ತಾಂಡವ್ನನ್ನು ಬ್ಲಾಕ್ಮೇಲ್ ಮಾಡಿ ಮನೆಗೆ ಬಂದು ಸೇರಿಕೊಂಡಿರುವ ಶ್ರೇಷ್ಠಾ, ತಾನು ಅಧಿಕೃತವಾಗಿ ಆ ಮನೆ ಸೊಸೆ ಎನ್ನುವಂತೆ ವರ್ತಿಸುತ್ತಿದ್ದಾಳೆ. ಮನೆಯವರೆಲ್ಲಾ ನನ್ನನ್ನು ಇಲ್ಲಿಂದ ಓಡಿಸಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ನಾನು ಆ ಭಾಗ್ಯಾಗಿಂತ ಕಡಿಮೆ ಎನಿಸಿಕೊಳ್ಳಬಾರದು ಎಂದು ಮನೆ ಕೆಲಸವನ್ನು ತಾನೇ ಮಾಡುತ್ತಿದ್ದಾಳೆ.
ಸತ್ಯನಾರಾಯಣಸ್ವಾಮಿಗೆ ಪ್ರಸಾದ ತಯಾರಿಸುತ್ತೇನೆ ಎಂದು ಹೇಳಿ ಶ್ರೇಷ್ಠಾ, ಉಪ್ಪಿಟ್ಟು ತಯಾರಿಸುತ್ತಾಳೆ. ಅದನ್ನು ನೋಡಿ ಅರ್ಚಕರು ಇಷ್ಟು ವರ್ಷಗಳ ಕಾಲ ಪೂಜೆ ಮಾಡಿದ್ದೇನೆ ಎಲ್ಲಿಯೂ ಈ ರೀತಿ ಪ್ರಮಾದ ಆಗಿಲ್ಲ, ಯಾರಾದರೂ ಸತ್ಯನಾರಾಯಣ ಪೂಜೆಗೆ ಉಪ್ಪಿಟ್ಟು ತಯಾರಿಸುತ್ತಾರಾ ಎಂದು ಕೇಳುತ್ತಾರೆ, ಅದರ ರುಚಿ ನೋಡುವ ಶ್ರೇಷ್ಠಾ ಚೆನಾಗಿದೆಯಲ್ಲಾ ಇದನ್ನು ಏಕೆ ಪ್ರಸಾದವಾಗಿ ಇಡುವುದಿಲ್ಲ ಎಂದು ಕೇಳುತ್ತಾಳೆ. ಶ್ರೇಷ್ಠಾ ವರ್ತನೆಗೆ ತಾಂಡವ್ ಬಿಟ್ಟು ಉಳಿದವರು ಸಿಟ್ಟಾಗುತ್ತಾರೆ. ನಾನು ಮನೆಯಲ್ಲಿ ಪೂಜೆ ಮಾಡುವುದಿಲ್ಲ ಎಂದು ಅರ್ಚಕರು ಬೇಸರ ವ್ಯಕ್ತಪಡಿಸುತ್ತಾರೆ. ಆದರೆ ಅವರನ್ನು ಮನವಿ ಮಾಡುವ ಭಾಗ್ಯಾ ನಾನು ಇನ್ನು 5 ನಿಮಿಷದಲ್ಲಿ ದೇವರಿಗೆ ಪ್ರಸಾದ ಮಾಡಿಕೊಡುತ್ತೇನೆ ಎನ್ನುತ್ತಾಳೆ.
ಹೇಳಿದಂತೆ ಭಾಗ್ಯಾ 5 ನಿಮಿಷಕ್ಕೆ ಪ್ರಸಾದ ಮಾಡಿ ತರುತ್ತಾಳೆ. ಪೂಜೆಗೆ ಯಾರು ಕೂರುತ್ತಾರೆ ರಂದು ಅರ್ಚಕರು ಕೇಳುತ್ತಾರೆ. ಭಾಗ್ಯಾ ಹಾಗೂ ತಾಂಡವ್ ಕೂರುತ್ತಾರೆ ಎಂದು ಧರ್ಮರಾಜ್ ಹೇಳುತ್ತಾಳೆ. ಆದರೆ ಶ್ರೇಷ್ಠಾ ಅದಕ್ಕೆ ನಿರಾಕರಿಸುತ್ತಾಳೆ. ಡಿವೋರ್ಸ್ ಆಗಿರುವ ಭಾಗ್ಯಾ ಹೇಗೆ ತಾಂಡವ್ ಜೊತೆ ಪೂಜೆಗೆ ಕೂರುತ್ತಾಳೆ? ನಾನು ಕೂರುತ್ತೇನೆ ಎನ್ನುತ್ತಾಳೆ. ತಾಳಿ ಇಲ್ಲದೆ ನೀನು ಪೂಜೆಗೆ ಕೂರೋಕೆ ಆಗುವುದಿಲ್ಲ ಎಂದು ಸುನಂದಾ ಹೇಳುತ್ತಾಳೆ.ಹಾಗಾದರೆ ಈ ಪೂಜೆ ನಡೆಯುವುದಿಲ್ಲ, ಭಾಗ್ಯಾ ತನ್ನ ಸ್ವಾರ್ಥಕ್ಕಾಗಿ ಸತ್ಯನಾರಾಯಣಸ್ವಾಮಿ ಪೂಜೆಯಲ್ಲಿ ನಿಲ್ಲಿಸುತ್ತಾಳೆ ಎಂದು ಶ್ರೇಷ್ಠಾ ಹೇಳುತ್ತಾಳೆ. ಪೂಜೆ ನಿಲ್ಲುವುದಿಲ್ಲ, ಈ ಮನೆಯಲ್ಲಿ ಹಿರಿಯ ದಂಪತಿ ಇದ್ದಾರೆ, ನನ್ನ ಅತ್ತೆ ಮಾವ, ಅವರು ಪೂಜೆಗೆ ಕೂರುತ್ತಾರೆ ಎಂದು ಭಾಗ್ಯಾ ಹೇಳುತ್ತಾಳೆ.
