ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿ ಎಸ್ ಯಡಿಯೂರಪ್ಪ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!
ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಂಸದ ರಾಘವೇಂದ್ರ ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಕಾಂತೇಶ್ ಆಶೀರ್ವಾದ ಪಡೆದರು. … Read more