IAS ಅಧಿಕಾರಿ ಮಹಾಂತೇಶ ಬೀಳಗಿ ಕಾರು ಅಪಘಾತ ಪ್ರಕರಣ… ಗಾಯಗೊಂಡಿದ್ದ ಮತ್ತೋರ್ವ ಮೃತ್ಯು

ಜಿಲ್ಲೆಯ ಜೇವರ್ಗಿ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಕಾರು ಪಲ್ಟಿ ಅಪಘಾತದಲ್ಲಿ ಎಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದರೆ, ಇವರ ಜತೆ ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ನಾಲ್ವರು ಮೃತಪಟ್ಟಂತಾಗಿದೆ. ಈರಣ್ಣ ಶಂಕ್ರಪ್ಪ ಸಿರಸಂಗಿ (47) ಎನ್ನುವರೇ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಕ್ಕೊಳಗಾದ ಕಾರಿನ ಚಾಲಕ ಅರೋಕಿಯಾ ಅಂಥೋನಿರಾಜ್ ಗೆ ಚಿಕಿತ್ಸೆ ಮುಂದುವರೆದಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲು: ಎಎಎಸ್ ಅಧಿಕಾರಿ ಮಹಾಂತೇಶ … Read more

ಕರ್ನಾಟಕ ಸಿಎಂ ಕುರ್ಚಿ ಕದನ – ಸಿದ್ದರಾಮಯ್ಯ ಪ್ಲ್ಯಾನ್ ಏನು ಗೊತ್ತಾ.?

ಕರ್ನಾಟಕದಲ್ಲಿ ಸಿಎಂ ಕುರ್ಚಿಗಾಗಿ ಅಂತರಿಕ ಕಿತ್ತಾಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಬಹಿರಂಗ ನಡೆ ಮತ್ತು ಹೇಳಿಕೆಗಳು ನಿಗೂಢವಾಗಿಯೇ ಇವೆ. ಕರ್ನಾಟಕದ ಕಾಂಗ್ರೆಸ್ ನ ಅಂತರಿಕ ಗೊಂದಲವನ್ನು ಡಿಸೆಂಬರ್ 1 ರೊಳಗಾಗಿ ಕಾಂಗ್ರೆಸ್ ಹೈಕಮ್ಯಾಂಡ್ ಬಗೆಹರಿಸುವ ನಿರೀಕ್ಷೆ ಇದೆ. ಈಗಾಗಲೇ ಡಿಕೆಶಿ ಬಣ ದೆಹಲಿ ಟೂರ್‌ ಮಾಡಿ, ಅಧಿಕರಾ ಹಂಚಿಕೆ ಬಗ್ಗೆ ಒತ್ತಡ ಹಾಕಿದ್ದಾರೆ. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಕೂಡಾ ಅಖಾಡಕ್ಕೆ ಇಳಿದಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 1 ರಂದು … Read more

ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್‌ ಈ ಟ್ವೀಟ್‌ ಕಾಂಗ್ರೆಸ್‌ ಹೈಕಮಾಂಡ್‌ಗೆ ಹೇಳಿದ್ದಾ?

