Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್

ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಪ್ರಕಾಶ್ ರಾಜ್ ಮಾತನಾಡುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಪ್ರಕಾಶ್ ರಾಜ್ ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವಿಡಂಬನಾತ್ಮಕವಾಗಿ ಟೀಕಿಸಲು ರಾಮಾಯಣವನ್ನು ಉದಾಹರಣೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹಲವರು ಟೀಕಿಸುತ್ತಿದ್ದಾರೆ. ಪ್ರಕಾಶ್ ರಾಜ್ ತಮ್ಮ ಭಾಷಣದಲ್ಲಿ ‘ಶ್ರೀ ರಾಮಚಂದ್ರ ಮತ್ತು ಲಕ್ಷ್ಮಣರು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರು. ಅವರು ದಕ್ಷಿಣ ಭಾರತದ ಒಂದು ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು ತಿಂದರು. ಆ ಸಮಯದಲ್ಲಿ ಅವರು … Read more

ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?

ಮಹಿಳೆಯೊಬ್ಬರ (Woman) ಅಸ್ಥಿಪಂಜರ (Skeleton) ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು ಪತ್ತೆ ಆಗಿವೆ. ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಡೆದಿದ್ದೇನು? ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ … Read more

ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್‌- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ (DG&IGP) ಡಾ. ಎಂ.ಎ. ಸಲೀಂ (IPS) ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಸಿ ಕರ್ನಾಟಕ ಸರ್ಕಾರವು ಇಂದು ಮಹತ್ವದ ಆದೇಶ ಹೊರಡಿಸಿದೆ. ಸೇವಾ ಅವಧಿ ವಿಸ್ತರಣೆ : ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರು ಆಗಸ್ಟ್ 29, 2027ರವರೆಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ರಾಜ್ಯ ಪೊಲೀಸ್ ಪಡೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ. ಆದೇಶದ ಹಿನ್ನೆಲೆ … Read more

Arecanut Price : ಇಂದಿನ ಅಡಿಕೆ ಧಾರಣೆ – 17 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?

ಇಂದಿನ ಅಡಿಕೆ ಬೆಲೆ – ಕರ್ನಾಟಕ ಮಾರುಕಟ್ಟೆ ಅಡಿಕೆ ವಿಧ ಗರಿಷ್ಟ ಬೆಲೆ ಮಾಡೆಲ್ ಬೆಲೆ ಹೊನ್ನಳ್ಳಿ ಇಡಿ ₹24,469 ₹24,012 ಹೊನ್ನಾವರ ಹಣ್ಣು ₹38,000 ₹37,000 ಯಲ್ಲಾಪುರ ತಟ್ಟಿಬೆಟ್ಟೆ ₹51,165 ₹46,519 ಶಿರಸಿ ಬಿಳೆಗೋಟು ₹39,869 ₹34,454 ಶಿರಸಿ ಚಾಲಿ ₹49,099 ₹47,639 ಶಿವಮೊಗ್ಗ ಸರಕು ₹96,999 ₹92,996 ಹೊಳಲ್ಕೆರೆ ರಾಶಿ ₹55,600 ₹54,127 ಹಿರಿಯೂರು ಬೇರೆ ₹21,000 ₹20,500 ಪುತ್ತೂರು ಹೊಸ ವೆರೈಟಿ ₹48,500 ₹39,000 ಬೆಳ್ತಂಗಡಿ ಹೊಸ ವೆರೈಟಿ ₹48,500 ₹30,000 ಚನ್ನಗಿರಿ … Read more

ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್‌ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್‌ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ. ಗುರುವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ, ಇಲ್ಲಿ ಚರ್ಚೆ ನಡೆಯುತ್ತಿರುವುದು ಮೀಸಲಾತಿಯ ಬಗ್ಗೆ ಅಲ್ಲ, ಬದಲಾಗಿ ಈ ಮಸೂದೆಯಲ್ಲಿ ಅಡಗಿರುವ ರಾಜಕೀಯ ದುರುದ್ದೇಶದ … Read more

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್

ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ಪುತ್ರನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪುತ್ರ ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ … Read more

ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ.? ವೈರಲ್ ಪೋಸ್ಟ್ ಇಲ್ಲಿದೆ…

ಓದೋದ್ರಲ್ಲಿ ಎಲ್ಲಾ ಮಕ್ಕಳು ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು ಸಹಜ. ಹೌದು, ಮಹಾತ್ಮ ಗಾಂಧೀಜಿಯವರು ಹತ್ತನೇ ತರಗತಿ ಪರೀಕ್ಷೆಯಲ್ಲಿ ಒಟ್ಟು 247 … Read more

Horoscope Today : 17 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಸ್ವಲ್ಪ ಸಮಯದಲ್ಲಿ ಹೆಚ್ಚು ಪ್ರಯೋಜನವನ್ನು ಪಡೆಯುವ ಸಲುವಾಗಿ ದುರಾಸೆಯನ್ನು ಹೊಂದದಂತೆ ಗಣೇಶ ನಿಮಗೆ ಸಲಹೆ ನೀಡುತ್ತಾರೆ ಇಲ್ಲವಾದಲ್ಲಿ ಕೇವಲ ಸೂಪ್‌ ಮಾತ್ರವೇ ಪಡೆಯಬೇಕಾಗುತ್ತದೆ. ಎಲ್ಲಾ ರೀತಿಯ ಅನೈತಿಕ ಚಟುವಟಿಕೆಗಳಿಂದ ದೂರವಿರಿ. ಮತ್ತು ಆರ್ಥಿಕ ವ್ಯವಹಾರಗಳನ್ನು ನಡೆಸುವಾಗ ಎಚ್ಚರಿಕೆಯಿಂದಿರಿ. ಇಂದು ನಿಮಗೆ ಏಕಾಗ್ರತೆಯ ಕೊರತೆ ಉಂಟಾಗಬಹುದು. ಪರಿಣಾಮವಾಗಿ, ನೀವು ಇಂದು ಅತ್ಯುತ್ತಮ ಕಾರ್ಯವನ್ನು ನೀಡಲು ಅಸಮರ್ಥರಾಗಬಹುದು. ದಿನದ ಪೂರ್ವಾರ್ಧದಲ್ಲಿ ನಿಮಗೆ ಅಪಘಾತದ ಸಂಭಾವ್ಯತೆಯಿದೆ. ಎಚ್ಚರಿಕೆಯಿಂದ ಚಾಲನೆ ಮಾಡಿ. ಸಂಜೆಯ ವೇಳೆಗೆ ದೈಹಿಕವಾಗಿ ನೀವು ಹೆಚ್ಚು ಕ್ರಿಯಾಶೀರಾಗಿರುತ್ತೀರಿ. … Read more

ನಾನು ಯಾರಿಗೂ ನೋವುಂಟು ಮಾಡಿಲ್ಲ, ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ : ಜಡ್ಜ್ ಎದುರು ವಿನಯ್ ಕುಲಕರ್ಣಿ ಹೇಳಿಕೆ!

ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು. ಇದೇ ವೇಳೆ A15 ಆರೋಪಿ ಶಾಸಕ ವಿನಯ್ ಕುಲಕರ್ಣಿ ನಾನು 27 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ನಾನು … Read more

ನಿಮ್ಮ ಬ್ಯಾಂಕ್ ಖಾತೆಗೆ ಪದೇ ಪದೇ ಹಣ ಹಾಕ್ತಿದ್ದೀರಾ ? ‘IT’ ನೋಟಿಸ್ ಬರಬಹುದು ಹುಷಾರ್.!

ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ನಗದು ಜಮೆ ಮಾಡುವ ವ್ಯವಹಾರಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಹದ್ದಿನ ಕಣ್ಣಿಟ್ಟಿದ್ದು, ನಿಯಮ ಮೀರಿ ಹಣ ಜಮೆ ಮಾಡಿದರೆ ಐಟಿ ನೋಟಿಸ್ ಬರುವ ಸಾಧ್ಯತೆಯಿದೆ. ಒಂದು ಹಣಕಾಸು ವರ್ಷದಲ್ಲಿ ಉಳಿತಾಯ ಖಾತೆಗೆ 10 ಲಕ್ಷ ರೂಪಾಯಿಗಿಂತ ಹೆಚ್ಚಿನ ನಗದು ಜಮೆ ಮಾಡಿದರೆ ಬ್ಯಾಂಕುಗಳು ಆ ಮಾಹಿತಿಯನ್ನು ಕಡ್ಡಾಯವಾಗಿ ಆದಾಯ ತೆರಿಗೆ ಇಲಾಖೆಗೆ ವರದಿ ಮಾಡುತ್ತವೆ. ದೊಡ್ಡ ಮೊತ್ತದ ನಗದು ವ್ಯವಹಾರ ಮಾಡುವಾಗ ಆದಾಯದ ಮೂಲಕ್ಕೆ ಸರಿಯಾದ ದಾಖಲೆಗಳಿಲ್ಲದಿದ್ದರೆ ಭಾರಿ ದಂಡ ತೆರಬೇಕಾಗಬಹುದು … Read more