ಕುಸುಮಾ, ಧರ್ಮರಾಜ್ ಇಬ್ಬರೂ ಪೂಜೆಗೆ ಕೂರುತ್ತಾರೆ. ಪೂಜೆ ಮುಗಿದ ನಂತರ ಎಲ್ಲರಿಗೂ ತಾಂಬೂಲ ಕೊಡುವಂತೆ ಅರ್ಚಕರು ಭಾಗ್ಯಾಗೆ ತಟ್ಟೆ ಕೊಡುತ್ತಾರೆ. ಅದನ್ನು ತೆಗೆದುಕೊಳ್ಳಲು ಭಾಗ್ಯಾ ಹೋದಾಗ, ಅವಳ ಕೈಯಿಂದ ಶ್ರೇಷ್ಠಾ ಕಸಿದುಕೊಂಡು ಎಲ್ಲರಿಗೂ ತಾಂಬೂಲ ಕೊಡಲು ಹೋಗುತ್ತಾಳೆ. ಆದರೆ ಅವಳ ಕೈಯಿಂದ ಯಾರೂ ತಾಂಬೂಲ ತೆಗೆದುಕೊಳ್ಳುವುದಿಲ್ಲ. ಈ ಮನೆಗೆ ತಕ್ಕ ಸೊಸೆ ಭಾಗ್ಯಾ, ಅವಳು ಕೊಟ್ಟರೆ ಮಾತ್ರ ನಾವು ತೆಗೆದುಕೊಳ್ಳುತ್ತೇವೆ ಎನ್ನುತ್ತಾರೆ. ಪೂಜಾ ಬಂದು ಶ್ರೇಷ್ಠಾ ಕೈಯಿಂದ ತಾಂಬೂಲದ ತಟ್ಟೆ ಕಸಿದುಕೊಂಡು ಭಾಗ್ಯಾಗೆ ಕೊಡುತ್ತಾಳೆ.
ಕೋಪಗೊಂಡ ಶ್ರೇಷ್ಠಾ ರೂಮ್ಗೆ ಹೋಗುತ್ತಾಳೆ. ನಾನು ಭಾಗ್ಯಾ ಆಗಿ ಇದ್ದರೆ ಇವರನ್ನೆಲ್ಲಾ ಬಗ್ಗಿಸಲು ಸಾಧ್ಯವಿಲ್ಲ. ನಾನು ಶ್ರೇಷ್ಠಾ ಆಗೇ ಇವರಿಗೆ ಬುದ್ಧಿ ಕಲಿಸುತ್ತೇನೆ ಎಂದುಕೊಳ್ಳುತ್ತಾಳೆ. ಮರುದಿನ ಆಫೀಸಿಗೆ ಹೋಗಲು ರೆಡಿ ಆಗುತ್ತಾಳೆ. ನೀನು ಆಫೀಸಿಗೆ ಹೋದರೆ ಮನೆ ಕೆಲಸ ಯಾರು ಮಾಡುತ್ತಾರೆ ಎಂದು ಕುಸುಮಾ ಕೇಳುತ್ತಾಳೆ. ಅದಕ್ಕೆ ನಾನು ಎಲ್ಲಾ ರೆಡಿ ಮಾಡಿದ್ದೇನೆ ಎಂದು ಹೇಳುವ ಶ್ರೇಷ್ಠಾ, ಮನೆ ಕೆಲಸದವಳನ್ನು ಕರೆಯುತ್ತಾಳೆ.
