ಚಳಿಗಾಲದ ಚಳಿ, ಹೃದಯಕ್ಕೆ ತರದಿರಲಿ ನಡುಕ : ಮುನ್ನೆಚ್ಚರಿಕೆಗೆ ಇರಲಿ ಈ ವೈದ್ಯಕೀಯ ಪರೀಕ್ಷೆಗಳು!

ಚಳಿಗಾಲದ ತಣ್ಣನೆಯ ವಾತಾವರಣವು ಕೇವಲ ನೆಗಡಿ, ಕೆಮ್ಮನ್ನಷ್ಟೇ ಅಲ್ಲ, ಹೃದಯಕ್ಕೂ ಕಂಟಕ ತರಬಲ್ಲದು. ಬೇಸಿಗೆಗೆ ಹೋಲಿಸಿದರೆ ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತವೆ. ಇದಕ್ಕೆ ಪ್ರಮುಖ ಕಾರಣವೆಂದರೆ, ಚಳಿಯಲ್ಲಿ ನಮ್ಮ ರಕ್ತನಾಳಗಳು ಸಂಕುಚಿತಗೊಂಡು ರಕ್ತ ಸಂಚಲನಕ್ಕೆ ಅಡ್ಡಿಯುಂಟು ಮಾಡುವುದು. ಇದರಿಂದ ಹೃದಯದ ಮೇಲೆ ಹೆಚ್ಚಿನ ಒತ್ತಡ ಬಿದ್ದು ಪ್ರಾಣಾಪಾಯ ಸಂಭವಿಸಬಹುದು. ಮುನ್ನೆಚ್ಚರಿಕೆಯಾಗಿ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ : ದೆಹಲಿಯ ಅಪೋಲೋ ಆಸ್ಪತ್ರೆಯ ಹೃದ್ರೋಗ ತಜ್ಞರಾದ ಡಾ. ವರುಣ್ ಬನ್ಸಾಲ್ ಅವರ ಪ್ರಕಾರ, ಚಳಿಗಾಲದಲ್ಲಿ ಪ್ರತಿಯೊಬ್ಬರೂ ಈ … Read more

ಹನಿಮೂನ್ ಅರ್ಧಕ್ಕೆ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಿಸದೇ ಸಾವು – ‘ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ’

ಆಧುನಿಕವಾಗಿ, ಶೈಕ್ಷಣಿಕವಾಗಿ ಜಗತ್ತು ಅದೇಷ್ಟೇ ಬೆಳೆದು ನಿಂತಿದ್ದರೂ ವರದಕ್ಷಿಣೆಯ ಪಿಡುಗು ಮಾತ್ರ ಇನ್ನೂ ನಿಂತಿಲ್ಲ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಪತಿ ಹಾಗೂ ಮನೆಯವರ ವರದಕ್ಷಿಣೆ ಕಿರುಕುಳ, ಧನದಾಹಕ್ಕೆ ನವವಿವಾಹಿತೆಯರೇ ಬಲಿಯಾಗುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 58 ದಿನಗಳ ಹಿಂದಷ್ಟೇ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದ ನವವಿವಾಹಿತೆ ಪತಿಯ ವರದಕ್ಷಿಣೆ ಕಿರುಕುಳ, ಅವಮಾನಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಈ ಘಟನೆ ನಡೆದಿದೆ. ಈ ಹಿನ್ನೆಲೆ ಆಕೆಯ ಪತಿ ಸೂರಜ್ … Read more

ದ್ರಾವಿಡ ಮಣ್ಣಿನಲ್ಲಿ ಕಮಲ ಅರಳಲು ಡಿಎಂಕೆಯೇ ಕಾರಣ: ಆಡಳಿತ ಪಕ್ಷದ ವಿರುದ್ಧ ನಟ ವಿಜಯ್ ಕೆಂಡಾಮಂಡಲ

ತಮಿಳುನಾಡಿನ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ಜನಪ್ರಿಯ ನಟ ವಿಜಯ್, ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ನೇರ ಸಮರ ಸಾರಿದ್ದಾರೆ. ದ್ರಾವಿಡ ನಾಡಿನಲ್ಲಿ ಬಿಜೆಪಿಯ ಚಿಹ್ನೆಯಾದ ಕಮಲ ಅರಳಲು ಸ್ವತಃ ಡಿಎಂಕೆ ಪಕ್ಷವೇ ಅವಕಾಶ ಮಾಡಿಕೊಡುತ್ತಿದೆ ಎಂದು ವಿಜಯ್ ಗಂಭೀರ ಆರೋಪ ಮಾಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ತಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿರುವ ದಳಪತಿ ವಿಜಯ್, … Read more

