ಕನ್ನಡ ನ್ಯೂಸ್ ಟೈಮ್ : ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ವಿಲ್ಲುಕುರಿ ಗ್ರಾಮದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬಳು ಮನೆ ಮಾರಾಟ ಮಾಡಿದ ಹಣದ ಸಮೇತ ಪ್ರಿಯಕರನ ಜೊತೆ ಪರಾರಿಯಾಗಿದ್ದಾಳೆ. ಇತ್ತ ಮನೆ ಹಾಗೂ ಮಡದಿ ಇಲ್ಲದೆ ಕಂಗಾಲಾದ ಗಂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬೆಂಜಮಿನ್ (47) ಎಂಬಾತ ತನ್ನ ಕುಟುಂಬದ ನಿರ್ವಹಣೆಗಾಗಿ ದೂರದ ಸೌದಿ ಅರೇಬಿಯಾದಲ್ಲಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಆತನ ಪತ್ನಿ ಸುನೀತಾ (45) ಕನ್ಯಾಕುಮಾರಿಯಲ್ಲಿ ವಾಸವಿದ್ದಳು. 19 ವರ್ಷಗಳ ಹಿಂದೆ ಇಬ್ಬರು ವಿವಾಹವಾದರು. ಅವರಿಗೆ ಮಕ್ಕಳಿಲ್ಲ. ಬೆಂಜಮಿನ್ ತಾನು ಸಂಪಾದಿಸಿದ ಹಣವನ್ನು ಪ್ರತಿ ತಿಂಗಳು ಪತ್ನಿಗೆ ಕಳುಹಿಸುತ್ತಿದ್ದ. ಆದರೆ, ಪತ್ನಿ ಮಾತ್ರ ತನ್ನ ಪ್ರಿಯಕರ ಜತೆ ಜಾಲಿ ಮಾಡುತ್ತಿದ್ದಳು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಗಂಡ ಹೆಂಡತಿ ನಡುವೆ ಆಗಾಗ ಜಗಳಗಳು ಕೂಡ ನಡೆಯುತ್ತಿದ್ದವು. ಈ ಮಧ್ಯೆ, ಕೊನ್ನಕ್ಕುಳಿವಿಲೈನಲ್ಲಿರುವ ಕುಟುಂಬದ ಮನೆಯನ್ನು ಬೆಂಜಮಿನ್ ಮಾರಾಟ ಮಾಡಿದ್ದ. ಬಳಿಕ ಪಕ್ಕದ ಮನಕವಿಲೈನಲ್ಲಿ ಮನೆ ಕಟ್ಟಿಕೊಂಡು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿದ್ದ. ಇದರ ನಡುವೆ ಸುನೀತಾ ಕೆಲವು ವಾರಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಸಂಬಂಧಿಕರು ವಿದೇಶದಲ್ಲಿದ್ದ ಬೆಂಜಮಿನ್ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಹೀಗಾಗಿ ಬೆಂಜಮಿನ್ ಕೆಲವು ದಿನಗಳ ಹಿಂದೆ ಗ್ರಾಮಕ್ಕೆ ಮರಳಿದರು. ತಮ್ಮ ಪತ್ನಿ ಸುನೀತಾ ನಾಪತ್ತೆಯಾಗಿರುವ ಬಗ್ಗೆ ಇರಾನಿಯಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಇದರ ನಡುವೆ ಬುಧವಾರ ಬೆಂಜಮಿನ್ ಅವರು ತನ್ನ ಮಣಕ್ಕವಿಲೈ ಮನೆಯಲ್ಲಿ ವಿಷ ಸೇವಿಸಿದರು. ಇದು ಗೊತ್ತಾಗಿ ಆತನ ಸಂಬಂಧಿಕರು ಮತ್ತು ನೆರೆಹೊರೆಯವರ ಕೂಡಲೇ ಆಸರಿಪಲ್ಲಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಜಮಿನ್ ದುರಂತ ಸಾವಿಗೀಡಾಗಿದ್ದಾರೆ. ಇದಕ್ಕೂ ಮುನ್ನ ಬೆಂಜಮಿನ್ ತಮ್ಮ ಫೇಸ್ಬುಕ್ ಪುಟದಲ್ಲಿ ಅಳುತ್ತಾ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ವಿಡಿಯೋದಲ್ಲಿ ಏನಿದೆ.?
