Borewell Subsidy Scheme : ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

Borewell Subsidy Scheme : ನಮಸ್ಕಾರ ಸ್ನೇಹಿತರೇ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ.

ಇದನ್ನೂ ಕೂಡ ಓದಿ : Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಆಹ್ವಾನ.?

  • ಗಂಗಾ ಕಲ್ಯಾಣ ಯೋಜನೆ
  • ಸ್ವಾವಲಂಬಿ ಸಾರಥಿ ಯೋಜನೆ
  • ಸ್ವಯಂ ಉದ್ಯೋಗ ಸಾಲ ಯೋಜನೆ
  • ಹೊಲಿಗೆ ಯಂತ್ರ ವಿತರಣೆ ಯೋಜನೆ
  • ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
  • ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
  • ಅರಿವು ಶೈಕ್ಷಣಿಕ ಸಾಲ ಯೋಜನೆ
  • ದೇವರಾಜ್ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ

ಇದನ್ನೂ ಕೂಡ ಓದಿ : ತಾಯಿ-ಮಗು ಸಹಾಯ ಹಸ್ತ ಯೋಜನೆ – ₹6,000 ರೂಪಾಯಿ ಆರ್ಥಿಕ ನೆರವು ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?

ಗಂಗಾ ಕಲ್ಯಾಣ ಯೋಜನೆ (Ganga Kalyana Yojane) :-

ಗಂಗಾ ಕಲ್ಯಾಣ ಯೋಜನೆ (Ganga Kalyana Yojane) ವತಿಯಿಂದ ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ರೈತರಿಗೆ ತಮ್ಮ ಜಮೀನಿನಲ್ಲಿ ನೀರಾವರಿ ಬೆಳೆಗಳನ್ನು ಬೆಳೆಯಲು ಸಹಾಯವಾಗುವಂತೆ ಬೋರ್ವೆಲ್ ಕೊರೆಸಿಕೊಳ್ಳಲು ಸಹಾಯಧನ ನೀಡಲು ಅರ್ಜಿಯನ್ನ ಅಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ವೈಯಕ್ತಿಕ ಕೊಳವೆಬಾವಿ ಕೋರೆಸಿಕೊಳ್ಳಲು ₹3.75 ಲಕ್ಷ ರೂಪಾಯಿಯಿಂದ ₹4.75 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯ ಹಣವನ್ನು ಜಿಲ್ಲೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಿಂಗಡಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಘಟಕ ವೆಚ್ಚ ₹4.75 ಲಕ್ಷ ನೀಡಲಾಗುವುದು. ಈ ಹಣದಲ್ಲಿ ವಿದ್ಯುತ್ ಸಂಪರ್ಕ ವೆಚ್ಚಕ್ಕೆ ₹75,000/- ರೂಪಾಯಿಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು.

ಇದನ್ನೂ ಕೂಡ ಓದಿ : PMJAY : ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ 5 ಲಕ್ಷ ರೂಪಾಯಿಯ ಬಂಪರ್ ಗಿಫ್ಟ್​! ಇದನ್ನ ಪಡೆಯುವುದು ಹೇಗೆ.? ಸಂಪೂರ್ಣ ಮಾಹಿತಿ

ಈ ಮೇಲೆ ತಿಳಿಸಿರುವ ಜಿಲ್ಲೆಗಳ ರೈತರನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ರೈತರಿಗೆ ಘಟಕ ವೆಚ್ಚ ₹3.75 ಲಕ್ಷ ರೂಪಾಯಿ ಹಣವನ್ನು ನೀಡುತ್ತಿದ್ದು, ಈ ಜಿಲ್ಲೆಯವರಿಗೂ ಕೂಡ ವಿದ್ಯುತ್ ಸಂಪರ್ಕ ವೆಚ್ಚಕ್ಕೆ ₹75,000/- ರೂಪಾಯಿಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು. ಒಂದು ವೇಳೆ ಈ ಜಿಲ್ಲೆಯ ರೈತರಿಗೆ ಈ ಹಣದಲ್ಲಿ ಕೊಳವೆಬಾವಿ ಕರೆಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ 50 ಸಾವಿರ ಹಣವನ್ನು 1% ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಸಾಲ ಮಂಜೂರು ಮಾಡಿಕೊಡಲಾಗುವುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ರೈತರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು. ಹಾಗು ಇನ್ನುಳಿದ ಜಿಲ್ಲೆಯ ರೈತರು ಎರಡು ಎಕರೆ ಜಮೀನನ್ನು ಹೊಂದಿರಬೇಕು.

ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?

ಈ ಯೋಜನೆಗೆ ಅರ್ಹರಿರುವ ಎಲ್ಲಾ ರೈತರು ಆಗಸ್ಟ್ 31, 2024ನೇ ತಾರೀಕಿನ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್ ಲೈನ್ ನಲ್ಲಿಯೇ ಅರ್ಜಿಯನ್ನ ಸಲ್ಲಿಸಬೇಕು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply