ರೈತರಿಗೆ ಗುಡ್‌ ನ್ಯೂಸ್ :‌ 20 ಕುರಿ 1 ಟಗರು ಸಾಕಲು ಸರ್ಕಾರದಿಂದ ಸಿಗಲಿದೆ ₹43,750 ಸಹಾಯಧನ! ಇಂದೇ ಅರ್ಜಿ ಹಾಕಿ

ಒಮ್ಮೆ ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೀಮಿತವಾಗಿದ್ದ ಕುರಿ ಸಾಕಾಣಿಕೆ ಇಂದು ಲಾಭದಾಯಕ ಹಾಗೂ ವೃತ್ತಿಪರ ಉದ್ಯೋಗವಾಗಿ ರೂಪಾಂತರಗೊಂಡಿದೆ. ಹೆಚ್ಚುತ್ತಿರುವ ಯುವಕರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಜೀವನಮಟ್ಟ ಸುಧಾರಣೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗಾಗಿ ಕರ್ನಾಟಕ ಸರ್ಕಾರ ‘ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ’ಯನ್ನು ಜಾರಿಗೆ ತಂದಿದೆ. ಈ ಯೋಜನೆಯು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಆರ್ಥಿಕವಾಗಿ ಹಿಂದುಳಿದ ಸದಸ್ಯರಿಗೆ ಸುಸ್ಥಿರ ಜೀವನೋಪಾಯ ಒದಗಿಸುವ ಗುರಿ ಹೊಂದಿದೆ. ಏನಿದು ಅಮೃತ ಸ್ವಾಭಿಮಾನಿ … Read more

ಫೆಬ್ರವರಿ, ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ : ಗುಡ್‌ ನ್ಯೂಸ್‌ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

2025 ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹ ಲಕ್ಷ್ಮಿ ಹಣ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಒಪ್ಪಿಕೊಂಡಿದ್ದು, ಆದಷ್ಟು ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದರು. ಇದೀಗ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಗೃಹಲಕ್ಷ್ಮಿ ಹಣ ಒಂದೆರಡು ತಿಂಗಳು ತಡವಾಗಿರಬಹುದು. ಹಣ ಸಂಗ್ರಹವಾದ ಬಳಿಕ … Read more

‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಸಂಬಳ ಪ್ಯಾಕೇಜ್’ ನಲ್ಲಿ ನೋಂದಾಯಿಸಲು ಜ. 16 ಕೊನೆಯ ದಿನ.!

ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ‘ಎ’ ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, … Read more

ಅಂಚೆ ಕಚೇರಿಯ ಅದ್ಭುತ ಯೋಜನೆ : ಒಮ್ಮೆ ಠೇವಣಿ ಇಟ್ಟರೆ ಪ್ರತಿ ತಿಂಗಳು ನಿಮ್ಮ ಖಾತೆಗೆ 5,550 ರೂ. ಜಮಾ.!

ಇತ್ತೀಚೆಗೆ ಅನೇಕ ಜನರು ಅಂಚೆ ಕಚೇರಿ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಕಡಿಮೆ ಅಪಾಯ ಮತ್ತು ಉತ್ತಮ ಆದಾಯ ಇದಕ್ಕೆ ಕಾರಣ.ಸುರಕ್ಷಿತ ಹೂಡಿಕೆಯ ಜೊತೆಗೆ ಪ್ರತಿ ತಿಂಗಳು ಸ್ಥಿರ ಆದಾಯವನ್ನು ಬಯಸುವವರಿಗೆ ಅಂಚೆ ಕಚೇರಿ ಅದ್ಭುತ ಅವಕಾಶವನ್ನು ನೀಡುತ್ತಿದೆ. ಅದು ಅಂಚೆ ಕಚೇರಿ ಮಾಸಿಕ ಆದಾಯ ಯೋಜನೆ. ಈ ಯೋಜನೆ ವಿಶೇಷವಾಗಿ ನಿವೃತ್ತರು, ಗೃಹಿಣಿಯರು ಮತ್ತು ಅಪಾಯ-ಮುಕ್ತ ಆದಾಯವನ್ನು ಬಯಸುವ ಮಧ್ಯಮ ವರ್ಗದ ಜನರಿಗೆ ವರದಾನವಾಗಿದೆ. ಈ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕಕ್ಕೆ ಕೇಂದ್ರ ಸರ್ಕಾರ ಬಡ್ಡಿದರಗಳಲ್ಲಿ ಯಾವುದೇ … Read more

ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಾದ್ಯಂತ ‘ಅಕ್ಕಪಡೆ’ ಜಾರಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯು ಸಹಯೋಗದೊಂದಿಗೆ “ಅಕ್ಕ ಪಡೆ” ಎಂಬ ಒಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತುತ ಆಧುನಿಕ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ (ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನವ ಕಳ್ಳ ಸಾಗಣೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ & ಪೋಕ್ಸ್) ಅಂತಹ ಪ್ರಕರಣಗಳಿಂದ ಮಹಿಳೆಯರು ಮತ್ತು … Read more

ಫಲಾನುಭವಿಗಳಿಗೆ ಗುಡ್‌ನ್ಯೂಸ್ ಇದೆಯಾ.? ಗೃಹಲಕ್ಷ್ಮಿ ಹಣದ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಸಚಿವೆ ಹೆಬ್ಬಾಳ್ಕರ್!‌

ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ. ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮಿ ಹಣ ನೀಡಲಾಗುತ್ತಿತ್ತು. ಆದರೆ ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದ್ದು, ಅಂತವರ ಗೃಹಲಕ್ಷ್ಮಿ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ … Read more

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ‘ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ(1)ರ ಆದೇಶದಲ್ಲಿ ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಇಡೀ ಸೇವಾವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 730 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲಾಗಿದೆ. … Read more

ಇನ್ಮುಂದೆ ರಾಜ್ಯದಲ್ಲಿ ಭೂ ದಾಖಲೆಗಳು ಸಂಪೂರ್ಣ ಡಿಜಿಟಲೀಕರಣ : ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ (Digitalise) ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ (AC Office) ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ (DC Office) ದಾಖಲೆಗಳ ಸ್ಕ್ಯಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ತಿಳಿಸಿದರು. ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಯನ್ನು … Read more

ಹಳೆ ವಾಹನ ಇಟ್ಟುಕೊಂಡಿದ್ದೀರಾ ಈ ಸುದ್ದಿ ಓದಿ ಇಲ್ಲದಿದ್ದರೆ ನಿಮ್ಮ ಗಾಡಿ ಗುಜರಿ ಸೇರೋದು ಗ್ಯಾರಂಟಿ

ವಾಹನ ಸವಾರರೇ ಎಚ್ಚರ. ನೀವೇನಾದರೂ ಹಳೆಯ ವಾಹನಗಳನ್ನು ಹೊಂದಿದ್ದೀರಾ? ಕಚೇರಿಗೆ ಅಲೆದಾಡದೆ, ವಾಹನವನ್ನೂ ತೋರಿಸದೆ ಏಜೆಂಟರಿಗೆ ಹಣ ಕೊಟ್ಟು ಫಿಟ್‌ನೆಸ್ ಸರ್ಟಿಫಿಕೇಟ್ ಮಾಡಿಸಿಕೊಳ್ಳುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗೆ ಆಘಾತ ತರುವುದು ಖಂಡಿತ. ಏಕೆಂದರೆ ವಾಹನಗಳ ಫಿಟ್‌ನೆಸ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ತಡೆಯಲು ಮತ್ತು ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ನಿರ್ವಹಣೆ ಹೆಸರಿನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಶಾಶ್ವತ ಬೀಗ ಜಡಿಯಲು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಕಠಿಣ ಕ್ರಮಕ್ಕೆ … Read more

ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!

ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ರೇಬೀಸ್ ಲಸಿಕೆ ಪಡೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸೇವಿಸುವ ಮೊಸರು ಆಧಾರಿತ ಖಾದ್ಯವಾದ ರೈತಾವನ್ನು ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದೆ ಎಂದು ಕಂಡುಹಿಡಿಯಲ್ಪಟ್ಟ ನಂತರ ಈ ಮುನ್ನೆಚ್ಚರಿಕೆ ಕ್ರಮವಾಯಿತು. ಡಿಸೆಂಬರ್ 26 ರಂದು ಎಮ್ಮೆ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಸೋಂಕಿನ ಭೀತಿ ಹುಟ್ಟುಹಾಕಿದೆ. ರೇಬಿಸ್ ರೋಗಲಕ್ಷಣಗಳಿಂದ ಎಮ್ಮೆ ಸಾವನ್ನಪ್ಪಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಾಮೇಶ್ವರ್ ಮಿಶ್ರಾ ದೃಢಪಡಿಸಿದ್ದಾರೆ. ಸೋಂಕಿತ ರೈಟಾವನ್ನು ಸೇವಿಸಿದ ಗ್ರಾಮಸ್ಥರಿಗೆ ಲಸಿಕೆ ಹಾಕಿಸಿಕೊಳ್ಳಲು ಸೂಚಿಸಲಾಯಿತು. … Read more