Crime News : ತಮಿಳುನಾಡಿನ ಜೋಲಾರ್ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗರ್ಭಿಣಿ ಎಂದು ಬೇಡಿಕೊಂಡರು ಬಿಡದ ಪಾಪಿ:
ವರದಿಯ ಪ್ರಕಾರ, ಚಲಿಸುತ್ತಿದ್ದ ರೈಲಿನಲ್ಲಿ ಇತರ ಮಹಿಳಾ ಪ್ರಯಾಣಿಕರು ಹೋದ ನಂತರ ಆರೋಪಿಯು ಮಹಿಳಾ ಬೋಗಿಯನ್ನು ಹತ್ತಿದ್ದ ಎಂದು ಮಹಿಳೆ ತನ್ನ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇದು ಮಹಿಳಾ ಬೋಗಿಯಾಗಿರುವುದರಿಂದ ನಾನು ಅವನನ್ನು ಕೆಳಗಿಳಿಯಲು ಕೇಳಿದಾಗ, ರೈಲು ಈಗಾಗಲೇ ಚಲಿಸಲು ಪ್ರಾರಂಭಿಸಿದೆ ಮತ್ತು ಮುಂದಿನ ನಿಲ್ದಾಣದಲ್ಲಿ ಇಳಿಯುವುದಾಗಿ ಅವನು ಹೇಳಿದನು. ನಾನು ಸರಿ ಎಂದು ಹೇಳಿದೆ. ಆದರೆ ಆ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಹೇಳಿದರು. ಅರ್ಧ ಗಂಟೆ ಆ ವ್ಯಕ್ತಿ ಮೌನವಾಗಿದ್ದ. ನಂತರ, ಅವನು ಬಾತ್ರೂಮ್ ನಿಂದ ಬೆತ್ತಲೆಯಾಗಿ ಬಂದು ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದನು. ನಾನು ಗರ್ಭಿಣಿ ಮತ್ತು ನಾನು ನಿಮ್ಮ ಸಹೋದರಿಯಂತೆ ಎಂದು ಹೇಳುತ್ತಾ ಬೇಡಿಕೊಂಡರೂ ಪಾಪಿ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದೌರ್ಜನ್ಯವೆಸಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ.
ಮಹಿಳೆಯ ತಲೆಗೆ 20 ಹೊಲಿಗೆ
ಇನ್ನು, ಶನಿವಾರ ಮಧ್ಯಾಹ್ನ ವೈದ್ಯರು ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆದರೆ ದುರಾದೃಷ್ಟವಶಾತ್ ಗರ್ಭಪಾತವಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅವರ ಪತಿ ವರದಿಗಾರರಿಗೆ ಮಾಹಿತಿ ನೀಡಿದರು. ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಭ್ರೂಣವು ಸಾಮಾನ್ಯವಾಗಿತ್ತು. ಆದರೆ ಮಹಿಳೆ ಸ್ಥಿತಿ ಹದಗೆಟ್ಟಿತು. ಶನಿವಾರ ಭ್ರೂಣದ ಹೃದಯ ಬಡಿತ ಕಡಿಮೆಯಾದ ಕಾರಣ ಗರ್ಭಪಾತವಾಗಿದೆ ಎಂದು ಹೇಳಿದ್ದಾರೆ. ಇನ್ನು, ಮಹಿಳೆಯ ಕೈಕಾಲುಗಳು ಮತ್ತು ತಲೆಯಲ್ಲಿ ಮುರಿತಗಳು ಸೇರಿದಂತೆ ತೀವ್ರವಾದ ಗಾಯಗಳಾಗಿದ್ದು, ಆಕೆಯ ತಲೆಯ ಮೇಲೆ 20 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಯಾಗಿದೆ.
ಆರೋಪಿ ಹೇಮರಾಜ್ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ 30 ವರ್ಷದ ಹೇಮರಾಜ್ ಎಂದು ಗುರುತಿಸಲಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು 12 ಗಂಟೆಗಳ ಒಳಗೆ ಪತ್ತೆಹಚ್ಚಲಾಯಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ದಕ್ಷಿಣ ರೈಲ್ವೆ ಮಹಿಳೆಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಮಹಿಳಾ ಪ್ರಯಾಣಿಕನ ಮೇಲೆ ದುಷ್ಕರ್ಮಿ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಆದರೆ ಆಕೆ ಧೈರ್ಯದಿಂದ ವಿರೋಧಿಸಿದ್ದಾಳೆ ಎಂದು ದಕ್ಷಿಣ ರೈಲ್ವೆ ಮುಖ್ಯಸ್ಥ ಪಿಆರ್ಒ ಎಂ. ಸೆಂಥಮಿಲ್ ಸೆಲ್ವನ್ ಹೇಳಿದ್ದಾರೆ. ನಾನು ಸುಮಾರು 30 ನಿಮಿಷಗಳ ಕಾಲ ಹೋರಾಡಿದೆ. ನಾನು ಎದುರಿಸಿದ ಘಟನೆಯನ್ನು ಬೇರೆ ಯಾವುದೇ ಮಹಿಳೆ ಎದುರಿಸಬಾರದು. ದಯವಿಟ್ಟು ಅವನನ್ನು ಶಿಕ್ಷಿಸಿ. ಈ ಸೈಕೋನನ್ನು ಹೊರಗೆ ಬಿಡಬೇಡಿ ಎಂದು ಮಹಿಳೆ ಕೇಳಿಕೊಂಡಿದ್ದಾಳೆ.
