Annabhagya Scheme : ಅನ್ನಭಾಗ್ಯ ಯೋಜನೆಯ ಹಣ ಬರುತ್ತಿಲ್ಲವೇ? ಹಣ ಬರಲು ತಪ್ಪದೇ ಹೀಗೆ ಮಾಡಿ

Annabhagya Scheme : ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಆಹಾರ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಖಾತೆಗ ಹಣ ಬಾರದೇ ಇರುವವರು ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ ನೀಡಲಾಗಿದೆ.

ಸರ್ಕಾರದ ಗ್ಯಾರಂಟಿ ಯೋಜನೆಯಡಿ ಐದು ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್

ಇನ್ನು ಕುಟುಂಬದ ಮುಖ್ಯಸ್ಥೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಬೇಕು. ಪಡಿತರ ಚೀಟಿಯ ಈ-ಕೆವೈಸಿ ಕಡ್ಡಾಯ ಮಾಡಬೇಕು. ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಈ ಕೆವೈಸಿ ಮಾಡಬೇಕು.ಪಡಿತರ ಚೀಟಿ ಅಪ್ಡೇಟ್ ಅಪ್‌ ಡೇಟ್‌ ಮಾಡಬೇಕು. ಈ ಮೇಲಿನ ಎಲ್ಲ ಸಮಸ್ಯೆಗಳನ್ನು ನೀವು ಪರಿಹರಿಸಿಕೊಂಡರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಖಾತೆಗೆ ಜಮಾ ಆಗಲಿದೆ.

ಕರ್ನಾಟಕ ಸರ್ಕಾರದ ಅಧೀಕೃತ ವೆಬ್ ಸೈಟ್ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಭೇಟಿ ನೀಡಿ ಅನ್ನಭಾಗ್ಯ ಯೋಜನೆಯಡಿ ನಿಮ್ಮ ಸ್ಟೇಟಸ್ ಹೇಗಿದೆ ಎಂದು ಸ್ಕ್ರೀನ್‌ನಲ್ಲಿ ತೋರಿಸಲಾಗುತ್ತದೆ. ನೀವು ಯಾವುದೇ ಪ್ರಶ್ನೆಗಳನ್ನು ಹೊಂದಿದ್ದರೆ, ನೀವು ಕರ್ನಾಟಕ ಸರ್ಕಾರದ ಸಹಾಯವಾಣಿ 1800-425-5889 ಸಂಪರ್ಕಿಸಬಹುದು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply