ಭಾಷೆ ಯಾವುದಾದರೇನು, ಮಾಹಿತಿ ಮುಖ್ಯ: ಉರ್ದು ವಿವಾದಕ್ಕೆ ಆರೋಗ್ಯ ಸಚಿವರ ಖಡಕ್ ಪ್ರತ್ಯುತ್ತರ!

ರಾಜ್ಯದಲ್ಲಿ ಆಡಳಿತ ಭಾಷೆ ಕನ್ನಡಕ್ಕೆ ಮೊದಲ ಆದ್ಯತೆ ಎಂಬ ನಿಯಮವಿದ್ದರೂ, ಆರೋಗ್ಯ ಇಲಾಖೆಯು ಸರ್ಕಾರಿ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲಿ ಪ್ರಕಟಿಸಿರುವುದು ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ಮತ್ತು ಹೊಸ 108 ಆಂಬುಲೆನ್ಸ್ ಸೇವೆಗಳ ಲೋಕಾರ್ಪಣೆಗಾಗಿ ಆರೋಗ್ಯ ಇಲಾಖೆ ಇಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಅಧಿಕೃತ ಆಹ್ವಾನ ಪತ್ರಿಕೆಯನ್ನು ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿ ಕನ್ನಡ ಮತ್ತು ಇಂಗ್ಲಿಷ್ ಜೊತೆಗೆ ಉರ್ದು ಭಾಷೆಯಲ್ಲೂ ಪ್ರಕಟಿಸಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು … Read more

ಯಾರೀ ಮಲ್ಲಿಕಾರ್ಜುನ ಮುತ್ಯಾ.? ಬಾಲಕಿ ಜೊತೆ ಮಲ್ಲಿಕಾರ್ಜುನ ಮುತ್ಯಾ ವರ್ತನೆಗೆ ಭಾರೀ ಟೀಕೆ

ಯಾದಗಿರಿ : ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿ ಇರುವ ಮಲ್ಲಿಕಾರ್ಜುನ ಮುತ್ಯಾ (Mallikarjun mutya), ಈ ಬಾರಿ ಕೆಟ್ಟ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಲ್ಲಿಕಾರ್ಜುನ ಮುತ್ಯಾ ನಡೆಗೆ ನೆಟ್ಟಿಗರು ಕಿಡಿ ಕಾರುತ್ತಿದ್ದಾರೆ. ಇನ್ ಸ್ಟಾಗ್ರಾಂ ಹಾಗೂ ಫೇಸ್ ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಶಹಾಪುರ ತಾಲ್ಲೂಕಿನ ರೋಜಾ ಮಹಲ್ ಗ್ರಾಮದ ಮಲ್ಲಿಕಾರ್ಜುನ … Read more

ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಕೆ: ರೂಪೇಶ್‌ ರಾಜಣ್ಣ ಕೆಂಡಾಮಂಡಲ, ಉಗ್ರ ಹೋರಾಟದ ಎಚ್ಚರಿಕೆ!

ಆರೋಗ್ಯ ಇಲಾಖೆಯ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಡೆಗೆ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಹಾಗೂ ವಿವಿಧ ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇತ್ತೀಚೆಗೆ ಆಯೋಜಿಸಿದ್ದ ಅಧಿಕೃತ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿಯೊಂದಿಗೆ ಉರ್ದು ಭಾಷೆಯನ್ನೂ ಬಳಸಿರುವುದು ಈಗ ರಾಜ್ಯಾದ್ಯಂತ ಭಾರಿ ಚರ್ಚೆ ಮತ್ತು ವಿವಾದಕ್ಕೆ ಈಡುಮಾಡಿದೆ. … Read more

ಗಣಿ ಅಧಿಕಾರಿ ಮೊಹಂತಿ ಮನೆಯಲ್ಲಿ ನೋಟುಗಳ ರಾಶಿ, 4 ಕೋಟಿ ಪತ್ತೆ; ಮುಂದುವರಿದ ಎಣಿಕೆ

ಕಲ್ಲಿದ್ದಲು ವ್ಯವಹಾರಕ್ಕೆ ಸಂಬಂಧಿಸಿದ ಉದ್ಯಮಿ ಬಳಿ 30 ಸಾವಿರ ರೂ. ಲಂಚ ಪಡೆದ ಆರೋಪದ ಮೇಲೆ ಓಡಿಶಾಸ ಕಟಕ್‌ನ ಗಣಿ ಉಪ ನಿರ್ದೇಶಕ ದೇಬಬ್ರತ ಮೊಹಂತಿ (Debabrata Mohanty) ಎಂಬ ಅಧಿಕಾರಿಯನ್ನ ಬಂಧಿಸಲಾಗಿತ್ತು. ಬಂಧನದ ಬಳಿಕ ಅಧಿಕಾರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ಅಧಿಕಾರಿಗಳು (Odisha Vigilance officials) ದಾಳಿ ನಡೆಸಿದ್ದರು. ಮೊಹಂತಿ ವಾಸವಿದ್ದ ಒಡಿಶಾ ವಿಜಿಲೆನ್ಸ್ ಫ್ಲಾಟ್, ಭದ್ರಕ್‌ನ ಮಠಸಾಹಿಯಲ್ಲಿರುವ ಪೋಷಕರ ಮನೆ ಮತ್ತು ಕಟಕ್‌ನಲ್ಲಿರುವ ಆಫಿಸ್‌ನ ಕೋಣೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. … Read more

ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ

ಅವರು ವಿದ್ಯಾವಂತರು. ತುರುವೇಕೆರೆ ಬಿಇಒ ಕಚೇರಿಯ ಎಫ್ಡಿಎ (FDA) ಅಧಿಕಾರಿ. ನಿವೃತ್ತಿಗೆ ಇನ್ನು ಎರಡು ವರ್ಷ ಬಾಕಿ ಇತ್ತು. ಎಲ್ಲರ ಜೊತೆ ಖುಷಿ ಖುಷಿಯಾಗಿದ್ದು, ಅವರ ಆರೋಗ್ಯ ಸಹ ಚೆನ್ನಾಗಿಯೇ ಇತ್ತು. ಆದರೆ ಅದೊಂದು ದಿನ ರಾತ್ರಿ ಮಲಗಿದ ಅವರು ಮತ್ತೆ ಮೇಲೇಳಲೇ ಇಲ್ಲ. ಜೊತೆಗಿದ್ದ ಸಹೋದರಿ ಮತ್ತು ಸಾಕು ಮಗ ಹೃದಯಾಘಾತದಿಂದ ಸಾವನಪ್ಪಿದ್ದಾರೆಂದು ಕಣ್ಣೀರು ಹಾಕಿದ್ದರು. ಇಬ್ಬರ ಮಾತನ್ನು ನಂಬಿದ ಇಡಿ ಊರೇ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿತ್ತು. ಇನ್ನೇನು ಮೃತದೇಹ ಮಣ್ಣಿ ಗಿಡುವ ಸಮಯ, … Read more

‘ನೀನು ಯಾವ ಕಾರಣಕ್ಕೂ ತಾಯಿ ಆಗಬಾರದು’: ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಿದ ಯುವಕ

ಹೆಣ್ಣು ಮತ್ತು ಗಂಡಿನ ಸಂಬಂಧ ದೈಹಿಕ ಸಂಬಂಧದಲ್ಲಿ ಮುಗಿಯುದಾದರೆ, ಆ ಸಂಬಂಧಗಳಿಗೆ ಬೆಲೆಯೇ ಇರುವುದಿಲ್ಲ. ದೆಹಲಿ, ಬೆಂಗಳೂರುನಂತಹ ಮಹಾನಗರಗಳಲ್ಲಿ ಯುವಕ-ಯುವತಿಯರು ಮನಸ್ಸಿನ ಸಂಬಂಧಕ್ಕಿಂತ ದೈಹಿಕ ಸಂಬಂಧಕ್ಕೆ ಬೆಲೆ ನೀಡುತ್ತಾರೆ ಎಂಬುದನ್ನು ಅನೇಕ ಘಟನೆಗಳು ವಿವರಿಸಿದೆ. ಅದಕ್ಕೆ ಸಾಕ್ಷಿ ಕೂಡ ಇದೆ. ಲಿವ್ ಇನ್ ರಿಲೇಶನ್ಶಿಪ್ ಮೂಲಕ ಗೆಳತನ ಬೆಳಸಿಕೊಂಡು ದೈಹಿಕ ಸಂಪರ್ಕದ ನಂತರ ಇಬ್ಬರ ನಡುವೆಯೂ ಹೊಂದಾಣಿಕೆಯೇ ಇರುವುದಿಲ್ಲ. ಕೊನೆಗೆ ಒಬ್ಬರ ಮೇಲೆ ಇನ್ನೊಬ್ಬ ದೂರಿಕೊಂಡ ಸಂದೇಹ ಪಡುತ್ತ, ಅಂತಿಮವಾಗಿ ಕೊಲೆಯಲ್ಲಿ ಅಂತ್ಯವಾಗುತ್ತದೆ. ಇದೀಗ ಇಂತಹದೇ ಘಟನೆಯೊಂದು … Read more

