ತಾಂಡವ್ನನ್ನು ಬ್ಲಾಕ್ಮೇಲ್ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ.
ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ ಉಪ್ಪಿಟ್ಟು ತಯಾರಿಸುತ್ತಾರಾ ಎಂದು ಕೇಳುತ್ತಾರೆ, ಅದರ ರುಚಿ ನೋಡುವ ಶ್ರೇಷ್ಠಾ ಚೆನಾಗಿದೆಯಲ್ಲಾ ಇದನ್ನು ಏಕೆ ಪ್ರಸಾದವಾಗಿ ಇಡುವುದಿಲ್ಲ ಎಂದು ಕೇಳುತ್ತಾಳೆ. ಶ್ರೇಷ್ಠಾ ವರ್ತನೆಗೆ ತಾಂಡವ್ ಬಿಟ್ಟು ಉಳಿದವರು ಸಿಟ್ಟಾಗುತ್ತಾರೆ. ನಾನು ಮನೆಯಲ್ಲಿ ಪೂಜೆ ಮಾಡುವುದಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸುತ್ತಾರೆ. ಆದರೆ ಅವರನ್ನು ಮನವಿ ಮಾಡುವ ಭಾಗ್ಯಾ ನಾನು ಇನ್ನು 5 ನಿಮಿಷದಲ್ಲಿ ದೇವರಿಗೆ ಪ್ರಸಾದ ಮಾಡಿಕೊಡುತ್ತೇನೆ ಎನ್ನುತ್ತಾಳೆ.
ಹೇಳಿದಂತೆ ಭಾಗ್ಯಾ 5 ನಿಮಿಷಕ್ಕೆ ಪ್ರಸಾದ ಮಾಡಿ ತರುತ್ತಾಳೆ. ಪೂಜೆಗೆ ಯಾರು ಕೂರುತ್ತಾರೆ ರಂದು ಅರ್ಚಕರು ಕೇಳುತ್ತಾರೆ. ಭಾಗ್ಯಾ ಹಾಗೂ ತಾಂಡವ್ ಕೂರುತ್ತಾರೆ ಎಂದು ಧರ್ಮರಾಜ್ ಹೇಳುತ್ತಾಳೆ. ಆದರೆ ಶ್ರೇಷ್ಠಾ ಅದಕ್ಕೆ ನಿರಾಕರಿಸುತ್ತಾಳೆ. ಡಿವೋರ್ಸ್ ಆಗಿರುವ ಭಾಗ್ಯಾ ಹೇಗೆ ತಾಂಡವ್ ಜೊತೆ ಪೂಜೆಗೆ ಕೂರುತ್ತಾಳೆ? ನಾನು ಕೂರುತ್ತೇನೆ ಎನ್ನುತ್ತಾಳೆ. ತಾಳಿ ಇಲ್ಲದೆ ನೀನು ಪೂಜೆಗೆ ಕೂರೋಕೆ ಆಗುವುದಿಲ್ಲ ಎಂದು ಸುನಂದಾ ಹೇಳುತ್ತಾಳೆ.ಹಾಗಾದರೆ ಈ ಪೂಜೆ ನಡೆಯುವುದಿಲ್ಲ, ಭಾಗ್ಯಾ ತನ್ನ ಸ್ವಾರ್ಥಕ್ಕಾಗಿ ಸತ್ಯನಾರಾಯಣಸ್ವಾಮಿ ಪೂಜೆಯಲ್ಲಿ ನಿಲ್ಲಿಸುತ್ತಾಳೆ ಎಂದು ಶ್ರೇಷ್ಠಾ ಹೇಳುತ್ತಾಳೆ. ಪೂಜೆ ನಿಲ್ಲುವುದಿಲ್ಲ, ಈ ಮನೆಯಲ್ಲಿ ಹಿರಿಯ ದಂಪತಿ ಇದ್ದಾರೆ, ನನ್ನ ಅತ್ತೆ ಮಾವ, ಅವರು ಪೂಜೆಗೆ ಕೂರುತ್ತಾರೆ ಎಂದು ಭಾಗ್ಯಾ ಹೇಳುತ್ತಾಳೆ.
