ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ  ಅಜ್ಜಿಯನ್ನು  ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್ಎಸ್ಎಲ್ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದ ಅಜ್ಜಿ ಮೆಹಬೂಬಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ … Read more

ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!

ಮುಂಬೈ: ಪತ್ನಿಯನ್ನು ಕೊಲ್ಲಲು ಮೂರು ಬಾರಿ ವಿಷ ಹಾಕಿದರೂ ಅವಳು ಬದುಕುಳಿದಿದ್ದರಿಂದ, ನಾಲ್ಕನೇ ಬಾರಿ ಗಂಡನು ಸಂಚನ್ನು ಬದಲಿಸಿ ಯಶಸ್ವಿಯಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಲಾನದಲ್ಲಿ ನಡೆದಿದೆ. ಬುಲ್ಲಾನಾ ನಿವಾಸಿ ಪ್ರಕಾಶ್ ಗವಂಡೆ ಆರೋಪಿ ಪತಿ. ವೃಶಾಲಿ ಮೃತ ಪತ್ನಿ. ಪ್ರಕಾಶ್‌ಗೆ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ವೃಶಾಲಿ ತನಗಿಂತ ಚೆನ್ನಾಗಿದ್ದಾಳೆ. ಹಲವರು ಆಕೆಯ ಜೊತೆ ಮಾತನಾಡುತ್ತಿದ್ದಾರೆ ಎಂಬುವುದೇ ದೊಡ್ಡ ಸಮಸ್ಯೆಯಾಗಿತ್ತು. ಈ ಮಾತುಕತೆಯನ್ನೇ ಅಕ್ರಮ ಸಂಬಂಧ ಎಂದುಕೊಂಡ ಪ್ರಕಾಶ್‌ಗೆ ಸಂದೇಹಗಳು ಹೆಚ್ಚಾಗುತ್ತಲೇ ಹೋಗಿತ್ತು. ಪತ್ನಿ ಜತೆ ಜಗಳ ಸೇರಿದಂತೆ ಹಲವು … Read more

ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ದೇಶಾದ್ಯಂತ ಎದುರಾಗಿರುವ ಅನಿಲ ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ದಿಮೆಗಳು ಬೀಗ ಹಾಕುವ ಹಂತಕ್ಕೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರು ಕೇಂದ್ರ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಮಂಗಳವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್ ಅಸೋಸಿಯೇಷನ್‌ನವರು ಬಂದ್ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಕೇವಲ ಹೋಟೆಲ್‌ಗಳ ಮೇಲೆ ಮಾತ್ರವಲ್ಲದೆ, ರೋಗಿಗಳಿಗೆ ಆಹಾರ ಒದಗಿಸುವ ಆಸ್ಪತ್ರೆಗಳ ಮೇಲೂ ಗಂಭೀರ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇಂದ್ರದ ವಿದೇಶಾಂಗ … Read more

ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!

ಪ್ರೀತಿ, ನಂಬಿಕೆ ಮತ್ತು ಸಂಸಾರ ಎಂಬ ಪವಿತ್ರ ಬಂಧಕ್ಕೆ ಕಳಂಕ ತರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ತನ್ನ ಸುಂದರ ಸಂಸಾರಕ್ಕೆ ತಾನೇ ಬೆಂಕಿ ಹಚ್ಚಿದ ಕಿರಾತಕಿ ಹೆಂಡತಿಯೊಬ್ಬಳು, ಅಕ್ರಮ ಸಂಬಂಧಕ್ಕಾಗಿ ಗಂಡನನ್ನೇ ಮುಗಿಸಿ, ಆತ ಸತ್ತ 20 ದಿನ ಕಳೆಯುವ ಮೊದಲೇ ಮತ್ತೊಬ್ಬನ ಜೊತೆ ಹಸೆಮಣೆ ಏರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಇದು ಯಾವುದೇ ಸಿನೆಮಾ ಕಥೆಯಲ್ಲ, ಬೆಂಗಳೂರಿನಲ್ಲಿ ನಡೆದ ನೈಜ ಕ್ರೈಮ್ ಸ್ಟೋರಿ! ಪುಟ್ಟ ಸಂಸಾರದಲ್ಲಿ ಅಕ್ರಮ ಸಂಬಂಧದ ವಿಷಗಾಳಿ: ಮೃತ ಪರಮೇಶ ಒಬ್ಬ ಬಡ ಮೆಕಾನಿಕ್. … Read more

ಹಿರಿಯ ನಟ ದ್ವಾರಕೀಶ್‌ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!

ಹಿರಿಯ ನಟ ದ್ವಾರಕೀಶ್ ಅವರ ಕುಟುಂಬದ ಸದಸ್ಯೆಯೊಬ್ಬರು ಈಗ ಬೀದಿ ರಂಪಾಟ ಹಾಗೂ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ದ್ವಾರಕೀಶ್ ಅವರ ಎರಡನೇ ಪತ್ನಿ ಶೈಲಜಾ ಕುಮಾರಿ ಅವರ ಪುತ್ರ ಸಮರ್ಥ್ ಅವರ ಪತ್ನಿ ವರ್ಷಾ ರೈ ವಿರುದ್ಧ ಹತ್ತಕ್ಕೂ ಹೆಚ್ಚು ಜನರು ವಂಚನೆಯ ದೂರು ನೀಡಿದ್ದಾರೆ. ವರ್ಷಾ ರೈ ಅವರ ಬಳಿ ಹಣಕಾಸಿನ ವ್ಯವಹಾರ ನಡೆಸಿದ್ದ ರಮಣ ರೆಡ್ಡಿ ಎಂಬುವವರು ತಾವು ನೀಡಿದ್ದ 6 ಲಕ್ಷ ರೂಪಾಯಿಗಳನ್ನು ವಾಪಸ್ ಕೇಳಲು ಹೋಗಿದ್ದರು. ಈ ವೇಳೆ ವರ್ಷಾ ರೈ … Read more

ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಬಿದ್ದು ದಂಪತಿ ಸಾವಿಗೀಡಾದಂತಹ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಕಾಂಕ್ರೀಟ್ ಮೆಟ್ಟಿಲು ಮೇಲಿನಿಂದ ಬಿದ್ದ ರಭಸಕ್ಕೆ ಗಂಡ – ಹೆಂಡತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಪತ್ನಿ 33 ವರ್ಷದ ಶಿವಮ್ಮ ಹಾಗೂ ಪತಿ 35 ವರ್ಷದ ದ್ಯಾವಪ್ಪ ಸೂಗುರು ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ದಂಪತಿ ಮನೆ ಕಟ್ಟುತ್ತಿದ್ದು, ಎಂದಿನಂತೆ ಇವತ್ತು ಮನೆಯ ಗೋಡೆ ಪ್ಲಾಸ್ಟರ್ ಕೆಲಸಕ್ಕೆ ದಂಪತಿ ಮುಂದಾಗಿದ್ದರು ಈ ವೇಳೆ ಏಕಾಏಕಿಯಾಗಿ … Read more

ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ ಮಧ್ಯೆ ಗಲಾಟೆಯಾಗಿದ್ದು, ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್ಗೆ ಕರೆ ಮಾಡಿದ್ದ. ಆದ್ರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದ್ರೆ, ಅದೇನಾಯ್ತೋ ಏನೋ ವರಲಕ್ಷ್ಮಿ ಶವವಾಗಿ ಪತ್ನಿಯಾಗಿದ್ದು, ಪತಿಯೇ ವರಲಕ್ಷ್ಮೀಯನ್ನು ನೇಣಿಗೆ … Read more

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ ಕೆ.ಆರ್.ಪೇಟೆ  ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ … Read more

ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!

ಪಾರ್ಶ್ವವಾಯು (Stroke) ಒಂದು ಅತ್ಯಂತ ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು, ಪ್ರಪಂಚದಾದ್ಯಂತ ಅನೇಕ ಜನರು ಇದರಿಂದ ಬಳಲುತ್ತಿದ್ದಾರೆ. ಮೆದುಳಿಗೆ ಆಮ್ಲಜನಕದ ಪೂರೈಕೆ ಭಾಗಶಃ ನಿಂತಾಗ ಇದು ಸಂಭವಿಸುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ, ನಿಮಿಷಗಳಲ್ಲಿ ಜೀವಕ್ಕೆ ಅಪಾಯ ಅಥವಾ ಶಾಶ್ವತ ಅಂಗವೈಕಲ್ಯತೆ (Paralysis) ಉಂಟಾಗಬಹುದು. ಆದರೆ, ಒಳ್ಳೆಯ ವಿಷಯವೇನೆಂದರೆ, ಎಲ್ಲಾ ಕಾಯಿಲೆಗಳಂತೆ, ನಮ್ಮ ದೇಹವು ಪಾರ್ಶ್ವವಾಯು ಸಂಭವಿಸುವ ಮುನ್ನವೇ ಕೆಲವು ಎಚ್ಚರಿಕೆ ಚಿಹ್ನೆಗಳನ್ನು ನೀಡುತ್ತದೆ. ಕೆಲವು ಪಾರ್ಶ್ವವಾಯುಗಳು ಇದ್ದಕ್ಕಿದ್ದಂತೆ ಸಂಭವಿಸಿದರೂ, ಹೆಚ್ಚಿನವು ತಿಂಗಳುಗಳ ಅವಧಿಯಲ್ಲಿ ನಿಧಾನವಾಗಿ ರೂಪುಗೊಳ್ಳುತ್ತವೆ. ಈ … Read more

ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ

ತುಮಕೂರು : ವಿಧಿಯಾಟ ಅಂದ್ರೆ ಇದೇ ಅನಿಸುತ್ತೆ. ತುಂಬು ಗರ್ಭಿಣಿ ಪತ್ನಿಗೆ ಇಂದೇ ಡೆಲಿವರಿ ಡೇಟ್ ಕೊಟ್ಟಿದ್ರು. ಆಸ್ಪತ್ರೆಗೆ ಹೋಗದೇ ಕೆಲಸಕ್ಕೆ ಹಾಜರಾದ ಲೈನ್ ಮ್ಯಾನ್ ಮನದಲ್ಲಿ ಮಗುವನ್ನ ಕಣ್ತುಂಬಿಕೊಳ್ಳುವ ಆಸೆ ಕಾಣ್ತಿತ್ತು. ಆ ಆಸೆ ನುಚ್ಚು ನೂರಾಗಿದೆ. ವಿದ್ಯುತ್ ಶಾಕ್ನಿಂದ ಲೈನ್ ಮ್ಯಾನ್ ಸಾವನ್ನಪ್ಪಿದ್ದು, ಈತನ ಕಥೆ ಕರುಳು ಹಿಂಡುವಂತಿದೆ. ಲೈನ್ ಮ್ಯಾನ್ ಸಾವಿಗೆ ಯಾರು ಹೊಣೆ? ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಬಲಿಯಾಗಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ … Read more