ಕರ್ನಾಟಕ ಸರ್ಕಾರದಲ್ಲಿ ಇನ್ನಿಲ್ಲದ ಗೊಂದಲ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾಗುವುದು ಬಹುತೇಕ ನಿಶ್ಚಿತ ಎನ್ನುವ ಸಂದರ್ಭ ಬಂದಿದೆ. ಆದರೆ ಡಿ.ಕೆ.ಶಿವಕುಮಾರ್‌ ಆಗ್ತಾರಾ? ಸತೀಶ್‌ ಜಾರಕಿಹೊಳಿನಾ? ಅಥವಾ ಇನ್ಯಾರಾದ್ರೂ ಈ ಸ್ಥಾನಕ್ಕೆ ಏರುತ್ತಾರಾ ಎಂಬ ಪ್ರಶ್ನೆಯೂ ಎದ್ದಿದೆ. ಆದ್ರೆ ಮುಖ್ಯಮಂತ್ರಿ ಆಗಲೇಬೇಕು ಎಂಬುದು ಡಿ.ಕೆ.ಶಿವಕುಮಾರ್‌ ಅವರ ಹಠ. ಇದು ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಮಧ್ಯೆ ಬೂದಿ ಮುಚ್ಚಿದ ಕೆಂಡದಂಥ ಮನಸ್ತಾಪಕ್ಕೆ ಕಾರಣವಾಗಿದೆ. ಕಾರ್ಯಕ್ರಮಗಳಲ್ಲಿ ಇಬ್ಬರೂ ಒಟ್ಟೊಟ್ಟಿಗೆ ಪಾಲ್ಗೊಳ್ಳುತ್ತಿದ್ದ ಇವರಿಬ್ಬರು, ಇದೀಗ ತಪ್ಪಿಸಿಕೊಳ್ಳುತ್ತಿದ್ದಾರೆ. ಸದ್ಯ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾರೆಲ್ಲ … Read more

ಕುದುರೆ ವ್ಯಾಪಾರ ಜೋರಾಗಿದ್ದು, ನನಗೆ 100 ಕೋಟಿ ಕೊಟ್ರೆ ನಾನು ಹೋಗಲು ಸಿದ್ಧ : ಸಚಿವ ಕೆ. ವೆಂಕಟೇಶ್

ರಾಜ್ಯದಲ್ಲಿ ಕುದುರೆ ವ್ಯಾಪಾರ ಜೋರಾಗಿದ್ದು, ಓಬ್ಬೊಬ್ಬ ಶಾಸಕರಿಗೆ ₹50 ರಿಂದ 100 ಕೋಟಿ ಆಫರ್ ಕೊಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ನನಗೆ ₹100 ಕೋಟಿ ಕೊಟ್ರೆ ನಾನೇ ಹೋಗೋಕೆ ಸಿದ್ಧನಿದ್ದೇನೆ ಎಂದು ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಏನ್ ಗುರು ನೂರು ಕೋಟಿ ಕೊಟ್ರೆ ನೀನು ಹೋಗಲ್ವ? ಎಂದು ಕ್ಯಾಮರಾದ ಮುಂದೆ ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವರು ಕೇಳಿದ್ದಕ್ಕೆ ನೂರು ಕೋಟಿ ಅಲ್ಲ 200 ಕೋಟಿ ದುಡ್ಡು ಕೊಟ್ರು ನಾನು ಎಲ್ಲಿಗೂ ಹೋಗಲ್ಲ … Read more

ಡಿ.ಕೆ.ಶಿವಕುಮಾರ್‌ ಭೇಟಿಯಾದ್ರೂ ಸಿದ್ದರಾಮಯ್ಯಗೇ ನಮ್ಮ ಬೆಂಬಲ : ಸಚಿವ ಸತೀಶ್‌ ಜಾರಕಿಹೊಳಿ

ಪಕ್ಷ ಸಂಘಟನೆ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಭೇಟಿಯಾದ ಮಾತ್ರಕ್ಕೆ ಸಿದ್ದರಾಮಯ್ಯ ಅವರಿಗೆ ನಮ್ಮ ಬೆಂಬಲದಲ್ಲಿ ಯಾವುದೇ ಬದಲಾವಣೆಯಿಲ್ಲ. ಉಳಿದಂತೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ಬದ್ಧ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಕುರಿತು ಚರ್ಚೆಗೆ ಡಿ.ಕೆ. ಶಿವಕುಮಾರ್‌ ಭೇಟಿಯಾಗಿದ್ದರು. ಉಳಿದ ಎಲ್ಲ ವಿಚಾರಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅದರಲ್ಲಿ ನಮ್ಮ ಪಾತ್ರ ಇರುವುದಿಲ್ಲ. ಹೀಗಾಗಿ ಬೇರೆ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ … Read more

ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್‌ ಮಾಡಿದ್ದಾರೆ ಎಂದು ಎಫ್‌ಐಆರ್‌ ದಾಖಲಿಸಿದ ಮರುದಿನವೇ ಪತ್ನಿ ಸಾವು!

