ಕೋಟ್ಯಂತರ ಗ್ರಾಹಕರಿಗೆ ಗುಡ್‌ ನ್ಯೂಸ್‌, ಮಿನಿಮಂ ಬ್ಯಾಲೆನ್ಸ್‌ ದಂಡ ರದ್ದುಗೊಳಿಸಿದ ರಾಷ್ಟ್ರೀಕೃತ ಬ್ಯಾಂಕ್‌

ಕೆನರಾ ಬ್ಯಾಂಕ್ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು, ಜೂನ್ 1, 2025 ರಿಂದ ಎಲ್ಲಾ ಉಳಿತಾಯ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸುವ ಅಗತ್ಯವನ್ನು ತೆಗೆದುಹಾಕಿದೆ. ಈ ಹೊಸ ನಿಯಮವು ಎಲ್ಲಾ ವರ್ಗದ ಖಾತೆಗಳಿಗೂ ಅನ್ವಯವಾಗಲಿದ್ದು, ಗ್ರಾಹಕರಿಗೆ ದಂಡದ ಹೊರೆಯಿಂದ ಮುಕ್ತಿ ಸಿಗಲಿದೆ. ಹಣಕಾಸು ಸೇರ್ಪಡೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕ ರಂಗದ ಪ್ರಮುಖ ಬ್ಯಾಂಕ್‌ ಆಗಿರುವ ಕೆನರಾ ಬ್ಯಾಂಕ್ ತನ್ನ ಕೋಟ್ಯಂತರ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಜೂನ್ 1, 2025 ರಿಂದ … Read more

ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಭೀತಿ.? ಮ್ಯಾಚ್ ರದ್ದಾದರೆ ಚಾಂಪಿಯನ್ ಕಿರೀಟ ಯಾರಿಗೆ.? ಇಬ್ಬರಿಗೂ ಟ್ರೋಫಿ ಹಂಚಲಾಗುತ್ತಾ?

ಐಪಿಎಲ್ ಟೂರ್ನಿ ಅಂತಿಮ ಘಟ್ಟ ತಲುಪಿದೆ. ಜೂನ್ 3ರಂದು ಅಹಮ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಆದರೆ ಕಳೆದೆರಡು ದಿನದಿಂದ ಅಹಮ್ಮದಾಬಾದ್‌ನಲ್ಲಿ ಉತ್ತಮ ಮಳೆಯಾಗುತ್ತಿದೆ. ಇದೇ ಕಾರಣದಿಂದ 2ನೇ ಕ್ವಾಲಿಫೈಯರ್ ಪಂದ್ಯಕ್ಕೂ ಮಳೆ ಅಡ್ಡಿಯಾಗಿತ್ತು. ಇದೀಗ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಿದೆ. ಇದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉಭಯ ತಂಡಗಳು ಟ್ರೋಫಿಗಾಗಿ ಇಷ್ಟು ವರ್ಷ ಕಾದಿದೆ. ಆದರೆ ಇದೀಗ ಫೈನಲ್ ಪಂದ್ಯ ಮಳೆಯಿಂದ ರದ್ದಾದರೆ ಕತೆ … Read more

ಆರ್‌ಸಿಬಿ ಹಾಗು ಪಂಜಾಬ್ ಐಪಿಎಲ್ ಫೈನಲ್ ಪಂದ್ಯ ಪ್ರದರ್ಶಿಸಲು ಮುಂದಾದ ಚಿತ್ರಮಂದಿರಗಳು.! ಆರ್‌ಸಿಬಿ ಸೋತರೆ ಅಷ್ಟೇ ಕಥೆ!

