ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ : ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ.!

ಹುತಾತ್ಮರ ಸಮಾಧಿಯ ಮೇಲೆ ಖಿ ಖಿ ಖಿ ಖಿ ಡಿಪ್ಲೊಮಸಿ ಮೋದಿ ವಿರುದ್ಧ ನಟ ಕಿಶೋರ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಈಚೆಗೆ ವಿವಿಧ ವಿಚಾರಗಳ ಬಗ್ಗೆ ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಟ ಕಿಶೋರ್ ಅವರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಾರ್ವಜನಿಕ ವಲಯದಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು. ಇದರ ಬೆನ್ನಲ್ಲೇ ಅವರು ಮತ್ತೊಂದು ಬರಹವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ನಟ ಕಿಶೋರ್ ಅವರ ಬರಹ ಈ ರೀತಿ ಇದೆ. ಹುತಾತ್ಮರ … Read more

ನಾಲ್ಕು ವರ್ಷದ ವಿದ್ಯಾರ್ಥಿನಿಯನ್ನು ಹೊಡೆದು, ತುಳಿದು ಕೊಂದ ಶಾಲಾ ಸಿಬ್ಬಂದಿ

ಶಾಲಾ ಮಹಿಳಾ ಸಹಾಯಕ ಸಿಬ್ಬಂದಿಯೊಬ್ಬರು 4 ವರ್ಷದ ನರ್ಸರಿ ವಿದ್ಯಾರ್ಥಿಯನ್ನು ನೆಲಕ್ಕೆ ತಳ್ಳಿ ಹೊಡೆದು, ತುಳಿದು ಕೊಲೆ(Murder) ಮಾಡಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ತೀವ್ರ ಆತಂಕವನ್ನು ಹುಟ್ಟುಹಾಕಿದೆ.ಸಿಬ್ಬಂದಿಯೊಬ್ಬರು ಮಗುವನ್ನು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಶನಿವಾರ ಮಗುವನ್ನು ಆರೋಪಿ ಶೌಚಾಲಯಕ್ಕೆ ಕರೆದೊಯ್ದಾಗ ಈ ಘಟನೆ ನಡೆದಿದೆ. ದೂರಿನ ಪ್ರಕಾರ ಶಾಲಾ ಸಿಬ್ಬಂದಿ ಮಗುವಿನ ಮೇಲೆ ಪದೇ ಪದೇ ಹಲ್ಲ ನಡೆಸಿದ್ದಾರೆ. ಆಕೆಯ … Read more

ಜಾತಿಯ ಕಾರಣಕ್ಕೆ ಕೊಲೆಗೀಡಾದ ಪ್ರಿಯಕರನನ್ನೇ ವರಿಸಿದ ಯುವತಿ : ಮನ ಕಲುಕುವ ಲವ್‌ ಸ್ಟೋರಿ ಇಲ್ಲಿದೆ

ಜಗತ್ತಿನಲ್ಲಿ ಅದೆಷ್ಟೋ ಲವ್‌ ಸ್ಟೋರಿ ಹೊಂದಿರುವ ಸಿನಿಮಾ, ಕಥೆ, ಕಾದಂಬರಿಗಳು ಬಂದಿವೆ. ಅಮರ ಪ್ರೇಮಿಗಳು ಎನಿಸಿಕೊಂಡಿರುವ ಕೆಲವು ಪಾತ್ರಗಳು ಶತಮಾನ ಕಳೆದ ಮೇಲೂ ಜನರನ್ನು ಕಾಡುತ್ತವೆ, ಕಣ್ಣಂಚಿನಲ್ಲಿ ಒಂದು ಹನಿ ನೀರು ಜಿನುಗುವಂತೆ ಮಾಡುತ್ತವೆ. ಇಲ್ಲೊಂದು ನಿಜ ಲವ್‌ ಸ್ಟೋರಿ ಕೇಳಿದರೆ ಒಂದುಕ್ಷಣ ನೀವು ಭಾವುಕರಾಗುವುದು ಖಚಿತ. ಮಹಾರಾಷ್ಟ್ರದ ನಾಂದೇಡ್‌ನಲ್ಲಿ 20 ವರ್ಷದ ಯುವಕನನ್ನು ಜಾತಿಯ ಹೆಸರಿನಲ್ಲಿ ಥಳಿಸಿ, ಗುಂಡು ಹಾರಿಸಿ, ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ (Maharashtra News). ಪ್ರಿಯಕರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಪ್ರಿಯತಮೆ … Read more

ರಾಜ್ಯದಲ್ಲಿ ಪೈಶಾಚಿಕ ಕೃತ್ಯ : ವಿದ್ಯಾರ್ಥಿನಿಯ ಮೇಲೆ 2 ವರ್ಷಗಳಿಂದ ನಿರಂತರ ಅತ್ಯಾಚಾರ : ಉಪನ್ಯಾಸಕ ಅರೆಸ್ಟ್!

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಉಪನ್ಯಾಸಕನಿಂದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಬೆಳಗಾವಿಯ ಖಾಸಗಿ ಕಾಲೇಜು ಉಪನ್ಯಾಸಕ ನಾಗೇಶ್ವರ ವಿರುದ್ಧ ಆರೋಪ ಕೇಳಿಬಂದಿದ್ದ. ಬೆಳಗಾವಿ ತಾಲೂಕಿನ ಬಸವನ ಕುಡಚಿ ನಿವಾಸಿ ನಾಗೇಶ್ವರ ಡೆವಿನಕೊಪ್ಪ ಉಪನ್ಯಾಸಕ ಜೀವ ಬೆದರಿಕೆ ಹಾಕಿ ವಿದ್ಯಾರ್ಥಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.ಲಿವ್ ಇನ್ ರಿಲೇಶನ್ ಶಿಪ್ ಇಟ್ಟುಕೊಳ್ಳಬೇಕು, ಕರೆದ ಕಡೆ ಬರಬೇಕು, … Read more

ನಟಿ ಆಶಿಕಾ ರಂಗನಾಥ್ ಮಾವನ ಮಗಳಿಗೆ ‘ಲೈಂಗಿಕ ಕಿರುಕುಳ.! ಯುವಕನಿಂದ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು!

ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿ, ಇಂಜಿನಿಯರಿಂಗ್ ಪದವೀಧರೆ ಅಚಲಾ ಬೆಂಗಳೂರಿನಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೀತಿಸಿದ ಯುವಕ ಮಯಾಂಕ್ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಅವರ ಸಂಬಂಧಿಯಾಗಿರುವ ಯುವತಿಯೊಬ್ಬಳು ಪ್ರೀತಿಸಿದ ಯುವಕನಿಂದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಬೇಸತ್ತು ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ. ಘಟನೆ ನಡೆದು 10 ದಿನಗಳು ಕಳೆದರೂ ಆರೋಪಿಗಳನ್ನು ಬಂಧಿಸದಿರುವುದು ಯುವತಿಯ … Read more

19 ನಿಮಿಷಗಳ ವೈರಲ್ ವಿಡಿಯೋದಲ್ಲಿರುವ ಜೋಡಿ ಇವರೇನಾ! ತಪ್ಪು ವಿಡಿಯೋ ಲಿಂಕ್ ಮಾಡಲಾಯ್ತಾ?

ಪ್ರತಿ ವಿಷಯಗಳನ್ನು ಅಂಗೈನಲ್ಲೇ ತಿಳಿಸುವ ಸಾಮಾಜಿಕ ಜಾಲತಾಣಗಳ ಪ್ರಭಾವವು ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಕೆಲವೊಮ್ಮೆ ಸುಳ್ಳು, ಸಂಬಂಧವಿಲ್ಲ ವಿಷಯ, ವಿಡಿಯೋಗಳು ಹರಿದಾಡಿ ಜನರನ್ನ ದಾರಿತಪ್ಪಿಸಿದ್ದು ಇದೆ. ಇಂತಹ ಸಾಲಿಗೆ ಮತ್ತೊಂದು ವಿಡಿಯೋ ಸೇರಿದೆ. “ಇನ್‌ಸ್ಟಾಗ್ರಾಮ್ 19 ನಿಮಿಷಗಳ ವೀಡಿಯೊ’ ಹೆಸರಿನಲ್ಲಿ ವಿಡಿಯೋ ಹರದಾಡಿತ್ತು. ಯುವಕ-ಯುವತಿಯ ಜೋಡಿ ಇರುವ ಫೋಟೋಗೆ ಲಿಂಕ್ ಮಾಡಿ ವೈರಲ್ ಮಾಡಲಾಗಿದೆ. ಅಲಿಗೆ ವೈರಲ್ ಆಗಿದ್ದ ಯುವಕ-ಯುವತಿಯ ಎಂಎಂಎಸ್ ಗೂ ಹಾಗೂ ಪೊಲೀಸರಿಂದ ಏಟು ತಿನ್ನುತ್ತ ಬರುವ ಯುವಕನಿಗೂ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ. … Read more

ಮೋದಿ ಕೃಷ್ಣ ದರ್ಶನ ಟೀಕಿಸಿದ ಸಚಿವ ಪ್ರಿಯಾಂಕ್ ಖರ್ಗೆಗೆ ನೆಟ್ಟಿಗರ ಕ್ಲಾಸ್ : ಮೊದಲು ನಿಮ್ಮ ಕ್ಷೇತ್ರದ ಹೊಂಡ ಮುಚ್ಚಿ ಆಮೇಲೆ ಮಾತಾಡಿ

ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಶ್ರೀಕೃಷ್ಣ ಮಠದ ಭೇಟಿ ಹಾಗೂ ಕನಕನಕಿಂಡಿಯ ದರ್ಶನವನ್ನು ವ್ಯಂಗ್ಯವಾಗಿ ಟೀಕಿಸಿದ ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೇವರ ದರ್ಶನವನ್ನೂ ರಾಜಕೀಯಕ್ಕೆ ಎಳೆದು ತಂದ ಸಚಿವರ ನಡೆಯನ್ನು ಖಂಡಿಸಿರುವ ಜನತೆ, ಕೇಂದ್ರವನ್ನು ಪ್ರಶ್ನಿಸುವ ಮೊದಲು ನಿಮ್ಮ ಕ್ಷೇತ್ರದ ಕಡೆ ಗಮನ ಕೊಡಿ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಚಿವ ಖರ್ಗೆ ಹೇಳಿದ್ದೇನು? ನಿನ್ನೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಪಂಚೆ ಧರಿಸಿ … Read more

ಅಪ್ಪಾ , ಪ್ರೀತ್ಸೋದ್ ತಪ್ಪಾ? – ಡೆತ್ ನೋಟ್ ಬರೆದು ನೇಣಿಗೆ ಶರಣಾದ ಯುವತಿ!

ಬೆಂಗಳೂರು : ನಗರದ ಹೊರವಲಯ ಹೆಸರುಘಟ್ಟ ರಸ್ತೆಯ ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬಳು ಸೋಲದೇವನಹಳ್ಳಿಯ ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾಗುವ ಮುನ್ನ ನನಗೆ ನಿಮ್ಮ ಪ್ರೀತಿಗೆ ಅರ್ಹಳಲ್ಲ ಅಪ್ಪ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾಳೆ. ಹಾಸನ ಮೂಲದ ವತ್ಸಲಾ (19) ಆತ್ಮಹತ್ಯೆಗೆ ಶರಣಾದ ಯುವತಿ ಎಂದು ತಿಳಿದು ಬಂದಿದೆ. ಈಕೆ ಅಂತಿಮ ವರ್ಷದ ಬಿ ಫಾರ್ಮ್ ವ್ಯಾಸಾಂಗ ಮಾಡುತ್ತಿದ್ದಳು. ಪಿಜಿಯಲ್ಲಿದ್ದು ಬೆಳಿಗ್ಗೆಯಿಂದ 8 ಪುಟಗಳ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಡೆತ್‌ನೋಟ್‌ನಲ್ಲಿ … Read more

