Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿತ್ತು,
ಆದರೆ ಈಗ ಗೃಹಜೋತಿ ಯೋಜನೆಯ(Gruhajyothi Scheme) ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. ಏನದು ಮಹತ್ವದ ಆದೇಶ.? ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಗೆದ್ದ ಬಳಿಕ, ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹ ಜ್ಯೋತಿ(Gruhajyothi) ಯೋಜನೆ , ಅನ್ನಭಾಗ್ಯ ಯೋಜನೆ(Annabhagya), ಶಕ್ತಿ (Shakthi), ಯುವನಿಧಿ(Yuvanidhi) ಯೋಜನೆ ಜಾರಿಗೆ ತಂದಿತ್ತು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ಬಳಿಕ ಎಲ್ಲಾ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತದೆ ಎಂದು ಪ್ರತಿಪಕ್ಷಗಳು ಎಲ್ಲೆಡೆ ಪ್ರಚಾರ ಮಾಡಿತ್ತು, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಆ ರೀತಿ ಏನನ್ನೂ ಮಾಡದೇ, ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದೆಲ್ಲವೂ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ ಎಂದು ಹೇಳಬಹುದು. ಸರ್ಕಾರಕ್ಕೆ ಆರ್ಥಿಕವಾಗಿ ಸಂಕಷ್ಟಕ್ಕೆ ಪರಿಹಾರವಾಗಿ ಯಾವುದೇ ರೀತಿಯ ರೂಲ್ಸ್ ಜಾರಿಗೆ ತಂದರೂ ಕೂಡ ಇದರ ದೊಡ್ಡ ಹೊಡೆತ ಬಡಜನರ ಮೇಲೆ ಬೀಳುತ್ತದೆ. ಒಂದು ಕಡೆ ದೇಶದಲ್ಲಿ ಬೆಲೆ ಏರಿಕೆ ಜಾಸ್ತಿಯಾಗುತ್ತಿದೆ. ಮತ್ತೊಂದೆಡೆ ಸರ್ಕಾರವು ಹೊಸ ಹೊಸ ರೂಲ್ಸ್ ಗಳನ್ನು ಜಾರಿಗೆ ತರುತ್ತಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಗೃಹಜೋತಿ(Gruhajyothi) ಯೋಜನೆಯಿಂದ ಹೊಸ ನಿಯಮ ಜಾರಿ!
ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಘೋಷಿಸಿದ್ದರೂ ಸಹ, ಅವರ ಮನೆಯ ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಸುತ್ತಿದ್ದರು ಎನ್ನುವ ಆಧಾರವನ್ನು ಲೆಕ್ಕ ಹಾಕಿ. ಅದಕ್ಕೆ ಹೆಚ್ಚುವರಿಯಾಗಿ 10% ವಿದ್ಯುತ್ ಅನ್ನು ಗ್ರಾಹಕರು ಬಳಸಬಹುದು ಎಂದು ಸರ್ಕಾರವು ಹೇಳಿತ್ತು. ಇಷ್ಟು ದಿವಸ ಜನರು ಹೆಚ್ಚಾಗಿ ವಿದ್ಯುತ್ ಬಳಕೆ ಮಾಡಿರುವ ಹಣವನ್ನು ಪಾವತಿ ಮಾಡಬೇಕೆಂದು ಸರ್ಕಾರವು ತಿಳಿಸಿತ್ತು.
ಆದರೆ ಈಗ ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಭಾರವನ್ನು ತಪ್ಪಿಸಲು, ಹೊಸ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಗೃಹಜೋತಿ(Gruhajyothi) ಯೋಜನೆ ವಿದ್ಯುತ್ ಬಳಸುತ್ತಿರುವವರು ಸರ್ಕಾರ ಸೂಚಿಸಿರುವ ಲಿಮಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ, ಅವರು ಗೃಹಜ್ಯೋತಿ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗು ಮುಂದೆ ಕೂಡ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ಇದು ರಾಜ್ಯ ಸರ್ಕಾರದ ಹೊಸ ನಿಯಮವಾಗಿದ್ದು, ಜನರು ಇನ್ನು ಮುಂದೆ ಎಚ್ಚರಿಕೆಯಿಂದ ವಿದ್ಯುತ್ ಬಳಕೆ ಮಾಡುವುದು ಸೂಕ್ತವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ
- ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ
- Gold Loan : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ : ಗೋಲ್ಡ್ ಲೋನ್ ಗೆ ‘RBI’ನಿಂದ ಹೊಸ ರೂಲ್ಸ್.!
- Arecanut Price : ಇಂದಿನ ಅಡಿಕೆ ಧಾರಣೆ – 10 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕೆಲವರಿಗೆ ಒಂದು ಲೋಟ ನೀರು ಕುಡಿದರೂ ಸಾಕು ಕೂಡಲೇ ಟಾಯ್ಲೆಟ್ ಗೆ ಓಡಬೇಕಾಗುತ್ತದೆ.! ಯಾಕೆ ಹೀಗೆ.?



















