ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್ : ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್?

ವಿಚ್ಛೇದಿತ ಮಹಿಳೆಯರನ್ನು ಮರುಮದುವೆ ಆಗೋದಾಗಿ ವಂಚನೆ ಮಾಡಿದ್ದ ಪ್ರಕರಣದ ಆರೋಪಿ ಸಿ.ಎಂ.ಗಿರೀಶ್ ನೇಣಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ನೇಣು ಬಿಗಿದು ಗಿರೀಶ್ ಸೂಸೈಡ್ ಮಾಡಿಕೊಂಡಿದ್ದು, ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ. ಸಿ.ಎಂ.ಗಿರೀಶ್ … Read more

ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನ : ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ.!

ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನಗೊಂಡ ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಕತಿಹಾರ್ ಜಿಲ್ಲೆಯ ಅಬಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿ ಗಂಡನ ವಿರುದ್ಧ ಪ್ರಕರಣ ದಾಖಲಿಸಿ, ಅವನನ್ನು ಹುಡುಕಲು ಪ್ರಾರಂಭಿಸಿದರು. ವರದಿಗಳ ಪ್ರಕಾರ, ಅಜಮ್‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಲ್ಕಿ ಗ್ರಾಮದ ನಿವಾಸಿ ಸುಕುಮಾರ್ ದಾಸ್ ನ ಹೆಂಡತಿ ಮೂರು ತಿಂಗಳ … Read more

ಹೊರಗುತ್ತಿಗೆ ಉದ್ಯೋಗ ಬಂದ್‌, ಸರಕಾರಕ್ಕೆ ಹೆಚ್ಚುವರಿ ಹೊರೆ, ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕ ಪದ್ಧತಿಯನ್ನು 2028ರ ಮಾರ್ಚ್‌ನೊಳಗೆ ಸಂಪೂರ್ಣ ನಿಲ್ಲಿಸಲು ರಾಜ್ಯ ಸಚಿವ ಸಂಪುಟ ಉಪಸಮಿತಿ ನಿರ್ಣಯಿಸಿದೆ. ಖಾಸಗಿ ಏಜೆನ್ಸಿಗಳ ಮೂಲಕ ಬಹುದೊಡ್ಡ ಸಂಖ್ಯೆಯಲ್ಲಿ ನೇಮಕಗೊಂಡಿರುವ ಹೊರಗುತ್ತಿಗೆ ಸೇವೆಯನ್ನು ಈ ಗಡುವಿನೊಳಗೆ ಹಂತಹಂತವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ. ಈ ತೀರ್ಮಾನದಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ ಹೆಚ್ಚುವರಿ 10,000 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಅಂದಾಜು ಮಾಡಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ … Read more

ಒ.ಸಿ ಕಡ್ಡಾಯ ನಿಯಮ : ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ

ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಿಸಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ಇನ್ನೂ ಸಾಧ್ಯವಾಗಿಲ್ಲ…!’ಸಿದ್ದರಾಮಯ್ಯ ಅವರು 80X120 ಅಡಿ ಅಳತೆಯ ನಿವೇಶನದಲ್ಲಿ ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಆರು ತಿಂಗಳ ಹಿಂದೆಯೇ 94 ಕಿಲೊವಾಟ್‌ ವಿದ್ಯುತ್‌ ಮಂಜೂರಾಗಿದೆ. ಆದರೆ, ನ್ಯಾಯಾಲಯವು ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ಕಡ್ಡಾಯ ಮಾಡಿರುವ ಕಾರಣ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗಿಲ್ಲ’ ಎಂದು ಮೂಲಗಳು ಖಚಿತಪಡಿಸಿವೆ. ‘ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ, ಈ ವರ್ಷದ ಏಪ್ರಿಲ್‌ನಿಂದಲೇ ರಾಜ್ಯದ ಎಲ್ಲ … Read more

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ : ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ … Read more

