ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ ಹೊಸ ಆದೇಶವೊಂದು ಭಾರಿ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಶಾಲೆಗಳಲ್ಲಿ ಹಿಜಾಬ್ ನಿಷೇಧ ಆದೇಶ ರದ್ದು ಮಾಡಿ ಇದೀಗ ಸಿದ್ದರಾಮಯ್ಯ ಸರ್ಕಾರ ಹಿಬಾಜ್‌ಗೆ ಅವಕಾಶ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಮುಸ್ಲಿಮರು ಯಾರು ಹಿಬಾಜ್‌ಗ ಅವಕಾಶ ಕೇಳಿಲ್ಲ. ಆದರೆ ಹಿಂದೂಗಳ ಉರಿಸಲು ಕಾಂಗ್ರೆಸ್ ಈ ರೀತಿ ಮಾಡಿದೆ ಎಂದಿದ್ದಾರೆ. ಕಳೆದ ಮೂರು ವರ್ಷದಲ್ಲಿ ಕರ್ನಾಟಕದಲ್ಲಿ ಮೂರುಕಾಸಿನ ಕೆಲಸ … Read more

ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!

ಪತ್ನಿಯ ಮುಂದೆ ಪೋಷಕರು ಅವಮಾನ ಮಾಡಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದ ಮಗನೊಬ್ಬ ತನ್ನ ಹೆತ್ತ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ (Pestle) ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ರಂಜುದೇವಿ ಮಹತೋ (52) ಮತ್ತು ಇಂದಾರಾಮ್ ಮಹತೋ (58) ಮೃತ ದುರ್ದೈವಿಗಲಾಗಿದ್ದು, ಚಂದನ್ ಇಂದಾರಾಮ್ ಮಹತೋ (28) ಆರೋಪಿಯಾಗಿದ್ದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ರಂಜುದೇವಿ ಮತ್ತು ಇಂದಾರಾಮ್ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರಳಿದ್ದರು. ಈ ವೇಳೆ … Read more

ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?

ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ. ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹಠಾತ್ ಮರಣದ ಬಳಿಕ ಮತ್ತೆ ಹೃದಯಾಘಾತದ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಇದೇ ಸಂದರ್ಭದಲ್ಲೇ ವಾಟ್ಸಪ್ ಮತ್ತು ರೀಲ್ಸ್ ಗಳಲ್ಲಿ ಈ ಬಗ್ಗೆ ಸಾಕಷ್ಟು ವೈರಲ್ ಮಾಹಿತಿಗಳು ಹರಿದಾಡುತ್ತಿವೆ. ಆನ್‌ಲೈನ್‌ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ. ಈ ಪಟ್ಟಿಗೆ “ಬನಕೋಮಾ ಓನಾಕೋ” ಎಂಬ ಜಪಾನೀಸ್ ಹೃದಯ … Read more

ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!

ಮದುವೆ ಸಂಭ್ರಮದಲ್ಲಿದ್ದ ಮನೆಯೊಂದು ಕಣ್ಮುಚ್ಚಿ ಬಿಡುವಷ್ಟರಲ್ಲಿ ಸೂತಕದ ಮನೆಯಾಗಿ ಮಾರ್ಪಟ್ಟ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. ಮಗಳ ಮದುವೆಯನ್ನು ಅದ್ದೂರಿಯಾಗಿ ಮಾಡಬೇಕೆಂಬ ಕನಸು ಹೊತ್ತಿದ್ದ ತಂದೆಯೊಬ್ಬರು, ಮಗಳಿಗೆ ‘ಕನ್ಯಾದಾನ’ ಮಾಡುವ ಸಂದರ್ಭದಲ್ಲೇ ತೀವ್ರ ಹೃದಯಾಘಾತದಿಂದ ಮಂಟಪದಲ್ಲೇ ಪ್ರಾಣಬಿಟ್ಟಿದ್ದಾರೆ! ಘಟನೆಯ ವಿವರಗಳು: • ಘಟನೆ ನಡೆದ ಸ್ಥಳ: ಮಹಾರಾಷ್ಟ್ರದ ಸಿಂಧ್‌ಖೇಡ್ ರಾಜಾ ತಾಲ್ಲೂಕಿನ ವರ್ದಾದಿ ಗ್ರಾಮ.• ದುರ್ದೈವಿ ತಂದೆ: ಕುರುಮದಾಸ್ ಭೂತೇಕರ್.• ಶುಭ ಸಂದರ್ಭ: ಮಗಳು ನಂದಿನಿ ಹಾಗೂ ಪ್ರದೀಪ್ ನಾನೋಟೆ ಅವರ ವಿವಾಹ ಮಹೋತ್ಸವ. ಗುರುವಾರ … Read more

ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ

ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 7 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಮೃತರೆಲ್ಲರೂ ಒಂದೇ ಕುಟುಂಬದವರು ಎಂಬುದು ಗೊತ್ತಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಮಾಹಿತಿ ಇದೆ. ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಟ್ಯಾಂಕರ್ ಗುದ್ದಿದೆ ಎನ್ನಲಾಗಿದ್ದು, ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ. ಹುಲಿಗೆಮ್ಮ … Read more

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!

