ʼನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಕೊಟ್ಟ ಮಾತನ್ನ ಉಳಿಸಿಕೊಳ್ಳಬೇಕುʼ; ಡಿ.ಕೆ.ಶಿವಕುಮಾರ್‌ ಈ ಟ್ವೀಟ್‌ ಕಾಂಗ್ರೆಸ್‌ ಹೈಕಮಾಂಡ್‌ಗೆ ಹೇಳಿದ್ದಾ?

ಕರ್ನಾಟಕ ಸರ್ಕಾರದಲ್ಲಿ ಇನ್ನಿಲ್ಲದ ಗೊಂದಲ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾಗುವುದು ಬಹುತೇಕ ನಿಶ್ಚಿತ ಎನ್ನುವ ಸಂದರ್ಭ ಬಂದಿದೆ. ಆದರೆ ಡಿ.ಕೆ.ಶಿವಕುಮಾರ್‌ ಆಗ್ತಾರಾ? ಸತೀಶ್‌ ಜಾರಕಿಹೊಳಿನಾ? ಅಥವಾ ಇನ್ಯಾರಾದ್ರೂ ಈ ಸ್ಥಾನಕ್ಕೆ ಏರುತ್ತಾರಾ ಎಂಬ ಪ್ರಶ್ನೆಯೂ ಎದ್ದಿದೆ. ಆದ್ರೆ ಮುಖ್ಯಮಂತ್ರಿ ಆಗಲೇಬೇಕು ಎಂಬುದು ಡಿ.ಕೆ.ಶಿವಕುಮಾರ್‌ ಅವರ ಹಠ. ಇದು ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಮಧ್ಯೆ ಬೂದಿ ಮುಚ್ಚಿದ ಕೆಂಡದಂಥ ಮನಸ್ತಾಪಕ್ಕೆ ಕಾರಣವಾಗಿದೆ. ಕಾರ್ಯಕ್ರಮಗಳಲ್ಲಿ ಇಬ್ಬರೂ ಒಟ್ಟೊಟ್ಟಿಗೆ ಪಾಲ್ಗೊಳ್ಳುತ್ತಿದ್ದ ಇವರಿಬ್ಬರು, ಇದೀಗ ತಪ್ಪಿಸಿಕೊಳ್ಳುತ್ತಿದ್ದಾರೆ. ಸದ್ಯ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾರೆಲ್ಲ … Read more

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು- ಕತ್ತು ಹಿಸುಕಿ ಕೊಂದೇ ಬಿಟ್ಟಳು ಪಾಪಿ ತಾಯಿ!

ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ಪಾಪಿ ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಕ್ರೂರವಾಗಿ ಕೊಲೆ ಮಾಡಿದ್ದಾಳೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಮೂಲದ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. ಆದರೆ ನ.23 ರಂದು ಮುದಕವಿ … Read more

ʻಲಕ್ಷ್ಮಿ ದೇಗುಲ ಕಟ್ಟಿಸಿ ನಿಮ್ಮ ಜಾತಕಕ್ಕೆ ಒಳ್ಳೇದುʼ; ಜ್ಯೋತಿಷಿ ಮಾತು ನಂಬಿ 1 ಕೋಟಿ ನಗದು, 180 ಗ್ರಾಂ ಚಿನ್ನ ಕಳ್ಕೊಂಡ ಟೀಚರ್

ʻಲಕ್ಷ್ಮಿ ದೇಗುಲ ಕಟ್ಟಿಸಿದರೆ ನಿಮ್ಮ ಜಾತಕಕ್ಕೆ ತುಂಬಾ ಒಳ್ಳೆದುʼ ಎಂದು ಜ್ಯೋತಿಷಿಯೊಬ್ಬ, 56 ವರ್ಷದ ಸಂಗೀತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಹಾಗೂ ಚಿನ್ನಾಭರಣ ವಂಚಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ಠಾಣಾ ವ್ಯಾಪ್ತಿ ನಡೆದಿದೆ. ಜ್ಯೋತಿಷಿಗಳ ಮೇಲಿದ್ದ ನಂಬಿಕೆ ಮತ್ತು ದೇವರ ಮೇಲಿದ್ದ ಅಪಾರ ಭಕ್ತಿಯನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್‌ ಜ್ಯೋತಿಷಿ ಮಂಜುನಾಥ್‌ ಸಂಗೀತ ಶಿಕ್ಷಕಿ ಸರ್ವಮಂಗಳಾ ಅವರಿಗೆ ವಂಚಿಸಿದ್ದಾನೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಆರೋಪಿಗಳಾದ ಮಂಜುನಾಥ್, ರಾಘವೇಂದ್ರ, ಮಧುಸೂದನ್ … Read more

ಅಪರಾಧಗಳಲ್ಲಿ ಪೊಲೀಸರು ಭಾಗಿಯಾಗಿದ್ದರೆ ಮುಲ್ಲಾಜಿಲ್ಲದೆ ಸೇವೆಯಿಂದ ವಜಾ ಎಂದ ಗೃಹ ಸಚಿವ ಪರಮೇಶ್ವರ್‌

