ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ

ಹದಿಹರೆಯದವರಲ್ಲಿ ಹೆಚ್ಚುತ್ತಿರುವ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ಅತಿಯಾದ ಬಳಕೆಯು ಸರ್ಕಾರಕ್ಕೆ ದೊಡ್ಡ ಆತಂಕವನ್ನುಂಟುಮಾಡಿದೆ. ಅಲ್ಲದೇ ಚಿಕ್ಕವಯಸ್ಸಿನಲ್ಲೇ ದುಶ್ಚಟಗಳಿಗೆ ದಾಸರಾಗಿ ಆರೋಗ್ಯ ಹಾಳು ಮಾಡುಕೊಳ್ಳುತ್ತಿದ್ದಾರೆ. ಹೀಗಾಗಿ ಇದನ್ನು ತಡೆಗಟ್ಟಲು ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)   ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಪಬ್‌, ಬಾರ್‌ಗಳು (Pub And Bars) ಮತ್ತು ಮದ್ಯ ಸರಬರಾಜು ಮಾಡುವ ಎಲ್ಲಾ ವಾಣಿಜ್ಯ ಸಂಸ್ಥೆಗಳ ಮೇಲೆ ಕಠಿಣ ನಿಗಾ ವಹಿಸಲು ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದು, … Read more

ಮಿಸ್ಡ್ ಕಾಲ್‌ನಲ್ಲಿ ಶುರುವಾದ ಲವ್: 5 ಮಕ್ಕಳ ತಾಯಿಯನ್ನು ಮದುವೆಯಾದ 19ರ ಯುವಕ! ‘ನಮ್ಮನ್ನು ಬೇರೆಮಾಡಬೇಡಿ’ ಎಂದು ಕಣ್ಣೀರಿಟ್ಟ ಜೋಡಿ…

ಬಿಹಾರ: ಒಂದು ಮಿಸ್ಡ್ ಕಾಲ್ ಇಡೀ ಬದುಕನ್ನೇ ಬದಲಾಯಿಸಬಲ್ಲದೇ? ಬಿಹಾರದ ಜಮುಯಿ ಜಿಲ್ಲೆಯ ಖೈರಾ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತಹುದೇ ಒಂದು ಅಚ್ಚರಿಯ ಘಟನೆ ನಡೆದಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. 36 ವರ್ಷದ, ಐದು ಮಕ್ಕಳ ತಾಯಿಯೊಬ್ಬರು ತನಗಿಂತ 17 ವರ್ಷ ಚಿಕ್ಕವನಾದ 19 ವರ್ಷದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಈ ವಿಚಿತ್ರ ಜೋಡಿಯ ಪ್ರೇಮ ಪುರಾಣ ಈಗ ಇಡೀ ಗ್ರಾಮದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮಿಸ್ಡ್ ಕಾಲ್ ತಂದ ಮದುವೆ ಯೋಗ! … Read more

ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ: ರಾಮಲಿಂಗಾರೆಡ್ಡಿ ಯೂ ಟರ್ನ್

ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಈ ಹಿಂದೆ ಮುನಿಸಿಕೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ನಿಲುವನ್ನು ಈಗ ಬದಲಿಸಿದ್ದು, ತಮಗೆ ಸದ್ಯ ಹಂಚಿಕೆಯಾಗಿರುವ ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲೇ ತಾವು ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಉಸ್ತುವಾರಿ ನನಗೆ ಬೇಡ, ಕೊಟ್ಟರು ಬೇಡ ಅಂತಿನಿ. ತಮಗೆ ಬೇರೆ ಯಾವುದೇ ಇಲಾಖೆಯ ಅಗತ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಜಲಸಂಪನ್ಮೂಲ … Read more

ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆ ಆರೋಪ ಮಾಡಿದ ಪೋಷಕರು!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹಿತ ಗೃಹಿಣಿಯೊಬ್ಬರು ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ, ಪತಿಯೇ ಮಾಡಿರುವ ಕೊಲೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಯಾರು ಈ ಮೃತ ದುರ್ದೈವಿ? ಮೃತ ಗೃಹಿಣಿಯನ್ನು ಸಂಧ್ಯಾ (30) ಎಂದು ಗುರುತಿಸಲಾಗಿದೆ. ಈಕೆ ಹುಣಸೂರು ಪುರಸಭೆಯ ಮಾಜಿ ಅಧ್ಯಕ್ಷೆಯಾದ ಗೀತಾ ನಿಂಗರಾಜು ಅವರ ಪುತ್ರಿಯಾಗಿದ್ದಾರೆ. ಸದ್ಯ ಮೈಸೂರಿನ ಸರಸ್ವತಿಪುರಂನ ಜವರೇಗೌಡ ಪಾರ್ಕ್ ಸಮೀಪದ ನಿವಾಸದಲ್ಲಿ ಈ ಘಟನೆ ಸಂಭವಿಸಿದೆ. … Read more

ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!

ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ವಿತರಿಸಲಾದ ಪೌಷ್ಟಿಕಾಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿಯೊಂದು ಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ. ಗರ್ಭಿಣಿ ಮಹಿಳೆಯೊಬ್ಬರಿಗೆ ನೀಡಲಾಗಿದ್ದ ಈ ಆಹಾರದ ಪ್ಯಾಕೆಟ್ನಲ್ಲಿ ಈ ಆಘಾತಕಾರಿ ದೃಶ್ಯ ಕಂಡುಬಂದಿದೆ. ಜಿಲ್ಲೆಯ ಕರ್ಘಾತ್ ಕಮ್ತಿ ಗ್ರಾಮದ ನಿವಾಸಿಯಾದ ವತ್ಸಲಾ ಬಾಯಿ ಧುರ್ವೆ ಎಂಬ ಗರ್ಭಿಣಿ ಮಹಿಳೆಗೆ ಅಂಗನವಾಡಿಯ ಪೂರಕ ಪೌಷ್ಟಿಕಾಂಶ ಯೋಜನೆಯಡಿ ಲಡ್ಡುಗಳ ಪ್ಯಾಕೆಟ್ ಅನ್ನು ನೀಡಲಾಗಿತ್ತು. ಅದೃಷ್ಟವಶಾತ್, ಮಹಿಳೆ ಇದನ್ನು ಸೇವಿಸುವ ಮುನ್ನವೇ ವಿಷಯ ಬೆಳಕಿಗೆ ಬಂದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ಕುಟುಂಬಸ್ಥರು … Read more

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್.! ನಿಮ್ಮದು ಈ ಟೆಸ್ಟ್ ಆಗಿದೆಯಾ.? Health Tips

ನಮಸ್ಕಾರ ಸ್ನೇಹಿತರೇ, ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ ಮದುವೆ ಮೊದಲು ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು ಎನ್ನುತ್ತಿದೆ ವೈದ್ಯಲೋಕ. ಹಾಗಾದ್ರೆ ಯಾವ ಪರೀಕ್ಷೆ ಮಾಡಿಸಿಕೊಳ್ಳಬೇಕು ಗೊತ್ತೆ.? Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ … Read more

ಮಡಿಕೇರಿ ಹೋಂಸ್ಟೇನಲ್ಲಿ ಮೈಸೂರು ಯುವತಿ ನಿಗೂಢ ಸಾವು : ಗ್ಯಾಸ್ ಗೀಸರ್ ಅನಿಲ ಸೋರಿಕೆ ಶಂಕೆ…!?

ಮಡಿಕೇರಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂಸ್ಟೇಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದಲ್ಲಿ ನಡೆದಿದೆ.ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನುತಾ (27) ಮೃತಪಟ್ಟ ದುರ್ದೈವಿ. ಘಟನೆಯ ಹಿನ್ನೆಲೆ: ಮೃತ ವಿನುತಾ ಅವರು ತಮ್ಮ 14 ಮಂದಿ ಸ್ನೇಹಿತರ ಗುಂಪಿನೊಂದಿಗೆ ಕೊಡಗು ಪ್ರವಾಸಕ್ಕೆ ಬಂದಿದ್ದರು. ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ವಾಸ್ತವ್ಯ ಹೂಡಿದ್ದ ಅವರು, ಬೆಳಿಗ್ಗೆ ಸ್ನಾನಕ್ಕಾಗಿ ಬಾತ್‌ರೂಮ್‌ಗೆ ತೆರಳಿದ್ದರು. ಈ ವೇಳೆ ಅವರು … Read more

ಸರಿಯಾದ ಕಾರಣವಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಪತಿ ಮೇಲೆ ನಡೆಸುವ ಕ್ರೌರ್ಯ: ಸುಪ್ರೀಂಕೋರ್ಟ್