ಕ್ಷಮಿಸು ಅಮ್ಮಾ… ಇದೇ ಕೊನೆ ; ಶಿಕ್ಷಕರ ಕಿರುಕುಳಕ್ಕೆ ನೊಂದು ಮೆಟ್ರೋಗೆ ಹಳಿಗೆ ಹಾರಿ 10ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

ಕ್ಷಮಿಸು ಅಮ್ಮ ನಿನ್ನ ಮನಸನ್ನು ಹಲವಾರು ಬಾರಿ ನೋಯಿಸಿದ್ದೇನೆ. ಇದು ಕೊನೆಯ ಬಾರಿ. ನಾನು ತೆಗೆದುಕೊಂಡ ಈ ತೀರ್ಮಾನಕ್ಕಾಗಿ ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಶಾಲೆಯಲ್ಲಿ ನಡೆದ ಘಟನೆ ಎದುರಿಸಲು ನನ್ನ ಬಳಿ ಈ ನಿರ್ಧಾರ ಹೊರತುಪಡಿಸಿ ಬೇರೆ ಮಾರ್ಗವಿರಲಿಲ್ಲ ಎಂದು 10ನೇ ತರಗತಿ ವಿದ್ಯಾರ್ಥಿಯೊಬ್ಬ ಡೆತ್‌ ನೋಟ್‌ ಬರೆದಿಟ್ಟು ದೆಹಲಿ ಮೆಟ್ರೋ ಹಳಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಈ ಘಟನೆಯಿಂದ ಪೋಷಕರು ಭಾರಿ ಅಘಾತಕ್ಕೊಳಗಾಗಿದ್ದಾರೆ. ಶಾಲಾ ಸಮವಸ್ತ್ರದಲ್ಲಿದ್ದ 16 ವರ್ಷದ ಶೌರ್ಯ ಪಾಟೀಲ್ ಎಂಬಾತ ಮಂಗಳವಾರ ಮಧ್ಯಾಹ್ನ ಮೆಟ್ರೋ … Read more

ರಾತ್ರಿ ಹೊತ್ತು ಲೈಟ್‌ ಹಾಕಿಕೊಂಡು ಮಲಗ್ತೀರಾ?, ನಿಮ್ಮ ಹೃದಯ ಬಡಿತವೇ ನಿಲ್ಲಬಹುದು ಎಚ್ಚರ!

ಹಾರ್ವರ್ಡ್ ವಿಶ್ವವಿದ್ಯಾಲಯದ ಹೊಸ ಸಂಶೋಧನೆಯು ಶಾಕಿಂಗ್ ಸುದ್ದಿಯೊಂದನ್ನು ರಿವೀಲ್ ಮಾಡಿದೆ. ಅದೇನೆಂದರೆ ನಾವು ರಾತ್ರಿ ವೇಳೆ ಬಳಸುವ ಸಣ್ಣ ಪ್ರಮಾಣದ ಕೃತಕ ಬೆಳಕು (Artificial light) ಕೂಡ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಈ ಬೆಳಕಿನ ಮಾಲಿನ್ಯವು ಹಿಂದೆ ಯೋಚಿಸಿದ್ದಕ್ಕಿಂತ ಹೆಚ್ಚು ಹಾನಿಕಾರಕ ಎಂದು ವಿಜ್ಞಾನಿಗಳು ತೀರ್ಮಾನಿಸಿದ್ದಾರೆ. ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯದಂತಹ ಅಂಶಗಳು ಹೃದಯ ಕಾಯಿಲೆಗೆ ಕಾರಣವಾಗಬಹುದು ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹಿಂದೆ ಯಾರೂ ಬೆಳಕಿನ ಮಾಲಿನ್ಯದ ಬಗ್ಗೆ ಹೆಚ್ಚಿನ ಸಂಶೋಧನೆ … Read more