ಇದ್ದಕ್ಕಿದ್ದಂತೆ ಎಡಗೈ ನೋವಾಗ್ತಿದ್ಯಾ? ನಿರ್ಲಕ್ಷಿಸಿದರೆ ಜೀವನವೇ ಅಂತ್ಯ ಆಗಬಹುದು ಹುಷಾರ್!

ದೇಹದಲ್ಲಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಾಗುತ್ತಲೇ ಇರುತ್ತದೆ. ಇವುಗಳ ಲಕ್ಷಣಗಳು ಮತ್ತು ಇವುಗಳ ಸೂಚನೆಯನ್ನು ಮೊದಲೇ ಅರ್ಥ ಮಾಡಿಕೊಂಡರೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಪಡೆದು, ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು. ಕೆಲವುಆರೋಗ್ಯಸಮಸ್ಯೆಗಳಿಗೆ ನಿರ್ದಿಷ್ಟ ಲಕ್ಷಣಗಳಿವೆ. ಅವುಗಳಲ್ಲಿಎಡಗೈನೋವು ಸಹ ಒಂದು.ಇದುಹೃದಯಾಘಾತದ ಲಕ್ಷಣವಾಗಿದೆ. ಯಾವಾಗಲೂ ಇದು ಹೃದಯಾಘಾತಕ್ಕೂ ಮುನ್ನಕಾಣಿಸಿಕೊಳ್ಳುವಲಕ್ಷಣಗಳಲ್ಲಿಒಂದಾಗಿದೆ. ಅಷ್ಟಕ್ಕೂ ಇದು ಹಾರ್ಟ್ ಅಟ್ಯಾಕ್ನಿಂದಲೇ ಉಂಟಾಗುತ್ತಾ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುವುದರ ಬಗ್ಗೆ ಹೃದ್ರೋಗತಜ್ಞರುಈ ಕೆಳಗೆ ಸ್ಪಷ್ಟತೆ ನೀಡಿದ್ದಾರೆ ನೋಡಿ. ಎಡಗೈಯಲ್ಲಿ ನೋವು ಯಾವಾಗಲೂ ಹೃದಯಾಘಾತದ ಸೂಚನೆಯೇ ಅಲ್ಲ. … Read more

ದಿನ ಭವಿಷ್ಯ : 25 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.?

ಮೇಷ ರಾಶಿ :- ಇಂದು ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಕೆಲಸದ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ಬರುವ ಸಾಧ್ಯತೆ ಇದೆ. ಹಿರಿಯರ ಸಲಹೆ ಪಾಲಿಸಿದರೆ ಲಾಭವಾಗುತ್ತದೆ. ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದವರ ಜೊತೆ ಸಮಯ ಕಳೆಯುವುದು ಮನಸ್ಸಿಗೆ ಸಂತೋಷ ನೀಡುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ, ವಿಶೇಷವಾಗಿ ತಲೆನೋವು ಕಾಡಬಹುದು. ಹಳೆಯ ಸ್ನೇಹಿತರಿಂದ ಶುಭ ಸುದ್ದಿ ಸಿಗಬಹುದು. ಧಾರ್ಮಿಕ ಚಿಂತನೆ ಮನಃಶಾಂತಿ ತರಲಿದೆ. ಪ್ರಯಾಣ ಯೋಗ ಸಾಮಾನ್ಯವಾಗಿದೆ. ವೃಷಭ ರಾಶಿ :- ಇಂದು ಸಹನಶೀಲತೆ ನಿಮ್ಮ … Read more

