ಗೆದ್ದ ಶಾಸಕಿಯನ್ನು ಬೇಡ ಬೇಡ ಎಂದರೂ ಬಿಡದೆ ತಬ್ಬಿ ಮುದ್ದಾಡಲು ಯತ್ನಿಸಿದ ಕಾಂಗ್ರೆಸ್ ನಾಯಕ

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಮರಳಿದೆ. ಸರ್ಕಾರ ರಚನೆ, ಮುಖ್ಯಮಂತ್ರಿ ಯಾರಾಗಬೇಕು ಅನ್ನೋ ಚರ್ಚೆಗಳು, ಸ್ಪರ್ಧಗಳು ತೀವ್ರಗೊಳ್ಳುತ್ತಿದೆ. ಇದರ ನಡುವೆ ಕೇರಳ ಕಾಂಗ್ರೆಸ್ ಮುಖಂಡನ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಮುಖ್ಯ ಕಚೇರಿಗೆ ಆಗಮಿಸಿದ ಮಹಿಳಾ ಶಾಸಕಿಯನ್ನು ತಬ್ಬಿಕೊಳ್ಳಲು ಯತ್ನಿಸಿದ ಕಾಂಗ್ರೆಸ್ ಮುಖಂಡನ ವಿಡಿಯೋ ಭಾರಿ ವೈರಲ್ ಆಗಿದೆ. ಬೇಡ ಬೇಡ ಎಂದು ಕೈಯಿಂದ ಕಾಂಗ್ರೆಸ್ ಮುಖಂಡನ ದೂರ ತಳ್ಳಿದರೂ ಸಿನಿಮಾ ಶೈಲಿಯಲ್ಲಿ ರೊಮ್ಯಾಂಟಿಕ್ ಆಗಿ … Read more

ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ

ಜನರು ಕಷ್ಟ ಅಂತ ತಮ್ಮ ಬೆಲೆಬಾಳುವ ಚಿನ್ನಾಭರಣವನ್ನು (Gold Jewellery)ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಶಾಪ್ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ ಈಗ ಅಂಗಡಿ ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದಾನೆ. ಮುಖ್ಯಾಂಶಗಳು • ಕಡಿಮೆ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಮೋಸ• ತನ್ನ ಶಾಪ್ನಲ್ಲೇ ಚಿನ್ನ ಅಡವಿರಿಸಿ ಮೋಸ• ಶಾಪ್ ಬಂದ್ ಮಾಡಿ ವ್ಯಕ್ತಿ ಪರಾರಿ ವಂಚನೆಯ ಜಾಲ ಹೇಗಿತ್ತು ಗೊತ್ತಾ? ರಾಘವೇಂದ್ರ ಜ್ಯುವಲರಿ ಶಾಪ್ ಮಾಲೀಕ … Read more

ಫ್ರಿಡ್ಜ್‌ನಲ್ಲಿ ಒಂದು ಬಟ್ಟಲು ಉಪ್ಪನ್ನ ಯಾಕಿಡಬೇಕು.? ಹಿರಿಯರು ಹೇಳಿದ ಈ ಟ್ರಿಕ್ ಸಾವಿರಾರು ರೂಪಾಯಿ ಉಳಿಸುತ್ತೆ!

