BMTC ಬಸ್ ಗಳಲ್ಲಿ ಗುಟ್ಕಾ ಜಾಹೀರಾತು : ಆಕ್ರೋಶ, ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬೆಂಗಳೂರು : ನಗರದ ಬಿಎಂಟಿಸಿ ಬಸ್ ಗಳ ಮೇಲೆ ಗುಟ್ಕಾ ಜಾಹೀರಾತುಗಳು ರಾರಾಜಿಸುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಸಮರ ಸಾರಿದ್ದಾರೆ. ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಇವುಗಳನ್ನು ತಿಂದು ಜನರು ಬಸ್ ನಿಲ್ದಾಣಗಳು, ಮೆಟ್ರೋ ಸ್ಟೇಷನ್‌ಗಳು ಮತ್ತು ಪ್ರಮುಖ ವೃತ್ತಗಳಲ್ಲಿ ಉಗಿದು ನಗರದ ಅಂದವನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ಈ ಬೆಳವಣಿಗೆ ಕುರಿತು ಸಚಿವ ರಾಮಲಿಂಗಾ ರೆಡ್ಡಿಯವರು … Read more

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ : ಚಾಕುವಿನಿಂದ ಇರಿದು ಕೊಲೆ

ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಧರ್ಮೇಂದ್ರ ಎಂಬ … Read more

ಮಾರ್ಕೆಟ್ ನಿಂದ ತಂದಿರುವ ತರಕಾರಿಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ಸುತ್ತಿ ಫ್ರಿಡ್ಜ್ ನಲ್ಲಿ ಇಡುತ್ತೀರಾ? ಇನ್ನು ಮುಂದೆ ಹಾಗೆ ಮಾಡಬೇಡಿ!

ಮಾರುಕಟ್ಟೆಯಲ್ಲಿ ತರಕಾರಿ ಅಥವಾ ಹಣ್ಣುಗಳನ್ನು ಖರೀದಿಸಿದ ಬಳಿಕ, ಇವುಗಳನ್ನು ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ, ಮನೆಗೆ ತಂದು ಫ್ರಿಡ್ಜ್ ನಲ್ಲಿ ಇಟ್ಟು ಬಿಡುತ್ತೇವೆ, ಕೆಲವರು ಜಿಪ್‌ಲಾಕ್ ಪೌಚ್‌ಗಳನ್ನು ಸಹ ಬಳಸುತ್ತಾರೆ.ಆದರೆ ತಜ್ಞರು ಹೇಳುವ ಪ್ರಕಾರ ಹಣ್ಣು ತರಕಾರಿಗಳನ್ನು ಈ ರೀತಿಯಾಗಿ ಸಂಗ್ರಹಿಸಿಡುವುದು, ಆರೋಗ್ಯಕ್ಕೆ ತುಂಬಾನೇ ಹಾನಿಕಾರ ಎನ್ನಲಾಗುತ್ತದೆ. ಮಾರುಕಟ್ಟೆಗೆ ಹೋದರೆ ನಮಗೆ ಇಷ್ಟವಾಗುವ ಹಣ್ಣು ಹಾಗೂ ಹಸಿರೆಲೆ ತರಕಾರಿಗಳನ್ನು ಎರಡು ದಿನಕ್ಕೆ ಬೇಕಾಗುವಷ್ಟು ತಗೊಂಡು, ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿ ಮನೆಗೆ ಬರುತ್ತದೆ. ಕೆಲವರು ನಾಲ್ಕೈದು ದಿನಗಳಿಗೆ … Read more