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ : ನರ್ಸ್ ಮನೆಯಲ್ಲಿ ಹರಿದಿತ್ತು ರಕ್ತದೋಕುಳಿ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್ 39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ … Read more

ನರ್ಸ್ ಬಟ್ಟೆ ಬದಲಾಯಿಸುವ ವಿಡಿಯೋ ರೆಕಾರ್ಡಿಂಗ್ – ಆಸ್ಪತ್ರೆಯಲ್ಲಿ ಸಿಕ್ಕಿಬಿದ್ದ ವಿಕೃತಕಾಮಿ

ಬೆಂಗಳೂರು (ಡಿ.26) : ನಗರದ ಖಾಸಗಿ ಆಸ್ಪತ್ರೆಯಲ್ಲಿ (Private hospital) ನರ್ಸ್ಗಳು ಬಟ್ಟೆ ಬದಲಿಸುವ ವಿಡಿಯೋ ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಸಹೋದ್ಯೋಗಿಯನ್ನ ಪೊಲೀಸರು ಬಂಧಿಸಿದ್ದಾರೆ. ಆಪರೇಷನ್ ಥಿಯೇಟರ್ಗಳಲ್ಲಿ (Operation Theater) ಕೆಲಸ ಮಾಡಲು ಬಟ್ಟೆ ಬದಲಿಸಲು ಹೋಗ್ತಿದ್ದ ನರ್ಸ್ಗಳ ವಿಡಿಯೋಗಳ ಈ ಸೈಕೋಪಾಥ್ ರೆಕಾರ್ಡ್ ಮಾಡ್ತಿದ್ದ ಎನ್ನಲಾಗ್ತಿದೆ. ಆರೋಪಿ ಕೂಡ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದ. ಪ್ರೀತಿ ನಿರಾಕಿಸಿದವಳ ವಿಡಿಯೋ ರೆಕಾರ್ಡ್ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆ ಆಸ್ಪತ್ರೆಯಲ್ಲಿ ಸೈಕೋಪಾಥ್ ಸಿಬ್ಬಂದಿ ಕಾಟಕ್ಕೆ ನರ್ಸ್ ಬೇಸತ್ತಿದ್ದಾರೆ. … Read more

ಹೊಸದಾಗಿ ಅರ್ಜಿ ಹಾಕಿದ್ರೆ 15 ದಿನದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ :‌ ಗುಡ್‌ ನ್ಯೂಸ್‌ ಕೊಟ್ಟ ಕೆ.ಹೆಚ್ ಮುನಿಯಪ್ಪ.

ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ತಕ್ಷಣವೇ ತಹಶೀಲ್ದಾರ್ ಗಳಿಗೆ ಭೇಟಿ ಮಾಡಿ ಹೊಸದಾಗಿ ಅರ್ಜಿ ಹಾಕಿದರೆ 15 ದಿನಗಳಿಗೆ ಪಡಿತರ ಕಾರ್ಡ್ ನೀಡುತ್ತೇವೆ. ಇನ್ನು ಆಸ್ತಿ ಇರುವವರು ಕೂಡ ಬಿಪಿಎಲ್ ಕಾರ್ಡ್ ಹೊಂದಿರುವ ವಿಚಾರವಾಗಿ ಅದನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ತಿಳಿಸಿದರು. ಬೆಂಗಳೂರಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯಗಳಿಗೆ ಪಡಿತರ ಅಕ್ಕಿ ಕಳ್ಳ ಸಾಗಾಣಿ ವಿಚಾರವಾಗಿ ಈ ಬಗ್ಗೆ ಈಗಾಗಲೇ ಕ್ರಮ ಜರುಗಿಸಿದ್ದೇವೆ ಈಗಾಗಲೇ ವಿವಿಧಡೆ 574 … Read more

ಸ್ವಂತ ಕಾರಿಗೆ ‘POLICE’ ಬೋರ್ಡ್ ಹಾಕಿ ಪ್ರವಾಸ ; ಐಡಿ ಕಾರ್ಡ್ ತೋರಿಸಿದ್ರೂ ಪೊಲೀಸಪ್ಪಗೆ ದಂಡ ಹಾಕಿದ ಲೇಡಿ ಸಿಂಗಂ!

