ಕಮಲ್‌ ಹಾಸನ್‌ ಅವರ ಥಗ್‌ ಲೈಫ್‌ ಸಿನಿಮಾಗೆ ಸಂಕಷ್ಟ – ಥಿಯೇಟರ್‌ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ರಿಲೀಸ್‌ಗೆ ಸಿದ್ಧತೆ!

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳು ನಟ ಕಮಲ್‌ ಹಾಸನ್‌ ಅವರ ಥಗ್‌ ಲೈಫ್‌ ಸಿನಿಮಾಗೆ ಕರ್ನಾಟಕದಲ್ಲಿ ಸಂಕಷ್ಟ ಎದುರಾಗಿದೆ. ಕಮಲ್‌ ಹಾಸನ್‌ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಅವರ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ, ಒಂದು ವೇಳೆ ಸಿನಿಮಾ ರಿಲೀಸ್‌ ಮಾಡಿದ್ರೆ ಈ ಥಿಯೇಟರ್‌ಗೆ ಬೆಂಕಿ ಹಚ್ಚುವುದಾಗಿ ಕನ್ನಡಪರ ಸಂಘಟನೆಗಳು ಖಡಕ್‌ ಎಚ್ಚರಿಕೆ ನೀಡಿವೆ. ಆದರೆ ಇದಕ್ಕೆ ಡೋಂಟ್‌ ಕೇರ್‌ ಎನ್ನುವಂತೆ ಥಗ್‌ ಲೈಫ್‌ ಸಿನಿಮಾ ರಿಲೀಸ್‌ ಮಾಡಲು ಕೆಲ ಥಿಯೇಟರ್‌ಗಳು ಮುಂದಾಗಿವೆ ಎಂದು ಹೇಳಲಾಗುತ್ತಿದೆ. … Read more

ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ನಟ ಕಿಶೋರ್‌

ಕನ್ನಡ ಭಾಷೆಯ ಹುಟ್ಟಿನ ಬಗ್ಗೆ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಜೋರಾಗಿದೆ. ನಟನ ಈ ಹೇಳಿಕೆಯ ವಿರುದ್ಧ ಕನ್ನಡದ ಕಲಾವಿದರು ಕೂಡ ಸಿಡಿದೆದಿದ್ದು, ಕಮಲ್ ಹಾಸನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ. ಈ ನಡುವೆ ಕನ್ನಡದ ನಟ ಕಿಶೋರ್, ಕಮಲ ಹಾಸನ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಟ ಕಿಶೋರ್, ನನ್ನ ತಾಯಿಯ ಹೊಟ್ಟೆಯಿಂದ ನಾನು ಹುಟ್ಟಿ ಬಂದೆ ಎಂದರೆ ನನಗೆ ಹಾಗೂ ನನ್ನ ತಾಯಿಗೆ … Read more

ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಇಂದು (31) ಭೀಕರ ಘಟನೆಯೊಂದು ನಡೆದಿದೆ. ಬಸಂತಿ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಹರಿತವಾದ ಆಯುಧದಿಂದ ಶಿರಚ್ಛೇದ ಮಾಡಿ ಕ್ರೂರವಾಗಿ ಕೊಂದಿದ್ದಾನೆ. ನಂತರ ಕತ್ತರಿಸಿದ ತಲೆ ಮತ್ತು ರಕ್ತದ ಕಲೆಗಳಿಂದ ಕೂಡಿದ ಆಯುಧವನ್ನು ಹೊತ್ತುಕೊಂಡು ಬೀದಿಗಳಲ್ಲಿ ಓಡಾಡಿದ್ದಾನೆ. ಸ್ವಲ್ಪ ಸಮಯದವರೆಗೆ ಪ್ರದೇಶದಲ್ಲಿ ಸುತ್ತಾಡಿದ ಬಳಿಕ, ಆತ ಕೊನೆಯದಾಗಿ ಬಸಂತಿ ಪೊಲೀಸ್ ಠಾಣೆಗೆ ಬಂದು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಪೊಲೀಸರು ತಕ್ಷಣ ಆತನನ್ನು ವಶಕ್ಕೆ ಪಡೆದಿದ್ದು, ಅಂತಹ ಭೀಕರ ಕೃತ್ಯ … Read more

IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?