ಮನೆ ಕೆಲಸದವಳನ್ನು ಕುಸುಮಾ ಒಪ್ಪುತ್ತಾಳಾ.? ಶ್ರೇಷ್ಠಾ ಮತ್ತೇನು ಅವಾಂತರ ಮಾಡುತ್ತಾಳೆ.? ಮುಂದಿನ ಎಪಿಸೋಡ್ಗಳಲ್ಲಿ ಉತ್ತರ ದೊರೆಯಲಿದೆ.
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
- ಕೊರೊನಾ ಸಮಯದಲ್ಲಿ ಮಾಡಿದಂತೆ ಕುರಿಗಳ ಹಿಂಡಿನಂತೆ ಸಾಯಲು ನಾವು ಸಿದ್ಧರಿಲ್ಲ: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಕುಮಾರ್ ಪರೋಕ್ಷ ವಾಗ್ದಾಳಿ
- ಧಾರವಾಡದಲ್ಲಿ ಮಾಜಿ ಕಾರ್ಪೊರೇಟರ್ ಮಗಳ ಅನುಮಾನಾಸ್ಪದ ಸಾವು : ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸವಿತಾ ಹೊಂಗಲಮಠ.!
- ‘ಭಾರತದಲ್ಲಿ ಮತ್ತೆ ಲಾಕ್ಡೌನ್?’ : ಪ್ರಧಾನಿ ಮೋದಿ ಭಾಷಣದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಆತಂಕ ಮತ್ತು ಚರ್ಚೆ!
- Horoscope Today : 25 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳಕೆಯಾಗದ ಇಂಟರ್ನೆಟ್ ಡೇಟಾ ಅನ್ನು ಮಾರನೇ ದಿನಕ್ಕೆ ರೋಲ್ ಓವರ್ಗೆ ರಾಘವ್ ಚಡ್ಡಾ ಆಗ್ರಹ; ಟೆಲಿಕಾಂ ಕಂಪನಿಗಳಿಗೆ ಚಾಟಿ
- ಕೆಸರಲ್ಲಿ ಇರುವ ಕಮಲವನ್ನು ಅಲ್ಲೇ ಇರಲು ಬಿಡಿ : ದೇಶಭಕ್ತಿ ಪ್ರಶ್ನಿಸಿದ ಅಯೋಗ್ಯರಿಗೆ ಮತ ಹಾಕಬೇಡಿ : ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್ : ₹1.50 ಲಕ್ಷ ಪಾವತಿಸಿ ಕೃಷಿ ಪಂಪ್ ಸೆಟ್ ಅಕ್ರಮ-ಸಕ್ರಮಕ್ಕೆ 3 ತಿಂಗಳ ಗಡುವು.!
- ಗಂಡನಿಲ್ಲದಾಗ ಬಾಡಿಗೆಗೆ ಬಂದ ಯವಕನ ಜೊತೆ ಸರಸ, ಅಡ್ಡಿಯಾದ ಅತ್ತೆ ಕತೆ ಮುಗಿಸಿದ ಸೊಸೆ
- Horoscope Today : 24 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 23 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ
- ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!
- Horoscope Today : 21 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತಾನೆಲ್ಲಿ ಕೊಲೆಯಾಗ್ತಿನೋ ಅನ್ನೋ ಭಯಕ್ಕೆ ಹೆಂಡತಿಯನ್ನು ಪ್ರಿಯಕರನ ಜೊತೆ ಕಳಿಸಿಕೊಟ್ಟ ಪತಿರಾಯ
- ಕುತ್ತಿಗೆಗೆ ಸುತ್ತಿಕೊಂಡಿದ್ದ ನಾಗರಹಾವು ಕಚ್ಚಿ ಉರಗ ರಕ್ಷಕ ಸಾವು : ವಿಡಿಯೋ ವೈರಲ್ | WATCH Video
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- 75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ
- ಸರ್ಕಾರಿ ನೌಕರಿ, ಕೈತುಂಬಾ ಸಂಬಳ ಬರುತ್ತಿದ್ದರೂ 8 ವರ್ಷದ ಮಗಳನ್ನ ಚೆನ್ನೈ ಎಕ್ಸ್ಪ್ರೆಸ್ ರೈಲಿಗೆ ತಳ್ಳಿದ ತಾಯಿ!
- ಹಬ್ಬ ಸಂಭ್ರಮದ ನಡುವೆ ಆಸಿಡ್ ಎರಚಿದ ಸುಹಿಲ್ ಭಾಷಾ ; ಮಗು ಸೇರಿ ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ.!
- Horoscope Today : 20 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಾಂಗ್ರೆಸ್ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ಎಚ್ಡಿ ದೇವೇಗೌಡ: ಪ್ರೀತಿಯಲ್ಲ, ಬಲವಂತದ ಮದುವೆ; ಹಿಂಸೆ ಕಿರುಕುಳವಿತ್ತು!
- ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್.? ‘ಐಟಂ ಸಾಂಗ್’ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು



























