PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ಅರ್ಹ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 36 ಅಧಿಸೂಚಿತ ಬೆಳೆಗಳು ಈ ವಿಮಾ ಯೋಜನೆಯ ವ್ಯಾಪ್ತಿಗೆ ಬರುತ್ತವೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಬೆಳೆವಾರು ನಿಗದಿಪಡಿಸಿದ ವಿಮಾ ಮೊತ್ತವನ್ನು ರೈತರು ಮುಂಗಾರು ಹಂಗಾಮಿನಲ್ಲಿ ಶೇ.2ರಷ್ಟು (ತೋಟಗಾರಿಕೆ ಬೆಳೆಗಳಿಗೆ ಶೇ.5ರಷ್ಟು) ಮೊತ್ತವನ್ನು ಮಾತ್ರ ಪಾವತಿಸಬೇಕು. ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿದರೆ ಪ್ರತಿ ಹೆಕ್ಟೇರ್ಗೆ ₹29,000 ಯಿಂದ ₹86,000 ವರೆಗೂ ಆಯಾ ಬೆಳೆಗೆ ತಕ್ಕಂತೆ ಬೆಳೆನಷ್ಟ ಪರಿಹಾರ ಪಡೆಯಬಹುದಾಗಿದೆ. ತೋಟಗಾರಿಕೆ ಬೆಳೆಗಳಿಗೆ ಇನ್ನೂ ಹೆಚ್ಚಿನ ಬೆಳೆಹಾನಿ ವಿಮಾ ಪರಿಹಾರ ಸಿಗುತ್ತದೆ.
ಈ ಯೋಜನೆಯಿಂದ ಯಾವೆಲ್ಲ ಬೆಳೆ ನಷ್ಟಕ್ಕೆ ಪರಿಹಾರ ಸಿಗುತ್ತದೆ.?
ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗುತ್ತಿದೆ. ಹಾಲಿ ಇರುವ ಬೆಳೆಗಳಿಗೆ ಬಿತ್ತನೆಯಿಂದ ಕಟಾವಿನ ಹಂತದವರೆಗೆ ಈ ವಿಮಾ ರಕ್ಷಣೆ ಇರುತ್ತದೆ. ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ ಅಥವಾ ನಾಟಿ ವಿಫಲವಾದಲ್ಲಿ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ವಿಮಾ ರಕ್ಷಣೆ ಒದಗಿಸಲಿದೆ.
ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?
ಬರ, ಶುಷ್ಕ ಪರಿಸ್ಥಿತಿ, ನೆರೆ, ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಅಂದರೆ ಸುಮಾರು 14 ದಿನಗಳವರೆಗೆ ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೂ ಕೂಡ ಈ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ನಷ್ಟ ಪರಿಹಾರ ಒದಗಿಸಲಾಗುತ್ತದೆ.
ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಹೇಗೆ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುವುದು.?
ನಿಮ್ಮ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಲು ಅವಕಾಶ ಇದೆ.
ಇದನ್ನೂ ಕೂಡ ಓದಿ : Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್
ಈಗಾಗಲೇ ಬೆಳೆವಾರು ಬೆಳೆ ವಿಮೆ ಕಂತು ಮಾಡಿಸಿದ ರೈತರಿಗೆ ವಿಮಾ ಕಂಪನಿ ಆದ್ಯತೆ ಮೇರೆಗೆ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ಪ್ರಸ್ತುತ ಸಾಲಿನ ಬೆಳೆ ವಿಮೆ ಅರ್ಜಿಯನ್ನು ರೈತರು ಕಾಲಮಿತಿಯಲ್ಲಿ ತುಂಬಿದರೆ ಮಾತ್ರ ವಿವಿಧ ಕಾರಣಕ್ಕೆ ಬೆಳೆ ನಷ್ಟವಾದಲ್ಲಿ ಮಾತ್ರ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಈ ಪರಿಹಾರ ಹಣ ಅರ್ಹ ರೈತ ಫಲಾನುಭವಿಗಳಿಗೆ ಸಿಗಲಿದೆ.
ಹೆಚ್ಚಿನ ಮಾಹಿತಿಗಾಗಿ ನೀವು ನಿಮ್ಮ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಉಚಿತ ಸಹಾಯವಾಣಿ 1800180 1551 ನಂಬರಿಗೆ ಕರೆ ಮಾಡುವ ಮೂಲಕ ನಿಮ್ಮ ಜಿಲ್ಲೆಗೆ ನಿಗದಿಯಾಗಿರುವ ಬೆಳೆ ವಿಮಾ ಕಂಪನಿಯ ಸಿಬ್ಬಂದಿಯ ಮೊಬೈಲ್ ನಂಬರ್ ಪಡೆದು ವಿವರವಾದ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಹಿಳೆಯರಿಗಿಂತ ಪುರುಷರಲ್ಲೇ ಹೃದಯ ರೋಗದ ಅಪಾಯ ಹೆಚ್ಚು ; ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ..!
- ‘ಬ್ರೈನ್ ಸ್ಟ್ರೋಕ್’ ಬರುವ 24 ಗಂಟೆ ಮುನ್ನವೇ ದೇಹ ನೀಡುತ್ತೆ ಈ 6 ಎಚ್ಚರಿಕೆ ಸಂಕೇತಗಳು.!
- ದಿನ ಭವಿಷ್ಯ (21-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ಲೈಂಗಿಕ ಸಾಮರ್ಥ್ಯದ ಕೊರತೆಯ ಆತಂಕವೇ.? ಹೀಗ್ ಮಾಡಿದ್ರೆ ನಿಮ್ಮೆಲ್ಲಾ ಸಮಸ್ಯೆಗಳು ಮಾಯ..!
- ಯಾರಿಗೂ ಗೊತ್ತಾಗಲ್ಲ ಅಂತ ‘ಪೋರ್ನ್ ವಿಡಿಯೋ’ ನೋಡುವವರೇ ಇತ್ತ ಗಮನಿಸಿ!
- 110-210 ರೂ.ಗೆ ಪೆಟ್ರೋಲ್ ಹಾಕಿಸುವ ಟ್ರಿಕ್ಸ್ ಹಳೇದಾಯ್ತು : 2 ‘ಗೋಲ್ಡನ್ ಟಿಪ್ಸ್’ ಕೊಟ್ಟ ಪೆಟ್ರೋಲ್ ಬಂಕ್ ಉದ್ಯೋಗಿ
- ದಿನ ಭವಿಷ್ಯ (20-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..? ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (19-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Dina Bhavishya : ದಿನ ಭವಿಷ್ಯ (18-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಗೃಹಜ್ಯೋತಿ ಯೋಜನೆ ಅಪ್ ಡೇಟ್: ಮನೆ ಮನೆಗೆ ದಾಖಲೆ ಪರಿಶೀಲನೆ ಆರಂಭ, ಈ ದಾಖಲೆಗಳು ಕಡ್ಡಾಯ!
- ಬಂಟ್ವಾಳ ಘಟನೆ ಮಾಸುವ ಮುನ್ನ ಮತ್ತೊಬ್ಬ 16ರ ಹುಡಗಿ ಬಲಿ ; ಪ್ರೇಯಸಿ ಕೊಂದು ತೋಟದಲ್ಲಿ ಹೂತುಹಾಕಿದ ಪ್ರೇಮಿ.!
- Irregular Periods : ಪದೇ ಪದೇ ತಡವಾಗುತ್ತಿರುವ ಪಿರಿಯಡ್ಸ್. ಹಾಲಿನ ಜೊತೆ ಇದನ್ನು ಸೇವಿಸಿದ್ರೆ ಸಮಸ್ಯೆ ಮಾಯ
- ಮಹಿಳೆಯರೇ, ಎಚ್ಚರ.! ನಿಮ್ಮ ದೇಹದಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ಗರ್ಭಕಂಠದ ಕ್ಯಾನ್ಸರ್ ಬಂದಿದೆ ಎಂದರ್ಥ!
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ



















