ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷವು ತೀವ್ರ ಕಳವಳಕಾರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ʼಮಧ್ಯಪ್ರಾಚ್ಯದಾದ್ಯಂತ ಪ್ರತಿಯೊಬ್ಬ ಭಾರತೀಯ ನಾಗರಿಕನ ಸುರಕ್ಷತೆ ಮತ್ತು ಭದ್ರತೆ ನಮ್ಮ ಅತ್ಯುನ್ನತ ಆದ್ಯತೆಯಾಗಿರಬೇಕು. ನಮ್ಮ ಜನರನ್ನ ರಕ್ಷಿಸಲು ಭಾರತ ಸರ್ಕಾರವು ತಕ್ಷಣ ಮತ್ತು ಪೂರ್ವಭಾವಿ ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆʼ ಎಂದು ತಿಳಿಸಿದ್ದಾರೆ. ತೀವ್ರ ಸ್ವರೂಪ ಪಡೆಯುತ್ತಿರುವ ಸಂಘರ್ಷ! ಪರಮಾಣು ಒಪ್ಪಂದ ಮಾತುಕತೆಗೆ ಸ್ಪಂದಿಸಿದ ಕಾರಣ … Read more