Horoscope Today : 25 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಬಗ್ಗೆಯೇ ಹೆಚ್ಚು ಕಾಳಜಿವಹಿಸುವ ಬದಲು ಇತರರ ಬಗ್ಗೆ ಆಲೋಚಿಸುವಂತೆ ಗಣೇಶ ನಿಮಗೆ ಒತ್ತಾಯಿಸುತ್ತಾರೆ. ನಿಮ್ಮ ಗೃಹಸಂಬಂಧಿ ಕರ್ತವ್ಯಗಳನ್ನು ಪೂರ್ತಿಮಾಡುವಾಗ ಜಾಣ್ಮೆಯಿಂದಿರಿ ಮತ್ತು ರಚನಾತ್ಮಕವಾಗಿರಿ. ಇತರರೊಂದಿಗೆ ಸಭ್ಯತೆಯಿಂದ ವರ್ತಿಸಿ. ಭಿನ್ನಾಭಿಪ್ರಾಯ ಮತ್ತು ವಿವಾದಗಳಿಗೆ ಮಹತ್ವ ನೀಡಬೇಡಿ. ಸಮಯಕ್ಕೆ ಸರಿಯಾದ ಆಹಾರ ಸೇವನೆಯು ಕಷ್ಟಕರವಾಗಬಹುದು. ನಿಮ್ಮ ಖರ್ಚುವೆಚ್ಚಗಳು ನಿಮ್ಮ ಬಜೆಟ್‌ನ ಮಿತಿಯೊಳಗೆ ಇರುವಂತೆ ನೋಡಿಕೊಳ್ಳಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಹಣಕಾಸಿನ ಎಲ್ಲಾ ವ್ಯವಹಾರಗಳಲ್ಲೂ ಕಣ್ಣಿಟ್ಟಿರಿ. ವೃಷಭ :- ವಿಸ್ತೃತ ಯೋಜನೆಗಳನ್ನು ರೂಪಿಸಲು ಹಣಕಾಸು ಜವಾಬ್ಧಾರಿ ಮತ್ತು … Read more

ವಯಸ್ಸಿಗೆ ಅನುಗುಣವಾಗಿ ನೀವು ಪ್ರತಿದಿನ ಎಷ್ಟು ಗಂಟೆ ನಡೆಯಬೇಕು.? ಸಂಪೂರ್ಣ ಮಾಹಿತಿ

”ನಡಿಗೆಯೇ ಅತ್ಯುತ್ತಮ ಮದ್ದು’ ಎಂಬ ಮಾತು ಎಲ್ಲರಿಗೂ ತಿಳಿದಿದೆ. ಆದರೆ ಕೇವಲ ಅಡ್ಡಾಡುವುದರಿಂದ ಮಾತ್ರ ಪ್ರಯೋಜನವಿಲ್ಲ; ನಮ್ಮ ವಯಸ್ಸು ಮತ್ತು ದೇಹದ ಸ್ಥಿತಿಗೆ ಅನುಗುಣವಾಗಿ ಎಷ್ಟು ಸಮಯ ಅಥವಾ ಎಷ್ಟು ಹೆಜ್ಜೆ ನಡೆಯಬೇಕು ಎಂಬುದು ಅತ್ಯಂತ ಮುಖ್ಯ. ಇತ್ತೀಚಿನ ಸಂಶೋಧನೆಗಳ ಪ್ರಕಾರ, ವಯಸ್ಕರು ದಿನಕ್ಕೆ 8,000 ರಿಂದ 10,000 ಹೆಜ್ಜೆಗಳನ್ನು ಗುರಿಯಾಗಿಟ್ಟುಕೊಳ್ಳುವುದು ಸೂಕ್ತವಾದರೂ, ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಈ ಲೆಕ್ಕಾಚಾರ ಬದಲಾಗುತ್ತದೆ. ವಿಶೇಷವಾಗಿ 60 ವರ್ಷ ಮೇಲ್ಪಟ್ಟವರು ದಿನಕ್ಕೆ ಕನಿಷ್ಠ 7,000 ಹೆಜ್ಜೆ ನಡೆದರೆ ಅಕಾಲಿಕ … Read more