ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ.
ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ.
ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು, ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ಕೇಳದ್ದಕ್ಕೆ ಮಗುವಿನ ಪ್ರಾಣ ಹೋಗಿದೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
WhatsApp Group
Join Now