ಸರಿಯಾದ ಕಾರಣಗಳಿಲ್ಲದೇ ಪತ್ನಿ ಲೈಂಗಿಕ ಸಂಭೋಗಕ್ಕೆ ನಿರಾಕರಿಸುವುದು ಮತ್ತು ವೈವಾಹಿಕ ಹಕ್ಕುಗಳನ್ನು ನಿರಾಕರಿಸುವುದು ಪತಿ ಮೇಲೆ ನಡೆಸುವ ಮಾನಸಿಕ ಕ್ರೌರ್ಯ ಎಂದು ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದ್ದು, ಅಂತಹ ಸಂದರ್ಭದಲ್ಲಿ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 13(1) (IA) ಅಡಿಯಲ್ಲಿ ವಿಚ್ಛೇದನವನ್ನು ಪಡೆಯುವ ಹಕ್ಕಿದೆ ಎಂದು ಸ್ಪಷ್ಟಪಡಿಸಿದೆ. ರಾಜಸ್ಥಾನದ ವೈದ್ಯರೊಬ್ಬರು ತಮ್ಮ ಪತ್ನಿ ಲೈಂಗಿಕ ಸಂಭೋಗವನ್ನು ನಿರಾಕರಿಸುತ್ತಿದ್ದಾರೆ ಈ ಹಿನ್ನೆಲೆ ಪತ್ನಿಯಿಂದ ವಿಚ್ಚೇದನ ಕೋರಿ ರಾಜಸ್ಥಾನ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪತ್ನಿ ತಮ್ಮನ್ನು ರಾತ್ರಿ ಹತ್ತಿರಕ್ಕೂ ಸೇರಿಸಿಕೊಳ್ಳುತ್ತಿಲ್ಲ … Read more

ಆನ್‌ಲೈನ್ ಗೇಮ್ ಹುಚ್ಚು ಎಷ್ಟು ಅಪಾಯಕಾರಿ.? ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಕೊಂದ ಯುವಕ!

ತಂದೆ -ತಾಯಿ ಸೇರಿದಂತೆ ಕುಟುಂಬಸ್ಥರ ಮೇಲೆಯೇ ಮಗ ಚಾಕುವಿನಿಂದ ದಾಳಿ ಮಾಡಿದ್ದರಿಂದ ಅಕ್ಕ- ತಂದೆ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ೧೦ ಗಂಟೆ ಸುಮಾರಿಗೆ ಆನ್‌ಲೈನ್ ಪಬ್ ಜೀ ಗೇಮ್ ವ್ಯಸನಿಯಾಗಿದ್ದ ಪಿಯುಸಿ ವಿದ್ಯಾರ್ಥಿ ಸಾಯಿ ವೆಂಕಟಮಣಿ (18) ಚಾಕುವಿನಿಂದ ದಾಳಿ ಮಾಡಿದ್ದಾನೆ. ತಾಯಿ ಸೌಜನ್ಯ (40), ಅಕ್ಕ ಪ್ರಗತಿ (19) ಮತ್ತು ತಂದೆ ವೆಂಕಟ ನಾಯ್ಡು ಅವರ ಮೇಲೆ ದಾಳಿ ಮಾಡಿದ ವೆಂಕಟಮಣಿ, … Read more

ಜೆಡಿಎಸ್ ಕಾರ್ಯಕರ್ತರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿದೆ : JDS ಕಾರ್ಯಕರ್ತರಿಗೂ ಮುಕ್ತ ಕರೆ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಜನತಾದಳದ ಕಾರ್ಯಕರ್ತರಿಗೂ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನನ್ನ ಮನೆ ಬಾಗಿಲು ನಿಮಗೂ ತೆರೆದಿದೆ. ನೀವು ನನ್ನನ್ನು ಬಳಸಿಕೊಂಡು, ಸಹಾಯ ಪಡೆಯಬಹುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ನವರಿಗೆ ಮುಕ್ತ ಕರೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ.ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ನಿಮಗೆ ಒಳ್ಳೆಯದು ಮಾಡಲು ನಾನು ಸಿದ್ಧನಾಗಿದ್ದೇ‌ನೆ. ದೇವರು ವರ, ಶಾಪ ನೀಡುವುದಿಲ್ಲ‌. … Read more