Agriculture Department : ನಮಸ್ಕಾರ ಸ್ನೇಹಿತರೇ, ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದೆ. ಕೃಷಿ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್ ‘ಬಿ’ ಹುದ್ದೆಗಳಾದ ಕೃಷಿ ಅಧಿಕಾರಿಗಳು 86 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!
ಉಳಿದಂತೆ ಹೈದರಾಬಾದ್ ಕರ್ನಾಟಕ ವಿಭಾಗದ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ 42 ಕೃಷಿ ಅಧಿಕಾರಿಗಳು ಹಾಗೂ 231 ಸಹಾಯಕ ಕರಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 945 ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈವರೆಗೆ ಕೃಷಿ ಇಲಾಖೆಯ ಅತಿ ದೊಡ್ಡ ನೇಮಕಾತಿ ಇದಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಆನ್ಲೈನ್ ಮೂಲಕ ಅ.07ರಿಂದ ಅರ್ಜಿ ಸಲ್ಲಿಕೆ ಮಾಡಬಹುದಿದ್ದು, ನವೆಂಬರ್ 07ಕ್ಕೆ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಮಾನದಂಡಗಳು, ವಯೋಮಿತಿ ಸೇರಿದಂತೆ ಇತರೆ ಅರ್ಹತೆಗಳಿಗಾಗಿ ಕೆಳಗೆ ನೀಡಿರುವ ಪಿಡಿಎಫ್ ವೀಕ್ಷಣೆ ಮಾಡಿ.
ಪಿಡಿಎಫ್ ಲಿಂಕ್ :- https://kpsc.kar.nic.in/AAO%20-%20AO_RPC_Notification.pdf
ಹೈದರಾಬಾದ್ ಕರ್ನಾಟಕ ವೃಂದದ ನೇಮಕಾತಿ ಅಧಿಸೂಚನೆ :- https://kpsc.kar.nic.in/AAO%20-%20AO_HK_Notification.pdf
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು. ಎನ್. ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ.60 ಕ್ಕೂ ಅಧಿಕ ಹುದ್ದೆ ಗಳು ಖಾಲಿ ಇರುವುದನ್ನು ಮನಗಂಡು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.
ಈ ನೇಮಕಾತಿಯಿಂದ ರಾಜ್ಯದ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆ.ಪಿ ಎಸ್.ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ. ಇದರಿಂದ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು



