IPL 2025 : ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ತಂಡ 8 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಫೈನಲ್ಗೆ ಲಗ್ಗೆಯಿಟ್ಟಿದೆ. ಅದರಂತೆ ಜೂನ್ 3 ರಂದು ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಫೈನಲ್ಗೆ ಪ್ರವೇಶಿಸಿದೆ. ಮುಲ್ಲನ್ಪುರ್ನ ಪಿಸಿಎ ಸ್ಟೇಡಿಯಂನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ … Read more

RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?

ಅನುಷ್ಕಾ ಶರ್ಮಾ ವಿರಾಟ್ ಕೊಹ್ಲಿಯ ಪ್ರೀತಿಯ ಪತ್ನಿ, ಬಾಲಿವುಡ್ ನಟಿ. ಕೊಹ್ಲಿ ಇರುವ ಯಾವುದೇ ಕ್ರಿಕೆಟ್ ಮ್ಯಾಚ್ ನಡೆದಾಗಲೂ ಅನುಷ್ಕಾ, ಪ್ರೇಕ್ಷಕರ ಗ್ಯಾಲರಿಯಲ್ಲಿ ಕಾಣಿಸಿಕೊಳ್ತಾರೆ. ನೀವು ಗಮನಿಸಿರಬಹುದು ಅನುಷ್ಕಾ ಶರ್ಮಾ ಪಕ್ಕದಲ್ಲಿ ಓರ್ವ ಮಹಿಳೆ ಕೂತಿರುತ್ತಾರೆ. ಯಾರು ಅವರು ಅಂತಾ ಎಂದಾದರೂ ಯೋಚಿಸಿದ್ದೀರಾ? ಮೇ 27 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮ್ಯಾಚ್ ನಡೆಯಿತು. LSG ನಾಯಕ ಪಂತ್ ಶತಕ ಬಾರಿಸಿ ತಮ್ಮದೇ ಶೈಲಿಯಲ್ಲಿ ಲಾಗಾಪಲ್ಟಿ ಹೊಡೆದು ಸಂಭ್ರಮಿಸಿದರು. ಇದನ್ನೂ … Read more

ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!

ದುಬೈನಲ್ಲಿರುವ ಕೇರಳದ ಸಮುದಾಯವೊಂದು ತಮ್ಮ ಕಾರ್ಯಕ್ರಮಕ್ಕೆ ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿ ಅವರನ್ನು ಕರೆಸಿ ಗ್ರ್ಯಾಂಡ್ ವೆಲ್ಕಮ್ ಮಾಡಿದೆ. ಸದ್ಯ ಈ ಸಂಬಂಧ ಕೇರಳದ ಸಮುದಾಯವು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಿದೆ. ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯನ್ನು ದುಬೈನಲ್ಲಿರುವ ಕೇರಳದ ಸಮುದಾಯದವರು ತಮ್ಮ ಕಾರ್ಯಕ್ರಮಕ್ಕೆ ಆಹ್ವಾನಿಸಿ ಗ್ರ್ಯಾಂಡ್ ವೆಲ್ಕಮ್ ಮಾಡಿದಕ್ಕೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಫ್ರಿದಿ ಆಗಮಿಸುತ್ತಿದ್ದಂತೆ, ಸಮುದಾಯದ ಮುಖ್ಯಸ್ಥರು, ಸದಸ್ಯರು ಹಾಗೂ ಜನರು ತಮ್ಮ ಸಾಂಸ್ಕೃತಿಕ ಪ್ರದರ್ಶನ ನಿಲ್ಲಿಸಿ ಅವರಿಗೆ … Read more

ಚೆಪಾಕ್‌ನಲ್ಲಿ ಸಿಎಸ್‌ಕೆ ಸೋಲಿಸುವುದರಿಂದ ಹಿಡಿದು ಫೈನಲ್‌ವರೆಗೆ… ಐಪಿಎಲ್‌ 2025ರಲ್ಲಿ ಫೈನಲ್‌ವರೆಗಿನ ಹಾದಿಯಲ್ಲಿ ಆರ್‌ಸಿಬಿ ಮಾಡಿರುವ ಮಹಾ ರೆಕಾರ್ಡ್‌ಗಳು!

ಐಪಿಎಲ್ 2025 ರ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಅಧಿಕಾರಯುತ ಪ್ರದರ್ಶನದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವರ್ಷಗಳ ಬಳಿಕ ಐಪಿಎಲ್‌ ಫೈನಲ್‌ಗೆ ಲಗ್ಗೆ ಇಟ್ಟಿದೆ. ಲೀಗ್ ಹಂತದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿತ್ತು. ಆರ್‌ಸಿಬಿ, ಪಿಬಿಕೆಎಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಐಪಿಎಲ್ ಇತಿಹಾಸದಲ್ಲಿ ತಮ್ಮ ನಾಲ್ಕನೇ ಫೈನಲ್‌ಗೆ ಅರ್ಹತೆ ಪಡೆಯಿತು. ಇದರೊಂದಿಗೆ, ರಜತ್ ಪಟಿದಾರ್ ನೇತೃತ್ವದ ಆರ್‌ಸಿಬಿ ತಂಡವು 9 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್‌ನ ಫೈನಲ್ … Read more

Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ  ಟಾಂಗ್ ಕೊಟ್ಟ ರಚಿತಾ ರಾಮ್!?

Rachita Ram : ನಟ ಕಮಲ್ ಹಾಸನ್ ಕನ್ನಡದ ಭಾಷೆಯ ಕುರಿತಾಗಿ ತಮ್ಮ ಥಗ್‌ಲೈಫ್ ಚಿತ್ರದ ಪ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ನಾಲಿಗೆಹರಿಬಿಟ್ಟಿದ್ದು ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿದೆ. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಕಾರಣವಾಗಿದ್ದಾರೆ. ಕನ್ನಡಿಗರು ಕ್ಷಮೆಯಾಚಿಸಬೇಕು ಎಂದು ಹೇಳಿಕೆ ಎಚ್ಚರಿಕೆ ಕೊಟ್ಟರೂ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಕಮಲ್‌ ಹಾಸನ್‌ ಕ್ಷಮೆಯಾಚಿಸಲ್ಲ ಎಂದು ನೇರವಾಗಿಹೇಳಿದ್ದಾರೆ. ಒಂದೆಡೆ ಕಮಲ್‌ ಹಾಸನ್‌ ಕನ್ನಡಿಗರ ವಿರೋಧಕ್ಕೆ ಗುರಿಯಾದರೆ, ಮತ್ತೊಂದೆಡೆ ಕಮಲ್‌ ಹಾಸನ್‌ ಅವರ … Read more

ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ … Read more

Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ

Head Master Suspended : ಕನ್ನಡ ವಿಚಾರ ಕಾವು ಪಡೆದುಕೊಂಡಿರುವ ಸಂದರ್ಭದಲ್ಲಿ ಸರ್ಕಾರಿ ಕನ್ನಡ ಶಾಲೆಗಾಗಿ ನಾಲ್ಕು ಕೊಠಡಿಗಳನ್ನು ಕೊಡಿ ಎಂದು ಮನವಿ ಮಾಡಿರುವ ಮುಖ್ಯ ಶಿಕ್ಷಕರನ್ನೇ ಸರ್ಕಾರ ಸಸ್ಪೆಂಡ್ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳನ್ನು ನೀಡುವಂತೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ವೀರಣ್ಣ ಮಡಿವಾಳರ ಅವರು ಮನವಿ ಮಾಡಿದ್ದರು. ಕನ್ನಡ ಮಕ್ಕಳ ಶಾಲೆಗಾಗಿ ಉಪವಾಸ ಹಾಗೂ … Read more