Kisan Credit Card Scheme : ನಮಸ್ಕಾರ ಸ್ನೇಹಿತರೇ, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ದೇಶದಲ್ಲಿ ರೈತರು ಆರ್ಥಿಕವಾಗಿ ಸಬಲರಾಗಬೇಕೆಂಬ ಉದ್ದೇಶದಿಂದ ರೈತರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗೆಯೇ ಸರ್ಕಾರವು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಸಹಾಯ ಮಾಡುವ ಉದ್ದೇಶದಿಂದ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card) ಯೋಜನೆ ಜಾರಿಗೆ ತಂದಿದೆ. ಇದರಿಂದಾಗಿ ಜಾನುವಾರುಗಳನ್ನು ಸಾಕಾಣಿಕೆ ಮಾಡುವವರಿಗೆ ಆರ್ಥಿಕ ನೆರವು ನೀಡಿದಂತಾಗುತ್ತದೆ. ಸ್ನೇಹಿತರೇ, ಏನಿದು ಪಶು ಕಿಸಾನ್ ಕಾರ್ಡ್ ಯೋಜನೆ.? ಇದರಿಂದ ರೈತರಿಗೆ ಏನೆಲ್ಲಾ ಉಪಯೋಗಗಳಿವೆ.? ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆಯುವುದು ಹೇಗೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan Credit Card)
ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ, ನೀವು ಹಸು ಮತ್ತು ಎಮ್ಮೆಗಳ ಸಾಕಾಣಿಕೆಯನ್ನು ಮಾಡಲು ಈ ಕ್ರೆಡಿಟ್ ಕಾರ್ಡ್ ಮೂಲಕ ಸರ್ಕಾರದಿಂದ ಸಾಲವನ್ನು ಪಡೆಯಬಹುದು. ನೀವು ಬ್ಯಾಂಕುಗಳಲ್ಲಿ ಅರ್ಜಿಯನ್ನು ಸಲ್ಲಿಸಿ, ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆದು ನೀವು ಸಾಲಕ್ಕಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಪಶು ಕ್ರೆಡಿಟ್ ಕಾರ್ಡ್ ಮೂಲಕ ಪಶುಗಳ ನಿರ್ವಹಣೆಗೆ ಬೇಕಾದ ಎರಡರಿಂದ ಮೂರು ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು. ಪಡೆದ ಸಾಲಕ್ಕೆ ಯಾವುದೇ ರೀತಿಯ ಗ್ಯಾರಂಟಿ ಇರುವುದಿಲ್ಲ.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಪಶು ಕಿಸಾನ್ ಕಾರ್ಡ್ ನಿಂದ ಎಷ್ಟು ಸಾಲ ಸಿಗುತ್ತದೆ.?
ಈ ಪಶು ಕಿಸಾನ್ ಕಾರ್ಡ್ ನಿಂದ ಒಂದು ಎಮ್ಮೆ ಸಾಕಾಣಿಕೆ ಮಾಡಲು ₹60,249/- ರೂಪಾಯಿ ಸಾಲ ಸಿಗಲಿದೆ, ಹಾಗೆಯೇ ಒಂದು ಆಕಳನ್ನು ನಿರ್ವಹಣೆ ಮಾಡಲು ₹40,783/- ರೂಪಾಯಿ ಸಾಲಗಳನ್ನು ನೀಡಲಾಗುತ್ತದೆ. ನಿಮ್ಮ ಬಳಿ ಎಷ್ಟು ಎಮ್ಮೆ ಮತ್ತು ಎಷ್ಟು ಹಸು ಇದೆಯೋ ಅಷ್ಟಕ್ಕೆ ಮಾತ್ರ ನೀವು ಈ ಪಶು ಕಿಸಾನ್ ಕಾರ್ಡ್ ನಿಂದ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. 1.6 ಲಕ್ಷದವರೆಗಿನ ಸಾಲಕ್ಕೆ ಯಾವುದೇ ಗ್ಯಾರಂಟಿ ಇರುವುದಿಲ್ಲ. ನೀವು ಪಶು ಸಾಕಾಣಿಕೆ ಮಾಡಲು ಯಾವುದೇ ಕ್ರೆಡಿಟ್ ಕಾರ್ಡ್ ಇಲ್ಲದೆ ಸಾಲ ಪಡೆದರೆ 7% ಬಡ್ಡಿ ಕಟ್ಟಬೇಕಾಗುತ್ತದೆ, ಆದರೆ ಪಶು ಕಿಸಾನ್ ಕಾರ್ಡ್ ಮೂಲಕ ಪಡೆದಂತಹ ಸಾಲಕ್ಕೆ ನೀವು ಕೇವಲ 4% ಬಡ್ಡಿದರ ಕಟ್ಟಬೇಕಾಗುತ್ತದೆ.
