ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಕಷ್ಟ : ಮಾಜಿ ಪ್ರಧಾನಿ ದೇವೇಗೌಡ

Spread the love

ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಹೊಂದಾಣಿಕೆ ಕಷ್ಟವಾಗಲಿದೆ. ನಮ ಶಕ್ತಿ ಇರುವ ಕಡೆ ನಾವು ಹೋರಾಟ ಮಾಡುತ್ತೇವೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಹೊಂದಾಣಿಕೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಜೊತೆ ಚರ್ಚೆ ಮಾಡಲು ಸಾಧ್ಯವೇ?, ಈ ವಿಚಾರದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷರು ಅವರ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

WhatsApp Group Join Now

ಜ.25 ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ಯಾವ ಲೇಬಲ್‌ನಲ್ಲಿ ಅವರು ಮಾಡುತ್ತಿದ್ದಾರೆ. ಅಹಿಂದ ಬಗ್ಗೆ ವ್ಯಾಖ್ಯಾನ ಮಾಡಿ ವಿವರಿಸುವುದು ಕಷ್ಟ ಎಂದ ಅವರು, ಮುಖ್ಯಮಂತ್ರಿಯಾಗಿದ್ದವರು ಅಹಿಂದ ನಾಯಕರೇ ಆಗಿದ್ದರೇ?, ಒಂದು ಕ್ಷೇತ್ರ ಹುಡುಕಲು ಒಂದು ವರ್ಷ ಕಾಲ ಎಷ್ಟು ಚರ್ಚೆ ಮಾಡಿದರು? ಎಂದು ಪ್ರಶ್ನಿಸಿದರು.

ಮೈಸೂರು, ಬಾದಾಮಿ, ಕೋಲಾರ ಎಲ್ಲಿ ನಿಲ್ಲಬೇಕೆಂದು ವರ್ಷಕಾಲ ಚರ್ಚೆ ಮಾಡಿದರು. ಅಹಿಂದ ನಾಯಕರೇ ಆಗಿದ್ದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಾದರೂ ನಿಂತು ಗೆಲ್ಲಬಹುದಾಗಿತ್ತು. ಕಳೆದ ಚುನಾವಣೆಯಲ್ಲಿ ಪುತ್ರ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಡಬೇಕಾಯಿತು ಎಂದರು. ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಕಠಿಣವಾಗಿ ಮಾತನಾಡಿದ್ದಾರೆ.

ಅವರ ಹಿರಿಯ ಮಗ ನಿಧನವಾದಾಗ ಮನೆಗೆ ಹೋಗಿದ್ದೆ. ಈ ವಯಸ್ಸಲ್ಲೂ ಎಷ್ಟು ದುಡಿಯುತ್ತೀರಿ? ಎಂದು ಕೇಳಿದ್ದರು. ನೀವೆಲ್ಲಾ ಪಕ್ಷ ಬಿಟ್ಟು ಹೋದ ಮೇಲೆ ಪಕ್ಷ ಉಳಿಲು ದುಡಿಯುತ್ತಿದ್ದೇನೆ. ಹೀಗೆ ಎರಡನೇ ಪುತ್ರನನ್ನು ರಾಜಕೀಯಕ್ಕೆ ತಂದಿದ್ದಾರೆ. ಒಳಮೀಸಲಾತಿಯಲ್ಲಿ ಯಾವಯಾವ ಜಾತಿಗೆ ಎಷ್ಟೆಷ್ಟು ಮೀಸಲಾತಿ ಕೊಟ್ಟಿದ್ದೀರಿ ಎಂಬುದನ್ನು 16 ಬಜೆಟ್‌ ಮಂಡಿಸಿದ ಸಿದ್ದರಾಮಯ್ಯನವರು ಹೇಳಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ತಂದವರ್ಯಾರು?, ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಿದವರ್ಯಾರು? ಎಂದು ಪ್ರಶ್ನಿಸಿದರು.ಕೇರಳದಲ್ಲಿ ಜೆಡಿಎಸ್‌‍ ಪಕ್ಷ ಎಡಪಂಥೀಯ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.ಜ.18 ರಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡುತ್ತೇವೆ. ಜ.23 ರಂದು ಹಾಸನದಲ್ಲಿ ಪಕ್ಷದ ಕಾರ್ಯಕ್ರಮ ಮಾಡುತ್ತೇವೆ. ಜ.24 ರಂದು ಬಾಗಲಕೋಟೆಯಲ್ಲಿ ಸಭೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಕಠಿಣ ಕ್ರಮ ಕೈಗೊಳ್ಳಬೇಕು :-

ದೇಶದ ಕೆಲವು ರಾಜ್ಯಗಳಲ್ಲಿ ಚರ್ಚ್‌ ಮೇಲೆ ದಾಳಿಯಾಗಿರುವುದು ತುಂಬಾ ಹೇಯವಾದ ಘಟನೆಯಾಗಿದ್ದು, ಅದನ್ನು ನಾವೆಲ್ಲರೂ ಖಂಡಿಸಬೇಕು. ಈ ದೇಶದಲ್ಲಿ ಎಲ್ಲಾ ಧರ್ಮೀಯರೂ ಇದ್ದಾರೆ. ಚರ್ಚ್‌ ಮೇಲಿನ ದಾಳಿಯ ಘಟನೆ ಆಗಬಾರದಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು. ಘಟನೆಗೆ ಕಾರಣರಾದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಬೇಕು. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಚರ್ಚ್‌ಗೆ ಹೋಗಿ ಪ್ರಾರ್ಥನೆ ಮಾಡಿದ್ದಾರೆ. ಅವರು ದಾಳಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದರಲ್ಲಿ ಹಿಂದೆ ಸರಿಯುವುದಿಲ್ಲ ಎಂದು ಭಾವಿಸುವುದಾಗಿ ಗೌಡರು ತಿಳಿಸಿದರು.

ಶ್ಯಾಮನೂರು ಶಿವಶಂಕರಪ್ಪ ಮತ್ತು ತಮ ನಡುವಿನ ಒಡನಾಟ 50 ವರ್ಷಗಳಷ್ಟು ಹಳೆಯದು. ಹಲವಾರು ವಿದ್ಯಾಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅತ್ಯಂತ ಸಂಪನ್ನರು. ಅವರದು ಕೊಡುಗೈ. ಅವರ ಆತಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

WhatsApp Group Join Now

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯರಾದ ಟಿ.ಎ.ಶರವಣ, ಟಿ.ಎನ್‌.ಜವರಾಯಿಗೌಡ, ವಿಧಾನಪರಿಷತ್‌ ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್‌ಗೌಡ, ಚೌಡರೆಡ್ಡಿ, ಜೆಡಿಎಸ್‌‍ ಕೋರ್‌ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಮಹಿಳಾ ಘಟಕದ ಅಧ್ಯಕ್ಷೆ ರಶಿ ರಾಮೇಗೌಡ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್‌, ಪಕ್ಷದ ಮುಖಂಡರಾದ ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.


Spread the love

Leave a Reply