Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ

Head Master Suspended : ಕನ್ನಡ ವಿಚಾರ ಕಾವು ಪಡೆದುಕೊಂಡಿರುವ ಸಂದರ್ಭದಲ್ಲಿ ಸರ್ಕಾರಿ ಕನ್ನಡ ಶಾಲೆಗಾಗಿ ನಾಲ್ಕು ಕೊಠಡಿಗಳನ್ನು ಕೊಡಿ ಎಂದು ಮನವಿ ಮಾಡಿರುವ ಮುಖ್ಯ ಶಿಕ್ಷಕರನ್ನೇ ಸರ್ಕಾರ ಸಸ್ಪೆಂಡ್ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳನ್ನು ನೀಡುವಂತೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ವೀರಣ್ಣ ಮಡಿವಾಳರ ಅವರು ಮನವಿ ಮಾಡಿದ್ದರು. ಕನ್ನಡ ಮಕ್ಕಳ ಶಾಲೆಗಾಗಿ ಉಪವಾಸ ಹಾಗೂ … Read more

Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟ‌ರ್ ಬರ್ತಾರಾ.?

Bantwal Murder : ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ರಾಜ್ಯ ಸರ್ಕಾರದ ವಿರುದ್ಧ ಮುಸ್ಲಿಂ ಸಮುದಾಯ ಆಕ್ರೋಶಗೊಳ್ಳುವಂತೆ ಮಾಡಿದೆ. ಮುಸ್ಲಿಮರ ಆಕ್ರೋಶಕ್ಕೆ ಮಣಿದು ಈಗ ರಾಜ್ಯ ಸರ್ಕಾರ ಗೃಹಸಚಿವರನ್ನೇ ಬದಲು ಮಾಡುತ್ತಾ.? ಹೀಗೊಂದು ಅನುಮಾನ ಮೂಡಿದೆ. ರಾಜ್ಯದ ಗೃಹಮಂತ್ರಿಯಾಗಿರುವ ಡಾ ಜಿ ಪರಮೇಶ್ವರ್ ಬಗ್ಗೆ ಹಲವಾರು ಬಾರಿ ಟೀಕೆಗಳು ಕೇಳಿಬಂದಿದ್ದವು.ಅವರು ಅನುಭವಿ ರಾಜಕಾರಣಿಯೇ. ಆದರೆ ಅವರ ಮಾತು ಕೂಡಾ ಖಡಕ್ ಆಗಿಲ್ಲ. ಕೇವಲ ಕಠಿಣ ಕ್ರಮದ ಭರವಸೆ ಮಾತ್ರ. ಆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ … Read more

ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್‌ ಹಾಸನ್.!‌

ಇತ್ತೀಚೆಗೆ ಕನ್ನಡವನ್ನು ತಮಿಳು ಭಾಷೆಯೊಂದಿಗೆ ಹೋಲಿಕೆ ಮಾಡಿ ವಿವಾದವನ್ನೆಳೆದುಕೊಂಡಿದ್ದ ತಮಿಳಿನ ನಟ ಕಮಲ್‌ ಹಾಸನ್‌ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ. ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿದ್ದ ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ ಒತ್ತಾಯ ಮಾಡಲಾಗಿತ್ತು. ಕನ್ನಡ ಪರ ಸಂಘಟನೆಗಳು ಕಮಲ್‌ ಹಾಸನ್‌ ಅವರ ಚಿತ್ರಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ ಬಳಿಕ ಹಾಗೂ ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ನಂತರ ಇದೀಗ ಅವರು ಕ್ಷಮೆಯಾಚಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ … Read more

ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್

ಐಪಿಎಲ್ ನಲ್ಲಿ ಆರ್ ಸಿಬಿ ಪರ ಆಡಿ ಕನ್ನಡಿಗರ ದತ್ತು ಪುತ್ರನೇ ಆಗಿರುವ ಎಬಿಡಿ ವಿಲಿಯರ್ಸ್ ಈಗ ತಮ್ಮ ತಂಡದ ಬಗ್ಗೆ ಇಲ್ಲದ ಕಾಮೆಂಟ್ ಮಾಡುತ್ತಿರುವ ಕಾಮೆಂಟೇಟರ್ ಗಳ ವಿರುದ್ಧ ಸಿಡಿದೆದಿದ್ದಾರೆ. ಐಪಿಎಲ್ ನಲ್ಲಿ ಕಾಮೆಂಟರಿ ಮಾಡುವ ಬಹುತೇಕರು ಒಂದಲ್ಲಾ ಒಂದು ತಂಡವನ್ನು ಬೆಂಬಲಿಸುತ್ತಾರೆ. ಅವರ ಕಾಮೆಂಟರಿಗಳು ಪಕ್ಷಪಾತದಿಂದ ಕೂಡಿರುತ್ತದೆ ಎಂದು ಇತ್ತೀಚೆಗೆ ಅನೇಕ ಅಭಿಮಾನಿಗಳೇ ಹೇಳುತ್ತಾರೆ. ಇದೀಗ ಎಬಿಡಿ ವಿಲಿಯರ್ಸ್ ಕೂಡಾ ಇದೇ ಕಾರಣಕ್ಕೆ ಸಿಡಿದೆದ್ದಿದ್ದಾರೆ. ಮೊನ್ನೆಯಷ್ಟೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಆರ್ ಸಿಬಿ … Read more

IPL 2025 : ಪಂಜಾಬ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್

IPL 2025 : ಪಂಜಾಬ್ ತಂಡದ ನೀಡಿದ 102 ರನ್‌ಗಳ ಸುಲಭದ ಗುರಿಯನ್ನು 2 ವಿಕೆಟ್ ನಷ್ಟಕ್ಕೆ ಆರ್‌ಸಿಬಿ ತಲುಪಿತು. ಆರಂಭಿಕರಾಗಿ ಮೈದಾನ ಪ್ರವೇಶಿಸಿದ ವಿರಾಟ್ ಕೊಹ್ಲಿ ಕೇವಲ 12 ರನ್ ಗಳಿಸಿ ಕೈಲ್ ಜೇಮಿಸನ್ ವಿಕೆಟ್ ಒಪ್ಪಿಸಿದರು. ಫಿಲಿಪ್ ಸಾಲ್ಟ್ ಮತ್ತು ಮಯಾಂಕ್ ಅಗರ್ವಾಲ್ ಜೊತೆಯಾಗಿ ಗೆಲುವಿನ ಸಮೀಪಕ್ಕೆ ತಲುಪಿದ್ದರು.ಈ ವೇಳೆ ಮುಶೀರ್ ಖಾನ್ ಬೌಲಿಂಗ್‌ಗೆ ಮಯಾಂಕ್ ಅಗರ್ವಾಲ್ ತಮ್ಮ ವಿಕೆಟ್ ಒಪ್ಪಿಸಿದರು. ನಂತರ ಬಂದ ಕ್ಯಾಪ್ಟನ್ ರಜತ್ ಪಾಟಿದಾರ್, ಸಾಲ್ಟ್‌ಗೆ ಜೊತೆಯಾದರು ಎರಡು ವಿಕೆಟ್ … Read more

Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಣೆ.!

Rain Alert : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ 5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ5 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಿದೆ. ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ … Read more

ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್‌ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?

ಮೇ 27 ನಡೆದ 18ನೇ ಆವೃತ್ತಿಯ ಐಪಿಎಲ್‌ನ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರುವ ಮೂಲಕ ಒಂದನೇ ಕ್ವಾಲಿಫಯರ್‌ಗೆ ಲಗ್ಗೆ ಇಟ್ಟಿತು. ಇಂದು ಚಂಡೀಗಢದಲ್ಲಿ ನಡೆಯಲಿರುವ ಒಂದನೇ ಕ್ವಾಲಿಫಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಗೆದ್ದರೆ ಮಾತ್ರ ಕ್ವಾಲಿಫಯರ್‌ಗೆ ಪ್ರವೇಶ ಎಂಬ ಮಹತ್ವದ ಅವಕಾಶಕ್ಕೆ ವೇದಿಕೆಯಾಗಿದ್ದ ಈ ಪಂದ್ಯದಲ್ಲಿ ಜಿತೇಶ್‌ ಶರ್ಮಾ 33 … Read more

Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್‌?, ಬರುತ್ತಾ ಹೊಸ ರೂಲ್ಸ್?‌, ಸಿಎಂ ಆಪ್ತ