ನಾಳೆ (ಜೂನ್ 3) ನಡೆಯಲಿರುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದ ಮೂಲಕ 2 ತಿಂಗಳುಗಳ ಕಾಲ ನಡೆದ ಟೂರ್ನಿ ಮುಕ್ತಾಯಗೊಳ್ಳಲಿದೆ. ನಿನ್ನೆ ನಡೆದ ಕ್ವಾಲಿಫಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೋಲಿಸಿದ ಪಂಜಾಬ್ ಕಿಂಗ್ಸ್ ಫೈನಲ್ ಪ್ರವೇಶಿಸಿದ್ದು, ಒಂದನೇ ಕ್ವಾಲಿಫಯರ್ ಪಂದ್ಯ ಗೆದ್ದು ಈಗಾಗಲೇ ಫೈನಲ್ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದೆ. ಐಪಿಎಲ್‌ ಆರಂಭವಾದಾಗಿನಿಂದ ಒಮ್ಮೆಯೂ ಕಪ್‌ ಗೆಲ್ಲದ ಎರಡು ತಂಡಗಳು ಫೈನಲ್‌ ಪ್ರವೇಶಿಸಿರುವುದು ವಿಶೇಷವಾಗಿದ್ದು, ಯಾವ ತಂಡ … Read more

18 ವರ್ಷಗಳ ಕಾಯುವಿಕೆ, RCB – ಕೊಹ್ಲಿ ಕನಸು ; ಯಾರಾಗಲಿದ್ದಾರೆ ಚೊಚ್ಚಲ ಚಾಂಪಿಯನ್.?

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮಂಗಳವಾರ (ಮೇ 3) ಅಹಮದಾಬಾದ್‌ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಐಪಿಎಲ್ 18ನೇ ವರ್ಷಕ್ಕೆ ಕಾಲಿಸಿರುವಂತೆಯೇ ಇತ್ತಂಡಗಳು ಚೊಚ್ಚಲ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ. ಇಲ್ಲಿ ಯಾವ ತಂಡ ಗೆದ್ದರೂ ನೂತನ ದಾಖಲೆ ಸೃಷ್ಟಿಯಾಗಲಿದೆ. ಏಕೆಂದರೆ ಇತ್ತಂಡಗಳು ಇದುವರೆಗೆ ಟ್ರೋಫಿ ಗೆದ್ದಿಲ್ಲ. ಆರ್‌ಸಿಬಿ ತಂಡದ ತಾರೆ ವಿರಾಟ್ ಕೊಹ್ಲಿ, ಸರಿ ಸುಮಾರು ಎರಡು … Read more

ಕನ್ನಡವನ್ನ ಅವಮಾನಿಸಿ ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ಕಮಲ್ ಹಾಸನ್!

ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆದರೂ ಕೂಡ ಅವರು ನಾನು ತಪ್ಪು ಮಾಡಿಲ್ಲ ಎಂದರೆ ಕ್ಷಮೆ ಯಾಕೆ ಕೇಳಬೇಕು ಎಂದು ಉದ್ಧಟತನ ತೋರಿದ್ದಾರೆ. ಇವರ ಈ ಒಂದು ದುರ್ನಡತೆಗೆ ಕರ್ನಾಟಕದಲ್ಲಿ ಈಗಾಗಲೇ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಮೂಲಕ ಅಕ್ರೋಶ ಹೊರಹಾಕುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ತಡೆಯದಂತೆ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೌದು ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ … Read more

RCB ಕಪ್ ಗೆದ್ರೆ ದಿನೇಶ್ ಕಾರ್ತಿಕ್ ಅನ್ನು ಹಿಡಿಯೋದು ಮಾತ್ರ ಬಹಳ ಕಷ್ಟ! ಯಾಕೆ.? ನಾಸೀರ್ ಹುಸೇನ್ ಅಚ್ಚರಿಯ ಹೇಳಿಕೆ