ನಮ್ಮ ಮನೆಯ ಫ್ರಿಡ್ಜ್‌ನಲ್ಲಿ ದಿನವೂ ಹಾಲು, ತರಕಾರಿ, ಹಣ್ಣುಗಳನ್ನು ಇಡುತ್ತೇವೆ. ಆದರೆ ಎಂದಾದರೂ ಒಂದು ಬಟ್ಟಲು ‘ಉಪ್ಪನ್ನು’ ಫ್ರಿಡ್ಜ್‌ ಒಳಗಿಟ್ಟಿದ್ದೀರಾ? ಕೇಳಲು ವಿಚಿತ್ರ ಎನಿಸಿದರೂ, ಹಿರಿಯರು ಪಾಲಿಸುತ್ತಿದ್ದ ಈ ಒಂದು ಪುಟ್ಟ ಟ್ರಿಕ್ಸ್ ಅಚ್ಚರಿಯ ಫಲಿತಾಂಶ ನೀಡುತ್ತದೆ! ನಮ್ಮ ದೈನಂದಿನ ಜೀವನದಲ್ಲಿ ಫ್ರಿಡ್ಜ್ ಬಳಕೆ ತುಂಬಾ ಸಾಮಾನ್ಯ. ಅದರಲ್ಲೂ ಬೇಸಿಗೆಯಲ್ಲಿ ಹಾಲು, ತರಕಾರಿ ಮತ್ತು ಉಳಿದ ಆಹಾರ ಪದಾರ್ಥಗಳು ಹಾಳಾಗದಂತೆ ಕಾಪಾಡಲು ಇದು ಅತಿ ಮುಖ್ಯ. ಈ ಕೆಳಗಿನ ಒಂದು ಸಿಂಪಲ್ ‘ಹ್ಯಾಕ್’ ನಿಮ್ಮ ಫ್ರಿಡ್ಜ್ ಅನ್ನು … Read more

ಹೆಂಡತಿಯನ್ನು ಮನೆಗೆ ಕಳಿಸಿ ಅಂದಿದ್ದಕ್ಕೆ ಪೆಟ್ರೋಲ್‌ ಸುರಿದು ಬೆಂಕಿ – ಚಿಕಿತ್ಸೆ ಫಲಿಸದೆ ಸಾವು!

ಗಂಡನ ಮನೆಗೆ ಪತ್ನಿ- ಮಕ್ಕಳನ್ನ ಕಳುಹಿಸಿಕೊಡಿ ಎಂದ ಅಳಿಯನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ (Crime news) ತಡವಾಗಿ ಬೆಳಕಿಗೆ ಬಂದಿದೆ. ಇದರಿಂದ ತಮಿಳುನಾಡಿನ ಕೃಷ್ಣಗಿರಿ (Krishnagiri) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನವೀನ್ ಕೊನೆಯುಸಿರೆಳೆದಿದ್ದಾನೆ. ಸಾಯುವ ಮುನ್ನ ಕೃಷ್ಣಗಿರಿಯ ಮಾಜಿಸ್ಟ್ರೇಟ್ ಮುಂದೆ ಡೆತ್ ಡಿಕ್ಲರೇಷನ್ (Death declaration) ಹೇಳಿಕೆ ನೀಡಿದ ನವೀನ್ ತನ್ನ ಮೇಲೆ ಪೆಟ್ರೋಲ್ ಸುರಿದು ಹಲ್ಲೆ ಮಾಡಿ ಬೆಂಕಿ ಹಚ್ಚಿದ ಮಾವ ಸಂಪಂಗಿ ಬಾಮೈದ ಮುನೇಶ್ ಅತ್ತೆ ಪಚ್ಚಮ್ಮ ಹಾಗು ಹೆಂಡತಿ … Read more

