Agriculture Department : ನಮಸ್ಕಾರ ಸ್ನೇಹಿತರೇ, ಕೃಷಿ ಇಲಾಖೆಯಲ್ಲಿ ಒಟ್ಟಾರೆ 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧಿಸೂಚನೆ ಹೊರಡಿಸಿದೆ. ಕೃಷಿ ಇಲಾಖೆಯ ಉಳಿಕೆ ಮೂಲ ವೃಂದದ ಗ್ರೂಪ್ ‘ಬಿ’ ಹುದ್ದೆಗಳಾದ ಕೃಷಿ ಅಧಿಕಾರಿಗಳು 86 ಹಾಗೂ ಸಹಾಯಕ ಕೃಷಿ ಅಧಿಕಾರಿಗಳು 586 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!
ಉಳಿದಂತೆ ಹೈದರಾಬಾದ್ ಕರ್ನಾಟಕ ವಿಭಾಗದ 6 ಜಿಲ್ಲೆಗಳ ವ್ಯಾಪ್ತಿಯಲ್ಲಿ 42 ಕೃಷಿ ಅಧಿಕಾರಿಗಳು ಹಾಗೂ 231 ಸಹಾಯಕ ಕರಷಿ ಅಧಿಕಾರಿಗಳ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 945 ಹುದ್ದೆಗಳ ನೇಮಕಾತಿಗೆ ಮುಂದಾಗಿದ್ದು, ಈವರೆಗೆ ಕೃಷಿ ಇಲಾಖೆಯ ಅತಿ ದೊಡ್ಡ ನೇಮಕಾತಿ ಇದಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಆನ್ಲೈನ್ ಮೂಲಕ ಅ.07ರಿಂದ ಅರ್ಜಿ ಸಲ್ಲಿಕೆ ಮಾಡಬಹುದಿದ್ದು, ನವೆಂಬರ್ 07ಕ್ಕೆ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಮಾನದಂಡಗಳು, ವಯೋಮಿತಿ ಸೇರಿದಂತೆ ಇತರೆ ಅರ್ಹತೆಗಳಿಗಾಗಿ ಕೆಳಗೆ ನೀಡಿರುವ ಪಿಡಿಎಫ್ ವೀಕ್ಷಣೆ ಮಾಡಿ.
ಪಿಡಿಎಫ್ ಲಿಂಕ್ :- https://kpsc.kar.nic.in/AAO%20-%20AO_RPC_Notification.pdf
ಹೈದರಾಬಾದ್ ಕರ್ನಾಟಕ ವೃಂದದ ನೇಮಕಾತಿ ಅಧಿಸೂಚನೆ :- https://kpsc.kar.nic.in/AAO%20-%20AO_HK_Notification.pdf
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು. ಎನ್. ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ.60 ಕ್ಕೂ ಅಧಿಕ ಹುದ್ದೆ ಗಳು ಖಾಲಿ ಇರುವುದನ್ನು ಮನಗಂಡು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ ಮೂಲಕ ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಕಳಿಸಲು ಕಾರಣರಾಗಿದ್ದಾರೆ.
ಈ ನೇಮಕಾತಿಯಿಂದ ರಾಜ್ಯದ 31 ಜಿಲ್ಲೆಗಳ ಎಲ್ಲಾ ತಾಲ್ಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆ.ಪಿ ಎಸ್.ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು. ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಮಾಡಲು ಕ್ರಮ ವಹಿಸಲಾಗಿದ್ದು ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ. ಇದರಿಂದ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.
ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?
ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ. ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















