Bele Parihara – 2024 : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ರಾಜ್ಯ ಸರ್ಕಾರವು ಈಗಾಗಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನ ವರ್ಗಾವಣೆ ಮಾಡಿದೆ.
ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಬಾಕಿಯಿಟ್ಟ ಕಾರಣ ಅಂತಹ ರೈತರ ಬ್ಯಾಂಕ್ ಖಾತೆಗೆ ಸರ್ಕಾರ ವರ್ಗಾವಣೆ ಮಾಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ಗಳು ರೈತರ ಹಿಂದಿನ ಸಾಲಕ್ಕೆ ಜಮಾ ಮಾಡಿದೆ. ಇದರಿಂದಾಗಿ ಅಂತಹ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು, ಈಗ ಬ್ಯಾಂಕ್ ನ ಈ ಕ್ರಮದಿಂದ ತೊಂದರೆಗೆ ಒಳಗಾದ ರೈತರಿಗೆ ಕೂಡಲೇ ಹಣ ಮರುಪಾವತಿ ಮಾಡುವಂತೆ ಸರ್ಕಾರವು ಆದೇಶ ಹೊರಡಿಸಿದೆ.
ಇದನ್ನೂ ಕೂಡ ಓದಿ : PM Suryodaya Yojana : ಉಚಿತ ಸೋಲಾರ್ ಮೆಲ್ಛಾವಣೆ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ ಉಚಿತ ಸೋಲಾರ್ ಮೇಲ್ಚಾವಣಿ ಪಡೆದುಕೊಳ್ಳಿ.!
ಈಗಾಗಲೇ ಮುಂಗಾರು ಆರಂಭವಾಗಿದ್ದು, ಇದರಿಂದಾಗಿ ರೈತರಿಗೆ ಬೀಜ ಬಿತ್ತನೆ ಹಾಗೂ ಗದ್ದೆ ಉಳುವ ಸಮಯದಲ್ಲಿ ರೈತರಿಗೆ ಆರ್ಥಿಕವಾಗಿ ಹಣದ ತೊಂದರೆ ಇರುತ್ತದೆ. ಸರ್ಕಾರ ನೀಡಿದ ಬೆಳೆ ಪರಿಹಾರದ ಹಣವನ್ನು ಬ್ಯಾಂಕ್ ತೆಗೆದುಕೊಂಡರೆ, ಈಗಾಗಲೇ ಬರಗಾಲದಿಂದ ತತ್ತರಿಸಿದ ರೈತರಿಗೆ ಬೆಳೆ ಬೆಳೆಯಲು ಕಷ್ಟವಾಗುತ್ತದೆ. ಆದ್ದರಿಂದ ರೈತರ ಬ್ಯಾಂಕ್ ಖಾತೆಗೆ ಹಣ ಮರುಪಾವತಿಸುವಂತೆ ಬ್ಯಾಂಕ್ ಗಳಿಗೆ ಸರಕಾರ ತಿಳಿಸಿದೆ. ಈ ಕೂಡಲೇ ಹಣ ವರ್ಗಾವಣೆ ಮಾಡದ ಬ್ಯಾಂಕ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಸಹ ರಾಜ್ಯ ಸರ್ಕಾರ ನೀಡಿದೆ.
ಬ್ಯಾಂಕ್ ಗಳು ರೈತರಿಗೆ ಹಣ ವರ್ಗಾವಣೆ ಮಾಡದೇ ಇದ್ದರೆ ಕಾನೂನು ಕ್ರಮದ ಎಚ್ಚರಿಕೆ
ಬರಪೀಡಿತ ಪ್ರದೇಶದ ರೈತರ ಒಪ್ಪಿಗೆ ಇಲ್ಲದೆಯೇ ಬ್ಯಾಂಕ್ ಗಳು ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಹಣವನ್ನು ಅವರು ಈ ಹಿಂದೆ ಬ್ಯಾಂಕ್ ನಲ್ಲಿ ಪಡೆದುಕೊಂಡ ಸಾಲದ ಖಾತೆಗೆ ಜಮೆ ಮಾಡಿಕೊಂಡು ಪರಿಹಾರದ ಹಣವನ್ನು ರೈತರಿಗೆ ಸಿಗದಂತೆ ಮಾಡಿದರೆ ಅದು ಕಾನೂನು ವಿರುದ್ಧದ ಕ್ರಮ ಎಂದು ಇದಕ್ಕಾಗಿ ಸಂಬಂಧಪಟ್ಟ ಬ್ಯಾಂಕಿನ ಮುಖ್ಯಸ್ಥರನ್ನು ಹಾಗೂ ಶಾಖಾ ವ್ಯವಸ್ಥಾಪಕರನ್ನು ಜವಾಬ್ದಾರನಾಗಿ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
ನಿಯಮದ ಪ್ರಕಾರ ಸರಕಾರದಿಂದ ನೀಡಿರುವ ಯಾವುದೇ ಪ್ರೋತ್ಸಾಹದ ಸಹಾಯಧನವನ್ನು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದೇ ರೈತರಿಗೆ ಅನುಕೂಲ ಮಾಡಿಕೊಡಬೇಕು. ಯಾವುದೇ ಸರ್ಕಾರಿ ಅಥವಾ ಖಾಸಗಿ ಬ್ಯಾಂಕ್ ಗಳು ಸಾಲದ ಹಣವನ್ನು ರೈತರಿಗೆ ಸಿಗುವಲ್ಲಿ ಅಡೆತಡೆ ಉಂಟು ಮಾಡಿದರೆ ಬ್ಯಾಂಕಿನ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಡಿ.ಸಿ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Bara Parihara Amount Failed : ನಿಮಗಿನ್ನೂ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ಜಮಾ ಆಗದಿರಲು ಈ ತಪ್ಪುಗಳೇ ಕಾರಣ! ಸಂಪೂರ್ಣ ಮಾಹಿತಿ
ಈಗಾಗಲೇ ಬರಗಾಲದಿಂದಾಗಿ ಆರ್ಥಿಕವಾಗಿ ಕಂಗೆಟ್ಟಿರುವ ರೈತರ ಜೊತೆಗೆ ಬ್ಯಾಂಕ್ ಗಳು ಸಂಯಮದಿಂದ ವರ್ತಿಸಬೇಕು ಹಾಗೂ ಬ್ಯಾಂಕ್ ನಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ ಗ್ರಾಹಕರಿಗೆ ಸರಿಯಾದ ರೀತಿಯಲ್ಲಿ ಮನವರಿಕೆ ಮಾಡಿಸಿ, ಅವರಿಗೆ ಮಾರ್ಗದರ್ಶನ ನೀಡಿ ಆದಷ್ಟು ಬೇಗನೇ ರೈತರ ಸಮಸ್ಯೆಯನ್ನು ಪರಿಹರಿಸುವುದು ಬ್ಯಾಂಕ್ ನೌಕರರ ಕರ್ತವ್ಯ ಆಗಿರುತ್ತದೆ ಎಂದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ



















