Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ
- ಚಟ ಇರೋರು ಆಡ್ತಾರೆ ಬಿಡಿ, ಕುಣಿಗಲ್ ನಲ್ಲಿ ರೇಸ್ ಕೋರ್ಸ್ನಿಂದ 2 ಸಾವಿರ ಉದ್ಯೋಗ ಸೃಷ್ಟಿ: ವಿರೋಧಿಗಳಿಗೆ ಡಿಕೆಶಿ ತಿರುಗೇಟು
- ಕಿಡ್ನಿ ಕಾಯಿಲೆ ಎಂಬ ‘ಮೌನ ಕೊಲೆಗಾರ’ : ಈ 8 ಲಕ್ಷಣಗಳಿದ್ದರೆ ಕೂಡಲೇ ಎಚ್ಚೆತ್ತುಕೊಳ್ಳಿ!
- ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
- ಸೇಮ್ ಟು ಸೇಮ್ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!
- ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ
- ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್ ಶಾಸಕ
- ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!
- Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!
- ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್ಹ್ಯಾಂಡಾಗಿ ಸೆರೆ
- ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಮಗ ನಿಖಿಲ್ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ
- ಆರೋಗ್ಯಕರ ಎಂದು ಸೇವಿಸುವ ಈ ಆಹಾರಗಳು ಹೃದಯಕ್ಕೆ ಡೇಂಜರ್! ಅಪ್ಪಿತಪ್ಪಿ ತಿಂದ್ರೂ ಹಾರ್ಟ್ ಡ್ಯಾಮೇಜ್ ಆಗೋದು ಫಿಕ್ಸ್..
- ಹೂವು ಮಾರುತ್ತಿದ್ದ ಹುಡುಗಿ ಈಗ ನ್ಯಾಯಾಧೀಶೆ; ಆಟೋ ಚಾಲಕನ ಮಗಳು ಈಗ ಸಿವಿಲ್ ಜಡ್ಜ್ ಆದ ಕಥೆಯೇ ರೋಚಕ!
- ಮೂವರೊಡನೆ ಚಕ್ಕಂದ ಆಡುತ್ತಿದ್ದ ಕಿರುತೆರೆ ನಟಿ – ಇಬ್ಬರಿಗಾಗಿ ಒಬ್ಬನ ಕೈಕಾಲು ಕಟ್ಟಿ ಹತ್ಯೆ!
- ಕರಡಿ ದಾಳಿಗೆ ಕುರಿಗಾಹಿ ಓಬಣ್ಣ ಸಾವು; ರೊಚ್ಚಿಗೆದ್ದ ಜನರಿಂದ ದೊಣ್ಣೆಯ ಹೊಡೆತ ತಿಂದು ಪ್ರಾಣಬಿಟ್ಟ ಕರಡಿ.!
- Horoscope Today : 03 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಿಶ್ವಕ್ಕೆ ಯುದ್ದದ ಭೀತಿ : ಜಾಗತಿಕ ನಾಯಕನ ದುರ್ಮರಣ : ನಿಜವಾಯ್ತು ಕೋಡಿಶ್ರೀಗಳ ಭವಿಷ್ಯವಾಣಿ.!
- ಲಿವರ್ ಕ್ಯಾನ್ಸರ್ 4ನೇ ಹಂತದಲ್ಲಿದ್ದರೆ ದೇಹದಲ್ಲಿ ಯಾವೆಲ್ಲಾ ಲಕ್ಷಣಗಳು ಕಾಣಿಸುತ್ತವೆ.?
- Horoscope Today : 01 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೃದಯಾಘಾತವಲ್ಲ ಇದು ವ್ಯವಸ್ಥಿತ ಕೊಲೆ? ಪತ್ನಿಯ 3ನೇ ಮದುವೆಯಿಂದ ಬಯಲಾಯ್ತು ಪರಮೇಶ್ ಸಾವಿನ ರಹಸ್ಯ.!
- ಈಗಾಗಲೇ ನಾವು ಸುಸ್ತಾಗಿದ್ದೇವೆ, ಪಿಂಚಣಿಯ ಬಗ್ಗೆ ಸದ್ಯಕ್ಕೆ ಚರ್ಚೆ ಬೇಡ : ಡಿಸಿಎಂ ಡಿ.ಕೆ ಶಿವಕುಮಾರ್
- ಆಂಟಿಯೊಡನೆ ಲವಿಡವಿ, ಹಂತಕನಾದ ಪ್ರೇಮಿ – ಪುಟ್ಟ ಮಕ್ಕಳು ಅನಾಥ.!
- ಮೋದಿಗೆ 10 ಕೋಟಿ ಫಾಲೋವರ್ಸ್- ಇದರಿಂದ ಏನು ಪ್ರಯೋಜನ ಎಂದ ಪ್ರಕಾಶ್ ರಾಜ್ : ಬರ್ನಲ್ ಬೇಕಾ ಎಂದ ಅಣ್ಣಾಮಲೈ
- Arecanut Price : ಇಂದಿನ ಅಡಿಕೆ ಧಾರಣೆ – 28 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?


