ಅಂಬಾನಿಗೆ ಆಘಾತ | ಯುವಕರಿಗೆ ಹೊಸ ಉಚಿತ ಆಫರ್ ಕೊಟ್ಟ BSNL | ಇಲ್ಲಿದೆ ಡಿಟೇಲ್ಸ್

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್ ಈಗ ದೇಶದ ವಿದ್ಯಾರ್ಥಿಗಳಿಗಾಗಿ ಹೊಸ ಸೇವೆಯನ್ನ ಆರಂಭಿಸಿದೆ. ದೇಶದ ವಿದ್ಯಾರ್ಥಿಗಳು ಬಿಎಸ್ಎನ್ಎಲ್ ನ ಈ ಸೇವೆಯ ಅಡಿಯಲ್ಲಿ 100 GB ಡೇಟಾ ಮತ್ತು ಅನಿಮಿತ ಕರೆಯ ಸೇವೆಯನ್ನ ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಅನ್ನುವ ಉದ್ದೇಶದಿಂದ ಬಿಎಸ್ಎನ್ಎಲ್ ಈಗ ದೇಶಾದ್ಯಂತ ಈ ಸೇವೆಯನ್ನ ಆರಂಭಿಸಿದೆ. ಬಿಎಸ್ಎನ್ಎಲ್ ಈಗ ವಿದ್ಯಾರ್ಥಿಗಳಿಗಾಗಿ 251 ರೂಪಾಯಿ ಹೊಸ ರಿಚಾರ್ಜ್ ಪ್ಲಾನ್ ಅನ್ನ ದೇಶಾದ್ಯಂತ ಜಾರಿಗೆ ತಂದಿದೆ. ಈ ರಿಚಾರ್ಜ್ ಪ್ಲಾನ್ ಡಿಸೆಂಬರ್ 13ರವರೆಗೆ ದೇಶಾದ್ಯಂತ ಜಾರಿಯಲ್ಲಿರುತ್ತದೆ. … Read more

ರಾಹುಲ್‌ ‘ವೋಟ್‌ ಚೋರಿ’ ಆರೋಪದ ವಿರುದ್ಧ ಸಹಿ ಸಂಗ್ರಹ : ಮಾಜಿ ಜಡ್ಜ್ಗಳು, ನಿವೃತ್ತ ಸೈನಿಕರು ಸೇರಿ 272 ಗಣ್ಯರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವೋಟ್ ಚೋರಿ ಅಸ್ತ್ರ ಹೂಡಿದ್ದಾರೆ. ಕೆಲ ದಿನಗಳ ಹಿಂದೆ ಎಐಸಿಸಿ ನಾಯಕರು ಹಮ್ಮಿಕೊಂಡಿರೋ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿತ್ತು. ಇದೀಗ 272 ಗಣ್ಯರ ಸಹಿ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಇಂದು ಬರೋಬ್ಬರಿ 272 ಗಣ್ಯರು ಸಹಿ ಮಾಡಿದ ಮುಕ್ತ ಪತ್ರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ಸಾಂವಿಧಾನಿಕ ಸಂಸ್ಥೆಗಳನ್ನು, ಅದರಲ್ಲೂ ಚುನಾವಣಾ ಆಯೋಗವನ್ನು (EC) ದುರ್ಬಲಗೊಳಿಸುವ … Read more

Karnataka Weather : ರಾಜ್ಯದಲ್ಲಿ ಶೀತಗಾಳಿ –  5 ಕ್ಕೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಾರ್ನಿಂಗ್.!

ರಾಜ್ಯದಲ್ಲಿ ದಿನೇ ದಿನೇ ಚಳಿ ಹೆಚ್ಚುತ್ತಿದ್ದು, ಕರುನಾಡಿನೆಲ್ಲೆಡೆ ಮುಂದಿನ 3 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 5 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 20 ರವರೆಗೂ ಶೀತ ಗಾಳಿ ಬೀಸಲಿದೆ. ಪ್ರಮುಖವಾಗಿ ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4°C ನಿಂದ 6° C ಕಡಿಮೆ ಇರುವ ಸಾಧ್ಯತೆಯಿದ್ದು, … Read more