ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆಗೆ ಕಿಚ್ಚ ಸುದೀಪ್‌ ತಿರುಗೇಟು

ಕನ್ನಡ ಚಿತ್ರರಂಗದ ಕಾರ್ಯಕ್ರಮಕ್ಕೆ ಕಲಾವಿದರೇ ಬರಲಿಲ್ಲ ಎಂಬ ಕಾರಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ನೀಡಿದ್ದ ನಟ್ಟು ಬೋಲ್ಟ್‌ ಟೈಟ್‌ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿತ್ತು. ತುಂಬು ವೇದಿಕೆಯಲ್ಲೇ ಡಿಕೆಶಿ ಚಿತ್ರರಂಗದ ನಟ್ಟು ಬೋಲ್ಟ್‌ ಮಾಡುವುದು ಗೊತ್ತಿದೆ ಎಂದು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ನಟ ಕಿಚ್ಚ ಸುದೀಪ್‌ ತಡವಾಗಿ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್‌ ಹೇಳಿಕೆಗೆ ತಮ್ಮದೇ ಸ್ಟೈಲಲ್ಲಿ ಖಡಕ್‌ ತಿರುಗೇಟು ನೀಡಿದ್ದಾರೆ. ರಿಪಬ್ಲಿಕ್‌ ಕನ್ನಡ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುದೀಪ್‌ ಈ ಬಗ್ಗೆ ಮೌನ … Read more

ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು

ಬೆಂಗಳೂರಿನ ಬೇಗೂರಿನಲ್ಲಿ ಇರುವ ಅಪಾರ್ಟ್ಮೆಂಟ್ ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಆಗ್ನೇಯ ಬೆಂಗಳೂರಿನ ಎಂಎನ್ ಕ್ರೆಡೆನ್ಸ್ ಫ್ಲೋರಾ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಶೌಚಗುಂಡಿ ಸ್ವಚ್ಚಗೊಳಿಸುವಾಗ ಕಾರ್ಮಿಕರಿಗೆ ಇವೆಲ್ಲಾ ಸಿಕ್ಕಿದ್ದು, ಅವರು ಒಮ್ಮೆ ಶಾಕ್ಗೆ ಒಳಗಾಗಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಬಗ್ಗೆ ತನಿಖೆ ನಡೆಯುತ್ತಿದೆ. ಜೂನ್ 16 ರಂದು ಗುತ್ತಿಗೆ ಕಾರ್ಮಿಕರು ಕಾರು ನಿಲ್ದಾಣದ ಬಳಿಯ ಒಳಚರಂಡಿ ಗುಂಡಿಯನ್ನು ತೆರವುಗೊಳಿಸುತ್ತಿದ್ದಾಗ ಮೂಳೆಗಳು … Read more

ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!

ಒಟ್ಟಂಚತ್ರಂ ಬಳಿ ತಾಯಿ, ಮಗಳು ಮತ್ತು ಮೊಮ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀವ್ರ ಸಂಚಲನ ಮೂಡಿಸಿದೆ. ಚೆಲ್ಲಮ್ಮಾಳ್ (65) ದಿಂಡಿಗಲ್ ಜಿಲ್ಲೆಯ ಒಟ್ಟಂಚತ್ರಂ ಬಳಿಯ ಚಿನ್ನ ಕುಲಿಪ್ಪಟ್ಟಿ ಗ್ರಾಮದವರು. ಅವರ ಮಗಳು ಕಾಳೀಶ್ವರಿ (45). ಕಾಳೀಶ್ವರಿ ಅವರ ಮಗಳು ಪವಿತ್ರಾ (28) 9 ವರ್ಷಗಳ ಹಿಂದೆ ವಿವಾಹವಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತಿಯೊಂದಿಗೆ ವಾಸಿಸುತ್ತಿದ್ದ ಪವಿತ್ರಾ ಗಂಡನೊಂದಿಗಿನ ಭಿನ್ನಾಭಿಪ್ರಾಯದ ಬಳಿಕ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಕಾಳೀಶ್ವರಿ ಮನೆಗೆ ಹೋಗಿದ್ದರು. … Read more

ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ

18 ವರ್ಷಗಳ ಬಳಿಕ ಆರ್ಸಿಬಿ ಗೆಲುವಿಗೆ ಅಭಿಮಾನಿಗಳು ಏನೆಲ್ಲಾ ಸರ್ಕಸ್ ಮಾಡಿದ್ರು, ಬೆಟ್ಟಿಂಗ್ ಕೂಡ ಜೋರಾಗಿಯೇ ನಡೆದಿತ್ತು. ಅದೇ ಇನ್ನೊಂದೆಡೆ, ಕೆಲವರು ಅತಿರೇಕವಾಗಿ ವರ್ತಿಸಿದರು. ಪ್ರಚಾರಕ್ಕಾಗಿ ಒಬ್ಬಾಕೆ ಆರ್ಸಿಬಿ ಗೆದ್ದರೆ ನನ್ನ ಪತಿಗೆ ಡಿವೋರ್ಸ್ ಕೊಡುವೆ ಎಂದು ಬ್ಯಾನರ್ ಹಿಡಿದು ನಿಂತದ್ದು ಭಾರಿ ಪ್ರಚಾರ ಪಡೆದುಕೊಂಡಿತ್ತು. ಬ್ಯಾನರ್ ಹಿಡಿದು ನಿಂತಿದ್ದ ಮಹಿಳೆ ಯಾರೆಂದು ತಿಳಿಯಲಿಲ್ಲ. RCB ಗೆದ್ದ ಬಳಿಕ ಈಗ ಏನು ಮಾಡಿದರು ಎಂದೂ ಗೊತ್ತಿಲ್ಲ. ಆದರೆ ಈ ಪೋಸ್ಟರ್ ಮೂಲಕ ರಾತ್ರೋರಾತ್ರಿ ಫೇಮಸ್ ಆಗಿದ್ದರು ಆ … Read more

ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ

ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಗೆ ಕ್ಲಿಯರೆನ್ಸ್‌ ಸಿಗದ ಹಿನ್ನೆಲೆ ಇಂದು ಬೆಂಗಳೂರಿಗೆ ವಾಪಸ್‌ ಆಗಿದ್ದಾರೆ. ಬರ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ್‌ ಖರ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನ ಕಟ್ಟಿಹಾಕುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮೆರಿಕ ಭೇಟಿಗೆ ಕೇಂದ್ರದಿಂದ ಕ್ಲಿಯರೆನ್ಸ್ ಸಿಗದ ಕುರಿತು ಮಾತನಾಡಿ, ತಿರಸ್ಕಾರ … Read more

ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ ಬಳಿಕ ಬಯೋ ಇಂಟ‌ರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಬಾಗವಹಿಸಬೇಕಿತ್ತು. ಆದ್ರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ. ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ … Read more

ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್‌ ಲೈಫ್‌’ ಸಿನಿಮಾ ರಿಲೀಸ್‌ಗೆ ಸುಪ್ರೀಂ ಸೂಚನೆ

ನಟ ಕಮಲ್ ಹಾಸನ್ ಅಭಿನಯದ ‌’ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಪ್ರದರ್ಶಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಗುಂಪು ಬೆದರಿಕೆಗಳಿಗೆ ಕಾನೂನಿನ ನಿಯಮವನ್ನು ಒತ್ತೆಯಾಗಿ ಇಡಲು ಸಾಧ್ಯವಿಲ್ಲ. ಚಿತ್ರಮಂದಿರಗಳಲ್ಲಿ ಏನು ಪ್ರದರ್ಶಿಸಬೇಕೆಂದು ‘ಗೂಂಡಾಗಳ ಗುಂಪುಗಳು’ ನಿರ್ಧರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಕನ್ನಡ ತಮಿಳಿನಿಂದ ಹುಟ್ಟಿತು ಎಂಬ ಕಮಲ್ ಹಾಸನ್ ಅವರ ಹೇಳಿಕೆ ಇತ್ತೀಚೆಗೆ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು.‌ ಅವರ ಚಿತ್ರವನ್ನು ಬಹಿಷ್ಕರಿಸುವಂತೆ ಕರೆಗಳು ಬಂದಿದ್ದವು. ಚಿತ್ರದ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯನ್ನು … Read more

ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!

ಮಂಗಳೂರು : ಮಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದೆ. ಮಂಗಳೂರು ನಗರದ ಹೊರವಲಯದ ಅಡ್ಯಾರ್ನಲ್ಲಿ ಮನೆಯಲ್ಲಿ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ 10 ತಿಂಗಳ ಮಗು ಮೃತಪಟ್ಟಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾ‌ರ್ ಮೃತ ಮಗು, ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ತಿಳಿಸಿದ್ದರೂ ಕೇಳದ್ದಕ್ಕೆ ಮಗುವಿನ ಪ್ರಾಣ ಹೋಗಿದೆ … Read more

ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು

ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು. ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ” ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು ” ಎಂದು ಸಿಎಂ ಹೇಳಿದರು. … Read more

ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್‌ ತರಲು ಹೋಗಿದ್ದ ಮಗ.!

ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮತ್ತೊಂದೆಡೆ ಭಾರಿ ಬಿರುಗಾಳಿ ಕೂಡ ಬೀಸುತ್ತಿದೆ. ಅವಾಂತರಗಳು ಸಂಭವಿಸುತ್ತಿವೆ. ಬಿರುಗಾಳಿ ಹೊಡೆತಕ್ಕೆ ಮರದ ಕೊಂಬೆಯೊಂದು ಬೈಕ್ ಸವಾರನ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಅಕ್ಷಯ್ (29) ಗಂಭೀರವಾಗಿ ಗಾಯಗೊಂಡಿರುವ ಯುವಕ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ … Read more