Dina Bhavishya : 29 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಇಂದು, ನಿಮ್ಮ ದೈನಂದಿನ ಕಾರ್ಯದಿಂದ ಇಂದು ಸ್ವಲ್ಪ ವಿಪಥಗೊಳ್ಳುತ್ತೀರಿ ಮತ್ತು ಆಧ್ಯಾತ್ಮ ಮತ್ತು ಧಾರ್ಮಿಕ ವಿಷಯಗಳಲ್ಲಿ ತೊಡಗಿಕೊಳ್ಳುತ್ತೀರಿ ಎಂಬುದಾಗಿ ಗಣೇಶ ಹೇಳುತ್ತಾರೆ. ಯಾವುದೇ ವ್ಯಕ್ತಿಗಳ ಜೊತೆ ಮಾತನಾಡುವಾಗ ಎಚ್ಚರಿಕೆ ವಹಿಸಿ ಯಾಕೆಂದರೆ ಕಟು ಮಾತುಗಳು ಮತ್ತು ಮತ್ಸರದ ನುಡಿಗಳು ಉತ್ತಮ ಸಂಬಂಧಗಳನ್ನು ಹಾಳುಗೆಡಹುತ್ತವೆ. ದಿನದ ದ್ವಿತೀಯಾರ್ಧದಲ್ಲಿ ನೀವು ಹೊಸ ಯೋಜನೆಗಳನ್ನು ಪ್ರಾರಂಭಿಸಬಹುದು ಮತ್ತು ಇದು ನಿಮ್ಮನ್ನು ಉದ್ರೇಕ ಹಾಗೂ ಆತಂಕದಲ್ಲಿರಿಸುತ್ತದೆ. ಏನೇ ಆದರೂ, ತೊಂದರೆಯುಂಟಾಗುವ ಸಂದರ್ಭಗಳಲ್ಲಿ ನಿಮ್ಮ ಸಹೋದ್ಯೋಗಿಗಳ ನೆರವನ್ನು ನಿರೀಕ್ಷಿಸಬಹುದು ಅವರು ನಿಮ್ಮನ್ನು … Read more

ದಾವಣಗೆರೆ ನವ ವಿವಾಹಿತನ ಆತ್ಮಹ*ತ್ಯೆಗೆ ಮೇಜರ್ ಟ್ವಿಸ್ಟ್; ಹೆಂಡತಿ ಬೇರೆಯವನೊಟ್ಟಿಗೆ ಹೋಗಿದ್ದೇ ಸಾವಿಗೆ ಕಾರಣವಾ?

ದಾವಣಗೆರೆ : ಕೇವಲ ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಹರೀಶ್ ಆತ್ಮ*ಹತ್ಯೆ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣವೇನು ಎನ್ನುವುದನ್ನು ಹರೀಶ್ ಎಂಬಾತ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಗುಮ್ಮನೂರು ನಿವಾಸಿ 32 ವರ್ಷದ ಹರೀಶ್ ಕಳೆದ ಎರಡೂವರೆ ತಿಂಗಳ ಹಿಂದಷ್ಟೇ ಸರಸ್ವತಿ ಎಂಬುವವರ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಆ ಸಂತೋಷ ಹೆಚ್ಚು ಸಮಯ ಉಳಿಯಲೇ ಇಲ್ಲ. ಮದುವೆಯಾಗಿ ಕೇವಲ ಎರಡೂವರೆ ತಿಂಗಳಲ್ಲೇ ಹರೀಶ್‌, ತಮ್ಮ … Read more

ಧರ್ಮಸ್ಥಳ ಪಾರ್ಕ್ ನಲ್ಲಿ ನಾನು ಚಿಕನ್ ಬಿರಿಯಾನಿ ಹಾಗೂ ಕಬಾಬ್ ತಿಂದಿದ್ದೇನೆ – ಡಾಗ್ ಸತೀಶ್ ವಿವಾದಾತ್ಮಕ ಹೇಳಿಕೆ