ದೇಶಾದ್ಯಂತ ಇಂಧನ ದರಗಳು ಮತ್ತೆ ಗಗನಕ್ಕೇರುತ್ತಿರುವುದನ್ನು ಖಂಡಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಆಡಳಿತ ವೈಖರಿಯೇ ಈ ಬೆಲೆ ಏರಿಕೆಗೆ ನೇರ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಪ್ರಧಾನಿ ನರೇಂದ್ರ ಮೋದಿ ಅವರು ಜನಸಾಮಾನ್ಯರಿಗೆ ನೀಡಿದ ‘ಕೊಡುಗೆ’ ಎಂದು ಲೇವಡಿ ಮಾಡಿದರು. ಬೆಲೆ ಏರಿಕೆಯು ‘ಮೋದಿ ಕೊಡುಗೆ’ ಕೇಂದ್ರ ಸರ್ಕಾರವು ಸಾಮಾನ್ಯ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ ಡಿ.ಕೆ. ಶಿವಕುಮಾರ್, ಇಂಧನ … Read more

13 ವರ್ಷಗಳ ನಂತರ ಪತ್ತೆಯಾದ ‘ಅಪಹರಣಕ್ಕೊಳಗಾಗಿದ್ದ’ ಬಾಲಕಿ: ಈಗ ನಾಲ್ಕು ಮಕ್ಕಳ ತಾಯಿ! ಸತ್ಯ ತಿಳಿದು ಕುಟುಂಬಸ್ಥರು ಕಂಗಾಲು!

ಹದಿಮೂರು ವರ್ಷಗಳ ಹಿಂದೆ ಶಾಲೆಯಿಂದ ಮನೆಗೆ ಬರುವ ದಾರಿಯಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಈಗ ಪತ್ತೆಯಾಗಿದ್ದಾಳೆ. ಆದರೆ ಪೊಲೀಸರು ಆಕೆಯನ್ನು ಹುಡುಕಿದಾಗ ತಿಳಿದ ಸತ್ಯ ಮಾತ್ರ ಆಕೆಯ ಕುಟುಂಬದವರು ಮತ್ತು ಗ್ರಾಮಸ್ಥರನ್ನು ದೌರ್ಬಲ್ಯಕ್ಕೀಡು ಮಾಡಿದೆ. ಹೌದು, ನಾಪತ್ತೆಯಾಗಿದ್ದ ಆ ಬಾಲಕಿ ಈಗ ನಾಲ್ಕು ಮಕ್ಕಳ ತಾಯಿ! ಏನಿದು ಘಟನೆ? ಬಿಹಾರದ ಮುಜಫರ್‌ಪುರ ಜಿಲ್ಲೆಯ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ದೇವ್‌ಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೇ 11, 2013ರಂದು ಗುಲ್ನಾಜ್ ಖಾತೂನ್ ಎಂಬ ಅಪ್ರಾಪ್ತ … Read more

ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!

ಸಿದ್ದಾಪುರ: ಕರ್ತವ್ಯದ ಹಾದಿಯೇ ಸಾವಿನ ಹಾದಿಯಾದ ಕರುಣಾಜನಕ ಘಟನೆಯೊಂದು ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಜನಗಣತಿ ಕಾರ್ಯದ ನಿಮಿತ್ತ ಮಾಹಿತಿ ನೀಡಲು ಸ್ಕೂಟರ್ ಮೇಲೆ ತೆರಳುತ್ತಿದ್ದ ಶಿಕ್ಷಕಿಯೊಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ನಡೆದಿದ್ದೇನು? ಪಟ್ಟಣದ ಹೊಸೂರಿನ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಪೂರ್ಣಿಮಾ ಭಟ್ (46) ಅವರು ಇಂದು ಸ್ಕೂಟರ್ ಮೇಲೆ ತೆರಳುತ್ತಿದ್ದರು. ಈ ವೇಳೆ ಶಿರಸಿ ಕಡೆಯಿಂದ ಸಿದ್ದಾಪುರಕ್ಕೆ ಅತಿ ವೇಗವಾಗಿ ಬಂದ ಕಟ್ಟಿಗೆ ತುಂಬಿದ ಟ್ರ್ಯಾಕ್ಟರ್, ಇವರ … Read more

ನಿರೀಕ್ಷೆಯಂತೆಯೇ ವಿವಿಧ ರಾಜ್ಯಗಳ ಚುನಾವಣೆ ಮುಗಿದ ಮೇಲೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ: ಕೇಂದ್ರದ ವಿರುದ್ಧ ಸಿಎಂ ಕಿಡಿ

ಕೇಂದ್ರ ಸರ್ಕಾರ (Central Government) ಪೆಟ್ರೋಲ್ ಡೀಸೆಲ್ (Fuel) ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ (State Government) ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಲೆ ಏರಿಕೆ ನಿರ್ಣಯ ಹಿಂಪಡೆಯಲು ಕೇಂದ್ರಕ್ಕೆ ಒತ್ತಾಯ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು.‌ ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ … Read more

ದಕ್ಷ ಅಧಿಕಾರಿ ಇನ್ಸ್‌ಪೆಕ್ಟರ್ ಶಿವಪ್ಪ ನಾಯಕರ್ ಹೃದಯಾಘಾತದಿಂದ ನಿಧನ; ಪೊಲೀಸ್ ಇಲಾಖೆಯಲ್ಲಿ ಶೋಕ

ರಾಜ್ಯ ಪೊಲೀಸ್ ಇಲಾಖೆಯ ದಕ್ಷ ಅಧಿಕಾರಿಯೊಬ್ಬರನ್ನು ಬೆಂಗಳೂರು ಕಳೆದುಕೊಂಡಿದೆ. ಸಿಟಿ ಸ್ಪೆಷಲ್ ಬ್ರಾಂಚ್‌ನಲ್ಲಿ (CSB) ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ಪ ನಾಯಕರ್ (56) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದ ಅವರು, ಇಲಾಖೆಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ಘಟನೆಯ ವಿವರ: ಶಿವಪ್ಪ ನಾಯಕರ್ ಅವರಿಗೆ ನಿನ್ನೆ ರಾತ್ರಿ ದಿಢೀರ್ ಎಂದು ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ನಗರದ ಪ್ರತಿಷ್ಠಿತ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ … Read more