Anugraha Scheme : ನಮಸ್ಕಾರ ಸ್ನೇಹಿತರೇ, ಕುರಿ-ಮೇಕೆಗಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅನುಗ್ರಹ ಯೋಜನೆಯ ಅಡಿಯಲ್ಲಿ ರೈತರಿಗೆ ₹5,000/- ರೂಪಾಯಿಯವರೆಗೆ ಪರಿಹಾರ ನೀಡಲಾಗುವುದು. ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ಪರಿಹಾರ ಧನ ವಿತರಿಸುವ ಅನುಗ್ರಹ ಯೋಜನೆಯನ್ನು (Anugraha Scheme) ಈ ಹಿಂದೆ 2017 ರಲ್ಲಿ ಸಿದ್ದರಾಮಯ್ಯನವವರು ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು.
ಕುರಿಗಳಿಗೆ ಮೇಲಿಂದ ಮೇಲೆ ಆಗಮಿಸುವ ರೋಗ ಹಾಗೂ ನೈಸರ್ಗಿಕ ವಿಕೋಪಕ್ಕೆ ತುತ್ತಾಗುತ್ತಿರುವ ಮನಗಂಡು ಸರಕಾರ ಅನುಗ್ರಹ ಯೋಜನೆ (Anugraha Scheme) ಜಾರಿಗೊಳಿಸಿತ್ತು. ಕುರಿಗಳು ಸತ್ತರೆ ₹5,000/- ರೂಪಾಯಿಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಏನಿದು ಅನುಗ್ರಹ ಯೋಜನೆ.?
ಕುರಿ ಹಾಗೂ ಮೇಕೆಗಳು ಆಕಸ್ಮಿಕ ಮರಣ ಹೊಂದಿದಲ್ಲಿ ಹಾಗೂ ದೃಢೀಕೃತ ಸಾಂಕ್ರಾಮಿಕ ರೋಗಗಳಿಂದ ಮರಣ ಹೊಂದಿದರೆ ವಿಮೆಗೆ ಒಳಪಡದ 6 ತಿಂಗಳ ಮೇಲ್ಪಟ್ಟ ಪ್ರತಿ ಕುರಿ, ಮೇಕೆಗೆ 5 ಸಾವಿರ ರೂಪಾಯಿ, 3 ರಿಂದ 6 ತಿಂಗಳ ಕುರಿ ಹಾಗೂ ಮೇಕೆ ಮರಿಗೆ ₹2,500/- ರೂಪಾಯಿಗಳಂತೆ ಪರಿಹಾರ ಧನ ವಿತರಿಸಲಾಗುವುದು.
ಅನುಗ್ರಹ ಯೋಜನೆಗೆ ರೈತರಿಗೆ ಉಪಯೋಗವಾಗಲಿದೆ. ಏಕೆಂದರೆ ರೈತರ ಜಾನುವಾರುಗಳು ಕೆಲವು ಸಲ ಯಾವುದೇ ರೋಗ ರುಜಿನಗಳಿಲ್ಲದಿದ್ದರೂ ವಿಷ ಜಂತುಗಳಿಂದ ಸಾವನ್ನಪ್ಪುತ್ತವೆ. ಇದರಿಂದಾಗಿ ರೈತರಿಗೆ ಅಪಾರ ಹಾನಿಯಾಗುತ್ತದೆ. ಆಗ ಸರ್ಕಾರದ ಈ ಅನುಗ್ರಹ ಯೋಜನೆಯು (Anugraha Scheme) ಕೈಹಿಡಿಯುತ್ತದೆ.
ಇದನ್ನೂ ಕೂಡ ಓದಿ : Borewell Subsidy : ಬೋರ್ ವೆಲ್ ಕೊರೆಸಲು ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಅರ್ಹತೆಗಳೇನು :-
ಮರಣ ಹೊಂದಿದ ಕುರಿ/ಮೇಕೆ, ಹಸು, ಎಮ್ಮೆ ಎತ್ತುಗಳ ಶವ ಪರೀಕ್ಷೆಗೆ ಮೊದಲು ಮತ್ತು ಶವ ಪರೀಕ್ಷೆ ನಂತರದ ಭಾವಚಿತ್ರಗಳಲ್ಲಿ ಫಲಾನುಭವಿ ಮತ್ತು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ಇರುವ ಜಿಪಿಆರ್ ಎಸ್ ಭಾವಚಿತ್ರಗಳನ್ನು ತೆಗೆದು ಶವ ಪರೀಕ್ಷೆ ನಡೆಸಿದ ಪಶುವೈದ್ಯರು ದೃಢೀಕರಿಸುವುದು. ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳನ್ನು ಸಂಬಂಧಪಟ್ಟ ಪಶುವೈದ್ಯರು, ಸಹಾಯಕ ನಿರ್ದೇಶಕರು ಪರಿಶೀಲಿಸಿ ಸಲ್ಲಿಸುವುದು ಹಾಗೂ ಮರಣಿಸಿದ ಕುರಿ, ಮೇಕೆ, ಹಸು, ಎಮ್ಮೆ, ಎತ್ತುಗಳ ಭಾವಚಿತ್ರಗಳಿಗೆ ಸಂಬಂಧಿಸಿದಂತೆ ಶವ ಪರೀಕ್ಷೆ ನಡೆಸಿದ ಪಶುವೈದ್ಯರೇ ವೈಯುಕ್ತಿಕ ಜವಾಬ್ದಾರರಾಗಿರುತ್ತಾರೆ.
ಇದನ್ನೂ ಕೂಡ ಓದಿ : Canara Bank Jobs : ಕೆನರಾ ಬ್ಯಾಂಕ್ನಲ್ಲಿ ಬಂಪರ್ ಉದ್ಯೋಗಾವಕಾಶ.! ಆಸಕ್ತರು ಇಂದೇ ಅರ್ಜಿ ಸಲ್ಲಿಸಿ – ಹೇಗೆ ಅರ್ಜಿ ಸಲ್ಲಿಸುವುದು.?
ಬೇಕಾಗುವ ದಾಖಲೆಗಳೇನು.?
- ಮರಣೋತ್ತರ ವರದಿ
- ಫಲಾನುಭವಿ ಅರ್ಜಿ
- ಫೋಟೋಗಳು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ
- ಮುಂಗಡ ಹಣ ಸಂದಾಯ ರಶೀದಿಯಲ್ಲಿ ಫಲಾನುಭವಿಗಳ ಸಹಿ
- ಪೂರ್ಣ ವಿಳಾಸ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಪ್ಪದೇ ವೋಚರಳನ್ನು ದೃಢೀಕರಿಸಿ ಸಲ್ಲಿಸಬೇಕು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