Patanjali Cow Ghee : ಗುಣಮಟ್ಟ ಪರೀಕ್ಷೆಯಲ್ಲಿ ‘ಪತಂಜಲಿ ತುಪ್ಪ’ ಫೇಲ್ ; ಆಹಾರ ಇಲಾಖೆಯಿಂದ 10 ಲಕ್ಷ ರೂ. ದಂಡ

ಕಳಪೆ ಗುಣಮಟ್ಟದ ತುಪ್ಪವನ್ನ ಮಾರಾಟ ಮಾಡಿದ್ದಕ್ಕಾಗಿ ಪತಂಜಲಿ ಮತ್ತು ಅದರೊಂದಿಗೆ ಸಂಯೋಜಿತವಾಗಿರುವ ಇತರ ಎರಡು ಕಂಪನಿಗಳಿಗೆ ₹1.4 ಲಕ್ಷ ದಂಡ ವಿಧಿಸಲಾಗಿದೆ. ಉತ್ತರಾಖಂಡ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಈ ನಿರ್ಧಾರವನ್ನ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಸಹಾಯಕ ಆಯುಕ್ತ ಆರ್.ಕೆ. ಶರ್ಮಾ, ಈ ಪ್ರಕರಣವು 2020ರ ಪತಂಜಲಿಯ ಹಸುವಿನ ತುಪ್ಪದ ಮಾದರಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಪಿಥೋರಗಢದ ಕಸ್ನಿ ಪ್ರದೇಶದ ಕರಣ್ ಜನರಲ್ ಸ್ಟೋರ್‌’ನಿಂದ ನಿಯಮಿತ ತಪಾಸಣೆಯ ಸಮಯದಲ್ಲಿ ಮಾದರಿಯನ್ನು … Read more

ಕನಕನ ಕಿಂಡಿಗೆ ಸ್ವರ್ಣ ಲೇಪನ ಕೊಡುಗೆ ನೀಡಿದ್ದು ಪ್ರಮೋದ್‌ ಮಧ್ವರಾಜ್‌, ಕಾರ್ಯಕ್ರಮಕ್ಕೆ ಅವರಿಗೆ ಇರಲಿಲ್ಲ ಅವಕಾಶ.!

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಕೃಷ್ಣನಗರಿ ಉಡುಪಿಗೆ ಆಗಮಿಸಿ ಲಕ್ಷಕಂಠ ಭಗವದ್ಗೀತಾ ಶ್ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಕೃಷ್ಣಮಠದಲ್ಲಿ ಕೆಲವೊಂದು ಉದ್ಘಾಟನೆಯನ್ನೂ ಮಾಡಿದರು. ಕೃಷ್ಣಮಠದ ಕನಕನ ಕಿಂಡಿಗೆ ಸ್ವರ್ಣಲೇಪನ ಮಾಡಿದ್ದನ್ನು ಮೋದಿ ಅನಾವರಣ ಮಾಡಿದರು. ಇದರ ಬೆನ್ನಲ್ಲಿಯೇ ಹೊಸ ವಿವಾದ ಸೃಷ್ಟಿಯಾಗಿದೆ. ಉಡುಪಿಯ ಕೃಷ್ಣಮಠದ ಕನಕನ ಕಿಂಡಿಗೆ ಸ್ವರ್ಣ ಲೇಪನ ಮಾಡಲು ಕೊಡುಗೆ ನೀಡಿದ್ದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡದೇ ಇರುವುದು ಕರಾವಳಿ ನಗರದಲ್ಲಿ ಚರ್ಚೆಗೆ ಕಾರಣವಾಗಿದೆ. ಐತಿಹಾಸಿಕ … Read more