ನಿಮ್ಮ ಪಾದಗಳೇ ಯಕೃತ್ತಿನ ಕಾಯಿಲೆಗೆ ಕನ್ನಡಿ: ನಡೆಯುವಾಗ ಕಂಡುಬರುವ ಈ 4 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ನಮ್ಮ ದೇಹದ ಮುಖ್ಯ ಅಂಗವಾದ ಯಕೃತ್ತು..ಒಳಗಿರುವ ವಿಷಕಾರಿ ಅಂಶಗಳನ್ನು ಹೊರ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪಾದಗಳಲ್ಲಿ ಬದಲಾವಣೆ ಕಾಣಿಸಿಕೊಂಡಾಗ ಅದು ಯಕೃತ್ತಿನ ಮೇಲಾಗುತ್ತಿರುವ ಸಮಸ್ಯೆ ಎಂದು ಕಂಡುಕೊಳ್ಳಬೇಕಾಗುತ್ತದೆ. ಪಾದಗಳ ಊತ, ಚರ್ಮದ ಮೇಲಾಗುವ ಸಮಸ್ಯೆ, ಕಾಲ್ಬೆರಳುಗಳ ಮಧ್ಯೆ ಕಾಣಿಸಿಕೊಳ್ಳುವ ಹಳದಿ ಬಣ್ಣ ಇವೆಲ್ಲವು ಯಕೃತ್ತಿನ ಕಾಯಿಲೆಗಳನ್ನು ಸೂಚಿಸುತ್ತದೆ. ಇತ್ತೀಚೆಗೆ ರಿಲೀಸ್ ಆದ ಲಿವರ್ ಜನರಲ್ ವರದಿ ಪ್ರಕಾರ, ಪಾದದಲ್ಲಾಗುವ ಬದಲಾವಣೆಯನ್ನು ಗಮನಿಸಿ ನಿಮ್ಮ ಯಕೃತ್ತಿನ ಮೇಲೆ ನಿಗಾ ವಹಿಸಬೇಕು ಎಂದು ವರದಿ ಹೇಳಿದೆ. ಹಾಗಾದ್ರೆ ಪಾದಕ್ಕೂ … Read more

ಚಡ್ಡಿ ರಾಜ್ಯಪಾಲರು ಬಿಜೆಪಿಯ ಶಾಸಕ ಭೋಜರಾಜನ್ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರಂತೆ; ಕಿಶೋರ್ ವ್ಯಂಗ್ಯ

ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಸರ್ಕಸ್ ಮುಂದುವರೆದಿದೆ. 118 ಮ್ಯಾಜಿಕ್ ನಂಬರ್ ಇಲ್ಲದೇ ಭಾರೀ ಗೊಂದಲ ನಿರ್ಮಾಣವಾಗಿದೆ. ಮತ್ತೊಂದು ಕಡೆ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಕರಸತ್ತು ನಡೆಸುತ್ತಿವೆ ಎನ್ನುವ ಊಹಾಪೋಹ ಶುರುವಾಗಿದೆ. ರಾಜ್ಯಪಾಲರ ನಡೆ ಬಗ್ಗೆ ಆಕ್ರೋಶ ವ್ಯಕ್ತವಾಗ್ತಿದೆ. ಟಿವಿಕೆ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಆದರೆ 108 ಕ್ಷೇತ್ರಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿ ತಮಿಳುನಾಡು ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಕೂಡಲೇ … Read more

ದಿನ ಭವಿಷ್ಯ 09 ಮೇ 2026 : ಈ ರಾಶಿಯವರು ಕೆಲಸದಲ್ಲಿ ಯಶಸ್ಸು ಕಾಣುವರು : ಆರ್ಥಿಕ ಸ್ಥಿತಿ ಸುಧಾರಣೆ

ಮೇಷ ರಾಶಿ: ಆಸ್ತಿ ವಿವಾದವು ನಿಮಗೆ ಅನುಕೂಲಕರವಾಗಿ ಬಗೆಹರಿಯುತ್ತದೆ. ಪಾಲುದಾರರ ಬಗ್ಗೆ ಕಿವಿಕಚ್ಚುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯವಹಾರವು ತುಂಬಾ ಅನುಕೂಲಕರವಾಗಿ ಮುಂದುವರಿಯುತ್ತದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ವೃಷಭ ರಾಶಿ: ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ಕೆಲಸವನ್ನು ಮಾಡಲು ನೀವು ಒಂದು ಉತ್ತಮ ಮಾರ್ಗವನ್ನು ಕಂಡುಕೊಳ್ಳುವಿರಿ. ಅಂತಶ್ಶತ್ರುವಿನ ಬಗ್ಗೆ ಗಮನ ಕೊಡದೇ ನಿಮಗೆ ಸೋಲಾಗಬಹುದು. ಆರ್ಥಿಕ ಸ್ಥಿತಿಯೂ ಸುಧಾರಿಸುತ್ತದೆ. ಕೆಲವು ವಿಶೇಷ … Read more

