ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷವು ತೀವ್ರ ಕಳವಳಕಾರಿಯಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ʼಮಧ್ಯಪ್ರಾಚ್ಯದಾದ್ಯಂತ ಪ್ರತಿಯೊಬ್ಬ ಭಾರತೀಯ ನಾಗರಿಕನ ಸುರಕ್ಷತೆ ಮತ್ತು ಭದ್ರತೆ ನಮ್ಮ ಅತ್ಯುನ್ನತ ಆದ್ಯತೆಯಾಗಿರಬೇಕು. ನಮ್ಮ ಜನರನ್ನ ರಕ್ಷಿಸಲು ಭಾರತ ಸರ್ಕಾರವು ತಕ್ಷಣ ಮತ್ತು ಪೂರ್ವಭಾವಿ ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆʼ ಎಂದು ತಿಳಿಸಿದ್ದಾರೆ. ತೀವ್ರ ಸ್ವರೂಪ ಪಡೆಯುತ್ತಿರುವ ಸಂಘರ್ಷ! ಪರಮಾಣು ಒಪ್ಪಂದ ಮಾತುಕತೆಗೆ ಸ್ಪಂದಿಸಿದ ಕಾರಣ … Read more

ಸೇಮ್‌ ಟು ಸೇಮ್‌ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!

ಕನ್ನಡದ ಸೂಪರ್‌ಹಿಟ್‌ ಸಿನಿಮಾ ಚೆಲುವಿನ ಚಿತ್ತಾರದ ಕಥೆಯನ್ನೇ ನೆನಪಿಸುವಂಥ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.. ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಸಿನಿಮೀಯ ಶೈಲಿಯ ಲವ್ ಸ್ಟೋರಿಯೊಂದು ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯನ್ನು ಪೋಷಕರೇ ಬಲವಂತವಾಗಿ ಬೇರ್ಪಡಿಸಿದ ಘಟನೆ ವರದಿಯಾಗಿದೆ. ತಿಳವಳ್ಳಿ ಗ್ರಾಮದ ಮಣಿಕಂಠ ಮತ್ತು ಸೃಷ್ಟಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ, ಈ ಜೋಡಿ ಇತ್ತೀಚೆಗಷ್ಟೇ ಕಾನೂನುಬದ್ಧವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮದುವೆಯ ನಂತರ ಸೃಷ್ಟಿ ತನ್ನ ಪತಿ … Read more

ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ

ಉತ್ತರ ಕನ್ನಡ : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂಬ ವದಂತಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಂತಿದ್ದು, ಕೃತಕ ಅಭಾವ ಸೃಷ್ಟಿಯಾಗಿದೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ರಾತ್ರೋರಾತ್ರಿ ಗಗನಕ್ಕೇರಬಹುದು ಅಥವಾ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆ ಸಾಮಾಜಿಕ ಜಾಲತಾಣಗಳಲ್ಲಿ … Read more

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ ಎಂದು ಶೃಂಗೇರಿ ಶಾಸಕ ಶಾಸಕ ಟಿಡಿ ರಾಜೇಗೌಡ (sringeri congress mla TD Rajegowda) ಬಹಿರಂಗ ಕಾರ್ಯಕ್ರಮದಲ್ಲೇ ಗಳಗಳನೇ ಅತ್ತಿರುವ ಪ್ರಸಂಗ ನಡೆದಿದೆ. ಬಾಳೆಹೊನ್ನೂರಿನಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಿನ್ನೆ (ಮಾರ್ಚ್ 02) ಹಮ್ಮಿಕೊಂಡಿದ್ದ ಶೃಂಗೇರಿ ಕ್ಷೇತ್ರದ ರೈತರ, ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ನಡೆದ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿಡಿ ರಾಜೇಗೌಡ ಅವರು … Read more

ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಮೇಲಿನ ಆಕ್ರೋಶ ಅಥವಾ ‘ರೋಡ್ ರೇಜ್’ (Road Rage) ಪ್ರಕರಣಗಳು ದಿನೇ ದಿನೇ ಮಿತಿಮೀರುತ್ತಿವೆ. ಇತ್ತೀಚೆಗಷ್ಟೇ ಇಂದಿರಾನಗರದಲ್ಲಿ ಮದ್ಯವ್ಯಸನಿಯೊಬ್ಬ ಬಿಎಂಟಿಸಿ ಬಸ್ ಚಾಲಕನಿಗೆ ಅಡ್ಡಿಪಡಿಸಿ, ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ನಗರ ಸಂಚಾರಿ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಿ ಬಿಸಿ ಮುಟ್ಟಿಸಿದ್ದಾರೆ. ಘಟನೆಯಲ್ಲಿ ನಡೆದಿದ್ದೇನು? ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಇಂದಿರಾನಗರದ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ … Read more