ಯಾವ ಬ್ಯಾಂಕ್ ಗಳಲ್ಲಿ ನೀವು ಸಾಲ ಪಡೆದುಕೊಳ್ಳಬಹುದು.?
ದೇಶದ ಬಹುತೇಕ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ ಸಾಲ ಸಿಗುತ್ತದೆ. ಆಕ್ಸಿಸ್ ಬ್ಯಾಂಕ್, ಹೆಚ್ ಡಿ ಎಫ್ ಸಿ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಪ್ರಮುಖ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ, ಪಶು ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಮೂಲಕ ಪಶುಗಳ ನಿರ್ವಹಣೆಗೆ ಬೇಕಾದ ಸಾಲವನ್ನು ರೈತರಿಗೆ ನೀಡಲಾಗುತ್ತದೆ .
ಪಶು ಕಿಸಾನ್ ಕ್ರೆಡಿಟ್ ಕಾರ್ಡ ಪಡೆಯಲು ನೀವು ರಾಷ್ಟ್ರೀಕೃತ ಬ್ಯಾಂಕ್ ಗೆ ಭೇಟಿ ನೀಡಿ, ಅಪ್ಲಿಕೇಶನ್ ಫಾರ್ಮ್ ಪಡೆದು, ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ, ಕೆವೈಸಿಗೆ ಬೇಕಾಗಿರುವ ದಾಖಲೆಗಳನ್ನು ನೀಡಿ ನೀವು ಅರ್ಜಿಯನ್ನ ಸಲ್ಲಿಸಬೇಕಾಗುತ್ತದೆ. ಬ್ಯಾಂಕ್ ಅಧಿಕಾರಿಗಳು ನೀವು ನೀಡಿದ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿಕೊಂಡು, ನೀವು ನೀಡಿದಂತಹ ದಾಖಲೆಗಳು ಸರಿಯಾಗಿದ್ದರೆ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ನ್ನು ನಿಮಗೆ ನೀಡುತ್ತಾರೆ.
ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ
ಬೇಕಾಗುವ ದಾಖಲೆಗಳೇನು.?
- ಭೂಮಿಯ ದಾಖಲೆಗಳು
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ವೋಟರ್ ಐಡಿ
- ಜಾನುವಾರಗಳ ಆರೋಗ್ಯದ ಬಗ್ಗೆ ಸರ್ಟಿಫಿಕೇಟ್
- ಬ್ಯಾಂಕ್ ಖಾತೆಯ ವಿವರ
- ಪಾಸ್ಪೋರ್ಟ್ ಸೈಜ್ ಫೋಟೋ
ಮೇಲೆ ತಿಳಿಸಿದಂತಹ ಎಲ್ಲಾ ಪ್ರಮುಖ ದಾಖಲೆಗಳನ್ನು ಸರಿಪಡಿಸಿಕೊಂಡು, ಹತ್ತಿರವಿರುವ ಬ್ಯಾಂಕ್ ಗೆ ಭೇಟಿ ನೀಡಿ, ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಫಾರ್ಮ್ ಪಡೆದು ಅರ್ಜಿಯನ್ನು ಸಲ್ಲಿಸಿ, ಹೈನುಗಾರಿಕೆಗೆ ಬೇಕಾದ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಸಾಲ ತೀರಿಸುವ ಕಾರಣಕ್ಕೆ ಪಕ್ಕದ ಮನೆಯ ಬಾಲಕನ ಕಿ*ಡ್ನಾಪ್, ಹ*ತ್ಯೆ , ಪ್ರಕರಣ ಬೆಳಕಿಗೆ ಬಂದಿದ್ದೇ ರೋಚಕ
- ಇಂದಿನ ದಿನ ಭವಿಷ್ಯ: 12 ರಾಶಿಗಳ ಫಲ ಹೇಗಿದೆ? ಯಾರಿಗೆ ಶುಭ, ಯಾರಿಗೆ ಎಚ್ಚರಿಕೆ.?
