Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- ದಿಗ್ವೇಶ್ ರಾಠಿ ರನ್ಔಟ್ ವಿವಾದ – ರಿಷಭ್ ಪಂತ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಿನ್ನರ್ ಅಶ್ವಿನ್ ಕಿಡಿ!
- ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ
- ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