ಎಸ್ಪಿ ಸರ್, ನಾನು ನನ್ನ ಹೆಂಡತಿಯನ್ನು 19 ವರ್ಷಗಳ ಕಾಲ ರಾಣಿಯಂತೆ ನಡೆಸಿಕೊಂಡೆ. ನಾನು ನನ್ನ ಕುಟುಂಬದೊಂದಿಗೆ ಬೇರೆ ಮನೆಯಲ್ಲಿದ್ದೆ. ಆಗಲೇ ಆಕೆಗೆ ಅನೈತಿಕ ಸಂಬಂಧವಿತ್ತು. ನನ್ನ ಹೆಂಡತಿ, ಮನೆಯನ್ನು 33 ಲಕ್ಷ ರೂ.ಗೆ ಮಾರಿದ್ದೇನೆ ಎಂದು ಹೇಳಿದಳು. ಹಣದೊಂದಿಗೆ ಪರಾರಿಯಾಗಿದ್ದಾಳೆ. ಅವರನ್ನು ಮಾತ್ರ ಬಿಡಬೇಡಿ. ಸೈಜು, ಸುನೀತಾ ಹಾಗೂ ಶೀಲಾ ನನ್ನ ಸಾವಿಗೆ ಕಾರಣ. ನನ್ನ ಸಾವಿಗೆ ಕಾರಣರಾದವರಿಗೆ ಮರಣದಂಡನೆ ವಿಧಿಸಿ. ನಾನು ಅದನ್ನು ಮೇಲಿನಿಂದ ನೋಡುತ್ತೇನೆ.
ಅಯ್ಯೋ ದೇವರೇ, ಅವರನ್ನು ಬಿಡಬೇಡ. 19 ವರ್ಷಗಳಿಂದ ಈ ಸೈಜು ನನ್ನನ್ನು ಸ್ವಲ್ಪ ಸ್ವಲ್ಪವಾಗಿ ಕೊಲ್ಲುತ್ತಿದ್ದಾನೆ. ಅವನನ್ನು ಬಿಡಬೇಡ. ಅವಳು (ಸುನೀತಾ) ಅವನ ಮನೆಯಲ್ಲಿ ಇದ್ದಾಳೆ. ನನಗೆ ಗೊತ್ತಿರುವುದೆಲ್ಲಾ ಇಷ್ಟೇ ಎಸ್ಪಿ ಸರ್, ಕ್ರಮ ಕೈಗೊಳ್ಳಿ. ನನ್ನ ಸಾವಿಗೆ ಮೂವರೂ ಕಾರಣ ಎಂದು ಬೆಂಜಮಿನ್ ಪದೇಪದೆ ಹೇಳುತ್ತಾ ಎದೆ ಬಡಿದುಕೊಂಡು ಅತ್ತಿದ್ದಾರೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
13.09 ನಿಮಿಷಗಳ ಈ ವಿಡಿಯೋದಲ್ಲಿ, ಬೆಂಜಮಿನ್ ಕಿರುಚುತ್ತಾ 10ಕ್ಕೂ ಹೆಚ್ಚು ಬಾರಿ ಎದೆಗೆ ಹೊಡೆದುಕೊಳ್ಳುತ್ತಾರೆ. ಸೈಜು (ಕಳ್ಳ), ಸುನೀತಾ (ಅವನ ಹೆಂಡತಿ) ಮತ್ತು ಶೀಲಾ (ಅವನ ಹೆಂಡತಿಯ ಸಹೋದರಿ) ಮೂವರನ್ನು ಬಿಡಬೇಡಿ ಎಂದು ಹೇಳಿದ್ದಾರೆ. ಇರಾನಿಯಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪತ್ನಿ ಸುನೀತಾಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ತಲೆಮರೆಸಿಕೊಂಡಿರುವ ಸೈಜು ಮತ್ತು ಸುನೀತಾ ಸಹೋದರಿ ಶೀಲಾ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!






