ಪೊಲೀಸ್‌‍ ಸಿಬ್ಬಂದಿ ಮತ್ತು ಅಧಿಕಾರಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರೆ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲ್ಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ದರೋಡೆ ಪ್ರಕರಣದಲ್ಲಿ ಮತ್ತು ಕೊರಮಂಗಲ ಪೊಲೀಸ್‌‍ ಠಾಣೆ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಮಾಲೂರು ಪೊಲೀಸ್‌‍ ಠಾಣೆಯ ಕಾನ್ಸ್ ಟೆಬಲ್‌ ಭಾಗಿಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಮುಂದೆ ಮತ್ತಷ್ಟು ಎಚ್ಚರಿಕೆಯಿಂದ ಇರುವಂತೆ ಪೊಲೀಸ್‌‍ ಸಿಬ್ಬಂದಿಗಳಿಗೆ ಸೂಚನೆ ನೀಡುತ್ತೇನೆ. ಅಪರಾಧ ಕೃತ್ಯಗಳಲ್ಲಿ ಯಾರಾದರೂ ಭಾಗಿಯಾಗಿರುವುದು ಕಂಡು ಬಂದರೆ ಮುಲಾಜಿಲ್ಲದೆ … Read more

ಹೊರಗುತ್ತಿಗೆ ಉದ್ಯೋಗ ಬಂದ್‌, ಸರಕಾರಕ್ಕೆ ಹೆಚ್ಚುವರಿ ಹೊರೆ, ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ

ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರ ನೇಮಕ ಪದ್ಧತಿಯನ್ನು 2028ರ ಮಾರ್ಚ್‌ನೊಳಗೆ ಸಂಪೂರ್ಣ ನಿಲ್ಲಿಸಲು ರಾಜ್ಯ ಸಚಿವ ಸಂಪುಟ ಉಪಸಮಿತಿ ನಿರ್ಣಯಿಸಿದೆ. ಖಾಸಗಿ ಏಜೆನ್ಸಿಗಳ ಮೂಲಕ ಬಹುದೊಡ್ಡ ಸಂಖ್ಯೆಯಲ್ಲಿ ನೇಮಕಗೊಂಡಿರುವ ಹೊರಗುತ್ತಿಗೆ ಸೇವೆಯನ್ನು ಈ ಗಡುವಿನೊಳಗೆ ಹಂತಹಂತವಾಗಿ ನಿಲ್ಲಿಸಲು ನಿರ್ಧರಿಸಲಾಗಿದೆ. ಈ ತೀರ್ಮಾನದಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ ಹೆಚ್ಚುವರಿ 10,000 ಕೋಟಿ ರೂ. ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಅಂದಾಜು ಮಾಡಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಈ … Read more

ಅಂಬಾನಿಗೆ ಆಘಾತ | ಯುವಕರಿಗೆ ಹೊಸ ಉಚಿತ ಆಫರ್ ಕೊಟ್ಟ BSNL | ಇಲ್ಲಿದೆ ಡಿಟೇಲ್ಸ್

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಾಗಿರುವ ಬಿಎಸ್ಎನ್ಎಲ್ ಈಗ ದೇಶದ ವಿದ್ಯಾರ್ಥಿಗಳಿಗಾಗಿ ಹೊಸ ಸೇವೆಯನ್ನ ಆರಂಭಿಸಿದೆ. ದೇಶದ ವಿದ್ಯಾರ್ಥಿಗಳು ಬಿಎಸ್ಎನ್ಎಲ್ ನ ಈ ಸೇವೆಯ ಅಡಿಯಲ್ಲಿ 100 GB ಡೇಟಾ ಮತ್ತು ಅನಿಮಿತ ಕರೆಯ ಸೇವೆಯನ್ನ ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಸಹಾಯಕವಾಗಲಿ ಅನ್ನುವ ಉದ್ದೇಶದಿಂದ ಬಿಎಸ್ಎನ್ಎಲ್ ಈಗ ದೇಶಾದ್ಯಂತ ಈ ಸೇವೆಯನ್ನ ಆರಂಭಿಸಿದೆ. ಬಿಎಸ್ಎನ್ಎಲ್ ಈಗ ವಿದ್ಯಾರ್ಥಿಗಳಿಗಾಗಿ 251 ರೂಪಾಯಿ ಹೊಸ ರಿಚಾರ್ಜ್ ಪ್ಲಾನ್ ಅನ್ನ ದೇಶಾದ್ಯಂತ ಜಾರಿಗೆ ತಂದಿದೆ. ಈ ರಿಚಾರ್ಜ್ ಪ್ಲಾನ್ ಡಿಸೆಂಬರ್ 13ರವರೆಗೆ ದೇಶಾದ್ಯಂತ ಜಾರಿಯಲ್ಲಿರುತ್ತದೆ. … Read more

Karnataka Weather : ರಾಜ್ಯದಲ್ಲಿ ಶೀತಗಾಳಿ –  5 ಕ್ಕೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಾರ್ನಿಂಗ್.!

