ಭಾನುವಾರವೇ ಅತೀ ಕಡಿಮೆ ಗಳಿಕೆ ಮಾಡಿದ ‘ಥಗ್ ಲೈಫ್’ ; ಕನ್ನಡಿಗರ ತಂಟೆಗೆ ಬಂದವರಿಗೆ ತಕ್ಕ ಪಾಠ

ಹಿರಿಯ ತಮಿಳು ನಟ ಕಮಲ್ ಹಾಸನ್ ಅವರು ಸುಖಾಸುಮ್ಮನೆ ಕನ್ನಡಿಗರ ಕೆಣಕಿದ್ದರು. ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿದ್ದು ಮಾತ್ರವಲ್ಲದೆ, ಅದಕ್ಕೆ ಕ್ಷಮೆ ಕೇಳಲು ನಿರಾಕರಿಸಿದ್ದರು. ಇದರ ಪರಿಣಾಮ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಮೇಲೆ ಉಂಟಾಯಿತು. ಕರ್ನಾಟಕದಲ್ಲಿ ಸಿನಿಮಾ ರಿಲೀಸ್ಗೆ ಅವಕಾಶ ನೀಡಿಲ್ಲ. ಈ ಕಾರಣದಿಂದಲೇ ಕಲೆಕ್ಷನ್ ವಿಚಾರದಲ್ಲಿ ಸಿನಿಮಾ ದೊಡ್ಡ ಮಟ್ಟದಲ್ಲಿ ಮುಗ್ಗರಿಸಿದೆ. ಸಿನಿಮಾ ರಿಲೀಸ್ ಆಗಿ ನಾಲ್ಕು ದಿನ ಕಳೆದಿದ್ದು, ಇನ್ನೂ 40 ಕೋಟಿ ರೂಪಾಯಿ ಕ್ಲಬ್ ಸೇರಲು ಒದ್ದಾಡುತ್ತಿದೆ. ಈ … Read more

ನಮಗೆ ಪರಿಹಾರ ಬೇಡ, ಮಗಳನ್ನು ತಂದುಕೊಡಿ : ಚೆಕ್ ಕೊಡಲು ಬಂದ ಡಿಸಿ ಮುಂದೆ ಸಹನಾ ಪೋಷಕರ ಕಣ್ಣೀರು

ನಮಗೆ ಚೆಕ್ ಬೇಡ, ಪರಿಹಾರವೂ ಬೇಡ ನಮಗೆ ನಮ್ಮ ಮಗಳು ಬೇಕು ಅವಳನ್ನು ತಂದು ಕೊಡಿ. ನಾವೇ ನಿಮಗೆ ಬೇಕಾದರೆ ಮನೆ, ಜಮೀನು, ಆಸ್ತಿ ಪಾಸ್ತಿ ಎಲ್ಲವನ್ನೂ ಮಾರಿ ನಿಮಗೆ ಹತ್ತರಷ್ಟು ಹಣ ಕೊಡ್ತೀವಿ ಎಂದು ಜಿಲ್ಲಾಡಳಿತದ ಎದುರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಸಹನಾ ತಂದೆ ಸುರೇಶ್ ಕಣ್ಣೀರಿಟ್ಟರು. ನಮಗೆ ಪರಿಹಾರ ಬೇಡ, ನಮಗೆ ನನ್ನ ಮಗಳು ಬೇಕು ಎಂದು ಸಹನಾ ತಂದೆ ಗೋಳಾಡಿದರು. ಆಗ ನೆರೆಹೊರೆಯವರು ಸಮಾಧಾನಪಡಿಸಿದರು. ನಂತರ ಕೋಲಾರ ಜಿಲ್ಲಾಧಿಕಾರಿ, ಮೃತರ ಕುಟುಂಬಸ್ಥರಿಗೆ ಪರಿಹಾರದ … Read more

ಸೂಟ್‌ಕೇಸ್‌ನಲ್ಲಿ ಬಾಲಕಿ ಶವ ಕೇಸ್ : ಲೈಂಗಿಕ ಕ್ರಿಯೆಗೆ ಸಹಕರಿಸಿಲ್ಲವೆಂದು ಹತ್ಯೆ, ಆರೋಪಿಗಳ ಬಂಧನ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಭೇದಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಶವವನ್ನು ಸೂಟಕೇಸ್‌ನಲ್ಲಿ ಹಾಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸದು ಹೋಗಿದ್ದಾರೆ ಎಂಬುವುದನ್ನು ಪೊಲೀಸ್‌ ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) … Read more

ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಕೇಸ್, NIA ತನಿಖೆಗೆ ಕೇಂದ್ರ ಸರ್ಕಾರ ಆದೇಶ