ಆರ್ ಸಿಬಿ ತಂಡ ಜೂನ್ 3 ಮಂಗಳವಾರ ನಡೆಯಲಿರುವ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಗೆದ್ದರೆ ಅತಿ ಹೆಚ್ಚು ಸಂಭ್ರಮಿಸುವವರು ಯಾರು.? ಯಾರನ್ನು ಹಿಡಿಯುವುದು ಬಹಳ ಕಷ್ಟ.? ಈ ಪ್ರಶ್ನೆಯನ್ನು ಯಾರನ್ನೇ ಕೇಳಿ ನೋಡಿ, ಉತ್ತರ ವಿರಾಟ್ ಕೊಹ್ಲಿ ಎಂಬುದೇ ಆಗಿರುತ್ತದೆ. ಆದರೆ ಇಂಗ್ಲೆಂಡ್ ನ ಮಾಜಿ ನಾಯಕ ನಾಸೀರ್ ಹುಸೇನ್ ಹೇಳುವ ಹೆಸರೇ ಬೇರೆ. ಅದು ಯಾವ ಆಟಗಾರನದ್ದೂ ಅಲ್ಲ, ಬದಲಾಗಿ ಇದೀಗ ತಂಡದ ಮೆಂಟರ್ ಆಗಿರುವ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರದ್ದು. … Read more

IPL 2025 : RCB ಫೈನಲ್ಸ್ ಎಂಟ್ರಿಗೆ ಡಿಂಪಲ್ ಕ್ವೀನ್ ಸಂತಸ, ‘ಈ ಸಲ ಕಪ್ ನಮ್ದೇ’ ಎಂದ ರಚಿತಾ ರಾಮ್

ಐಪಿಎಲ್‌ 2025ನೇ ಆವೃತ್ತಿಯಲ್ಲಿ ಫೈನಲ್‌ಗೇರಿದ ಆರ್‌ಸಿಬಿ ಬಗ್ಗೆ ಅಭಿಮಾನಿಗಳು ಸಂತಸವನ್ನು ಹಂಚಿಕೊಳ್ಳುತ್ತಲಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯದಲ್ಲಿನ ರಾಜಕಾರಣಿಗಳು, ಸೆಲೆಬ್ರೆಟಿಗಳು ಕೂಡ ಈ ಸಲ ಕಪ್ ನಮ್ದೆ ಎಂದು ಹೇಳುತ್ತಿದ್ದಾರೆ. ಇದೀಗ ಡಿಂಪಲ್‌ ಕ್ವೀಟ್‌ ರಚಿತಾ ರಾಮ್‌ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಆರಂಭದಿಂದಲೂ ಬ್ಯಾಟಿಂಗ್‌, ಬೌಲಿಂಗ್‌ ಎರಡು ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಇದೀಗ ಫೈನಲ್‌ ಪ್ರವೇಶ ಮಾಡಿದೆ. ಫೈನಲ್‌ ಪಂದ್ಯ ಜೂನ್‌ 3ರಂದು ಅಹಮದಾಬಾದ್‌ನ ನರೇಂದ್ರ ಮೋದಿ … Read more

