ತಾಂಡವ್ನನ್ನು ಬ್ಲಾಕ್ಮೇಲ್ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ.
ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ ಉಪ್ಪಿಟ್ಟು ತಯಾರಿಸುತ್ತಾರಾ ಎಂದು ಕೇಳುತ್ತಾರೆ, ಅದರ ರುಚಿ ನೋಡುವ ಶ್ರೇಷ್ಠಾ ಚೆನಾಗಿದೆಯಲ್ಲಾ ಇದನ್ನು ಏಕೆ ಪ್ರಸಾದವಾಗಿ ಇಡುವುದಿಲ್ಲ ಎಂದು ಕೇಳುತ್ತಾಳೆ. ಶ್ರೇಷ್ಠಾ ವರ್ತನೆಗೆ ತಾಂಡವ್ ಬಿಟ್ಟು ಉಳಿದವರು ಸಿಟ್ಟಾಗುತ್ತಾರೆ. ನಾನು ಮನೆಯಲ್ಲಿ ಪೂಜೆ ಮಾಡುವುದಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸುತ್ತಾರೆ. ಆದರೆ ಅವರನ್ನು ಮನವಿ ಮಾಡುವ ಭಾಗ್ಯಾ ನಾನು ಇನ್ನು 5 ನಿಮಿಷದಲ್ಲಿ ದೇವರಿಗೆ ಪ್ರಸಾದ ಮಾಡಿಕೊಡುತ್ತೇನೆ ಎನ್ನುತ್ತಾಳೆ.
ಹೇಳಿದಂತೆ ಭಾಗ್ಯಾ 5 ನಿಮಿಷಕ್ಕೆ ಪ್ರಸಾದ ಮಾಡಿ ತರುತ್ತಾಳೆ. ಪೂಜೆಗೆ ಯಾರು ಕೂರುತ್ತಾರೆ ರಂದು ಅರ್ಚಕರು ಕೇಳುತ್ತಾರೆ. ಭಾಗ್ಯಾ ಹಾಗೂ ತಾಂಡವ್ ಕೂರುತ್ತಾರೆ ಎಂದು ಧರ್ಮರಾಜ್ ಹೇಳುತ್ತಾಳೆ. ಆದರೆ ಶ್ರೇಷ್ಠಾ ಅದಕ್ಕೆ ನಿರಾಕರಿಸುತ್ತಾಳೆ. ಡಿವೋರ್ಸ್ ಆಗಿರುವ ಭಾಗ್ಯಾ ಹೇಗೆ ತಾಂಡವ್ ಜೊತೆ ಪೂಜೆಗೆ ಕೂರುತ್ತಾಳೆ? ನಾನು ಕೂರುತ್ತೇನೆ ಎನ್ನುತ್ತಾಳೆ. ತಾಳಿ ಇಲ್ಲದೆ ನೀನು ಪೂಜೆಗೆ ಕೂರೋಕೆ ಆಗುವುದಿಲ್ಲ ಎಂದು ಸುನಂದಾ ಹೇಳುತ್ತಾಳೆ.ಹಾಗಾದರೆ ಈ ಪೂಜೆ ನಡೆಯುವುದಿಲ್ಲ, ಭಾಗ್ಯಾ ತನ್ನ ಸ್ವಾರ್ಥಕ್ಕಾಗಿ ಸತ್ಯನಾರಾಯಣಸ್ವಾಮಿ ಪೂಜೆಯಲ್ಲಿ ನಿಲ್ಲಿಸುತ್ತಾಳೆ ಎಂದು ಶ್ರೇಷ್ಠಾ ಹೇಳುತ್ತಾಳೆ. ಪೂಜೆ ನಿಲ್ಲುವುದಿಲ್ಲ, ಈ ಮನೆಯಲ್ಲಿ ಹಿರಿಯ ದಂಪತಿ ಇದ್ದಾರೆ, ನನ್ನ ಅತ್ತೆ ಮಾವ, ಅವರು ಪೂಜೆಗೆ ಕೂರುತ್ತಾರೆ ಎಂದು ಭಾಗ್ಯಾ ಹೇಳುತ್ತಾಳೆ.
