ತಾಸುಗಟ್ಟಲೆ ಮೊಬೈಲ್ ನಲ್ಲಿ ವೈದ್ಯನ ಲಲ್ಲೆ – ನರಳಿ ನರಳಿ ಪ್ರಾಣಬಿಟ್ಟ ರೋಗಿ.!

Spread the love

ಚಿಕ್ಕಮಗಳೂರಲ್ಲಿ (Chikkamagalur ) ವೈದ್ಯರ (Doctor) ಯಡವಟ್ಟಿಗೆ ಅಮಾಯಕ ಜೀವವೊಂದು ಬಲಿಯಾಗಿದೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟಿದ್ದಾರೆ.

ಸೋಮವಾರ ಬೆಳಗಿನ ಜಾವ ಘಟನೆ ನಡೆದಿದೆ.ಲಕ್ಷ್ಮಿಪುರ ಗ್ರಾಮದ ಮಂಜುನಾಥ್ (60) ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟೆಚ್ಚರ್ ಮೇಲೆ ತೀವ್ರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರೂ ಚಿಕಿತ್ಸೆ ನೀಡಲಾಗಿಲ್ಲ ಎನ್ನಲಾಗಿದೆ.

ಈ ವೇಳೆ ಕರ್ತವ್ಯದಲ್ಲಿದ್ದ ವೈದ್ಯರು ಮೊಬೈಲ್‌ನಲ್ಲಿ ಮಾತನಾಡುತ್ತಾ ಕುಳಿತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.

ರೋಗಿಯನ್ನು ತಡವಾಗಿ ಐಸಿಯುವಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿ ರೋಗಿಗಳಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಿದ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದು ಈ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now

Spread the love

Leave a Reply