ಬಿಗ್ ಬಾಸ್ ಸೀಸನ್ 12 ಸ್ಪರ್ಧಿ ಡಾಗ್ ಸತೀಶ್ ಇದೀಗ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ಕಾಲೇಜು ದಿನಗಳಲ್ಲಿ ಧರ್ಮಸ್ಥಳ ಪಾರ್ಕ್ ನಲ್ಲಿ ನಾನ್ ವೆಜ್ ತಿಂದಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಡಾಲಿ ಧನಂಜಯ್ ಮಾಂಸಾಹಾರ ಸೇವನೆ ಕುರಿತು ಹೇಳಿಕೆ ನೀಡಿದ ಡಾಗ್ ಸತೀಶ್, ಯಾರು, ಯಾವ ದಿನ ಬೇಕಾದರು ಮಾಂಸಾಹಾರ ತಿನ್ನಬಹುದು. ನಾನು ವರ್ಷದ 365 ದಿನ ನಾನ್ ವೆಜ್ ತಿನ್ನುತ್ತೇನೆ. ಸೋಮವಾರನೂ ತಿನ್ನುತ್ತೇನೆ, ಇತರ ದಿನವೂ ತಿನ್ನುತ್ತೇನೆ. ಗಣೇಶ ಹಬ್ಬ, ಗೌರಿ ಹಬ್ಬ ಸೇರಿದಂತೆ … Read more

ಸರ್… ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ : ನಟ ಕಿಶೋರ್

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ (AR Rahman) ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಚಿತ್ರೋಧ್ಯಮದಲ್ಲಿ ಕೋಮುಭಾವನೆ ಹೆಚ್ಚಾಗುತ್ತಿರುವ ಹಿನ್ನಲೆ ತಮಗೆ ಕೆಲಸದ ಅವಕಾಶಗಳು ಕಡಿಮೆಯಾಗುತ್ತಿವೆ ಎಂಬ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿತ್ತು. ಇದೇ ವಿಚಾರವಾಗಿ ಪರ-ವಿರೋಧ ಚರ್ಚೆಗಳು ನಡೆದಿದ್ದವು. ಇದೀಗ ರೆಹಮಾನ್ ಗೆ ನಟ ಕಿಶೋರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಕಿಶೋರ್, ಅಸಂವೈಧಾನಿಕವಾದರೂ ಕೂಡ ಜಾತಿ, ಭಾಷೆ, ದೇಶ, ಧರ್ಮಗಳ ತಾರತಮ್ಯ ಮಾಡದ ಸಂತರು … Read more

ನಾಳೆ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಿದ್ದ ಅನಂತ್ ಸುಬ್ಬರಾವ್ ನಿಧನ, ಪ್ರತಿಭಟನೆ ಮುಂದೂಡಿಕೆ

ಕಾರ್ಮಿಕ ಹೋರಾಟ ಚಳುವಳಿ ಮೂಲಕ ರಾಜ್ಯದ ಕಾರ್ಮಿಕ ಮುಖಂಡನಾಗಿ ಬೆಳದ ಅನಂತ್ ಸುಬ್ಬರಾವ್ ನಿಧನರಾಗಿದ್ದಾರೆ. ನಾಳೆ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದ ಅನಂತ್ ಸುಬ್ಬರಾವ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ 5 ಗಂಟೆಗೆ ಹೃದಯಾಘಾತದಿಂದ ಅಸ್ವಸ್ಥಗೊಂಡ ಅನಂತ್ ಸುಬ್ಬರಾವ್ ನಿಧನರಾಗಿದ್ದಾರೆ. ಮುಷ್ಕರಕ್ಕೆ ಭಾರಿ ತಯಾರಿ ಮಾಡಿದ್ದ ಅನಂತ್ ಸುಬ್ಬರಾವ್ ಸಾರಿಗೆ ನೌಕರರ ಬೇಡಿಕೆ ಸಮಸ್ಯೆಗಳಿಗೆ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡುತ್ತಿದ್ದ ಅನಂತ್ ಸುಬ್ಬರಾವ್ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಗಮನಸೆಳೆದಿದ್ದರು. ಪ್ರಮುಖವಾಗಿ ಎಸ್ಮಾ ಜಾರಿಗೆ ಭಾರಿ … Read more

ಅವನೇ ಬೇಕು ಅಂತ ಪ್ರೀತಿಸಿ ಮದುವೆಯಾದವಳು ಇಂದು ಆತ್ಮಹತ್ಯೆ – ಆಸ್ಪತ್ರೆಯಲ್ಲಿ ಸಾವು-ಬದುಕಿನ ಜೊತೆ ಗಂಡನ ಹೋರಾಟ

ಅವನೇ ಬೇಕು ಅಂತ ಪ್ರೀತಿಸಿ ಮದುವೆಯಾದವಳು ಇಂದು ಹೆಣವಾಗಿ ಮಸಣ ಸೇರಿದ್ದಾಳೆ. ಇತ್ತ ಏನಾದ್ರೂ ಒಟ್ಟಿಗೆ ಬದುಕೋಣ ಅಂತ ಯುವತಿಗೆ ತಾಳಿ ಕಟ್ಟಿದವನು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ದಾನೆ. ಈ ಜೋಡಿ ಸಂಸಾರದಲ್ಲಿ ಬಿರುಗಾಳಿ ಎಬ್ಬಿಸಿದವರು ಯಾರು.? ಗಂಡ-ಹೆಂಡ್ತಿ ನಡುವಿನ ಜಗಳಕ್ಕೆ ಕೂಸು ಬಡವಾಯ್ತು. ಪತಿ-ಪತ್ನಿ ಕಲಹಕ್ಕೆ ಬಲಿಯಾಯ್ತ ಬದುಕು!? ಸಂಸಾರದಲ್ಲಿ ಜಗಳ ಬರುತ್ತೆ, ಹೋಗುತ್ತೆ ಅಂತಾರೆ. ಆದ್ರೆ ಈ ಕಲಹ ಸಾವಿನಲ್ಲಿ ಅಂತ್ಯ ಕಾಣೋದೆ ದುರಂತ. ಕಳೆದ ಐದು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ … Read more

ಫ್ಯಾಟಿ ಲಿವರ್‌ ಕಾಯಿಲೆಗೆ ಈ ಕೆಟ್ಟ ಅಭ್ಯಾಸಗಳೇ ಕಾರಣ: ಮದ್ಯಪಾನಕ್ಕಿಂತಲೂ ತುಂಬಾ ಡೇಂಜರ್..!

ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಫ್ಯಾಟಿ ಲಿವರ್ ಸಮಸ್ಯೆಯಿಂದ ಗಂಭೀರವಾಗಿ ಬಳಲುತ್ತಿದ್ದಾರೆ. ವಾಸ್ತವವಾಗಿ ಈ ಲಿವರ್ ಸಮಸ್ಯೆ ಏಕೆ ಬರುತ್ತದೆ ಎಂದು ಕಂಡುಹಿಡಿಯಲು ಸಂಶೋಧನೆ ನಡೆಸಿದಾಗ, ನಂಬಲಾಗದ ಸಂಗತಿಗಳು ಬಹಿರಂಗಗೊಂಡಿವೆ. ನಾವು ತಿನ್ನುವ ಆಹಾರಗಳಿಂದಲೇ ಇದು ಸಂಭವಿಸುತ್ತದೆ ಎಂದು ತಿಳಿದುಬಂದಿದೆ. ಹಾಗಾದರೆ ಆ ಆಹಾರಗಳು ಯಾವುವು ಎಂಬುದರ ಬಗ್ಗೆ ತಿಳಿಯಿರಿ… ವ್ಯಾಯಾಮ : ಅನೇಕ ಜನರು ತಮ್ಮ ಕೆಲಸದಲ್ಲಿ ನಿರತರಾಗಿರುತ್ತಾರೆ. ಇದರಿಂದ ಅವರಿಗೆ ವ್ಯಾಯಾಮ ಮಾಡಲು ಸಮಯವೂ ಇರುವುದಿಲ್ಲ. ಅಲ್ಲದೆ ಕಚೇರಿಗಳಲ್ಲಿ … Read more