ಕಾನೂನು ಎಲ್ಲರಿಗೂ ಒಂದೇ ಎಂಬುದನ್ನು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಸಾಬೀತುಪಡಿಸಿದ್ದಾರೆ. ಸ್ವಂತ ಕಾರಿಗೆ ‘ಪೊಲೀಸ್’ ಎಂದು ಬೋರ್ಡ್ ಹಾಕಿಕೊಂಡು ಫ್ಯಾಮಿಲಿ ಜೊತೆ ಪ್ರವಾಸ ಹೊರಟಿದ್ದ ಪೊಲೀಸಪ್ಪನಿಗೆ ದಂಡ ವಿಧಿಸುವ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಬೋರ್ಡ್ ಹಾಕಿ ಧರ್ಮಸ್ಥಳಕ್ಕೆ ಪಯಣ ಧಾರವಾಡ ಮೂಲದ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸ್ವಂತ ಕಾರಿನಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದರು. ಪ್ರವಾಸದ ವೇಳೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲೋ, ಅಧಿಕಾರ ತೋರಿಸಲೋ ತಮ್ಮ … Read more

ಸಲಹೆ ಕೊಟ್ಟರೆ ದುರಹಂಕಾರದ ಮಾತು : ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತುಗಳನ್ನು ಆಡುತ್ತಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಗುರುವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ‘ಸುಶಾಸನ ದಿನಾಚರಣೆ ಮತ್ತು ಅಟಲ್ ಪುರಸ್ಕಾರ-2025 ಕಾರ್ಯಕ್ರಮ’ದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಬೆಂಗಳೂರು ನಗರ ಸೇರಿ ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತು ಆಡುತ್ತಾರೆ. ಪ್ರಧಾನಿ … Read more

Horoscope : ಡಿಸೆಂಬರ್‌ 26 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ನಿಮ್ಮ ಸ್ನೇಹಿತರೊಂದಿಗೆ ಆನಂದದಿಂದ ಸಮಯ ಕಳೆಯುವ ಕಾಲ ಎಂದು ಗಣೇಶ ಹೇಳುತ್ತಾರೆ. ನಿಮ್ಮ ಸ್ನೇಹಿತರ ಅನಿರೀಕ್ಷಿತ ಉಡುಗೊರೆಯು ನಿಮಗೆ ಖುಷಿನೀಡಲಿದೆ. ಅದಕ್ಕೆ ಪ್ರತಿಯಾಗಿ ನೀವು ಕೂಡಾ ಅವರಿಗೆ ಸಹಾಯಮಾಡಬೇಕಾಗಿ ಬರಬಹುದು. ಹೊಸ ಸಂಬಂಧ ನಿಮ್ಮ ಭವಿಷ್ಯದಲ್ಲಿ ಅದೃಷ್ಟವನ್ನು ತರಲಿದೆ. ಹಾಗೂ ಮಕ್ಕಳು ನಿಮ್ಮ ಪಾಲಿಗೆ ಅದೃಷ್ಚವಂತರಾಗುತ್ತಾರೆ. ದೂರದ ಪ್ರಕೃತಿ ತಾಣಕ್ಕೆ ಪ್ರವಾಸ ತೆರಳುವ ಸಾಧ್ಯತೆಯಿದೆ. ಸರಕಾರಕ್ಕೆ ಸಂಬಂಧಿಸಿದ ವಿಚಾರಗಳು ಇತ್ಯರ್ಥಗೊಂಡು ನಿಮಗೆ ಒಳ್ಳೆಯ ಸುದ್ದಿ ಬರುವ ಸಾಧ್ಯತೆ ಇದೆ. ವೃಷಭ :- ವೃತ್ತಿನಿರತರಿಗೆ ಹಾಗೂ … Read more

ಟಿಪ್ಪರ್ ಬೈಕ್ ನಡುವೆ ಭೀಕರ ಅಪಘಾತ : ನಾಲ್ವರು ಯುವಕರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರದಲ್ಲಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು.  ಮೃತರು ಅಜ್ಜವಾರ ಗ್ರಾಮದ ಯುವಕರಾಗಿದ್ದು, ಒಂದೇ ಬೈಕಿನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮನೋಜ್, ನರಸಿಂಹಮೂರ್ತಿ ನಂದೀಶ್ ಹಾಗೂ ಅರುಣ್ ಮೃತ ಯುವಕರು. ಇನ್ನು … Read more