ಗಂಟಲಲ್ಲಿ ಕಪ್‌ ಕೇಕ್ ಸಿಲುಕಿ ಮಹಿಳೆ ಸಾವು ; ಮಗಳ ಮದುವೆಗೆ ಒಂದು ದಿನ ಇರುವಾಗ ನಡೆಯಿತು ದುರಂತ

ಮಗಳ ಮದುವೆಗೆ ಒಂದು ದಿನ ಇರುವಾಗ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ತನಲೂರುನಲ್ಲಿ ನಡೆದಿರುವುದು ವರದಿಯಾಗಿದೆ. ಮಲಪ್ಪುರಂ ಜಿಲ್ಲೆಯ ತನಲೂರು ನಿವಾಸಿ 44 ವರ್ಷದ ಜೈನಬಾ ಶುಕ್ರವಾರ (ಮೇ.30) ಸಂಜೆ ಸಾವನ್ನಪ್ಪಿದ್ದಾರೆ. ನಡೆದಿದ್ದೇನು.? ಜೈನಬಾ ಅವರ ಮನೆಯಲ್ಲಿ ಮಗಳ ಮದುವೆ ಸಂಭ್ರಮ ನಡೆಯುತ್ತಿತ್ತು. ಈ ವೇಳೆ ಸಂತಸದಿಂದ ಕೇಕ್‌ ಕಟ್‌ ಮಾಡಲಾಗಿದೆ. ರಾತ್ರಿ ಕೇಕ್‌ ತಿಂದು ಉಳಿದಿದ್ದ ಕಪ್‌ ಕೇಕ್‌ ಮನೆಯಲ್ಲಿ ಇಡಲಾಗಿತ್ತು. ಗುರುವಾರ (ಮೇ29) ಸಂಜೆ ಜೈನಬಾ ಅವರು ಚಹಾ ಕುಡಿಯುತ್ತಿದ್ದ … Read more

ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಹಾಸನ್ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಎಂದ ಮುಖ್ಯಮಂತ್ರಿ ಚಂದ್ರು

ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಹಾಸನ್‌ ಪರವಾಗಿದ್ದರೋ ಅವರೆಲ್ಲ ನಾಡದ್ರೋಹಿಗಳು ಅಂತ ಮುಖ್ಯಮಂತ್ರಿ ಚಂದ್ರು ಕೆಂಡಕಾರಿದ್ದಾರೆ. ಕಮಲ್‌ ಹಾಸನ್‌ ಕನ್ನಡ ಹೇಳಿಕೆ ಕುರಿತು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮಿಳು ನಟನನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರಲ್ಲದೇ ನಟ ಶಿವರಾಜ್‌ ಕುಮಾರ್‌ ವಿರುದ್ಧವೂ ಗರಂ ಆದರು. ಈ ಘಟನೆ ನಡೀಬಾರದಿತ್ತು, ಈ ಹೇಳಿಕೆ ಕೊಟ್ಟ ಅವ್ನು ದುರಹಂಕಾರಿ, ಅಯೋಗ್ಯ. ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ … Read more

ಕನ್ನಡಿಗರ ಮೇಲೆ ನಿಲ್ಲದ ಪರ ರಾಜ್ಯದವರ ದಬ್ಬಾಳಿಕೆ, ಆಟೋ ಡ್ರೈವರ್ ಗೆ ಚಪ್ಪಲಿಯಿಂದ ಥಳಿಸಿದ ಯುವತಿ!

ದಿನೇ ದಿನೇ ರಾಜಧಾನಿ ಬೆಂಗಳೂರಲ್ಲಿ ಉತ್ತರ ಭಾರತದ ಹಿಂದಿವಾಲಗಳು ಸೇರಿದಂತೆ ಹೊರ ರಾಜ್ಯದವರ ಮಾನಗೆಟ್ಟ ವರ್ತನೆ ಮತ್ತು ದಬ್ಬಾಳಿಕೆ ಹೆಚ್ಚಾಗುತ್ತಲೇ ಇದೆ. ಇದೀಗ ಅಂಥದ್ದೇ ಮತ್ತೊಂದು ಘಟನೆ ನಡೆದಿದ್ದು ಕನ್ನಡಿಗರನ್ನು ಕೆರಳುವಂತೆ ಮಾಡುವಂತೆ ಮಾಡಿದೆ. ಬೆಂಗಳೂರಿನ ರಸ್ತೆಗಳಲ್ಲಿ ಗಾಡಿಗೆ ಗಾಡಿ ಟಚ್ ಆಗೋದು, ಸಣ್ಣ ಪುಟ್ಟ ಅಪಘಾತಗಳೊಗೋದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಆದ್ರೆ ಕೆಲವೊಮ್ಮೆ ಈ ರೀತಿಯ ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತವೆ. ಹೀಗೆ ಸ್ಕೂಟಿ ಒಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಆಟೋ … Read more