ʻಲಕ್ಷ್ಮಿ ದೇಗುಲ ಕಟ್ಟಿಸಿ ನಿಮ್ಮ ಜಾತಕಕ್ಕೆ ಒಳ್ಳೇದುʼ; ಜ್ಯೋತಿಷಿ ಮಾತು ನಂಬಿ 1 ಕೋಟಿ ನಗದು, 180 ಗ್ರಾಂ ಚಿನ್ನ ಕಳ್ಕೊಂಡ ಟೀಚರ್
ʻಲಕ್ಷ್ಮಿ ದೇಗುಲ ಕಟ್ಟಿಸಿದರೆ ನಿಮ್ಮ ಜಾತಕಕ್ಕೆ ತುಂಬಾ ಒಳ್ಳೆದುʼ ಎಂದು ಜ್ಯೋತಿಷಿಯೊಬ್ಬ, 56 ವರ್ಷದ ಸಂಗೀತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 1 ಕೋಟಿ ರೂಪಾಯಿ ಹಾಗೂ ಚಿನ್ನಾಭರಣ ವಂಚಿಸಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ಠಾಣಾ ವ್ಯಾಪ್ತಿ ನಡೆದಿದೆ. ಜ್ಯೋತಿಷಿಗಳ ಮೇಲಿದ್ದ ನಂಬಿಕೆ ಮತ್ತು ದೇವರ ಮೇಲಿದ್ದ ಅಪಾರ ಭಕ್ತಿಯನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಜ್ಯೋತಿಷಿ ಮಂಜುನಾಥ್ ಸಂಗೀತ ಶಿಕ್ಷಕಿ ಸರ್ವಮಂಗಳಾ ಅವರಿಗೆ ವಂಚಿಸಿದ್ದಾನೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಆರೋಪಿಗಳಾದ ಮಂಜುನಾಥ್, ರಾಘವೇಂದ್ರ, ಮಧುಸೂದನ್ … Read more