9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ಅನ್ನು ಪತ್ನಿಗೆ ನೀಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿದ್ದ ಆಘಾತಕಾರಿ ಘಟನೆ ಬೆಂಗಳೂರು ಸಮೀಪದ ಅತ್ತಿಬೆಲೆಯಲ್ಲಿ ನಡೆದಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಫೆಬ್ರವರಿ 26 ರಂದು ತನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ತನ್ನನ್ನು ಕೊಲ್ಲುವ ಉದ್ದೇಶದಿಂದ ತನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ ಎಂದು ವಿದ್ಯಾ ಹೇಳಿಕೊಂಡಿದ್ದರು. ವಿದ್ಯಾ ಹೇಳಿಕೆ ನೀಡಿದ ನಂತರ ನವೆಂಬರ್ 23 ರಂದು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ತನ್ನ ಗಂಡ ಮತ್ತು … Read more

ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!

ತಾಯಿಗೆ ಪಿಂಚಣಿ ನೀಡಲು ಲಂಚ ಕೇಳಿದ್ದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತಿದ್ದ ಮಹಾಂತೇಶ್ ಬೀಳಗಿ, ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಂತಹ ಉನ್ನತ ಹುದ್ದೆಗೇರಿದ್ದರು. ಹಾಲಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ಅವರು ನಿನ್ನೆ ಸಂಜೆ ನಡೆದ ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದರು. ಅಪಾರ ಪ್ರೀತಿ ಹೊಂದಿದ್ದ ಅಮ್ಮನ ಸಮಾಧಿ ಪಕ್ಕದಲ್ಲಿಯೇ ಮಹಾಂತೇಶ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದವು. ಆದರೆ, ಕೊನೇ ಕ್ಷಣದಲ್ಲಿ ಅಮ್ಮನ ಮಡಿಲು ಸೇರಿಸದೇ ಅಗ್ನಿ ಸ್ಪರ್ಶದ ಮೂಲಕ … Read more

ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್‌ ಪಿನ್! ದಂಪತಿ ಅರೆಸ್ಟ್ – Nandini Ghee

ನಂದಿನಿ ತುಪ್ಪ (Nandini Ghee) ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು ಈ ಪ್ರಕರಣದ ಕಿಂಗ್‌ ಪಿನ್‌ ಗಳಾಗಿದ್‌ ದಂಪತಿಯನ್ನು ಅರೆಸ್ಟ್‌ ಮಾಡಲಾಗಿದೆ. ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿಗಳಾಗಿದ್ದು, ಈ ದಂಪತಿಗಳನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆದಿದ್ದ ವೇಳೆ ಕಲಬೆರೆಕೆ ಮಾರಾಟ ಜಾಲ ಬೆಳಕಿಗೆ ಬಂದಿತ್ತು. ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದ ದಂಪತಿ , ದೊಡ್ಡ … Read more

ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ‌.ಎನ್. ರಾಜಣ್ಣ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಕೆಶಿ ನಡುವೆ ತೀವ್ರ ಪೈಪೋಟಿ ನಡುವೆಯೇ ಮಾಜಿ ಸಚಿವ ಕೆಎನ್ ರಾಜಣ್ಣ (Kn Rajanna) ಪ್ರತಿಕ್ರಿಯಿಸಿದ್ದು, ಜಿ ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರವಾಗಿ ಇದ್ದೇನೆ, ಬದಲಾವಣೆ ಅಂತ ಆದರೆ ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕೂಲಿ ಬಗ್ಗೆ ಮಾತನಾಡುವುದಾದರೆ, ಪರಮೇಶ್ವರ್ 2013ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದವರು. ಪರಮೇಶ್ವರ್ ಅವರದ್ದು ಹಳೆ ಕೂಲಿ, … Read more

‘ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೂ ಸಚಿವ … Read more