- ವಾಹನ ಸವಾರರೇ ಎಚ್ಚರ; ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮಾಡದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದು.?
- Fatty Liver: ನಿರ್ಲಕ್ಷಿಸಬೇಡಿ.. ಲಿವರ್ ಅಪಾಯದಲ್ಲಿದೆ ಎನ್ನಲು ಮುಖ ನೀಡುವ 4 ಎಚ್ಚರಿಕೆಗಳಿವು!
- ಗ್ರಾಮೀಣ ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಬಿಗ್ ರಿಲೀಫ್ ; ಅ.2 ರಿಂದ ಇ-ಸ್ವತ್ತು ವಿತರಣೆ ಆರಂಭ
- ಅಂಚೆ ಕಚೇರಿಯ ಅದ್ಭುತ ಯೋಜನೆ : ಇಷ್ಟು ಹಣ ಹೂಡಿಕೆ ಮಾಡಿದ್ರೆ ಪ್ರತಿ 3 ತಿಂಗಳಿಗೆ ₹57,400 ಬಡ್ಡಿ!
- ದಿನ ಭವಿಷ್ಯ (18-09-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- E-KYC ಮಾಡದಿದ್ರೆ ರೇಷನ್ ಬಂದ್! ಸೆ.30 ಕೊನೆ ದಿನ- ಮನೆಯಿಂದ್ಲೇ ಮಾಡೋದು ಹೇಗೆ? ಎಲ್ಲಾ ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ
- 2,000 ದಾಟಿದ UPI ಪೇಮೆಂಟ್ಗೆ MDR ಶುಲ್ಕ : ಪೆಟ್ರೋಲ್ ಬಂಕ್ಗಳಲ್ಲಿ ಇನ್ಮುಂದೆ UPI ಬಂದ್.?
- ಉದ್ಯೋಗಿಗಳಿಗೆ ಗುಡ್ ನ್ಯೂಸ್: EPFO ವೇತನ ಮಿತಿ ₹25,000 ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
- ಸೆಪ್ಟೆಂಬರ್ 17 ರ ಜಾತಕ: ವೃಷಭ, ಸಿಂಹ ಮತ್ತು ಮೀನ ರಾಶಿಗೆ ದೊಡ್ಡ ಲಾಭ, ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿ
- ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ; ಈ 13 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!
- ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ
- ಗಣೇಶನ ಚೌತಿಯಂದೇ ಘೋರ ದುರಂತ – ಫ್ರಿಜ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರ ಸಜೀವ ದಹನ!
- 16 ಸೆಪ್ಟೆಂಬರ್ 2026: ಮಿಥುನ ಧನು ರಾಶಿಯವರಿಗೆ ವಿಘ್ನಗಳು ಮಾಯ: 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?
- ಸೈಲೆಂಟ್ ಕಿಲ್ಲರ್ ‘ಲಂಗ್ ಕ್ಯಾನ್ಸರ್’: ಈ ದೈನಂದಿನ ಅಭ್ಯಾಸಗಳಿಂದ ಇಂದೇ ದೂರವಿರಿ!
- ಫ್ರಿಡ್ಜ್ ಸ್ಪೋಟಕ್ಕೆ ಹೋಯ್ತಾ ಒಂದೇ ಕುಟುಂಬದ ನಾಲ್ವರ ಪ್ರಾಣ.? ಭೀಕರ ಅಗ್ನಿ ಅವಘಡಕ್ಕೆ ಅಸಲಿ ಕಾರಣ ಏನು.?
- ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ರೇಷನ್ ಪಡೆಯಲು ಇನ್ನುಮುಂದೆ ಬೆರಳಚ್ಚು ಕೊಡುವುದು ಕಡ್ಡಾಯವಿಲ್ಲ!
- ದಿನ ಭವಿಷ್ಯ, ಇಂದು ಈ ರಾಶಿಗೆ ಆಂಜನೇಯನ ಬಲದಿಂದ ಅದೃಷ್ಟವೇ ಬದಲು.. ಹಣ-ಅದೃಷ್ಟ ಹೆಚ್ಚಳ!
- ಬೈಕ್ನಿಂದ ರಸ್ತೆಗೆ ಬಿದ್ದ ಇಬ್ಬರ ಮೇಲೆ ಹರಿದ ಸಾರಿಗೆ ಬಸ್ – ಯುವಕರು ಸ್ಥಳದಲ್ಲೇ ಸಾ*ವು!



