ಹಿಂದೂ ಕಾರ್ಯಕರ್ತ ಹಾಗೂ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ (32) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು ಮಾತ್ರವಲ್ಲ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು. ಮೇ.11ರಂದು ಬಜ್ಪೆಯಲ್ಲಿ ಈ ಕೊಲೆ ನಡೆದಿತ್ತು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಬಿಜೆಪಿ ಕಾರ್ಯಕರ್ತರು, ನಾಯಕರು ರಾಜ್ಯಾದ್ಯಂತ ಪಟ್ಟು ಹಿಡಿದು ಪ್ರತಿಭಟನೆ ಮಾಡಿದ್ದರು. ಪ್ರಕರಣದ … Read more

ಪ್ರಿಯಕರನ ಜೊತೆ ಏಕಾಂತದಲ್ಲಿದ್ದಾಗ ಸಿಕ್ಕಿಬಿದ್ದ ಪತ್ನಿಯ ತಲೆಕಡಿದು ರುಂಡ ಸಮೇತ ಠಾಣೆಗೆ ಬಂದ ಪತಿ

ಪತ್ನಿಯ ತಲೆ ಕತ್ತರಿಸಿ ರುಂಡ ಸಮೇತ ಪತಿ ಸೂರ್ಯನಗರ ಪೊಲೀಸ್‌ ಠಾಣೆಗೆ ಬಂದಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ. ಹೆನ್ನಾಗರ ನಿವಾಸಿಯಾಗಿರುವ ಶಂಕರ್ (28) ಕೊಲೆ ಮಾಡಿರುವ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಮೃತ ದುರ್ದೈವಿ. ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಮಾನಸ ಮತ್ತು ಆರೋಪಿ ಶಂಕರ್ ಪ್ರೀತಿಸಿ ಮದುವೆ ಆಗಿದ್ದರು. ದಂಪತಿ ಒಂದು ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. … Read more

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ..

ಕೊರಗಜ್ಜನ ಪವಾಡ ಮತ್ತೊಮ್ಮೆ ಕರಾವಳಿಯಲ್ಲಿ ನಡೆದಿದೆ. ಎರಡನೇ ಬಾರಿ ಹುಂಡಿ ಕದಿಯುವಾಗ ಕಳ್ಳ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹೆಬ್ರಿ ತಾಲೂಕು ಮುದ್ರಾಡಿಯ ಆದಿಶಕ್ತಿ ದೇಗುಲದ ಕಲ್ಲುರ್ಟಿ, ಕೊರಗಜ್ಜ ಸನ್ನಿದಾನದಲ್ಲಿ ಮೇ 25 ರಂದು ಕಳ್ಳತನ ನಡೆದಿತ್ತು. ಬೇಸರದಿಂದ ಧರ್ಮದರ್ಶಿ ಸುಕುಮಾರ್ ಮೋಹನ್ ದೈವದ ಮೊರೆ ಹೋಗಿದ್ದರು. ಹುಂಡಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಕಳ್ಳ ಮತ್ತೆ ಬಂದು ಸಿಕ್ಕಿ ಬೀಳುತ್ತಾನೆ. ಹತ್ತು ದಿನಗಳಲ್ಲಿ ಕಳ್ಳನನನ್ನು ಪತ್ತೆ ಮಾಡಿಕೊಡುವುದಾಗಿ ದೈವ ಅಭಯ … Read more

ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ : ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

ಚಿತ್ರದುರ್ಗದಲ್ಲಿ ವರದಕ್ಷಿಣೆಗಾಗಿ 2ನೇ ಮದುವೆಯಾಗಲು ಹೋದ ಗಂಡನಿಗೆ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ. ತನುಜಾ ಎಂಬ ಮಹಿಳೆ ತನ್ನ ಗಂಡ ಕಾರ್ತಿಕ್ 2ನೇ ಮದುವೆಗೆ ಮುಂದಾಗುತ್ತಿರುವುದನ್ನು ತಿಳಿದು ಮಂಟಪಕ್ಕೆ ನುಗ್ಗಿ ಚಪ್ಪಲಿಯಿಂದ ಹೊಡೆದಿದ್ದಾರೆ. ಚಿತ್ರದುರ್ಗದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಒಂದು ವಿಚಿತ್ರ ಘಟನೆ ಶನಿವಾರ ನಡೆದಿದೆ. ತಮ್ಮ ಗಂಡ ಕಾರ್ತಿಕ್ ಅವರು ವರದಕ್ಷಿಣೆಯ ದುರಾಸೆಯಿಂದ ಬೇರೆ ಯುವತಿಯೊಂದಿಗೆ 2ನೇ ಮದುವೆಗೆ ಮುಂದಾಗುತ್ತಿರುವ ಮಾಹಿತಿ ತಿಳಿದ ತನುಜಾ ಎಂಬ ಮಹಿಳೆ ನೇರವಾಗಿ ಮಂಟಪಕ್ಕೆ ಬಂದು ಗಂಡನಿಗೆ … Read more

‘ಐಪಿಎಲ್ ಆಡುತ್ತಿದ್ದ ವೇಳೆ ಅರ್ಹತೆಗಿಂತ ಹೆಚ್ಚಿನ ಸಂಭಾವನೆ ಸಿಕ್ಕಿದೆ’ : ಆರ್ ಸಿಬಿ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್‌