ಕುಸುಮಾ, ಧರ್ಮರಾಜ್ ಇಬ್ಬರೂ ಪೂಜೆಗೆ ಕೂರುತ್ತಾರೆ. ಪೂಜೆ ಮುಗಿದ ನಂತರ ಎಲ್ಲರಿಗೂ ತಾಂಬೂಲ ಕೊಡುವಂತೆ ಅರ್ಚಕರು ಭಾಗ್ಯಾಗೆ ತಟ್ಟೆ ಕೊಡುತ್ತಾರೆ. ಅದನ್ನು ತೆಗೆದುಕೊಳ್ಳಲು ಭಾಗ್ಯಾ ಹೋದಾಗ, ಅವಳ ಕೈಯಿಂದ ಶ್ರೇಷ್ಠಾ ಕಸಿದುಕೊಂಡು ಎಲ್ಲರಿಗೂ ತಾಂಬೂಲ ಕೊಡಲು ಹೋಗುತ್ತಾಳೆ. ಆದರೆ ಅವಳ ಕೈಯಿಂದ ಯಾರೂ ತಾಂಬೂಲ ತೆಗೆದುಕೊಳ್ಳುವುದಿಲ್ಲ. ಈ ಮನೆಗೆ ತಕ್ಕ ಸೊಸೆ ಭಾಗ್ಯಾ, ಅವಳು ಕೊಟ್ಟರೆ ಮಾತ್ರ ನಾವು ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಪೂಜಾ ಬಂದು ಶ್ರೇಷ್ಠಾ ಕೈಯಿಂದ ತಾಂಬೂಲದ ತಟ್ಟೆ ಕಸಿದುಕೊಂಡು ಭಾಗ್ಯಾಗೆ ಕೊಡುತ್ತಾಳೆ.
ಕೋಪಗೊಂಡ ಶ್ರೇಷ್ಠಾ ರೂಮ್ಗೆ ಹೋಗುತ್ತಾಳೆ. ನಾನು ಭಾಗ್ಯಾ ಆಗಿ ಇದ್ದರೆ ಇವರನ್ನೆಲ್ಲಾ ಬಗ್ಗಿಸಲು ಸಾಧ್ಯವಿಲ್ಲ. ನಾನು ಶ್ರೇಷ್ಠಾ ಆಗೇ ಇವರಿಗೆ ಬುದ್ಧಿ ಕಲಿಸುತ್ತೇನೆ ಎಂದುಕೊಳ್ಳುತ್ತಾಳೆ. ಮರುದಿನ ಆಫೀಸಿಗೆ ಹೋಗಲು ರೆಡಿ ಆಗುತ್ತಾಳೆ. ನೀನು ಆಫೀಸಿಗೆ ಹೋದರೆ ಮನೆ ಕೆಲಸ ಯಾರು ಮಾಡುತ್ತಾರೆ ಎಂದು ಕುಸುಮಾ ಕೇಳುತ್ತಾಳೆ. ಅದಕ್ಕೆ ನಾನು ಎಲ್ಲಾ ರೆಡಿ ಮಾಡಿದ್ದೇನೆ ಎಂದು ಹೇಳುವ ಶ್ರೇಷ್ಠಾ, ಮನೆ ಕೆಲಸದವಳನ್ನು ಕರೆಯುತ್ತಾಳೆ.
ಮನೆ ಕೆಲಸದವಳನ್ನು ಕುಸುಮಾ ಒಪ್ಪುತ್ತಾಳಾ.? ಶ್ರೇಷ್ಠಾ ಮತ್ತೇನು ಅವಾಂತರ ಮಾಡುತ್ತಾಳೆ.? ಮುಂದಿನ ಎಪಿಸೋಡ್ಗಳಲ್ಲಿ ಉತ್ತರ ದೊರೆಯಲಿದೆ.
- IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್
- ಗಂಟಲಲ್ಲಿ ಕಪ್ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ
- ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು
- ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!
- ಕಮಲ್ ಹಾಸನ್ ಸಿನಿಮಾ ಬ್ಯಾನ್ ಮಾಡೋಕಾಗಲ್ಲ ; ಕಾರಣ ಬಿಚ್ಚಿಟ್ಟ ನಿರ್ಮಾಪಕ ಕೆ ಮಂಜು
- ಮೋದಿ ಸರಕಾರದ ಮುಖವಾಡ ಕಳಚಿ ಬಿದ್ದಿದೆ, ತಕ್ಷಣ ಅಧಿವೇಶನ ಕರೆಯಿರಿ : ಸಿಡಿಎಸ್ ಮಾತಿಗೆ ಸಿಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ
- ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