- Horoscope Today : 02 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಹೊರಟ ಪುತ್ರ: ಮಾಟಗಾರ ಎಸ್ಕೇಪ್, ಓರ್ವನ ಬಂಧನ
- ಹೆಚ್ಚು ನೀರು ಕುಡಿದರೆ ಕಿಡ್ನಿ ಸ್ಟೋನ್ ತಡೆಯಬಹುದೇ? ‘ಖಂಡಿತ ಇಲ್ಲ’ ಎನ್ನುತ್ತಿದೆ ಹೊಸ ಸಂಶೋಧನೆ; ಹಾಗಾದರೆ ಪರಿಹಾರವೇನು.?
- ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ.? ಶಾಕಿಂಗ್ ವರದಿ ಇಲ್ಲಿದೆ.!
- 15 ವರ್ಷದ ಬಾಲಕನ ಪಾಲಿಗೆ ಯಮನಾದ ಖಾಸಗಿ ಬಸ್: ರಸ್ತೆಯಲ್ಲೇ ಪ್ರಾಣಬಿಟ್ಟ ವಿದ್ಯಾರ್ಥಿ
- ಪಾದದ ಅಡಿ ಉರಿತಿದ್ಯಾ? ಇದು ಸಾಮಾನ್ಯವಲ್ಲ – ಗಂಭೀರ ರೋಗದ ಮುನ್ನೆಚ್ಚರಿಕೆ! ಇದನ್ನ ಲೈಟ್ ಆಗಿ ತೆಗೆದುಕೊಳ್ಳ್ಬೇಡಿ
- ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ: ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ; ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂ
- ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿ
- ಸಾವಿನಲ್ಲೂ ಮಗುವನ್ನು ಎದೆಗಪ್ಪಿಕೊಂಡ ತಾಯಿ: ಜಬಲ್ಪುರ ಬೋಟ್ ದುರಂತದ ಈ ಚಿತ್ರ ಕಲ್ಲು ಮನಸ್ಸನ್ನೂ ಕರಗಿಸುತ್ತೆ
- ರಾಹುಲ್- ಸೋನಿಯಾ ಗಾಂಧಿ ಏನೇ ಹೇಳಿದ್ರು ಪ್ರಸಾದವೆಂದು ಸ್ವೀಕಾರ : ಕೇಂದ್ರ ಜನಸಾಮಾನ್ಯರ ನೋವು ಅರಿಯಬೇಕು ; ಡಿ.ಕೆ. ಶಿವಕುಮಾರ್
- ಸಿಎಂ ಬದಲಾವಣೆ ಪ್ರಸ್ತಾಪವೇ ಇಲ್ಲ, ಸಿದ್ದರಾಮಯ್ಯನವರೇ ಐದು ವರ್ಷ ಆಡಳಿತ – ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿಕೆ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- 45 ವರ್ಷ ಮೇಲ್ಪಟ್ಟರಿಗೆ ಎಚ್ಚರಿಕೆ: ಬದಲಾದ ಆಹಾರ ಮತ್ತು ಜೀವನಶೈಲಿ ಪ್ರೊಸ್ಟೇಟ್ ಕ್ಯಾನ್ಸರ್ಗೆ ಕಾರಣ.!
- Arecanut Price : ಇಂದಿನ ಅಡಿಕೆ ಧಾರಣೆ – 01 ಮೇ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 01 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಭೂ ಪರಿವರ್ತನೆಗಾಗಿ ಅಲೆದು ಸುಸ್ತಾದ ರೈತ: ಆಯುಕ್ತರ ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
- ಇನ್ಮುಂದೆ ಫುಟ್ಪಾತ್ ಮೇಲೆ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
- ಹೃದಯವಿದ್ರಾವಕ ಘಟನೆ : ಮದುವೆಗೆ 10 ದಿನ ಬಾಕಿ, ಪ್ರಿವೆಡ್ಡಿಂಗ್ ಶೂಟ್ ಗೆ ತೆರಳಿದ್ದಾಗ ಅಪಘಾತದಲ್ಲಿ ವರ ದುರ್ಮರಣ!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ಗಂಗಾವತಿಯಲ್ಲಿ ಬಿಜೆಪಿ ಮುಖಂಡನ ಕೊಲೆ ಕೇಸ್ : 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
- ಬೌರಿಂಗ್ ಆಸ್ಪತ್ರೆ ದುರಂತ, ಪ್ರಧಾನಿ ನರೇಂದ್ರ ಮೋದಿ ವಿಷಾದ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
- Horoscope Today : 30 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!
- ಯೋಗೀಶ್ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಶಾಸಕತ್ವ ರದ್ದು: ಸ್ವೀಕರ್ ಯು.ಟಿ ಖಾದರ್
- ನನ್ನ ನಾಯಕತ್ವದಲ್ಲೇ ಜನರು 136 ಕ್ಷೇತ್ರ ಗೆಲ್ಲಿಸಿದ್ದಾರೆ.! ಕಾಂಗ್ರೆಸ್ ಪಾಳಯದಲ್ಲಿ ಕಿಚ್ಚು ಹಚ್ಚಿಸಿದ ಡಿಸಿಎಂ ಡಿಕೆಶಿ ಮಾತು
- ಯಾರನ್ನ ಕಿಡ್ನಿ ಸ್ಟೋನ್ ಹೆಚ್ಚು ಕಾಡುತ್ತೆ ಗೊತ್ತೆ..? ಆರೋಗ್ಯವಾಗಿದ್ರೂ ಇವರನ್ನ ಬಿಡಲ್ಲ ಈ ಸಮಸ್ಯೆ
- ಬೆಂಗಳೂರಿನಲ್ಲಿ ವರುಣನ ಅಬ್ಬರ : ಆಲಿಕಲ್ಲು ಸಹಿತ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ.!


