ಐದು ಗ್ಯಾರಂಟಿಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಸ್ಕೀಮ್ ಗಳಾಗಿವೆ. ಈ ಗ್ಯಾರಂಟಿ ಯೋಜನೆಗಳಿಂದಲೇ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು. ಐದು ವರ್ಷವೂ ಎಲ್ಲರಿಗೂ ಗ್ಯಾರಂಟಿ ನೀಡುವುದಾಗಿ ಚುನಾವಣಾ ಪೂರ್ವದಲ್ಲೇ ಕಾಂಗ್ರೆಸ್ ಘೋಷಣೆ ಮಾಡಿತ್ತು. ಇದೀಗ ಗದ್ದಲ ಜೋರಾಗಿದ್ದು, ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ಮತ್ತೆ ವಿವಾದದವನ್ನ ಸೃಷ್ಟಿಸಿದೆ. ಅಷ್ಟಕ್ಕೂ ರಾಯರೆಡ್ಡಿ ಹೇಳಿದ್ದೇನು? ಪಂಚ ಗ್ಯಾರಂಟಿಗಳನ್ನ ಐದು ವರ್ಷವೂ ನೀಡುತ್ತೇವೆ ಎನ್ನುವ ವಾಗ್ದಾನದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಇದೀಗ ಅದೇ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ ವಿಚಾರ … Read more

ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!

ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇಂದು ಪಂದ್ಯ ನಡೆಯಲಿದ್ದು, ಗೆದ್ದವರು ನೇರವಾಗಿ ಫೈನಲ್ ಪ್ರವೇಶ ಮಾಡಲಿದ್ದಾರೆ. ಸೋತವರಿಗೆ ಇನ್ನೊಂದು ಅವಕಾಶ ಸಿಗಲಿದೆ. ಇದೇ ಹೊತ್ತಲ್ಲೇ ಆರ್ಸಿಬಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದೆ. ಇಂದು ನಡೆಯಲಿರುವ ಪಂದ್ಯಕ್ಕೆ ಇಬ್ಬರು ದೈತ್ಯ ಶಕ್ತಿಗಳ ಬೂಸ್ಟ್ ಸಿಗಲಿದೆ. ಜೋಶ್ ಹೇಜಲ್ವುಡ್, ಟಿಮ್ ಡೆವಿಡ್ ಪಂದ್ಯದ ಪ್ಲೇಯಿಂಗ್-11ನಲ್ಲಿ ಇರಲಿದ್ದಾರೆ. ಈ ಬಗ್ಗೆ ಖುದ್ದು ಕ್ಯಾಪ್ಟನ್ ಜಿತೇಶ್ ಶರ್ಮಾ ಅವರೇ ಮಾಹಿತಿ ನೀಡಿದ್ದಾರೆ. ನಿನ್ನೆಯ … Read more

ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟ‌ರ್ ಕೊಟ್ಟ ಸಿಎಂ ಸಿದ್ದರಾಮಯ್ಯ

ತಮಿಳು ನಟ ಕಮಲ್ ಹಾಸನ್ ಬಿಡುಗಡೆಗೆ ಸಿದ್ಧವಾಗಿರುವ ತಮ್ಮ ಮುಂದಿನ ಚಿತ್ರ ಥಗ್‌ಲೈಫ್‌ನ ಪ್ರಿ ರಿಲೀಸ್‌ ಇವೆಂಟ್‌ನಲ್ಲಿ ಮಾತನಾಡುತ್ತಾ ತಮಿಳು ಹಾಗೂ ಕನ್ನಡ ನಡುವೆ ಭಾಷಾ ವಾಗ್ವಾದ ಉಂಟಾಗುವಂತಹ ಹೇಳಿಕೆಯೊಂದನ್ನು ನೀಡಿದ್ದಾರೆ. ಕನ್ನಡ ತಮಿಳಿನಿಂದ ಹುಟ್ಟಿದ ಭಾಷೆ ಎಂದು ಹೇಳುವ ಮೂಲಕ ಕಮಲ್ ಹಾಸನ್ ಕನ್ನಡದ ಇತಿಹಾಸ ಹಾಗೂ ಕನ್ನಡಿಗರ ಭಾವನೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ತಮಿಳಿನಂತೆ ಕನ್ನಡವೂ ಒಂದು ಸ್ವತಂತ್ರ ಹಾಗೂ ದೀರ್ಘಕಾಲದ ಇತಿಹಾಸವಿರುವ ಭಾಷೆ, ಕನ್ನಡ ಯಾವ ಭಾಷೆಯಿಂದಲೂ ಹುಟ್ಟಿಲ್ಲ ಎಂದು ಕನ್ನಡಿಗರು … Read more