ಐಪಿಎಲ್ 2025ರ ಆರ್‌ಸಿಬಿಯ ಗೆಲುವನ್ನು ಆಚರಿಸಲು ಗೇಲ್ ಮತ್ತು ಡಿವಿಲಿಯರ್ಸ್ ಕೂಡ ಅಹಮದಾಬಾದ್‌ನಲ್ಲಿ ಹಾಜರಿದ್ದರು. ಭಾರತದ ಮಾಜಿ ಕ್ರಿಕೆಟಿಗ-ಬ್ರಾಡ್‌ಕಾಸ್ಟರ್ ಅಭಿನವ್ ಮುಕುಂದ್, ಡಿವಿಲಿಯರ್ಸ್ ನೀಡಿದ ಹೇಳಿಕೆಯೊಂದನ್ನು ಬಹಿರಂಗಪಡಿಸಿದ್ದಾರೆ. ಐಪಿಎಲ್ 2025ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಹಿಂದೆ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ ಅವರಂತಹ ಅಸಾಧಾರಣ ಟಿ20 ಕ್ರಿಕೆಟಿಗರನ್ನು ಹೊಂದಿದ್ದರೂ, 18 ವರ್ಷಗಳಿಂದಲೂ ಆರ್‌ಸಿಬಿ … Read more

Virat Kohli : ಕಾಲ್ತುಳಿತಕ್ಕೆ 11 ಆರ್‌ಸಿಬಿ ಅಭಿಮಾನಿಗಳ ಸಾವು : ಮೌನ ಮುರಿದ ವಿರಾಟ್ ಕೊಹ್ಲಿ ಫ್ಯಾನ್ಸ್‌ಗೆ ಹೇಳಿದ್ದಿಷ್ಟು.

Virat Kohli : ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಟ್ರೋಫಿ ಜಯಿಸಿದ್ದು ಗೊತ್ತೇ ಇದೆ. 18 ವರ್ಷದ ಬಳಿಕ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿದೆ. ಇದರ ಸಂಭ್ರಮಾಚರಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರಿ ಸಿದ್ಧತೆ ಸಹ ಮಾಡಿಕೊಳ್ಳಲಾಗಿತ್ತು. ಆದರೆ, ಅಭಿಮಾನಿಗಳ ಅತಿರೇಕದ ವರ್ತನೆಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, ಸಂಭ್ರಮದ ಮನೆಯಲ್ಲಿ ಸೂತಕ ಛಾಯೆ ಆವರಿಸಿತು. ಹೀಗಾಗಿ ಸಂಭ್ರಮಾಚರಣೆಯನ್ನು ರದ್ದು ಮಾಡಲಾಯಿತು. ಇದೀಗ ಈ ಘಟನೆಯ ಬಗ್ಗೆ ಆರ್ಸಿಬಿ ಸ್ಟಾರ್ ಆಟಗಾರ ವಿರಾಟ್ … Read more

IPL 2025 : ಇಂದು ಬೆಂಗಳೂರಿನಲ್ಲಿ ಆರ್ ಸಿಬಿಯ ವಿಜಯ ಯಾತ್ರೆ : ಎಲ್ಲಿಂದ ಎಲ್ಲಿಗೆ.?

IPL 2025 : 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿದ ಭಾವನಾತ್ಮಕ ವಿಜಯದ ನಂತರ ಆರ್ ಸಿಬಿ ಅಭಿಮಾನಿಗಳು ಬುಧವಾರ(ಜೂನ್ 4) ಮಧ್ಯಾಹ್ನ ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಿದ್ದಾರೆ. ರಾಜ್ಯ ರಾಜಧಾನಿ ಕ್ರಿಕೆಟ್ ವೀರರನ್ನು ಭರ್ಜರಿಯಾಗಿ ಸ್ವಾಗತಿಸಲು ಸಜ್ಜಾಗಿದೆ. ವರದಿಗಳ ಪ್ರಕಾರ, ಆರ್‌ಸಿಬಿ ವಿಜಯ ಯಾತ್ರೆ ಮಧ್ಯಾಹ್ನ 3.30 ಕ್ಕೆ ವಿಧಾನಸೌಧದಿಂದ ಪ್ರಾರಂಭವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ತಂಡವು ಅಹಮದಾಬಾದ್‌ನಿಂದ ಬೆಳಗ್ಗೆ 4:30 ರ ಸುಮಾರಿಗೆ ಬೆಂಗಳೂರಿಗೆ ಬಂದಿಳಿದಿದ್ದು, ಬೃಹತ್ ಆಚರಣೆಗಳೊಂದಿಗೆ ಸ್ವಾಗತಿಸಲಾಗುವುದು ಎಂದು ಹೇಳಲಾಗಿದೆ. ನಗರದ … Read more