AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾ‌ರ್

Spread the love

ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, ಏಕೆಂದರೆ ಸ್ಥಳದಲ್ಲೇ ಯಾರನ್ನಾದರೂ ದೂಷಿಸುವುದು ಸರಿಯಲ್ಲ. ಪರಿಹಾರ ನೀಡಬೇಕು, ಇದಲ್ಲದೆ, ಯಾರು ಜವಾಬ್ದಾರರಾಗಿದ್ದರೂ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು.’ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ‘ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಪಕ್ಷದ ಪರವಾಗಿ ಎಲ್ಲಾ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಲು ಬಂದಿದ್ದು, ಈ ಘಟನೆಯ ಬಗ್ಗೆ ನಮಗೆ ಅಪಾರ ದುಃಖವಾಗಿದೆ. ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ. ಇಂತಹ ಘಟನೆ ಭವಿಷ್ಯದಲ್ಲಿ ಬೇರೆಲ್ಲಿಯೂ ಸಂಭವಿಸದಿರಲಿ ಎಂದು ನಾವು ಆಶಿಸುತ್ತೇವೆ ಮತ್ತು ಪ್ರಾರ್ಥಿಸುತ್ತೇವೆ…’ ಎಂದು ಪ್ರತಿಕ್ರಿಯಿಸಿದರು.

WhatsApp Group Join Now

Spread the love

Leave a Reply