ಈ ಜೀವ ನಿಮಗೆ ಅರ್ಪಣೆ, ನಿಮ್ಮ ಉಪಕಾರ ಮರೆಯಲ್ಲ: ಡಿ.ಕೆ.ಶಿವಕುಮಾರ್‌ ಸಹಾಯ ನೆನೆದು ನಟ ರವಿಚಂದ್ರನ್ ಭಾವುಕ

ಮಂಡ್ಯ ಜಿಲ್ಲೆಯ ‘ಮದ್ದೂರು ಉತ್ಸವ’ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಆಡಿದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿವೆ. ಸಂಕಷ್ಟದ ಸಮಯದಲ್ಲಿ ತಮಗೆ ಆಸರೆಯಾದ ಡಿಕೆ ಶಿವಕುಮಾರ್‌ ಅವರ ಗುಣವನ್ನು ಸ್ಮರಿಸಿದ ರವಿಚಂದ್ರನ್, ವೇದಿಕೆಯಲ್ಲೇ ಅತ್ಯಂತ ಭಾವುಕರಾಗಿ ಮಾತನಾಡಿದರು. ಕೈ ಚಾಚುವ ಮುನ್ನವೇ ಆಸರೆಯಾದರು ವೇದಿಕೆ ಮೇಲೆ ಮಾತನಾಡಿದ ರವಿಚಂದ್ರನ್, “ಮನುಷ್ಯನ ಜೀವನದಲ್ಲಿ ಕೆಲವೊಮ್ಮೆ ಕಠಿಣ ಸಮಯಗಳು ಎದುರಾಗುತ್ತವೆ. ಅಂತಹ ಸಂದರ್ಭದಲ್ಲಿ ಯಾರಾದರೂ ಸಹಾಯಕ್ಕೆ … Read more

ವೈದ್ಯನ ಸಾವಿನ ಬೆನ್ನಲ್ಲೇ ನರ್ಸ್ ಕೂಡ ಆತ್ಮಹತ್ಯೆ – ಇಬ್ಬರ ಸಾವಿನ ಹಿಂದೆ ಅಕ್ರಮ ಸಂಬಂಧ ಶಂಕೆ!

ರಾಮನಗರ ಜಿಲ್ಲೆಯ ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ವೈದ್ಯಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ನವೋದಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಸರಸ್ವತಿ (45) ಎಂಬುವವರು ಇಂದು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಒಂದೇ ಆಸ್ಪತ್ರೆಯ ಇಬ್ಬರು ಸಾವು ನವೋದಯ ಆಸ್ಪತ್ರೆಯ ವೈದ್ಯ ಡಾ. ಚೇತನ್ … Read more

ಮಹಿಂದ್ರಾ ಥಾರ್ ರಿವರ್ಸ್ ಮಾಡುವಾಗ 5 ವಿದ್ಯಾರ್ಥಿನಿಯರಿಗೆ ಡಿಕ್ಕಿ, ಓರ್ವಬಾಲಕಿ ಸಾವು.!

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಇಂದು ಮಧ್ಯಾಹ್ನ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ರಿವರ್ಸ್ ಮಾಡುವಾಗ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಸಿಂಧನೂರು ಪಟ್ಟಣದ ಚೇತನ ಆಸ್ಪತ್ರೆಯ ಮುಂಭಾಗದಲ್ಲಿ ಈ ಅಪಘಾತ ಸಂಭವಿಸಿದೆ. ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಐವರು ವಿದ್ಯಾರ್ಥಿನಿಯರು ಕಾಲೇಜು ಮುಗಿಸಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. … Read more