ಕುಸುಮಾ, ಧರ್ಮರಾಜ್ ಇಬ್ಬರೂ ಪೂಜೆಗೆ ಕೂರುತ್ತಾರೆ. ಪೂಜೆ ಮುಗಿದ ನಂತರ ಎಲ್ಲರಿಗೂ ತಾಂಬೂಲ ಕೊಡುವಂತೆ ಅರ್ಚಕರು ಭಾಗ್ಯಾಗೆ ತಟ್ಟೆ ಕೊಡುತ್ತಾರೆ. ಅದನ್ನು ತೆಗೆದುಕೊಳ್ಳಲು ಭಾಗ್ಯಾ ಹೋದಾಗ, ಅವಳ ಕೈಯಿಂದ ಶ್ರೇಷ್ಠಾ ಕಸಿದುಕೊಂಡು ಎಲ್ಲರಿಗೂ ತಾಂಬೂಲ ಕೊಡಲು ಹೋಗುತ್ತಾಳೆ. ಆದರೆ ಅವಳ ಕೈಯಿಂದ ಯಾರೂ ತಾಂಬೂಲ ತೆಗೆದುಕೊಳ್ಳುವುದಿಲ್ಲ. ಈ ಮನೆಗೆ ತಕ್ಕ ಸೊಸೆ ಭಾಗ್ಯಾ, ಅವಳು ಕೊಟ್ಟರೆ ಮಾತ್ರ ನಾವು ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಪೂಜಾ ಬಂದು ಶ್ರೇಷ್ಠಾ ಕೈಯಿಂದ ತಾಂಬೂಲದ ತಟ್ಟೆ ಕಸಿದುಕೊಂಡು ಭಾಗ್ಯಾಗೆ ಕೊಡುತ್ತಾಳೆ.
ಕೋಪಗೊಂಡ ಶ್ರೇಷ್ಠಾ ರೂಮ್ಗೆ ಹೋಗುತ್ತಾಳೆ. ನಾನು ಭಾಗ್ಯಾ ಆಗಿ ಇದ್ದರೆ ಇವರನ್ನೆಲ್ಲಾ ಬಗ್ಗಿಸಲು ಸಾಧ್ಯವಿಲ್ಲ. ನಾನು ಶ್ರೇಷ್ಠಾ ಆಗೇ ಇವರಿಗೆ ಬುದ್ಧಿ ಕಲಿಸುತ್ತೇನೆ ಎಂದುಕೊಳ್ಳುತ್ತಾಳೆ. ಮರುದಿನ ಆಫೀಸಿಗೆ ಹೋಗಲು ರೆಡಿ ಆಗುತ್ತಾಳೆ. ನೀನು ಆಫೀಸಿಗೆ ಹೋದರೆ ಮನೆ ಕೆಲಸ ಯಾರು ಮಾಡುತ್ತಾರೆ ಎಂದು ಕುಸುಮಾ ಕೇಳುತ್ತಾಳೆ. ಅದಕ್ಕೆ ನಾನು ಎಲ್ಲಾ ರೆಡಿ ಮಾಡಿದ್ದೇನೆ ಎಂದು ಹೇಳುವ ಶ್ರೇಷ್ಠಾ, ಮನೆ ಕೆಲಸದವಳನ್ನು ಕರೆಯುತ್ತಾಳೆ.
ಮನೆ ಕೆಲಸದವಳನ್ನು ಕುಸುಮಾ ಒಪ್ಪುತ್ತಾಳಾ.? ಶ್ರೇಷ್ಠಾ ಮತ್ತೇನು ಅವಾಂತರ ಮಾಡುತ್ತಾಳೆ.? ಮುಂದಿನ ಎಪಿಸೋಡ್ಗಳಲ್ಲಿ ಉತ್ತರ ದೊರೆಯಲಿದೆ.
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!



























