸುಖ ಸಂಸಾರವನ್ನು ಭಗ್ನಗೊಳಿಸಿದ ಮೊಬೈಲ್- ಪತಿಯಿಂದ್ಲೇ ಪತ್ನಿ ಕೊನೆಯುಸಿರು!
- ‘SBI’ ನಲ್ಲಿ 2273 ಹುದ್ದೆಗಳಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು
- ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್
- ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!
- ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!
- ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!
- Arecanut Price : ಇಂದಿನ ಅಡಿಕೆ ಧಾರಣೆ – 17 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ
- Horoscope Today : 17 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬ್ಯಾಂಕ್ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್!
- ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಫೋನ್ ಹಿಡಿದು ಟಾಯ್ಲೆಟ್ ನಲ್ಲಿ 10 ನಿಮಿಷಗಳಿಗಿಂತ ಹೆಚ್ಚು ಹೊತ್ತು ಕುಳಿತುಕೊಂಡರೆ ಆರೋಗ್ಯಕ್ಕೆ ಬರುವ ಆಪತ್ತು ಎಂತಹದು ಗೊತ್ತಾ?
- ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು
- Horoscope Today : 16 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ
- ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ
- ಬೆಳಗ್ಗೆ ಮಾಡುವ ಈ 5 ಸಣ್ಣ ತಪ್ಪು ನಿಮ್ಮ ಕಿಡ್ನಿಯನ್ನ ಪರ್ಮನೆಂಟ್ ಆಗಿ ಹಾಳು ಮಾಡುತ್ತೆ ಎಚ್ಚರ
- ಇವು ಸಿಕ್ರೆ ಬಿಡ್ಲೇಬೇಡಿ, ಅನೇಕಾನೇಕ ಪ್ರಯೋಜನಾ ; ನಿಮ್ಮ ಪ್ರದೇಶಗಳಲ್ಲಿ ಇದಕ್ಕೇನು ಹೆಸರಿದೆ.?




