ರಾಜ್ಯದಲ್ಲಿ ದಿನೇ ದಿನೇ ಚಳಿ ಹೆಚ್ಚುತ್ತಿದ್ದು, ಕರುನಾಡಿನೆಲ್ಲೆಡೆ ಮುಂದಿನ 3 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 5 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 20 ರವರೆಗೂ ಶೀತ ಗಾಳಿ ಬೀಸಲಿದೆ. ಪ್ರಮುಖವಾಗಿ ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4°C ನಿಂದ 6° C ಕಡಿಮೆ ಇರುವ ಸಾಧ್ಯತೆಯಿದ್ದು, … Read more

Gruha Lakshmi : ಗೃಹಲಕ್ಷ್ಮೀ ಸಹಕಾರ ಬ್ಯಾಂಕ್‌ – ಏನೆಲ್ಲ ಷರತ್ತು? ಸಾಲ ಪಡೆಯೋದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ತಂದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ಹಣವನ್ನ ಜಮಾ ಮಾಡಲಾಗುತ್ತಿದೆ. ಇದೀಗ ರಾಜ್ಯದ ಕೋಟ್ಯಂತರ ಗೃಹಲಕ್ಷ್ಮಿಯರಿಗೆ, ಸ್ವಾವಲಂಬಿ ಬದುಕಿನ ಕನಸು ಕಾಣುತ್ತಿರುವ ‌ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇದೇ ನವೆಂಬರ್ 28 ರಂದು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧಿಕೃತವಾಗಿ ಚಾಲನೆ ಸಿಗಲಿದೆ. ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ ಹೋಲ್ಡರ್ಸ್‌ ಆಗಬೇಕಿದೆ. ಗೃಹಲಕ್ಷ್ಮಿ ಸಹಕಾರಿ … Read more

School Holiday : ರಜೆ.. ರಜೆ.. ರಜೆ.. ನವೆಂಬರ್ 21 ಶುಕ್ರವಾರ ಶಾಲೆ ಹಾಗು ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ.!

ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ… ಹೀಗೆ ಬಹುಶಃ 2025 ಮುಗಿಯುವ ತನಕ ಕೂಡ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಅನ್ನೋ ಶಬ್ಧ ಕೇಳದೇ ಇರಲು ಸಾಧ್ಯವೇ ಇಲ್ಲ ಅಂತಾ ಕಾಣುತ್ತದೆ. ಏಕೆಂದರೆ 2025 ವರ್ಷ ಪೂರ್ತಿ ಬರೀ ರಜೆ ರಜೆ ರಜೆಗಳೇ ಸಿಕ್ಕುಬಿಟ್ಟಿವೆ. ಅದರಲ್ಲೂ ಈ ಬಾರಿ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆ ಬಂಪರ್ ಆಗಿತ್ತು. ಅಲ್ಲದೆ ಮತ್ತೆ ಮತ್ತೆ ರಜೆಗಳು ಸಿಗುತ್ತಿದ್ದು, ಇನ್ನೇನು 2025 … Read more

ನೀರು ಕುಡಿದಿದ್ದಕ್ಕೆ ಫೋಟೋಗ್ರಾಫರ್‌ ಗೆ ಹೊಡೆದ ವರ : ಮದುವೆ ನಿಲ್ಲಿಸಿದ ವಧು

ಮದುವೆ ಕೆಲ ಗಂಟೆಗಳಿದ್ದ ವರನೋರ್ವ ಫೋಟೋಗ್ರಾಫರ್‌ಗೆ ಕಪಾಳ ಮೋಕ್ಷ ಮಾಡಿದ್ದರಿಂದ ಸಿಟ್ಟಿಗೆದ್ದ ವಧು ಮದುವೆಯನ್ನೇ ನಿಲ್ಲಿಸಿದಂತಹ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಎರಡು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆಗೆ ಸಿದ್ಧತೆ ನಡೆಸಿದ್ದರು. ಹೀಗಾಗಿ ಇಂದೋರ್‌ನ ಎಂಜಿ ರೋಡ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬರುವ ನಂದಲಾಲ್‌ಪುರದಲ್ಲಿರುವ ಕೊಶ್ಟಿ ಸಮಾಜದ ಧರ್ಮಶಾಲೆಯಲ್ಲಿ ಇವರ ಮದುವೆ ನಿಗದಿಯಾಗಿತ್ತು. ಮದುವೆಯ ಸಮಯದಲ್ಲಿ ವರ ಗೌರವ್ ಫೋಟೋಗ್ರಾಫರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ಸಿಟ್ಟಾದ ವಧು ಮದುವೆಯನ್ನೇ ರದ್ದು ಮಾಡಿದ್ದಾಳೆ. … Read more