ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು

ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ. ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದದ್ದೇನು? ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ … Read more

Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಸಾಧಾರಣ ದಿನವು ಕಾದಿದೆ ಎಂಬುದಾಗಿ ಗಣೇಶ ಹೇಳುತ್ತಾರೆ. ಕಚೇರಿಯಲ್ಲಿ ನಿಮ್ಮ ಮೇಲಾಧಿಕಾರಿಗಳೊಂದಿಗೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಬಹುದು. ಕಚೇರಿ ಸಂಬಂಧ ಪ್ರವಾಸ ತೆರಳಬಹುದು. ನೀವು ಕೈಗೊಳ್ಳಬೇಕಾಗಿದ್ದ ಅತೀ ಮುಖ್ಯ ಯೋಜನೆಗಳಿಗೆ ಸರಕಾರದಿಂದ ಸಹಾಯ ಹಸ್ತ ಪಡೆಯುವಿರಿ. ಮನೆಯಲ್ಲಿ ಎಲ್ಲವೂ ಉತ್ಸಾಹ ಹಾಗೂ ಶಾಂತರೀತಿಯಿಂದಿರುತ್ತದೆ. ಇದು ನಿಮ್ಮ ಮನೆಯ ಸೌಂದರ್ಯವೃದ್ಧಿಯಲ್ಲಿ ಪ್ರಮುಖ ಬದಲಾವಣೆಗಳನ್ನು ತರಲು ಪ್ರೇರೇಪಿಸುತ್ತದೆ. ಅವಸರವು ಅಪಘಾತಕ್ಕೆ ಕಾರಣ. ಆದ್ದರಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಆತುರ ಬೇಡ. ನಿಮ್ಮ ತಾಯಿಯ … Read more

ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?

ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಈ ವಿಚಾರ ಮದ್ಯವ್ಯಸನಿಗಳಿಗೂ ತಿಳಿದಿದೆ! ಆದರೂ ಕೂಡ ಕುಡಿಯುವ ಅಭ್ಯಾಸದಿಂದ ಮಾತ್ರ ಹಿಂದೆ ಸರಿಯಲ್ಲ! ಇನ್ನು ಕೆಲವರ ವಾದ ಏನೆಂದ್ರೆ ವಾರಕ್ಕೆ ಒಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಮದ್ಯಪಾನ ಮಾಡುವುದರಿಂದ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು! ಆದರೆ ವಾಸ್ತವ ಏನೆಂದ್ರೆ ಅಪರೂಪಕ್ಕೆ ಒಮ್ಮೆ ಕುಡಿದರೂ ಕೂಡ ಆರೋಗ್ಯಕ್ಕೆ ಇದರಿಂದ ಹಾನಿ ಆಗುವ ಸಾಧ್ಯತೆಗಳು ಇರುತ್ತವೆಯಂತೆ ಧೂಮಪಾನ ಹಾಗೂ ಮದ್ಯಪಾನ ಈ ಎರಡೂ ದುರಾಭ್ಯಾಸಗಳು ಮನುಷ್ಯನ ಆರೋಗ್ಯಕ್ಕೆ ತುಂಬಾನೇ ಹಾನಿಕಾರಕ ಎಂದು … Read more

ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು

ತುಂಬಾ ರಶ್ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ವಿಡಿಯೋದಲ್ಲಿದ್ದ ಯುವಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ – ಯುವಕ ಆತ್ಮಹತ್ಯೆಗೆ ಶರಣು. ಆತ್ಮಹತ್ಯೆ ಮಾಡಿಕೊಂಡ ಆರೋಪ ಹೊತ್ತಿದ್ದ ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್(40) ಎಂದು ಗುರುತಿಸಲಾಗಿದೆ. … Read more

ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್‌ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ

ಕರ್ನಾಟಕದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದು ಮಾಡಿ ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿ ಮಾಡದಿದ್ದರೆ ಕರ್ನಾಟಕ ಬಂದ್ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾದ್ಯಾಧ್ಯಕ್ಷ ಸಿಎಸ್ ಷಡಕ್ಷರಿ, ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಎನ್‌ಪಿಎಸ್ ನೌಕರರ ಸಂಘದ 2ನೇ ರಾಜ್ಯ ಕರ‍್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿ, ” ಒಪಿಎಸ್ ಜಾರಿಗೊಳಿಸುವಂತೆ ನಾವು ಹೋರಾಟ ಮಾಡುತ್ತಲೇ ಬಂದಿದ್ದೇವೆ. ಆದರೆ, … Read more

ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!

ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ್ದ ವ್ಯಕ್ತಿಯ ಮಗನಿಗೆ ಸೂಕ್ತ ಸಮಯಕ್ಕೆ ಪ್ರಥಮ ಚಿಕಿತ್ಸೆ ಹಾಗೂ ಆಯಂಬುಲೆನ್ಸ್‌ ಸಿಗದೇ ಅದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆಯಲ್ಲಿ ನಡೆದಿದೆ. ಸಾದಿಕ್‌ ಸಾಬ್‌ ಅವರ ಪುತ್ರ ಸೈಯ್ಯದ್‌ ಅಕ್ರಂ (42) ಮೃತರು. ಕೋಟ್ಯಂತರ ಮೌಲ್ಯದ ಜಾಗ ದಾನ ಮಾಡಿದ್ರು! ಸಾದಿಕ್ ಅವರು ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಕೋಟ್ಯಂತರ ರು. ಮೌಲ್ಯದ ಜಾಗವನ್ನು ಸರ್ಕಾರಕ್ಕೆ ದಾನ ಮಾಡಿದ್ದರು. ಆದರೆ ಅವರ ಪುತ್ರನಿಗೇ … Read more

ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊರಟಕೆರೆ ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಸಿಬ್ಬಂದಿಯ ಅಮಾನವೀಯ ವರ್ತನೆಯಿಂದಾಗಿ ವೃದ್ಧ ದಂಪತಿಯೊಂದು ಕಳೆದ ಒಂದು ವಾರದಿಂದ ಬೀದಿಪಾಲಾಗಿ ಬದುಕು ಸಾಗಿಸುವ ಸ್ಥಿತಿಗೆ ತಲುಪಿದೆ. ಮನೆ ಮಾತ್ರವಲ್ಲ, ತಮ್ಮ ಜೀವನಾಧಾರವಾಗಿದ್ದ ಜಾನುವಾರು ಕೊಟ್ಟಿಗೆಗೂ ಬೀಗ ಹಾಕಿದ ಪರಿಣಾಮ ವೃದ್ಧರು ತೀವ್ರ ಸಂಕಷ್ಟಕ್ಕೆ ಸಿಲುಕಿದ ಅಮಾನುಷ ಘಟನೆ ನಡೆದಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ. 2 ಲಕ್ಷ ಸಾಲ ಪಡೆದ ದಂಪತಿ! ಗ್ರಾಮದ ಸಣ್ಣಯ್ಯ (80) ಮತ್ತು ಜಯಮ್ಮ (75) ಎಂಬ ದಂಪತಿ ಈ … Read more

ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿ ಮತ್ತು ಆಕೆಯ ಸಂಬಂಧಿಕರು, ಸ್ನೇಹಿತರಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಯುವತಿಗೆ 2024 ಮಾರ್ಚ್ನಲ್ಲಿ ಆರೋಪಿ ಪರಿಚಯವಾಗಿದ್ದ. ತಾನು ದೊಡ್ಡ ಉದ್ಯಮಿ, 715 ಕೋಟಿ ಆಸ್ತಿ ಇದೆ ಎಂದು ಹೇಳಿಕೊಂಡಿದ್ದ ಈತ ತಂದೆಯನ್ನ ನಿವೃತ್ತ ತಹಶೀಲ್ದಾರ್ ಎಂದು ಪರಿಚಯಿಸಿದ್ದ. ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಯುವತಿಗೆ ಹೇಳಿದ್ದಲ್ಲದೆ, ಕೆಂಗೇರಿ ಬಳಿ ಕರೆಸಿಕೊಂಡು ಮನೆಯವರಿಗೆ ಪರಿಚಯಿಸಿದ್ದ ಎನ್ನಲಾಗಿದೆ. ಬಳಿಕ ತನ್ನ ಆಟ ಶುರುಮಾಡಿದ್ದ … Read more

ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!

ಮಲಬದ್ಧತೆ (Constipation) ಎನ್ನುವುದು ಆಹಾರ ಅಥವಾ ಜೀವನಶೈಲಿ ಸರಿ ಇಲ್ಲದಿದ್ದಾಗ ಜನರಿಗೆ ಉಂಟಾಗುವ ಜೀರ್ಣಕಾರಿ ಸಮಸ್ಯೆಯಾಗಿದೆ. ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಜನರ ಆಹಾರದಲ್ಲಿ ಮನೆಯಲ್ಲಿ ತಯಾರಿಸಿದ ಆಹಾರಕ್ಕಿಂತ ಹೊರಗಿನ ಆಹಾರವು ಹೆಚ್ಚಿನ ಸ್ಥಾನವನ್ನು ಪಡೆದುಕೊಂಡಿದೆ. ಈ ಆಹಾರದಲ್ಲಿ ಕಡಿಮೆ ಫೈಬರ್ ಮತ್ತು ಹೆಚ್ಚು ಸಂಸ್ಕರಿಸಿದ ಆಹಾರವೇ ಇರುವುದರಿಂದ ಮಲಬದ್ಧತೆ ಉಂಟಾಗುತ್ತದೆ. ಹೀಗಾದಾಗ ಮಲವು ಬೇಗನೆ ಹೊರಬರುವುದಿಲ್ಲ. ವ್ಯಕ್ತಿಯು ಗಂಟೆಗಟ್ಟಲೆ ಶೌಚಾಲಯದಲ್ಲಿ ಕುಳಿತು ಆಯಾಸಗೊಳ್ಳುತ್ತಲೇ ಇರುತ್ತಾನೆ. ಅಂದರೆ ಹೊಟ್ಟೆ ಸರಿಯಾಗಿ ಸ್ವಚ್ಛವಾಗಲ್ಲ. ಮಲಬದ್ಧತೆ ಸಾಮಾನ್ಯ ಸಮಸ್ಯೆಯಂತೆ ತೋರುತ್ತದೆ. ಆದರೆ … Read more

ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ

ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರು ರಕ್ಷಣೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶನಿವಾರ ‘ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನ’ದಲ್ಲಿ ಮಾತನಾಡಿದ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದಿದ್ದ ಆರು ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಮದುವೆ ಮುನ್ನ ತಮ್ಮ ಕುಟುಂಬದವರಿಂದಲೇ ಅನ್ಯಜಾತಿಯುವತಿ ಅಥವಾ ಯುವಕ ಜೀವ ಎದುರಿಸುತ್ತಾರೆ. ಅಂಥವರು ರಕ್ಷಣೆ ಕೋರಿ ಬಗ್ಗೆ ಸ್ಥಳೀಯ … Read more