Horoscope Today : 04 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ರಾಶಿಯು ಕ್ರಿಯಾತ್ಮಕತೆಯನ್ನು ಸೂಚಿಸುತ್ತದೆ. ನೀವು ಯಾವಾಗಲೂ ಬಯಸುತ್ತಿದ್ದ ಕವನ ಬರೆಯಲು ಅಥವಾ ಕಲಾಕೃತಿ ರಚಿಸಲು ಇದು ಉತ್ತಮ ಸಮಯ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ಮನೆಯಲ್ಲಿನ ಪರಿಸ್ಥಿತಿಯು ಸ್ವಲ್ಪಮಟ್ಟಗೆ ಲವಲವಿಕೆಯಿಂದಿರುತ್ತದೆ; ಹಳೆಯ ಸ್ನೇಹಿತರ ಭೇಟಿಯು ನಿಮ್ಮ ಶಾಲಾದಿನಗಳ ಸಂತಸಭರಿತ ನೆನಪುಗಳನ್ನು ಮತ್ತೆ ತರುತ್ತದೆ. ಅದನ್ನು ಸಂಪೂರ್ಣವಾಗಿ ಆನಂದಿಸಿ.ನಿಮ್ಮ ಮೇಲಾಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸುವಾಗ ಎಚ್ಚರದಿಂದಿರಿ. ಅವರಿಗೆ ನೀಡುವ ಅಗೌರವವು ನಿಮ್ಮ ಮೇಲೆ ಗಂಭೀರ ರೀತಿಯ ತೊಂದರೆಯನ್ನುಂಟುಮಾಡಬಹುದು. ನಿಮ್ಮ ಪ್ರತಿಸ್ಪರ್ಧಿಗಳು ಮತ್ತು ವಿರೋಧಿಗಳೊಂದಿಗಿನ ಭಿನ್ನಾಭಿಪ್ರಾಯಗಳು ಪ್ರಮುಖ ಸಂಘರ್ಷಕ್ಕೆ … Read more

ವಿದ್ಯುತ್ ಮೀಟರ್ನಲ್ಲಿ ಕೆಂಪು ದೀಪ ಏಕೆ ಇರುತ್ತೆ ಗೊತ್ತಾ? ಈ ರಹಸ್ಯ ಗೊತ್ತಾದ್ರೆ ಕರೆಂಟ್ ಸೇವ್ ಮಾಡಬಹುದು!

ಪ್ರತಿಯೊಂದು ಮನೆಯಲ್ಲೂ ವಿದ್ಯುತ್ ಮೀಟರ್ ಇದ್ದೆ ಇರುತ್ತೆ. ತಿಂಗಳಿಗೊಮ್ಮೆ ಲೈನ್‌ಮ್ಯಾನ್ ಬಿಲ್ ಕೊಡಲು ಬಂದಾಗ ಮಾತ್ರ ನಾವು ಅದರ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಆದರೆ, ಅದರಲ್ಲಿ ನಿರಂತರವಾಗಿ ಮಿನುಗುವ ಒಂದು ಸಣ್ಣ ‘ಕೆಂಪು ದೀಪ’ ಮನೆಯಲ್ಲಿನ ವಿದ್ಯುತ್ ಬಳಕೆಯ ಬಗ್ಗೆ ಹಲವು ರಹಸ್ಯಗಳನ್ನು ಹೇಳುತ್ತದೆ. ನಾವು ಅದನ್ನು ಸರಿಯಾಗಿ ಅರ್ಥಮಾಡಿಕೊಂಡರೆ, ನಾವು ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದು ಮಾತ್ರವಲ್ಲದೆ, ವಿದ್ಯುತ್ ಅಪಘಾತಗಳನ್ನು ಸಹ ತಪ್ಪಿಸಬಹುದಾಗಿದೆ. ಡಿಜಿಟಲ್ ಮೀಟರ್‌ನಲ್ಲಿರುವ ಈ ಕೆಂಪು ದೀಪವು ನಾವು ಎಷ್ಟು … Read more

ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್‌ಹ್ಯಾಂಡಾಗಿ ಸೆರೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎ.ಕೆ.ನಾಗೇಂದ್ರಪ್ಪ ಹಾಗೂ ಮಧ್ಯವರ್ತಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1 ಲಕ್ಷ ರೂ. ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಇಬ್ಬರೂ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ವೇಳೆ ಬಿಇಒ ಹಾಗೂ ಮಧ್ಯವರ್ತಿ ಇಬಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬರೋಬ್ಬರಿ ಒಂದು … Read more

ಅಪ್ರಾಪ್ತ ಬಾಲಕಿಯ ಹೇಳಿಕೆ ದಾಖಲು – ಮುತ್ಯಾ ಕೈಗೆ ಬೀಳುತ್ತಾ ಬೇಡಿ.? ಆರೋಪ ತಳ್ಳಿ ಹಾಕಿದ್ದ ಮುತ್ಯಾ..

ಯಾದಗಿರಿಯ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶಹಾಪುರ ಜೆಎಂಸಿ ನ್ಯಾಯಾಲಯದಲ್ಲಿ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ನ್ಯಾಯಾಧೀಶರ ಎದುರು ದಾಖಲಿಸಲಾಗಿದೆ. ಕಾನೂನು ಪ್ರಕಾರ, ಬಾಲಕಿಯ ಹೇಳಿಕೆಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ನೀಡಲಾಗುತ್ತದೆ. ಈ ಹೇಳಿಕೆ ಪ್ರಕರಣದ ಮುಂದಿನ ತನಿಖೆಯಲ್ಲಿ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಮುತ್ಯಾ ಅವರ ಮುಂದಿನ ಕಾನೂನು ಹೋರಾಟದಲ್ಲಿ ಈ ಹೇಳಿಕೆ ನಿರ್ಣಾಯಕವಾಗುವ ಸಾಧ್ಯತೆ ಇದೆ. ಇದೀಗ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೊಂದೆಡೆ ಮುತ್ಯಾ ಅವರ … Read more

ಮಗ ನಿಖಿಲ್‌ಗಾಗಿ ಪ್ರಜ್ವಲ್ ರೇವಣ್ಣನ ವಿಡಿಯೋ ರಿಲೀಸ್ ಮಾಡಿಸಿದ್ದೇ ಕುಮಾರಸ್ವಾಮಿ: ಕಾಂಗ್ರೆಸ್ ಶಾಸಕ

ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರು ಕುಮಾರಸ್ವಾಮಿ ಕಾರಣ. ಸಿಡಿ ಬಿಡಿಸಿದ್ದೆ ಕುಮಾರಸ್ವಾಮಿ. ಎಂತೆಂತೊರೊ ಜೈಲಿಂದ ಹೊರ ಬಂದಿದ್ದಾರೆ. ಮಾಜಿ ಪ್ರಧಾನಿ ಮನಸ್ಸು ಮಾಡಿದ್ರೆ ಬಿಡಿಸಬಹುದಿತ್ತು. ಷಡ್ಯಂತ್ರ ಮಾಡಿ ಪ್ರಜ್ವ‌ಲ್‌ನ ಜೈಲಿಗೆ ಹಾಕಿಸಿದ್ದಾರೆ ಅಣ್ಣನ ಮಗನ (ಪ್ರಜ್ವಲ್ ರೇವಣ್ಣ) ಬೆಳವಣಿಗೆಯನ್ನು ಸಹಿಸಿಕೊಳ್ಳದ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ, ನಮ್ಮಂತ ಬಡವರ ಮಕ್ಕಳನ್ನ ಸಹಿಸಿಕೊಳ್ಳುತ್ತಾರಾ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೇಳಿದ್ದಾರೆ. ಮಗನನ್ನು ಬೆಳೆಸಲು ಅಣ್ಣನ ಪುತ್ರನನ್ನು ಜೈಲಿಗೆ ಹಾಕಿಸಿದ್ದಾರೆ ಅಂತ ಹೇಳಿದ್ದಾರೆ ಎಂದ್ರು. ತಮ್ಮ ಮಗ … Read more